Tuesday, March 17, 2026

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ಭೂಮಿ ಮತ್ತು ಕೈಗಾರಿಕೆಗಳು ರಾಷ್ಟ್ರೀಕರಣ ಮಾಡುವುದು ಅಂಬೇಡ್ಕರ್ ರವರ ಕನಸಾಗಿತ್ತು ; ಡಾ.ಅನಿಲ್ ಕುಮಾರ್ ಆವುಲಪ್ಪ-ಕಹಳೆ ನ್ಯೂಸ್

ಬಾಗೇಪಲ್ಲಿ : ಇಂದು ಭಾರತರತ್ನ, ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ ಜನ್ಮ ದಿನಾಚರಣೆಯನ್ನು ಪಟ್ಟಣದ ಸುಂದರಯ್ಯ ಭವನದಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಡಿವೈಎಫ್ಐ ನ ಜಿಲ್ಲಾ ಸಂಚಾಲಕ ಡಾ.ಅನಿಲ್ ಕುಮಾರ್ ರವರು ಡಾ.ಅಂಬೇಡ್ಕರ್ ದೂರದೃಷ್ಟಿತ್ವದ ಮಹಾನಾಯಕ, ಅವರು ಪ್ರಜಾಪ್ರಭುತ್ವ ಭಾರತವನ್ನು ಅಚ್ಚುಕಟ್ಟಾಗಿ ನಿರ್ಮಾಣ ಮಾಡಲು ಸಂವಿಧಾನವನ್ನು ರಚಿಸುವಲ್ಲಿ ಪ್ರಧಾನವಾದ ಪಾತ್ರ ವಹಿಸಿದರು. ಇಂತಹವರ ಬಾಲ್ಯವೂ ಹಲವಾರು ಅಹಿತಕರ ಅನುಭವಗಳ ಪಯಣವಾಗಿತ್ತು. ಎಲ್ಲವನ್ನು ಮೀರಿ ಜಗದ್ವಿಖ್ಯಾತ ಪಡೆದರು. ಇವರ...
ಹೆಚ್ಚಿನ ಸುದ್ದಿ

ಬಡ ವಿದ್ಯಾರ್ಥಿಗಳಿಗೆ ಲೇಖನಿ ಸಾಮಾಗ್ರಿಗಳನ್ನು ವಿತರಣೆ ಮಾಡುವ ಮೂಲಕ ವಿಭಿನ್ನವಾಗಿ ಅಂಬೇಡ್ಕರ್ ಜಯಂತಿ ಆಚರಣೆ-ಕಹಳೆ ನ್ಯೂಸ್

ಬಾಗೇಪಲ್ಲಿ : ತಾಲೂಕಿನ ಪಾತಪಾಳ್ಯ ಹೋಬಳಿ ನಲ್ಲಚರವು (ನಗರ್ಲು) ನಲ್ಲಿ "ನಮ್ಮ ಕರ್ನಾಟಕ ಅಹಿಂದ ಜನಪರ ವೇದಿಕೆ ವತಿಯಿಂದ ರಾಜ್ಯಾಧ್ಯಕ್ಷ ನಗರ್ಲ ನರಸಿಂಹಪ್ಪ 30 ಶಾಲಾ ವಿಧ್ಯಾರ್ಥಿಗಳಿಗೆ ಕಡು ಬಡವರಿಗೆ ಲೇಖನಿ ಸಾಮಾಗ್ರಿಗಳನ್ನು ವಿತರಣೆ ಮಾಡಿ ಮಾತನಾಡಿ ಅಂಬೇಡ್ಕರ್ ಅವರ ಸೇವೆ ಅನನ್ಯವಾದುದು ಅವರು ದೇಶಕ್ಕಾಗಿ, ಹಿಂದುಳಿದ ವರ್ಗದ ಹಿತಕ್ಕಾಗಿ, ಮಹಿಳೆಯರ ಹಕ್ಕುಗಳಿಗಾಗಿ ಅವರು ನೀಡಿದ ಸಂವಿಧಾನವು ಅತ್ಯುತ್ತಮ ಶ್ರೀರಕ್ಷೆಯಾಗಿದೆ ಮತ್ತು ಇವತ್ತು ನಮ್ಮೆಲ್ಲರ ಬದುಕು ಉತ್ತಮಗೊಳ್ಳಲು ಸಹಕಾರಿಯಾಗಿದೆ. ಅಂಬೇಡ್ಕರ್...
ಹೆಚ್ಚಿನ ಸುದ್ದಿ

ಪ್ರಾಥಮಿಕ ಆರೋಗ್ಯ ಕೇಂದ್ರ ಬೆಳ್ಳಾರೆ ಮತ್ತು ಗ್ರಾಮ ಪಂಚಾಯತ್ ಬೆಳ್ಳಾರೆ ಇದರ ಆಶ್ರಯದಲ್ಲಿ ಡೆಂಗ್ಯೂ ಮಾಹಿತಿ ಕಾರ್ಯಾಗಾರ-ಕಹಳೆ ನ್ಯೂಸ್

ಬೆಳ್ಳಾರೆ : ಪ್ರಾಥಮಿಕ ಆರೋಗ್ಯ ಕೇಂದ್ರ ಬೆಳ್ಳಾರೆ, ಗ್ರಾಮ ಪಂಚಾಯತ್ ಬೆಳ್ಳಾರೆ ಇದರ ಆಶ್ರಯದಲ್ಲಿ ಡೆಂಗ್ಯೂ ಮಾಹಿತಿ ಕಾರ್ಯಾಗಾರ ದಿನಾಂಕ 14/04/2021 ಬುಧವಾರದಂದು ನೆಟ್ಟಾರು ಅಂಗನವಾಡಿ ಕೇಂದ್ರದ ವಠಾರದಲ್ಲಿ ನಡೆಯಿತು. ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಅಶ್ವತಿಯವರು ಡೆಂಗ್ಯೂ ಜ್ವರದ ಲಕ್ಷಣ, ಹರಡುವ ರೀತಿ,ಸುರಕ್ಷತೆಯ ಬಗ್ಗೆ ಮಾಹಿತಿ ನೀಡಿದರು. ಸೂಪರ್ ವೈಸರ್ ವಾಸುದೇವ ಮಾತನಾಡಿ ಡೆಂಗ್ಯೂ ಬಗ್ಗೆ ಎಚ್ಚರವಿರಲಿ.ಮನೆಯ ಪರಿಸರ ಸ್ವಚ್ಛವಾಗಿಟ್ಟುಕೊಂಡಲ್ಲಿ ರೋಗ ಹರಡುವುದನ್ನು ಮತ್ತು ಸೊಳ್ಳೆ ಉತ್ಪತ್ತಿಯಾಗುವುದನ್ನು...
ಹೆಚ್ಚಿನ ಸುದ್ದಿ

ಸರ್ಕಾರದಿಂದ ಸಾರಿಗೆ ನೌಕರರಿಗೆ ಅನ್ಯಾಯ ; ಕೆ.ಕೆ.ಹಟ್ಟಿ ದೇವರ ಮನೆ ಮಹೇಶ-ಕಹಳೆ ನ್ಯೂಸ್

ವಿಜಯನಗರ : ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದ ಸಾರಿಗೆ ಘಟಕದಲ್ಲಿ ಎ14 ರಂದು, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ(ಹುಚ್ಚವ್ವನಹಳ್ಳಿ ಬಣ) ಸರ್ಕಾರದ ಧೋರಣೆಯನ್ನ ಖಂಡಿಸಿ ಪ್ರತಿಭಟಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಕ.ಕೆ.ಹಟ್ಟಿ ದೇವರ ಮನೆ ಮಹೇಶ ಮಾತನಾಡಿದರು. ಸಾರಿಗೆ ನೌಕರರ ನ್ಯಾಯ ಯುತವಾದ ಹಕ್ಕೊತ್ತಾಯಗಳನ್ನು ಶೀಘ್ರವೇ ಈಡೇರಿಸಬೇಕೆಂದು ಅವರು ಒತ್ತಾಯಿಸಿದರು. ಸರ್ಕಾರ ಸಾರಿಗೆ ನೌಕರರಿಗೆ ತುಂಬಾ ಅನ್ಯಾಯ ಮಾಡುತ್ತಿದೆ ಎಂದು ಮಹೇಶ ಆಕ್ರೋಶ ವ್ಯಕ್ತಪಡಿಸಿದರು. ನ್ಯಾಯಕ್ಕಾಗಿ...
ಹೆಚ್ಚಿನ ಸುದ್ದಿ

ಕೂಡ್ಲಿಗಿ ಪಟ್ಟಣದಲ್ಲಿ ಡಾ ಬಿ.ಆರ್.ಅಂಬೇಡ್ಕರ್ ರವರ ಅದ್ಧೂರಿ ಮೆರವಣಿಗೆಯೊಂದಿಗೆ ಜಯಂತಿ-ಕಹಳೆ ನ್ಯೂಸ್

ವಿಜಯನಗರ : ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದಲ್ಲಿ ಡಾ ಬಿ.ಆರ್.ಅಂಬೇಡ್ಕರ್ ರವರ ಜಯಂತಿಯನ್ನ ಬಹು ಅದ್ದೂರಿಯಾಗಿ ಆಚರಿಸಲಾಯಿತು. ಡಾ ಅಂಬೇಡ್ಕರ್ ಭಾವಿಚಿತ್ರಕ್ಕೆ ಹೂಮಳೆ ಎರೆಯೋ ಮೂಲಕ ಮೆರವಣಿಗೆಗೆ ಚಾಲನೆ ನೀಡಲಾಯಿತು, ಭಾವಚಿತ್ರ ಹೊಂದಿರುವ ಬೆಳ್ಳಿ ರಥದ ವಾಹನ ಹೊಂದಿರುವ ಮೆರವಣಿಗೆ ವಿವಿದ ವಾಧ್ಯಗಳ ವೃಂಧಗಳೊಂದಿಗೆ ಮೆರೆವಣಿಗೆ. ಪಟ್ಟಣದ ಪ್ರಮುಖ ಬೀದುಗಳಲ್ಲಿ ವೃತ್ತಗಳಲ್ಲಿ ಸಂಚರಿಸಿತು. ದಲಿತಪರ ಸಂಘಟನೆ ಹಾಗೂ ಕನ್ನಡ ಪರ ಸಂಘಟನೆಗಳ ಪದಾಧಿಕಾರಿಗಳು ಜನಪ್ರತಿನಿಧಿಗಳು, ಪಟ್ಟಣದ ವಿವಿದ ಸಂಘ ಸಂಸ್ಥೆಗಳ...
ಹೆಚ್ಚಿನ ಸುದ್ದಿ

ಮಾಜಿ ಸಚಿವ ಯು.ಟಿ. ಖಾದರ್ ಕಾರು ಅಪಘಾತ ; ಪ್ರಾಣಾಪಾಯದಿಂದ ಪಾರು-ಕಹಳೆ ನ್ಯೂಸ್

ದಾವಣಗೆರೆ : ಆನಗೋಡು ಬಸ್ ನಿಲ್ದಾಣದ ಸರ್ವಿಸ್ ರಸ್ತೆ ಸಮೀಪ ಇಂದು ಬೆಳಗ್ಗೆ ಮಾಜಿ ಸಚಿವ ಯು.ಟಿ. ಖಾದರ್ ವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾದ ಘಟನೆ ನಡೆದಿದೆ. ಯು.ಟಿ ಖಾದರ್ ಅವರು ಬೆಳಗಾವಿ ಉಪಚುನಾವಣೆ ಪ್ರಚಾರಕ್ಕೆ ತೆರಳುತ್ತಿದ್ದರು. ಈ ವೇಳೆ ಆನಗೋಡು ಹಂಪ್ಸ್ ಸಮೀಪ ಮುಂದಡ ಸಾಗುತ್ತಿದ್ದ ಕಂಟೈನರ್‌ಗೆ ಕಾರು ಢಿಕ್ಕಿ ಹೊಡೆದಿದೆ ಇದರ ಪರಿಣಾಮ ಕಾರಿನ ಮುಂಭಾಗ ನಜ್ಜುಗುಜ್ಜಾಗಿದ್ದು, ಖಾದರ್ ಅವರು ಅಪಾಯದಿಂದ ಪಾರಾಗಿದ್ದಾರೆ. ಈ ಘಟನೆಯ ಬಳಿಕ...
ಹೆಚ್ಚಿನ ಸುದ್ದಿ

ರಸಗೊಬ್ಬರ ಬೆಲೆ ಏರಿಕೆ ಖಂಡಿಸಿ ಕರ್ನಾಟಕ ರಾಜ್ಯ ಪ್ರಾಂತ್ಯ ರೈತ ಸಂಘದ ವತಿಯಿಂದ ಪ್ರತಿಭಟನೆ-ಕಹಳೆ ನ್ಯೂಸ್

ಬಾಗೇಪಲ್ಲಿ : ರೈತರ ಆದಾಯಗಳನ್ನು ದ್ವಿಗುಣಗೊಳಿಸುವುದಾಗಿ ಬಹುದೊಡ್ಡ ಸುಳ್ಳುಗಳ ದಾಳಗಳನ್ನು ಉರುಳಿಸುತ್ತಾ, ಇರುವ ಅಲ್ಪ ಸ್ವಲ್ಪ ಆದಾಯವನ್ನು ಕಾರ್ಪೋರೇಟ್ ಲೂಟಿಗೆ ತೆರೆಯುವ ಕೇಂದ್ರ ಸರಕಾರದ ಕುತಂತ್ರವನ್ನು ಕರ್ನಾಟಕ ಪ್ರಾಂತ ರೈತ ಸಂಘ ಮುಖಂಡ ಮಂಜುನಾಥ ರೆಡ್ಡಿ ಬಲವಾಗಿ ಖಂಡಿಸಿದ್ದಾರೆ. ಅವರು ತಾಲೂಕು ಕಛೇರಿಯ ಮುಂದೆ ಪ್ರತಿಭಟನೆ ನೇತೃತ್ವ ವಹಿಸಿ ಮಾತನಾಡಿ, ರಸಗೊಬ್ಬರದ ಬೆಲೆಯನ್ನು ದಿಢೀರ್ ಏರಿಕೆ ಮಾಡಿರುವುದು ಸರಿಯಲ್ಲ. ಈಗಾಗಲೇ ಜನರು ಪೆಟ್ರೋಲ್, ಡೀಸೆಲ್, ಅಡುಗೆ ಅನಿಲದ ದರ ಏರಿಕೆಯಿಂದ...
ಹೆಚ್ಚಿನ ಸುದ್ದಿ

ಉಪ್ಪಿನಂಗಡಿಯ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುವಾಗ ಬೈಕ್ ಡಿಕ್ಕಿ ; ಬಾಲಕಿಗೆ ಗಾಯ-ಕಹಳೆ ನ್ಯೂಸ್

ಉಪ್ಪಿನಂಗಡಿ : ಉಪ್ಪಿನಂಗಡಿ ಠಾಣೆ ವ್ಯಾಪ್ತಿಯ ಕರಾಯ ಎಂಬಲ್ಲಿ ಸೋಮವಾರ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಬೈಕೊಂದು ಢಿಕ್ಕಿ ಹೊಡೆದು ಪಾದಚಾರಿ 7 ವರ್ಷದ ಬಾಲಕಿ ಸಬಿಹ ಎಂಬಾಕೆ ಗಂಭೀರವಾಗಿ ಗಾಯಗೊಂಡ ಘಟನೆ ಸಂಭವಿಸಿದೆ. ಬಾಲಕಿ ಸಬೀಹ ಅಪಾಯದಿಂದ ಪಾರಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಈ ಅಪಘಾತ ನಡೆಸಿದ ಬೈಕ್ ನ್ನು ಪುತ್ತೂರು ಸಂಚಾರಿ ಠಾಣೆ ಪೊಲೀಸರು ಪತ್ತೆ ಹಚ್ಚಿ ಪ್ರಕರಣ ದಾಖಲಿಸಿಕೊಂಡಿದ್ದಾರೆ....
1 60 61 62 63 64 174
Page 62 of 174