ನಮ್ಮ ಈ ಗ್ರಾಮೀಣ ಸಂಸ್ಕೃತಿಯನ್ನು ಯುವಕರು ಬೆಳೆಸಿಕೊಂಡು ಹೋಗಬೇಕು; ಪ್ರಾಂಶುಪಾಲರಾದ ಪ್ರೋ.ನಾರಾಯಣ-ಕಹಳೆ ನ್ಯೂಸ್
ಬಾಗೇಪಲ್ಲಿ : ಜಾನಪದ ಕಲೆಗಳಲ್ಲಿ ಗ್ರಾಮೀಣ ಸೊಗಡು, ವೈವಿಧ್ಯತೆ ಇರುತ್ತದೆ. ಭಾವನೆಗಳನ್ನು ಒಳಗೊಂಡಿರುವ ನಮ್ಮ ಈ ಗ್ರಾಮೀಣ ಸಂಸ್ಕೃತಿಯನ್ನು ಯುವಕರು ಬೆಳೆಸಿಕೊಂಡು ಹೋಗಬೇಕು ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೋ.ನಾರಾಯಣ ರವರು ಹೇಳಿದರು. ಪಟ್ಟಣದ ಹೊರವಲಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಶುಕ್ರವಾರ ಚಿಕ್ಕಬಳ್ಳಾಪುರದ ಸರ್.ಎಂ.ವಿ.ಗ್ರಾಮೀಣ ಅಭಿವೃದ್ಧಿ ಸಂಸ್ಥೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜನೆ ಮಾಡಿದ್ದ ಜಾನಪದ ಸಾಂಸ್ಕೃತಿಕ ಸಂಭ್ರಮ-2021 ಕಾರ್ಯಕ್ರಮವನ್ನು ತಮಟೆ...







