ಬಿಜೆಪಿ ಸರ್ಕಾರ ಅಧಿಕಾರ ಬಹಿಸಿಕೊಂಡಾಗಿನಿಂದ ಕಲ್ಯಾಣ ಕರ್ನಾಟಕಕ್ಕೆ ನಿರಂತರ ಅನ್ಯಾಯವಾಗುತ್ತಿದೆ ; ಕುಮಾರಸ್ವಾಮಿ-ಕಹಳೆ ನ್ಯೂಸ್
ಕಲಬುರ್ಗಿ : ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು, ಬಿಜೆಪಿ ಸರ್ಕಾರ ಅಧಿಕಾರ ಬಹಿಸಿಕೊಂಡಾಗಿನಿಂದ ಕಲ್ಯಾಣ ಕರ್ನಾಟಕಕ್ಕೆ ನಿರಂತರ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿದ್ದಾರೆ. ಈ ಕುರಿತು ಅವರು, ರಾಯಚೂರಿನಲ್ಲಿ ಆರಂಭವಾಗಬೇಕಿದ್ದ ಐಐಟಿ ಧಾರವಾಡಕ್ಕೆ ಹೋದರೆ, ಕಲಬುರ್ಗಿಯ ಇಎಸ್ಐಸಿ ಆಸ್ಪತ್ರೆಯಲ್ಲಿ ಆರಂಭವಾಗಬೇಕಿದ್ದ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯನ್ನು ಇದೀಗ ಹುಬ್ಬಳ್ಳಿಗೆ ಮಂಜೂರು ಮಾಡಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು. ಹೈದರಾಬಾದ್ ಕರ್ನಾಟಕ ಹೆಸರನ್ನು ಕಲ್ಯಾಣ ಕರ್ನಾಟಕ...







