ಪುತ್ತೂರು ಮಹಾತೋಭಾರ ಮಹಾಲಿಂಗೇಶ್ವರನ ಸನ್ನಿಧಿಯಲ್ಲಿ ಶಿವರಾತ್ರಿ ಪ್ರಯುಕ್ತ ರಂಜಿಸಿದ ಕೋಡಂದೂರು ಅಮ್ಮ ಮಗಳ ದ್ವಂದ್ವ ಗಾಯನ– ಕಹಳೆ ನ್ಯೂಸ್
ಹತ್ತೂರ ಭಕ್ತರಲ್ಲಿ ಮನೆ ಮಾಡಿದ ಪುತ್ತೂರು ಒಡೆಯನ ಮಹಾಶಿವರಾತ್ರಿಯ ಸಂಭ್ರಮದಲ್ಲಿ ಸ್ವರ ಸಿಂಚನ ಕಲಾತಂಡದ ಮುಖ್ಯ ಶಿಕ್ಷಕಿ ಸವಿತಾ ಕೋಡಂದೂರ್ ಮತ್ತು ಸಿಂಚನ ಲಕ್ಷ್ಮಿ ಕೋಡಂದೂರ್ ಅಮ್ಮ ಮಗಳ ದ್ವಂದ್ವ ಗಾಯನವೂ ನಟರಾಜ ವೇದಿಕೆಯಲ್ಲಿ ಭಕ್ತರ ಮನಸೆಳೆಯಿತು ಮಹಾ ಮಹಿಮನ ಆರಾಧನೆಯಲ್ಲಿ ಮಗ್ನರಾದ ಶಿವಭಕ್ತ ವೃಂದಕ್ಕೆ ಸಂಗೀತ ಕಲಾ ಸೇವೆಯನ್ನು ನೀಡಿ ಮನಸೆಳೆದರು. ಜನಪ್ರಿಯ ಶಿವ ಗೀತೆಗಳು ಸುಮಧುರ ಗೀತೆಗಳನ್ನು ಹಾಡಿ ತನ್ನ ಹೆಜ್ಜೆ ಗುರುತಿನಿಂದ ಎಲ್ಲರ ಮೆಚ್ಚುಗೆ ಗಳಿಸಿದರು...