Sunday, March 8, 2026

ಅಂಕಣ

ಅಂಕಣಸುದ್ದಿ

ಪ್ರಿಯಾಂಕ್‌ ಕ್ಷೇತ್ರ ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪಥಸಂಚಲನ ; 12 ಪ್ರಶ್ನೆ ಕೇಳಿದ ಸರ್ಕಾರ-ಕಹಳೆ ನ್ಯೂಸ್

ಕಲಬುರಗಿ: ರಾಷ್ಟ್ರೀಯ ಸ್ವಯಂ ಸೇವಕ ಸಂಘ  ಮತ್ತು ಐಟಿ ಬಿಟಿ ಸಚಿವ ಪ್ರಿಯಾಂಕ್‌ ಖರ್ಗೆ  ಫೈಟ್‌ ಜೋರಾಗಿದೆ. ಪ್ರಿಯಾಂಕ್‌ ಖರ್ಗೆ ಅವರ ಸ್ವಕ್ಷೇತ್ರ ಚಿತ್ತಾಪುರದಲ್ಲಿ ಇಲ್ಲಿಯವರೆಗೆ ಪಥಸಂಚಲನಕ್ಕೆ ಅನುಮತಿ ಸಿಕ್ಕಿಲ್ಲ. 100ನೇ ವರ್ಷದ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಪಥಸಂಚಲನಕ್ಕೆ ಅನುಮತಿ ನೀಡುವಂತೆ ಆರ್‌ಎಸ್‌ಎಸ್‌ ತಾಲೂಕು ಆಡಳಿತವನ್ನು ಕೇಳಿತ್ತು. ಅನುಮತಿ ಕೇಳಿದ ನಂತರ ತಾಲೂಕು ತಹಶೀಲ್ದಾರ ನಾಗಯ್ಯ 12 ಪ್ರಶ್ನೆಗಳನ್ನು ಕೇಳಿದ್ದರು. ಈ ಪ್ರಶ್ನೆಗೆ ಆರ್‌ಎಸ್‌ಎಸ್‌ ಉತ್ತರ ನೀಡಿದ್ದರೂ ಮಧ್ಯರಾತ್ರಿ 11 ಗಂಟೆಯವರೆಗೂ...
ಅಂಕಣಕ್ರೈಮ್ಬೆಂಗಳೂರುಸುದ್ದಿ

10 ಲಕ್ಷ ಒರಿಜಿನಲ್ ನೋಟ್ ಕೊಟ್ರೆ 30 ಲಕ್ಷ ಕೋಟಾ ಆಫರ್‌; ತಿರುನಲ್ವೇಲಿ ಗ್ಯಾಂಗ್‌ ಅಂದರ್‌-ಕಹಳೆ ನ್ಯೂಸ್

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೋಟಾ ನೋಟಿನ ಗ್ಯಾಂಗ್ ಆಕ್ಟೀವ್ ಆಗಿದೆ. 10 ಲಕ್ಷ ರೂ. ಒರಿಜಿನಲ್ ನೋಟ್ ಕೊಟ್ಟರೆ 30 ಲಕ್ಷ ರೂ. ಕೋಟಾ ನೋಟಿನ (Fake Currency) ಆಫರ್ ನೀಡಿ ಜನರಿಗೆ ವಂಚಿಸುತ್ತಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಜಯನಗರದ 4ನೇ ಬ್ಲಾಕ್‌ನಲ್ಲಿ ಹಣದ ಸಮೇತ ನಿಂತಿದ್ದ ತಮಿಳುನಾಡಿನ ತಿರುನೆಲ್ವೇಳಿಯ ಗ್ಯಾಂಗ್ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಆರೋಪಿಗಳು 10 ಲಕ್ಷ ಅಸಲಿ ನೋಟಿಗೆ ಒರಿಜಿನಲ್ ರೀತಿಯೇ ಕಾಣುವ 3 ಪಟ್ಟು...
ಅಂಕಣಬೆಂಗಳೂರುಸುದ್ದಿ

ಸೀನಿಯರ್‌ನಿಂದ ಪ್ರೀತಿಸುವಂತೆ ಕಿರುಕುಳ ಆರೋಪ ; ಬೆಂಗಳೂರಲ್ಲಿ ಬಿಬಿಎ ವಿದ್ಯಾರ್ಥಿನಿ ಆತ್ಮಹತ್ಯೆ-ಕಹಳೆ ನ್ಯೂಸ್

ಬೆಂಗಳೂರು: ಬಿಬಿಎ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲೂರಿನ ಖಾಸಗಿ ಕಾಲೇಜಿನ ಪಿಜಿಯಲ್ಲಿ ನಡೆದಿದೆ. ಸನಾ ಪರ್ವಿನ್ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಈಕೆ ಬಾಗಲೂರಿನ ಖಾಸಗಿ ಕಾಲೇಜಿನಲ್ಲಿ ಬಿಬಿಎ ಓದುತ್ತಿದ್ದಳು. ಕಾಲೇಜಿನ ಪಿಜಿಯಲ್ಲಿ ನೇಣಿಗೆ ಶರಣಾಗಿದ್ದಾಳೆ. ಸಹ ವಿದ್ಯಾರ್ಥಿ ಪ್ರೀತಿಸುವಂತೆ ಈಕೆಗೆ ಕಿರುಕುಳ ನೀಡುತ್ತಿದ್ದ ಎಂದು ಆರೋಪಿಸಲಾಗಿದೆ. ಅದೇ ಕಾಲೇಜಿನಲ್ಲಿ ಓದುತ್ತಿದ್ದ ಸೀನಿಯರ್ ವಿದ್ಯಾರ್ಥಿಯಿಂದ ಕಿರುಕುಳ ಇತ್ತು ಎನ್ನಲಾಗಿದೆ. ಇದೇ ಕಾರಣಕ್ಕೆ ಸನಾ ಪರ್ವಿನ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು...
ಅಂಕಣಸುದ್ದಿ

ಪಂಜಾಬ್‌ | ಗರೀಬ್ ರಥ ಎಕ್ಸ್‌ಪ್ರೆಸ್ ರೈಲು ಬೋಗಿಗೆ ಬೆಂಕಿ ಧಗಧಗಿಸಿದ ಜ್ವಾಲೆ ; ಪ್ರಯಾಣಿಕರು ಸೇಫ್‌- ಕಹಳೆ ನ್ಯೂಸ್

ಚಂಡೀಗಢ: ಲುಧಿಯಾನದಿಂದ ದೆಹಲಿಗೆ ಹೋಗುತ್ತಿದ್ದ ಗರೀಬ್ ರಥ ಎಕ್ಸ್‌ಪ್ರೆಸ್‌ ರೈಲಿನಲ್ಲಿ (ರೈಲು ಸಂಖ್ಯೆ 12204)  ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಎಸಿ ಕೋಚ್‌ಗಳು ಹೊತ್ತಿಉರಿದ ಪಂಜಾಬ್‌ನಲ್ಲಿ ನಡೆದಿದೆ. ಓರ್ವ ಮಹಿಳಾ ಪ್ರಯಾಣಿಕರಿಗೆ ಸುಟ್ಟ ಗಾಯಗಳಾಗಿದೆ, ಗಾಯಾಳು ಮಹಳೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಸಮಯದಲ್ಲಿ ರೈಲು ಅಮೃತಸರದಿಂದ ಪ್ರಯಾಣಿಸುತ್ತಿತ್ತು. ಆದ್ರೆ ಪ್ರಯಾಣಿಕರಿಗೆ ಯಾವುದೇ ಹಾನಿಯಾಗದೇ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ಘಟನೆ ಬಳಿಕ ಭಯದ ವಾತಾವರಣ ಮೂಡಿದೆ. ಸರ್ಕಾರಿ ರೈಲ್ವೆ ಪೊಲೀಸ್ (ಜಿಆರ್‌ಪಿ) ಅಧಿಕಾರಿಯ...
ಅಂಕಣಬೆಂಗಳೂರುಸುದ್ದಿ

ಬೆಂಗಳೂರಿಂದ ಹೊರಟಿದ್ದ ಖಾಸಗಿ ಬಸ್‌ ಏಕಾಏಕಿ ಬೆಂಕಿಗಾಹುತಿ ; 36 ಮಂದಿ ಪ್ರಯಾಣಿಕರು ಸೇಫ್-ಕಹಳೆ ನ್ಯೂಸ್

ಬೆಂಗಳೂರು: ನಗರದಿಂದ ಹೊರಟಿದ್ದ ಖಾಸಗಿ ಬಸ್‌ವೊಂದು  ನಡು ರಸ್ತೆಯಲ್ಲೇ ಹೊತ್ತಿ ಉರಿದಿರುವ ಘಟನೆ ಅನಂತಪುರ ಜಿಲ್ಲೆಗೆ 15 ಕಿಮೀ ದೂರದಲ್ಲಿರುವ ಗರ‍್ಲದಿನ್ನೆಯಲ್ಲಿ ನಡೆದಿದೆ. ಬೆಂಗಳೂರಿನಿಂದ ರಾಯಚೂರಿಗೆ ಹೊರಟಿದ್ದ ಬಸ್‌ ಅನಂತಪುರದ ಬಳಿ ಚಲಿಸುತ್ತಿದ್ದಾಗ ಬೆಂಕಿಗೆ ಆಹುತಿಯಾಗಿದೆ. ಅದೃಷ್ಟವಶಾತ್‌ ಬಸ್‌ನಲ್ಲಿದ್ದ 36 ಮಂದಿ ಪ್ರಯಾಣಿಕರು ಸೇಫ್‌ ಆಗಿದ್ದಾರೆ. ಗ್ರೀನ್ ಲೈನ್ ಟ್ರಾವೆಲ್ಸ್‌ಗೆ ಸೇರಿದ ಈ ಬಸ್‌ ಬೆಂಗಳೂರು-ಅನಂತಪುರ ಹೈವೇನಲ್ಲಿ ಹೊರಟಿತ್ತು. ಈ ವೇಳೆ ಟಯರ್‌ ಬ್ಲಾಸ್ಟ್‌ ಆಗಿ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ....
ಅಂಕಣಅಂತಾರಾಷ್ಟ್ರೀಯಸುದ್ದಿ

ಭಾರತದ ಆರ್ಥಿಕತೆಗೆ ರಷ್ಯಾದ ತೈಲ ಮುಖ್ಯ, ನಮ್ಮ ಸಂಬಂಧ ನಂಬಿಕೆ ಮೇಲೆ ಕಟ್ಟಿರುವ ಸೇತುವೆ ; ರಷ್ಯಾ-ಕಹಳೆ ನ್ಯೂಸ್

ಮಾಸ್ಕೋ: ಭಾರತ ಮತ್ತು ರಷ್ಯಾ ಸಂಬಂಧವು ನಂಬಿಕೆಯ ಮೇಲೆ ಕಟ್ಟಿರುವ ಸೇತುವೆ, ಘನವಾದ ಅಡಿಪಾಯ ಹೊಂದಿದೆ. ಯಾರೂ ಅಲುಗಾಡಿಸಲು ಸಾಧ್ಯವಿಲ್ಲ. ರಷ್ಯಾದ ತೈಲ ಪೂರೈಕೆಯು ಭಾರತದ ಆರ್ಥಿಕತೆಗೆ ಮುಖ್ಯವಾಗಿದೆ ಎಂದು ರಷ್ಯಾದ ರಾಯಭಾರಿ ಡೆನಿಸ್ ಅಲಿಪೋವ್  ಹೇಳಿದ್ದಾರೆ. ಭಾರತ ಇನ್ಮುಂದೆ ರಷ್ಯಾದಿಂದ ತೈಲ ಖರೀದಿಸಲ್ಲ ಅಂತ ಮೋದಿ ನನಗೆ ಭರವಸೆ ನೀಡಿದ್ದಾರೆ ಎಂಬ ಟ್ರಂಪ್‌ ಹೇಳಿಕೆಗೆ ಅವರು ಪ್ರತಿಕ್ರಿಯಿಸಿದ್ದಾರೆ. ನಮ್ಮ ಸರ್ಕಾರವು ಭಾರತದ ಹಿತಾಸಕ್ತಿಗೆ ಅನುಗುಣವಾಗಿದೆ. ಏಕೆಂದ್ರೆ ರಷ್ಯಾ ತೈಲ...
ಅಂಕಣಸುದ್ದಿ

ದೀಪಾವಳಿ ಕೊಡುಗೆ ನೆಪದಲ್ಲಿ ಜನಕ್ಕೆ ದೋಖಾ, ಎ-ಖಾತಾ ಸೋಗಿನಲ್ಲಿ 15,000 ಕೋಟಿ ಸುಲಿಗೆ ; ಹೆಚ್‌ಡಿಕೆ ಬಾಂಬ್‌-ಕಹಳೆ ನ್ಯೂಸ್

ಮಂಡ್ಯ: ದೀಪಾವಳಿ ಕೊಡುಗೆ ಕೊಡುತ್ತಿದ್ದೇವೆ ಎಂದು ಹೇಳಿ ರಾಜ್ಯ ಸರ್ಕಾರ ಬೆಂಗಳೂರು ಜನರ ಕಿಸೆಗೆ ಕೈ ಹಾಕಿದೆ. ಎ-ಖಾತಾ ಸೋಗಿನಲ್ಲಿ 15,000 ಕೋಟಿ ಸುಲಿಗೆ ಮಾಡುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ  ನೇರ ಆರೋಪ ಮಾಡಿದರು. ಮಂಡ್ಯ ನಗರದ ಸಂಜಯ್ ವೃತ್ತದಲ್ಲಿ ಹೊಸದಾಗಿ ನಿರ್ಮಿಸಿರುವ ಸುಸಜ್ಜಿತ ಆಟೋ ನಿಲ್ದಾಣ ಉದ್ಘಾಟಿಸಿದ ಬಳಿಕ ಮಾತನಾಡಿದ ಅವರು, ದೀಪಾವಳಿ ಕೊಡುಗೆ ಎಂದರೆ ಏನೋ ನಮಗೆ ದೊಡ್ಡ ಕೊಡುಗೆ ಕೊಡುತ್ತದೆ ಎಂದು ಜನರು...
ಅಂಕಣಅಂತಾರಾಷ್ಟ್ರೀಯಸುದ್ದಿ

ತಾಲಿಬಾನ್‌ ಯುದ್ಧಕ್ಕೆ ಭಾರತ ಪ್ರಾಯೋಜಕತ್ವ, ಪ್ಲ್ಯಾನ್‌ ನಡೆದಿದ್ದು ದೆಹಲಿಯಲ್ಲಿ ; ಪಾಕ್‌ ಸಚಿವ ಆರೋಪ-

ಇಸ್ಲಾಮಾಬಾದ್‌: ತಾಲಿಬಾನ್‌ ಯುದ್ಧಕ್ಕೆ ಭಾರತ ಪ್ರಾಯೋಜಕತ್ವ ವಹಿಸಿದ್ದು, ಅಫ್ಘಾನಿಸ್ತಾನ ಭಾರತದ ಪ್ರಾಕ್ಸಿ ಯುದ್ಧದಲ್ಲಿ ಹೋರಾಡುತ್ತಿದೆ ಎಂದು ಪಾಕಿಸ್ತಾನ ರಕ್ಷಣಾ ಸಚಿವ ಖವಾಜಾ ಆಸಿಫ್  ಆರೋಪಿಸಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ಅಫ್ಘಾನಿಸ್ತಾನವು ಯುದ್ಧದ ನಿರ್ಧಾರಗಳನ್ನ ಕಾಬೂಲ್‌ನಲ್ಲಿ ಅಲ್ಲ ಭಾರತದ ನವದೆಹಲಿಯಲ್ಲಿ ತೆಗೆದುಕೊಳ್ಳುತ್ತಿದೆ ಎಂದಿದ್ದಾರೆ. ಇದೇ ವೇಳೆ ಕದನ ವಿರಾಮದ ಬಗ್ಗೆಯೂ ಅವರು ಅನುಮಾನ ವ್ಯಕ್ತಪಡಿಸಿದ್ದಾರೆ. ತಾಲಿಬಾನ್‌ನ  ವಿದೇಶಾಂಗ ಸಚಿವ ಅಮೀರ್‌ ಖಾನ್‌ ಮುತ್ತಕಿ ಇತ್ತೀಚೆಗೆ ಭಾರತಕ್ಕೆ ಭೇಟಿ ನೀದ್ದಾಗ ಪ್ಲ್ಯಾನ್‌ ರೂಪಿಸಿದ್ದಾರೆ....
1 7 8 9 10 11 43
Page 9 of 43