Saturday, March 7, 2026

ಕ್ರೈಮ್

ಕ್ರೈಮ್ಸುದ್ದಿ

ಮದ್ದೂರಿನಲ್ಲಿ ಗಣೇಶನಿಗೆ ಕಲ್ಲು; ಪ್ರತಿಭಟಿಸಿದ ಹಿಂದೂ ಕಾರ್ಯಕರ್ತರ ಮೇಲೆ ಲಾಠಿಚಾರ್ಜ್‌-ಕಹಳೆ ನ್ಯೂಸ್

ಮಂಡ್ಯ: ನಿಷೇಧಾಜ್ಞೆ ಉಲ್ಲಂಘಿಸಿ ಪ್ರತಿಭಟನೆ ನಡೆಸಿದ ಹಿಂದೂ  ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿ ಚಾರ್ಜ್‌  ಮಾಡಿದ್ದಾರೆ. ಮದ್ದೂರು ಪಟ್ಟಣದ ರಾಮ್‌ ರಹೀಂ ನಗರಕ್ಕೆ ಹೊಂದಿಕೊಂಡಿರುವ ಚನ್ನೇಗೌಡ ಬಡಾವಣೆಯಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗಣೇಶಮೂರ್ತಿ ವಿಸರ್ಜನೆ ವೇಳೆ ಅನ್ಯ ಕೋಮಿನ ಯುವಕರು ಕಲ್ಲು ತೂರಾಟ ನಡೆಸಿದ್ದನ್ನು ಖಂಡಿಸಿ ಹಿಂದೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನಿಷೇಧಾಜ್ಞೆ ನಡುವೆಗೆ ಮದ್ದೂರು ಪಟ್ಟಣದಲ್ಲಿ ಸ್ಥಳೀಯರು, ಮಹಿಳೆಯರು, ಮಕ್ಕಳು ಜೈ ಶ್ರೀರಾಮ್‌ ಎಂದು ಘೋಷಣೆ ಕೂಗುತ್ತಾ ಕಲ್ಲು ತೂರಿದ ಕಿಡಿಗೇಡಿಗಳನ್ನು...
ಕ್ರೈಮ್ಸುದ್ದಿ

ದೇಶ ಕಾಯೋ ಯೋಧನಿಂದಲೇ ಕೊಲೆ ; ಡೀಸೆಲ್‌ ಸುರಿದು ಸಹೋದರನ ಹತ್ಯೆಗೈದ ಮೂವರು ಅರೆಸ್ಟ್-ಕಹಳೆ ನ್ಯೂಸ್

ಬಾಗಲಕೋಟೆ: ಕುಡುಕ ಸಹೋದರನನ್ನು ಡೀಸೆಲ್‌ ಹಾಕಿ ದೇಶ ಕಾಯುವ ಯೋಧನೇ ಕೊಲೆ ಮಾಡಿರುವ ಘಟನೆ ಬಾಗಲಕೋಟೆ  ಜಿಲ್ಲೆ ಜಮಖಂಡಿ ತಾಲ್ಲೂಕಿನ ಬಿದರಿ ಗ್ರಾಮದ ತೋಟದ ಮನೆಯಲ್ಲಿ ನಡೆದಿದೆ. ಅನಿಲ್ ಪರಪ್ಪ ಕಾನಟ್ಟಿ(32) ಮೃತ ವ್ಯಕ್ತಿ. ಕುಡಿದ ಮತ್ತಲ್ಲಿ ನಿತ್ಯ ಮನೆಯಲ್ಲಿ ಜಗಳವಾಡುತ್ತಿದ್ದ. ಹೀಗಾಗಿ ಸಹೋದರ ಯೋಧ ಬಸವರಾಜ ಕಾನಟ್ಟಿ, ತಂದೆ ಪರಪ್ಪ ಕಾನಟ್ಟಿ, ತಾಯಿ ಶಾಂತಾ ಕಾನಟ್ಟಿ ಮೂವರು ಸೇರಿಕೊಂಡು ಕೊಲೆ ಮಾಡಿದ್ದಾರೆ ಎನ್ನಲಾಗಿದೆ ಸೆ.5ಕ್ಕೆ ಈ ಘಟನೆ ನಡೆದಿದ್ದು,...
ಕಾಸರಗೋಡುಕ್ರೈಮ್ಜಿಲ್ಲೆಸುದ್ದಿ

ಪುತ್ರಿ ಮೇಲೆ ಆ್ಯಸಿಡ್ ದಾಳಿ ನಡೆಸಿದ ಅಪ್ಪ – ಕಹಳೆ ನ್ಯೂಸ್

ಕಾಸರಗೋಡು: ಬಾಲಕಿಯ ಮೇಲೆ ತಂದೆಯೇ ಆ್ಯಸಿಡ್ ದಾಳಿ ನಡೆಸಿದ ಘಟನೆ ಕೇರಳದ ಕಾಸರಗೋಡು ಜಿಲ್ಲೆಯ ಪನತ್ತಡಿ ಗ್ರಾಮದಲ್ಲಿ ನಡೆದಿದೆ ಎಂದು ಜಿಲ್ಲಾ ಪೊಲೀಸರು ಶನಿವಾರ ತಿಳಿಸಿದ್ದಾರೆ. ಮತ್ತೊರ್ವ ಬಾಲಕಿಗೂ ಆಯಸಿಡ್ ದಾಳಿಯಿಂದಾಗಿ ಗಾಯಗಳಾಗಿವೆ. ಘಟನೆ ಸಂಬಂಧ ‍ರಾಜಪುರಂ ಪೊಲೀಸರು ಆರೋಪಿ, ಕರ್ನಾಟಕದ ದಕ್ಷಿಣ ಕನ್ನಡ ನಿವಾಸಿ ಮನೋಜ್ ಕೆ.ಸಿ (48) ಎಂಬಾತನ ಮೇಲೆ ‍ಪ್ರಕರಣ ದಾಖಲಿಸಿದ್ದಾರೆ. ಆರೋಪಿ ತಲೆ ಮರೆಸಿಕೊಂಡಿದ್ದು ಆತನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಶುಕ್ರವಾರ ರಾತ್ರಿ...
ಕ್ರೈಮ್ಬೆಂಗಳೂರುಸುದ್ದಿ

ತನ್ನ ಕಾರಿಗೆ ಸೈಡ್‌ ಬಿಡಲಿಲ್ಲ; ಅಂತ ಬಸ್‌ ಚಾಲಕನ ಮೇಲೆ ಪೊಲೀಸ್‌ ಸಿಬ್ಬಂದಿ ಹಲ್ಲೆ-ಕಹಳೆ ನ್ಯೂಸ್

ಬೆಂಗಳೂರು: ತನ್ನ ಕಾರಿಗೆ ಸೈಡ್‌ ಬಿಡಲಿಲ್ಲ ಅಂತ ಬಸ್‌ ಚಾಲಕನ ಮೇಲೆ ಜಿಗಣಿ ಠಾಣೆಯ ಪೊಲೀಸ್‌ ಸಿಬ್ಬಂದಿಯೊಬ್ಬರು ಹಲ್ಲೆ ಮಾಡಿರುವ ಘಟನೆ ನಡೆದಿದೆ. ರಾತ್ರಿ 11 ಗಂಟೆ ಸುಮಾರಿ ಘಟನೆ ನಡೆದಿದೆ. ಎಣ್ಣೆ ಮತ್ತಲ್ಲಿ ಬಸ್‌ ಡಿಪೋ ಒಳಗೆ ಕಾರು ನುಗ್ಗಿಸಿ ಬಸ್‌ ಚಾಲಕನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಅಲ್ಲದೇ, ಹಲ್ಲೆ ಕೂಡ ನಡೆಸಿದ್ದಾರೆಂದು ಆರೋಪಿಸಲಾಗಿದೆ. ಬಸ್ ಚಾಲಕ ಸುನೀಲ್ ಮೇಲೆ ಹಲ್ಲೆ ಮಾಡಿ ಪೊಲೀಸ್‌ ಸಿಬ್ಬಂದಿ ದರ್ಪ ತೋರಿದ್ದಾರೆ. ಹಲ್ಲೆ...
ಕೊಡಗುಕ್ರೈಮ್ಮಡಿಕೇರಿಸುದ್ದಿ

ಹೆಗ್ಗಡೆ ವಿರುದ್ಧ ಅಪಪ್ರಚಾರಕ್ಕೆ ಕೊಡಗಿನಲ್ಲೂ ನಡೆದಿತ್ತು ಹುನ್ನಾರ ; ರೆಡಿಮೇಡ್ ದೂರಿನ ಪ್ರತಿ ನೀಡಿದ್ದ ಬುರುಡೆ ಗ್ಯಾಂಗ್‌-ಕಹಳೆ ನ್ಯೂಸ್

ಮಡಿಕೇರಿ: ಶ್ರೀ ಕ್ಷೇತ್ರ ಧರ್ಮಸ್ಥಳ  ವಿರುದ್ಧ ಷಡ್ಯಂತ್ರ ಎಸಗಿದ ಆರೋಪ ಹೊತ್ತಿರುವ ಬುರುಡೆ ಗ್ಯಾಂಗ್ ಸದಸ್ಯರು ಕಳೆದ ವರ್ಷ ಕೊಡಗು  ಜಿಲ್ಲೆಗೂ ಭೇಟಿ ನೀಡಿ ಜನತೆಯಲ್ಲಿ ಶ್ರೀ ಕ್ಷೇತ್ರದ ಬಗ್ಗೆ ಗೊಂದಲ ಮೂಡಿಸಿ ಹುನ್ನಾರ ನಡೆಸಿದ ವಿಚಾರ ಈಗ ಬೆಳಕಿಗೆ ಬಂದಿದೆ. ಈ ಬಗ್ಗೆ ಮಾಹಿತಿ ದೊರೆತ ಕೂಡಲೇ ಕ್ಷೇತ್ರದ ಭಕ್ತರು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಭೇಟಿ ಮಾಡಿ ದೂರು ನೀಡಿದ್ದರು. ದೂರಿನಲ್ಲಿ ಸಮಗ್ರ ದಾಖಲೆ ನೀಡಿದ್ದರಿಂದ ವರಿಷ್ಠಾಧಿಕಾರಿಗಳು...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಧರ್ಮಸ್ಥಳ ಕೇಸ್ NIAಗೆ ಇಲ್ಲ ; ಸಿಎಂ ಪರೋಕ್ಷ ಹೇಳಿಕೆ-ಕಹಳೆ ನ್ಯೂಸ್

ಬೆಂಗಳೂರು: ಧರ್ಮಸ್ಥಳ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ ಕೊಡಲು ಸಾಧ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ  ಮತ್ತೊಮ್ಮೆ ಪರೋಕ್ಷವಾಗಿ ಸ್ಪಷ್ಟಪಡಿಸಿದ್ದಾರೆ. ಧರ್ಮಸ್ಥಳ  ಪ್ರಕರಣವನ್ನು  ಎನ್‌ಐಎಗೆ ಕೊಡುವಂತೆ ಸ್ವಾಮೀಜಿಗಳಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ  ಮನವಿ ಮಾಡಿರುವ ವಿಚಾರಕ್ಕೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಧರ್ಮಸ್ಥಳ ಕೇಸ್ ನಲ್ಲಿ ನಾವು ಎಸ್‌ಐಟಿ  ರಚನೆ ಮಾಡಿದ್ದೇವೆ. ಎಸ್‌ಐಟಿ ಅವರು ಪೊಲೀಸರೇ ತಾನೆ. ಎನ್‌ಐಎನಲ್ಲಿ ಇರುವವರು ಯಾರು‌? ಅವರು ಪೋಲೀಸರೇ ಎನ್ನುವ ಮೂಲಕ ಎಸ್‌ಐಟಿ...
ಅಂಕಣಕ್ರೈಮ್ಸುದ್ದಿ

ಸಮೋಸಾ ಕೊಡಿಸಲಿಲ್ಲ; ಅಂತ ವ್ಯಕ್ತಿ ಮೇಲೆ ಪತ್ನಿ, ಕುಟುಂಬಸ್ಥರಿಂದ ಹಲ್ಲೆ-ಕಹಳೆ ನ್ಯೂಸ್

ಲಕ್ನೋ: ಸಮೋಸಾ ತರದಿದ್ದಕ್ಕೆ ಪತ್ನಿ ಮತ್ತು ಆಕೆಯ ಸಂಬಂಧಿಕರು ವ್ಯಕ್ತಿಯೊಬ್ಬನನ್ನು ಥಳಿಸಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಕೊಲೆ ಯತ್ನದ ಆರೋಪದ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಆನಂದಪುರದ ನಿವಾಸಿ ಶಿವಂ ಮೇಲೆ ಆತನ ಪತ್ನಿ ಸಂಗೀತಾ, ಆಕೆಯ ಪೋಷಕರು ಉಷಾ, ರಾಮ್‌ಲಡೈಟ್ ಮತ್ತು ಮಾವ ರಾಮೋತಾರ್ ಹಲ್ಲೆ ನಡೆಸಿದ್ದಾರೆ. ಈ ಸಂಬಂಧ ಶಿವಂ ತಾಯಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಸಂಗೀತಾ ತನ್ನ ಪತಿಗೆ ಸಮೋಸಾ ತರಲು...
ಕ್ರೈಮ್ಸುದ್ದಿ

ಪಾಟ್ನಾದಲ್ಲಿ ಭೀಕರ ರಸ್ತೆ ಅಪಘಾತ ; ಐವರು ಉದ್ಯಮಿಗಳು ಸ್ಥಳದಲ್ಲೇ ಸಾವು-ಕಹಳೆ ನ್ಯೂಸ್

ಪಾಟ್ನಾ: ಇಲ್ಲಿನ ಪರ್ಸಾ ಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತಕ್ಕೆ  ಐವರು ಉದ್ಯಮಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಪಾಟ್ನಾ-ಗಯಾ-ದೋಭಿ ಚತುಷ್ಪಥ ರಸ್ತೆಯಲ್ಲಿ ಘಟನೆ ನಡೆದಿದೆ. ಮೃತ ಉದ್ಯಮಿಗಳನ್ನು ರಾಜೇಶ್ ಕುಮಾರ್ (50), ಸಂಜಯ್ ಸಿಂಗ್ (55), ಕಮಲ್ ಕಿಶೋರ್ (38), ಪ್ರಕಾಶ್ ಚೌರಾಸಿಯಾ (35) ಮತ್ತು ಸುನಿಲ್ ಕುಮಾರ್ (38) ಎಂದು ಗುರುತಿಸಲಾಗಿದೆ. ಮೃತರೆಲ್ಲರೂ ಪಾಟ್ನಾದ ಪ್ರತಿಷ್ಠಿತ ಉದ್ಯಮಿಗಳಾಗಿದ್ದು, ಫತುಹಾದಿಂದ ತಡರಾತ್ರಿ ಕೆಲವು...
1 7 8 9 10 11 128
Page 9 of 128