ಕೇರಳ, ಕರ್ನಾಟಕ ಸೇರಿದಂತೆ ಕೆಲ ರಾಜ್ಯಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆ! – ಕಹಳೆ ನ್ಯೂಸ್
ಬೆಂಗಳೂರು, ಆಗಸ್ಟ್ 03: ದೇಶಾದ್ಯಂತ ಮಳೆಯ ಅಬ್ಬರ ದಿನದಿಂದ ದಿನಕ್ಕೆ ಜೋರಾಗುತ್ತಿದೆ. ಕೇರಳ, ಕರ್ನಾಟಕ ಸೇರಿದಂತೆ ಕೆಲ ರಾಜ್ಯಗಳಲ್ಲಿ ಮಳೆಯ ಆರ್ಭಟ ಜನರನ್ನು ಭಯಗೊಳಿಸಿದ್ದು, ಕರ್ನಾಟಕದಲ್ಲಿ ನಿರಂತರವಾಗಿ ಕಳೆದ ಒಂದು ತಿಂಗಳಿನಿಂದ ಮಳೆಯಾಗುತ್ತಿದೆ. ಇತ್ತ ಭರ್ಜರಿ ಮಳೆಯಿಂದಾಗಿ ಕರ್ನಾಟಕದ ಬಹುತೇಕ ಜಲಾಶಯಗಳು ತುಂಬಿ ಹರಿಯುತ್ತಿದ್ದು, ಮಳೆರಾಯನ ಆರ್ಭಟಕ್ಕೆ ಜನ ರೋಸಿ ಹೋಗಿದ್ದಾರೆ. ವಯನಾಡು ಸೇರಿದಂತೆ ಕೇರಳದ ಉತ್ತರದ ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಆಗಸ್ಟ್...







