Wednesday, March 18, 2026

ರಾಜ್ಯ

ದಕ್ಷಿಣ ಕನ್ನಡಪುತ್ತೂರುರಾಜಕೀಯರಾಜ್ಯಸುದ್ದಿ

‘ ಯಾವುದೇ ಕಾರಣಕ್ಕೂ ನಾಮಪತ್ರ ಹಿಂಪಡೆಯುವುದಿಲ್ಲ , ನನ್ನ ಸ್ಪರ್ಧೆ ಖಂಡಿತ ‘ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ – ಕಹಳೆ ನ್ಯೂಸ್

ಪುತ್ತೂರು : ‘ಯಾವುದೇ ಕಾರಣಕ್ಕೂ ನಾಮಪತ್ರ ಹಿಂಪಡೆಯುವುದಿಲ್ಲವೆಂದು’ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ರವರು ತಿಳಿಸಿದ್ದಾರೆ. ಚುನಾವಣೆಗೆ ಸ್ಪರ್ಧಿಸುತ್ತಿಲ್ಲ ನಾಮಪತ್ರ ಹಿಂಪಡೆಯಲಿದ್ದಾರೆ ಎಂದು ಅಪಪ್ರಚಾರ ಮಾಡಲಾಗುತ್ತಿದ್ದು, ನಮ್ಮ ಸ್ಪರ್ಧೆಯಲ್ಲಿ ಸಂದೇಹ ಬೇಡ.., ಅಪಪ್ರಚಾರ ಆರಂಭವಾಗಿದೆ ಅದನ್ನೆಲ್ಲಾ ಕಿವಿಗೊಡಬೇಡಿ ಎಂದು ಅವರು ತಿಳಿಸಿದ್ದಾರೆ. ಪ್ರತಿ ಮನೆಗೆ ತೆರಳಿ ನಾಮಪತ್ರ ಹಿಂತೆಗೆದುಕೊಳ್ಳುತ್ತಾರೆ ಎಂದು ಹೇಳಲಾಗುತ್ತಿದ್ದು, ಯಾವುದೇ ಕಾರಣಕ್ಕೂ ನಾಮಪತ್ರ ವಾಪಾಸ್ ಪಡೆಯುವುದಿಲ್ಲ ಎಂದು ಅವರು ತಿಳಿಸಿದ್ದಾರೆ....
ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿ

ಮೋದಿ ಸಮುದಾಯ ಅವಮಾನಿಸಿ ರಾಹುಲ್ ಗಾಂಧಿಗೆ ಶಿಕ್ಷೆಯಾಗಿದೆ, ಅದೇ ರೀತಿ ಕರ್ನಾಟಕದ ಲಿಂಗಾಯತ ಸಮಾಜಕ್ಕೆ ಅವಮಾನ ಮಾಡಿದ ಸಿದ್ದರಾಮಯ್ಯಗೂ ಶಿಕ್ಷೆಯಾಗಬೇಕು ; ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಾಗ್ದಾಳಿ – ಕಹಳೆ ನ್ಯೂಸ್

ಲಿಂಗಾಯಿತ ಸಿಎಂ ರಾಜ್ಯವನ್ನು ಹಾಳು ಮಾಡಿದ್ದಾರೆ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಕ್ರೋಶ ಹೊರ ಹಾಕಿದ್ದಾರೆ. ಇದು ಕರ್ನಾಟಕದ ಏಳು ಕೋಟಿ ಜನರಿಗೆ ಮಾಡಿರುವ ಅವಮಾನ. ಇಡೀ ಲಿಂಗಾಯತ ಸಮಾಜಕ್ಕೆ ಭ್ರಷ್ಟಾಚಾರದ ಆರೋಪ ಮಾಡಿದ್ದಾರೆ. ಸಿದ್ಧರಾಮಯ್ಯ ಹೇಳಿಕೆ ಖಂಡನೀಯ ಎಂದರು. ಇದೀಗ ಸಿದ್ದರಾಮಯ್ಯರ ಒಂದು ಮುಖ ಬಯಲಾದಂತಾಗಿದೆ. ಈ ಹಿಂದೆ ವೀರಶೈವ-ಲಿಂಗಾಯತ ಸಮುದಾಯ ಒಡೆಯಲು ಯತ್ನ ಮಾಡಿದ್ದರು. ಲಿಂಗಾಯತರ ಮೇಲೆ...
ರಾಜ್ಯಸುದ್ದಿ

ಸಿದ್ಧಗಂಗಾ ಮಠದ ಉತ್ತರಾಧಿಕಾರಿಯಾಗಿ ಪಟ್ಟಾಭಿಷಿಕ್ತರಾದ ಶಿವಸಿದ್ದೇಶ್ವರ ಸ್ವಾಮೀಜಿ – ಕಹಳೆ ನ್ಯೂಸ್

 ತುಮಕೂರು:ಸಿದ್ಧಗಂಗಾ ಮಠದ ಉತ್ತರಾಧಿಕಾರಿಯಾಗಿ ಶ್ರೀ ಶಿವಸಿದ್ಧೇಶ್ವರ ಸ್ವಾಮೀಜಿ (ಮನೋಜ್ ಕುಮಾರ್ ) ಇಂದು ಧೀಕ್ಷೆ ಪಡೆದುಕೊಂಡರು. ಅಕ್ಷಯ ತೃತೀಯ ದಿನವಾದ ಇಂದು ಸಿದ್ಧಗಂಗಾ ಮಠದ ಆಡಳಿತಕ್ಕೆ ಒಳಪಡುವ ರಾಮನಗರ ಜಿಲ್ಲೆಯ ಕಂಚುಗಲ್ ಬಂಡೆಮಠದ ಉತ್ತರಾಧಿಕಾರಿಯನ್ನಾಗಿ ಶ್ರೀ ಮಹಾಲಿಂಗಸ್ವಾಮೀಜಿ (ಹರ್ಷ.ಕೆ.ಎಂ.)ಮತ್ತು ದೇವನಹಳ್ಳಿ ತಾಲೂಕಿನ ವಿಜಾಪುರದ ಬಸವಕಲ್ಯಾಣ ಮಠದ ಉತ್ತರಾಧಿಕಾರಿಯನ್ನಾಗಿ ಶ್ರೀ ಸದಾಶಿವಸ್ವಾಮೀಜಿ (ಗೌರೀಶ್ ಕುಮಾರ್) ಪಟ್ಟಾಧಿಕಾರ ಮತ್ತು ಉತ್ತರಾಧಿಕಾರದ ಧೀಕ್ಷೆ ಪಡೆದುಕೊಂಡರು. ಇಂದು ಬೆಳಗ್ಗೆ 5 ಗಂಟೆಯಿಂದ ಶ್ರೀಮಠದಲ್ಲಿ ಪೂಜಾ ಕೈಂಕರ್ಯಗಳು...
ದಕ್ಷಿಣ ಕನ್ನಡಬೆಂಗಳೂರುರಾಜಕೀಯರಾಜ್ಯಸುದ್ದಿ

ಚುನಾವಣೆಗೂ ಮುನ್ನ ರಾಜ್ಯಕ್ಕೆ ಮತ್ತೆ ಮೋದಿ ; ಏಪ್ರಿಲ್ 30ರಂದು ಕೋಲಾರ, ಚನ್ನಪಟ್ಟಣದಲ್ಲಿ ಸಮಾವೇಶ – ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಬೃಹತ್ ಪ್ರಚಾರ ಸಭೆ ಬಿಜೆಪಿ ಮಾಸ್ಟರ್ ಫ್ಲಾನ್ – ಕಹಳೆ ನ್ಯೂಸ್

ಬೆಂಗಳೂರು: 2023ರ ವಿಧಾನಸಭಾ ಚುನಾವಣೆಯಲ್ಲಿ ಹಳೇ ಮೈಸೂರು ಭಾಗವನ್ನು ಟಾರ್ಗೆಟ್‌ ಮಾಡಿರುವ ಬಿಜೆಪಿ (BJP) ಮೋದಿ ಮೂಲಕ ಮತ ಕಬ್ಜಕ್ಕೆ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಹೆಚ್‍ಡಿಕೆ (HD Kumaraswamy) ಅಡ್ಡಾಗೆ ಪ್ರಧಾನಿ ಮೋದಿ (Narendra Modi) ಕರೆತರುವ ಮೂಲಕ ಜೆಡಿಎಸ್ (JDS) ಭದ್ರಕೋಟೆಯನ್ನು ಛಿದ್ರ ಮಾಡಲು ಬಿಜೆಪಿ ಮಾಸ್ಟರ್ ಫ್ಲಾನ್ ಮಾಡಿದೆ. ಬೊಂಬೆನಗರಿ ಚನ್ನಪಟ್ಟಣದಲ್ಲಿ ಬೃಹತ್ ಪ್ರಚಾರ ಸಭೆ ಆಯೋಜಿಸಲು ಸಿದ್ಧತೆ ನಡೆಸಲಾಗಿದೆ. 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ (Election) ಹಳೆ ಮೈಸೂರು...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಬೇರೆ ಹುಡ್ಗರ ಜೊತೆ ರೀಲ್ಸ್ ಮಾಡುತ್ತಿದ್ದಕ್ಕೆ ಸುಂದರಿಯನ್ನು ಕೊಂದು ಸುಟ್ಟು ಹಾಕಿದ ಪಾಗಲ್ ಪ್ರೇಮಿ – ಕಹಳೆ ನ್ಯೂಸ್

ಯಾದಗಿರಿ: ಪಾಗಲ್ ಪ್ರೇಮಿಯೊಬ್ಬ ತಾನು ಪ್ರೀತಿ ಮಾಡುತ್ತಿದ್ದ ಯುವತಿಯನ್ನೇ (Woman) ಕೊಲೆಗೈದು, ಮೃತದೇಹವನ್ನು ಸುಟ್ಟು ಹಾಕಿರುವ ಘಟನೆ ಯಾದಗಿರಿ (Yadgiri) ತಾಲೂಕಿನ ಅರಕೇರಾದ ಪಂಚಶೀಲ ನಗರದ ಜಮೀನಿನಲ್ಲಿ ನಡೆದಿದ್ದು, ಪ್ರಕರಣದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು (Police) ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮೃತ ಯುವತಿಯನ್ನು ಉತ್ತರ ಪ್ರದೇಶ (Uttara Pradesh) ಮೂಲದ ಅಂತಿಮಾ ವರ್ಮಾ (25) ಎಂದು ಗುರುತಿಸಲಾಗಿದೆ. ಯಾದಗಿರಿಯ ಮಾರುತಿ ರಾಠೋಡ್, ಅಂತಿಮಾ ವರ್ಮಾಳನ್ನು ಕೊಲೆಗೈದ ಕಿರಾತಕ. ಆರೋಪಿ ಮಾರುತಿ ರಾಠೋಡ್‌ನನ್ನು...
ದಕ್ಷಿಣ ಕನ್ನಡರಾಜ್ಯಸುದ್ದಿ

ಹೆಣ್ಣು ಮಗು ನೀಡಿದ ಕಟೀಲು ಮಾತೆಗೆ ಶಿಲ್ಪಾ ಶೆಟ್ಟಿಯಿಂದ ಸೀರೆ ಹರಕೆ – ಕಹಳೆ ನ್ಯೂಸ್

ಕಟೀಲು: ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ ಅವರು ಪತಿ ರಾಜ್‌ ಕುಂದ್ರಾ, ಮಕ್ಕಳು, ತಾಯಿ, ಸಹೋದರಿ ನಟಿ ಶಮಿತಾ ಶೆಟ್ಟಿ ಜತೆಗೆ ಭೇಟಿ ನೀಡಿ ಸೇವೆ ಸಲ್ಲಿಸಿದರು. ಹೆಣ್ಣು ಮಗುವಿಗಾಗಿ ಹರಕೆ ಹೊತ್ತುಕೊಂಡಿದ್ದ ಶಿಲ್ಪಾ ಶೆಟ್ಟಿ ದಂಪತಿ ಶ್ರೀದೇವಿಗೆ ಸೀರೆ ಹರಕೆ ಒಪ್ಪಿಸಿದರು. ಬಳಿಕ ರಥಬೀದಿಯಲ್ಲಿ ನಡೆಯುತ್ತಿದ್ದ ಯಕ್ಷಗಾನವನ್ನು ವೀಕ್ಷಿಸಿ, ವೇಷಗಳ ಭಾವಚಿತ್ರ ತೆಗೆದು ಸಂಭ್ರಮಿಸಿದರು....
ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿ

ಕಾಂಗ್ರೆಸ್‌ ಟಿಕೆಟ್‌ ಮಾರಾಟ – ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ 2 ಕೋಟಿ ರೂ. ಪಡೆದು ಇನಾಯತ್‌ ಅಲಿಗೆ ಟಿಕೆಟ್‌ ಕೊಟ್ಟಿದ್ದಾರೆ ; ಮಾಜಿ ಶಾಸಕ ಮೊದೀನ್‌ ಬಾವಾ ಗಂಭೀರ ಆರೋಪ – ಕಹಳೆ ನ್ಯೂಸ್

ಬೆಂಗಳೂರು: ಟಿಕೆಟ್‌ ವಂಚಿತ ಕೆಲವರು ಪಕ್ಷದ ಟಿಕೆಟ್‌ ಮಾರಾಟವಾಗಿದೆ ಎಂಬ ಗಂಭೀರ ಆರೋಪ ಮಾಡಿದ್ದು, ಇದು ಚುನಾವಣೆ ಹೊಸ್ತಿಲಲ್ಲಿ ಕಾಂಗ್ರೆಸ್‌ಗೆ ತೀವ್ರ ಮುಜುಗರ ಉಂಟು ಮಾಡಿದೆ. ಮಾಜಿ ಸಿಎಂ ಎಸ್‌.ಎಂ.ಕೃಷ್ಣ ಅವರ ಸಹೋದರ ಎಸ್‌.ಎಂ.ಶಂಕರ್‌ ಅವರ ಪುತ್ರ ಹಾಗೂ ಮದ್ದೂರು ಕಾಂಗ್ರೆಸ್‌ ಟಿಕೆಟ್‌ ವಂಚಿತ ಗುರುಚರಣ್‌ ಹಾಗೂ ಮಂಗಳೂರು ನಗರ ಉತ್ತರದ ಟಿಕೆಟ್‌ ಆಕಾಂಕ್ಷಿಯಾಗಿದ್ದ ಮಾಜಿ ಶಾಸಕ ಮೊದೀನ್‌ ಬಾವಾ ಅವರು ಪಕ್ಷದ ವಿರುದ್ಧ ಟಿಕೆಟ್‌ ಮಾರಾಟದ ಆರೋಪ ಮಾಡಿರುವುದು...
ದಕ್ಷಿಣ ಕನ್ನಡಮೂಡಬಿದಿರೆರಾಜ್ಯಶಿಕ್ಷಣಸುದ್ದಿ

ದ್ವಿತೀಯ ಪಿಯುಸಿ ಫಲಿತಾಂಶ ; ವಾಣಿಜ್ಯ ವಿಭಾಗದಲ್ಲಿ ಆಳ್ವಾಸ್ ಮೂಡಬಿದಿರೆ ವಿದ್ಯಾರ್ಥಿನಿ ಅನನ್ಯಾ ರಾಜ್ಯಕ್ಕೆ ಪ್ರಥಮ ರ್‍ಯಾಂಕ್‌ – ಕಹಳೆ ನ್ಯೂಸ್

ದಕ್ಷಿಣ ಕನ್ನಡ : 2022–23ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದೆ. ಪಿಯು ಮಂಡಳಿ ನಿರ್ದೇಶಕರು ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಆಳ್ವಾಸ್ ಮೂಡಬಿದಿರೆ ವಿದ್ಯಾರ್ಥಿನಿ ಅನನ್ಯಾ ರಾಜ್ಯಕ್ಕೆ ಪ್ರಥಮ ರ್‍ಯಾಂಕ್‌ ಪಡೆದುಕೊಂಡಿದ್ದಾರೆ. https://karresults.nic.in  ವೆಬ್‌ಸೈಟ್‌ನಲ್ಲಿ ವಿದ್ಯಾರ್ಥಿಗಳು ಹಾಲ್‌ ಟಿಕೆಟ್‌ ನಂಬರ್ ಹಾಗೂ ಜನ್ಮ ದಿನಾಂಕ ನಮೂದಿಸಿ ಫಲಿತಾಂಶ ವೀಕ್ಷಿಸಬಹುದು. ರಾಜ್ಯದಲ್ಲಿ ಪ್ರಥಮ ರ್‍ಯಾಂಕ್‌ ಪಡೆದವರ ವಿವರ:  ಕಲಾ ವಿಭಾಗ : ತಬಸುಮ್ ಶೇಕ್, ಜಯನಗರ ಬೆಂಗಳೂರು...
1 175 176 177 178 179 274
Page 177 of 274