Wednesday, March 18, 2026

ರಾಜ್ಯ

ಕ್ರೈಮ್ಬೆಂಗಳೂರುರಾಜಕೀಯರಾಜ್ಯ

ಕಾರಿನಲ್ಲಿ ಮೊಬೈಲ್, ಸೀರೆ, ಬ್ಲೌಸ್ ಪೀಸ್, ಶಾಲು, ಪ್ರೋಗ್ರೆಸ್ ರಿಪೋರ್ಟ್ ಇರುವ ಬುಕ್​ಲೆಟ್ಸ್​ಗಳನ್ನು ಮತದಾರರಿಗೆ ಹಂಚಲುಕೊಂಡೊಯ್ಯತ್ತಿದ್ದ ವೇಳೆ ಚೆಕ್​ಪೋಸ್ಟ್​ನಲ್ಲಿ ಕಾಂಗ್ರೆಸ್ ಶಾಸಕಿ ಸೌಮ್ಯಾ ರೆಡ್ಡಿ ಕಾರು ಜಪ್ತಿ ಮಾಡಿದ ಪೊಲೀಸರು – ಕಹಳೆ ನ್ಯೂಸ್

ಜಯನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಸೌಮ್ಯಾ ರೆಡ್ಡಿಗೆ (Sowmya Reddy) ಸೇರಿದ ಇನೋವಾ ಕಾರನ್ನು ಫ್ಲೈಯಿಂಗ್ ಸ್ಕ್ವಾಡ್ ಹಾಗೂ ತಿಲಕನಗರ ಪೊಲೀರು ಗುರುವಾರ ವಶಕ್ಕೆ ಪಡೆದಿದ್ದಾರೆ. ಚೆಕ್​ಪೋಸ್ಟ್​ನಲ್ಲಿ ತಪಾಸಣೆ ವೇಳೆ ಪೊಲೀಸರು ಕಾರನ್ನು ಜಪ್ತಿ ಮಾಡಿ, ಅದರಲ್ಲಿರುವ ವಸ್ತುಗಳನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಸದ್ಯ ಕಾರನ್ನು ತಿಲಕ​ನಗರ ಠಾಣೆ ಆವರಣದಲ್ಲಿ ನಿಲುಗಡೆ ಮಾಡಲಾಗಿದೆ. ಕಾರಿನಲ್ಲಿ ಮೊಬೈಲ್​ಗಳು, 23 ಸೀರೆಗಳು, 23 ಬ್ಲೌಸ್ ಪೀಸ್, 16 ಶಾಲು, 150 ಪ್ರೋಗ್ರೆಸ್...
ದಕ್ಷಿಣ ಕನ್ನಡಪುತ್ತೂರುರಾಜಕೀಯರಾಜ್ಯಸುದ್ದಿ

ಶಾಸಕ‌ ಸಂಜೀವ ಮಠಂದೂರು ಕುರಿತು ಯಾವುದೇ ಮಾನಹಾನಿಕರ ವರದಿ ಪ್ರಸಾರ ಮಾಡದಂತೆ ಕೋರ್ಟ್ ನಿಂದ ತಡೆಯಾಜ್ಞೆ..!!! – ಕಹಳೆ ನ್ಯೂಸ್

ಪುತ್ತೂರು: ಮುದ್ರಣ, ವಿದ್ಯುನ್ಮಾನ ಮತ್ತು ಡಿಜಿಟಲ್ ಮಾಧ್ಯಮಗಳಲ್ಲಿ ತನ್ನ ಕುರಿತು ಯಾವುದೇ ಮಾನಹಾನಿಕರ ಲೇಖನಗಳನ್ನು ಪ್ರಕಟಿಸದಂತೆ ಶಾಸಕ ಸಂಜೀವ ಮಠಂದೂರು ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ. ಮುದ್ರಣ, ವಿದ್ಯುನ್ಮಾನ ಮತ್ತು ಡಿಜಿಟಲ್ ಮಾಧ್ಯಮದಲ್ಲಿ ತನ್ನ ಕುರಿತು ಮಾನಹಾನಿಕರ ವರದಿ ಪ್ರಸಾರ ಮಾಡುವುದು, ವೆಬ್ ಹೋಸ್ಟಿಂಗ್ ಮತ್ತು ಹಂಚಿಕೊಳ್ಳುವುದನ್ನು ನಿಷೇಧಿಸಲು ಶಾಶ್ವತ ತಡೆಯಾಜ್ಞೆ ನೀಡುವಂತೆ ಶಾಸಕ ಸಂಜೀವ ಮಠಂದೂರು ಅವರು ಬೆಂಗಳೂರು ಸಿಟಿ ಸಿವಿಲ್ ಕೋರ್ಟಿನಲ್ಲಿ ಮೊಕದ್ದಮೆ ದಾಖಲಿಸಿದ್ದರು. ನಾನು ವಿಧಾನಸಭಾ ಸದಸ್ಯನಾಗಿದ್ದೇನೆ...
ದಕ್ಷಿಣ ಕನ್ನಡರಾಜ್ಯಸುದ್ದಿ

ನಾಲ್ಕು ತಿಂಗಳೊಳಗೆ ಪ್ರವೀಣ್‌ ನೆಟ್ಟಾರು ಮನೆ ನಿರ್ಮಾಣ : ಚುನಾವಣಾ ಹೊಸ್ತಿಲಲ್ಲೇ ಗೃಹಪ್ರವೇಶ – ಕಹಳೆ ನ್ಯೂಸ್

ಮಂಗಳೂರು, ಏಪ್ರಿಲ್‌ 6: ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿದ್ದ ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ನಡೆದು ಎಂಟು ತಿಂಗಳ ಒಳಗಾಗಿ ಬಿಜೆಪಿ ವತಿಯಿಂದ ನೆಟ್ಟಾರು ಕುಟುಂಬಕ್ಕೆ ನೂತನ ಮನೆ ನಿರ್ಮಿಸಿಕೊಡಲಾಗಿದೆ. ಈ ಮೂಲಕ ಚುನಾವಣೆ ಹೊತ್ತಲ್ಲಿ ಕರಾವಳಿಯಲ್ಲಿ ಬಿಜೆಪಿ ಮತ್ತೊಂದು ಹೊಸ ಅಸ್ತ್ರ ಪ್ರಯೋಗಿಸಿದೆ. ಚುನಾವಣೆಸಮಯದಲ್ಲೇ ಪ್ರವೀಣ್ ನೆಟ್ಟಾರು ಹೊಸ ಮನೆ ಗೃಹ ಪ್ರವೇಶಕ್ಕೆ ಮುಹೂರ್ತ ನಿಗದಿಯಾಗಿದ್ದು, ಎಪ್ರಿಲ್ 27ರಂದು ಸುಳ್ಯ ತಾಲೂಕಿನ ಬೆಳ್ಳಾರೆಯ ನೆಟ್ಟಾರುನಲ್ಲಿ ಗೃಹ...
ಉಡುಪಿದಕ್ಷಿಣ ಕನ್ನಡಮಂಜೇಶ್ವರರಾಜಕೀಯರಾಜ್ಯಸುದ್ದಿ

ಮಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಬಿಲ್ಲವ ಮುಖಂಡ ಪದ್ಮರಾಜ್ ಆರ್‌‌ಗೆ ಅದೃಷ್ಟ ; ಕಾಂಗ್ರೆಸ್‌ ಟಿಕೆಟ್ ಬಹುತೇಕ ಖಚಿತ..! ಜೆ.ಆರ್‌.ಲೋಬೋ, ಐವನ್‌ ಡಿ’ಸೋಜಾಗೆ ಕೈ ತಪ್ಪಿದ ಅವಕಾಶ..!? – ಕಹಳೆ ನ್ಯೂಸ್

ಮಂಗಳೂರು/ಉಡುಪಿ: ದ.ಕ. ಜಿಲ್ಲೆಯ ಕಾಂಗ್ರೆಸ್‌ ಪಕ್ಷದಲ್ಲಿನ ಆಕಾಂಕ್ಷಿಗಳು ತಮ್ಮೆಲ್ಲ ಪಟ್ಟುಗಳನ್ನೂ ಪ್ರಯೋಗಿಸುತ್ತಿದ್ದು ಉನ್ನತ ನಾಯಕರು ದಿಲ್ಲಿಯಲ್ಲಿ ಸಭೆಗಳ ಮೇಲೆ ಸಭೆ ನಡೆಸುತ್ತಿದ್ದಾರೆ. ಇದರ ಹಿನ್ನೆಲೆಯಲ್ಲೇ ದಕ್ಷಿಣ ಕನ್ನಡ ಜಿಲ್ಲೆಯ ಆಕಾಂಕ್ಷಿಗಳಾದ ಮೊದಿನ್‌ ಬಾವಾ, ಐವನ್‌ ಡಿ’ಸೋಜಾ, ಪದ್ಮರಾಜ್‌ ಆರ್‌. ಮುಂತಾದವರು ದಿಲ್ಲಿಯಲ್ಲೇ ಪ್ರಯತ್ನಶೀಲರಾಗಿದ್ದಾರೆ. ಆದರೂ ಹೈಕಮಾಂಡ್‌ ಯಾವುದೇ ಸುಳಿವು ಬಿಟ್ಟುಕೊಟ್ಟಿಲ್ಲ. ಪದ್ಮರಾಜ್ ಆರ್‌‌ಗೆ ಕಾಂಗ್ರೆಸ್‌ ಟಿಕೆಟ್ ಬಹುತೇಕ ಖಚಿತ : ಒಂದೆಡೆ ಮಂಗಳೂರು ದಕ್ಷಿಣ ಕ್ಷೇತ್ರಗಳಲ್ಲಿ ಹೆಚ್ಚಿರುವ ಪೈಪೋಟಿ ಇನ್ನೊಂದೆಡೆ...
ದಕ್ಷಿಣ ಕನ್ನಡರಾಜ್ಯಸುದ್ದಿ

ವಿಧಾನಸಭಾ ಚುನಾವಣೆ ಹಿನ್ನೆಲೆ ; ಸಿಆರ್‌ಪಿಎಫ್ ನ 8 ತುಕಡಿ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮನ – ಕಹಳೆ ನ್ಯೂಸ್

ಮಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ದ.ಕ. ಜಿಲ್ಲೆಗೆ ತಲಾ 80ರಿಂದ 100 ಮಂದಿ ಇರುವ ಕೇಂದ್ರ ಮೀಸಲು ಪೊಲೀಸ್‌ ಪಡೆಯ (ಸಿಆರ್‌ಪಿಎಫ್) ಒಟ್ಟು 8 ತುಕಡಿಗಳು ಮಂಗಳವಾರ ತಡರಾತ್ರಿ ಆಗಮಿಸಿವೆ. ಮಂಗಳೂರು ಪೊಲೀಸ್‌ ಕಮಿಷನರೆಟ್‌ ವ್ಯಾಪ್ತಿಗೆ ನಾಲ್ಕು ಹಾಗೂ ದ.ಕ. ಜಿಲ್ಲಾ ಪೊಲೀಸ್‌ ವ್ಯಾಪ್ತಿಗೆ ನಾಲ್ಕು ತುಕಡಿಗಳನ್ನು ನಿಯೋಜಿಸಲಾಗುವುದು. ತಲಾ ಒಂದು ವಿಧಾನಸಭಾ ಕ್ಷೇತ್ರಕ್ಕೆ ಒಂದು ತುಕಡಿಯಂತೆ ನಿಯೋಜಿಸಲು ನಿರ್ಧರಿಸಲಾಗಿದ್ದು ಸುಳ್ಯ ಮತ್ತು ಬಂಟ್ವಾಳಕ್ಕೆ...
ಕ್ರೈಮ್ದಕ್ಷಿಣ ಕನ್ನಡರಾಜ್ಯಸುದ್ದಿ

ಯಾವುದೇ ವ್ಯಕ್ತಿಗಳ ಖಾಸಗಿ ಫೋಟೋ ಅಥವಾ ವಿಡಿಯೋ Share ಮಾಡುವುದು ಹಾಗೂ Forward ಮಾಡುವುದು ಶಿಕ್ಷಾರ್ಹ ಅಪರಾಧ ; ಇಲಾಖೆ ಎಚ್ಚರಿಕೆ – ಕಹಳೆ ನ್ಯೂಸ್

ದಕ್ಷಿಣ ಕನ್ನಡ : ಯಾವುದೇ ವ್ಯಕ್ತಿಗಳ ಖಾಸಗಿ ಫೋಟೋ ಅಥವಾ ವಿಡಿಯೋ Share ಮಾಡುವುದು ಹಾಗೂ Forward ಮಾಡುವುದು ಶಿಕ್ಷಾರ್ಹ ಅಪರಾಧ ಎಂದು ಪೋಲಿಸ್ ಇಲಾಖೆ ಎಚ್ಚರಿಕೆ ನೀಡಿದೆ. ಸಾಮಾಜಿಕ ಜಾಲತಾಣದಲ್ಲಿ ಫೋಟೋ ಅಥವಾ ವಿಡಿಯೋ ಹಾಕುವ ಮುನ್ನ ಎಚ್ಚರ ವಹಿಸಿ ಎಂದು ಎಚ್ಚರಿಸಿದೆ....
ಬೆಂಗಳೂರುರಾಜಕೀಯರಾಜ್ಯಸಿನಿಮಾಸುದ್ದಿ

 ನನ್ನ ಚಿತ್ರ ರಂಗದ ಕಷ್ಟ ಕಾಲದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಜತೆಗಿದ್ದರು, ಅವರಿಗೆ ನಾನು ಬೆಂಬಲ ಕೊಡುತ್ತೇನೆ ; ಜಂಟಿ ಸುದ್ದಿಗೋಷ್ಠಿಯಲ್ಲಿ ನಟ ಕಿಚ್ಚ ಸುದೀಪ್ – ಕಹಳೆ ನ್ಯೂಸ್

ಬೆಂಗಳೂರು: ನನ್ನ ಚಿತ್ರ ರಂಗದ ಕಷ್ಟ ಕಾಲದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಜತೆಗಿದ್ದರು, ಅವರಿಗೆ ನಾನು ಬೆಂಬಲ ಕೊಡುತ್ತೇನೆ ಎಂದು ನಟ ಕಿಚ್ಚ ಸುದೀಪ್ ಬುಧವಾರ ಹೇಳಿಕೆ ನೀಡಿದ್ದಾರೆ. ವಿಧಾನ ಸಭಾ ಚುನಾವಣೆಯ ಕಾವು ಏರಿರುವ ವೇಳೆಯಲ್ಲಿ ಭಾರಿ ಕುತೂಹಲ ಮೂಡಿಸಿದ್ದ ಜಂಟಿ ಸುದ್ದಿಗೋಷ್ಠಿಯಲ್ಲಿ ಕಿಚ್ಚ ಸುದೀಪ್ ಅವರು ಸಿಎಂ ಬಸವರಾಜ್ ಬೊಮ್ಮಾಯಿ ಅವರೊಂದಿಗೆ ಮಾತನಾಡಿದರು. ”ನನ್ನ ಕಷ್ಟಕಾಲದಲ್ಲಿ ಜತೆಗಿದ್ದರು. ಅವರು ಯಾವ ಪಕ್ಷ ಎಂದು ನಾನು ನೋಡುವುದಿಲ್ಲ....
ದಕ್ಷಿಣ ಕನ್ನಡಪುತ್ತೂರುರಾಜಕೀಯರಾಜ್ಯಸುದ್ದಿಸುಳ್ಯ

ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಹಾಲಿ ಶಾಸಕರುಗಳಿಗೆ ಕೈ ತಪ್ಪಲಿದೆ ಬಿಜೆಪಿ ಟಿಕೆಟ್..! ಪುತ್ತೂರು, ಸುಳ್ಯದಲ್ಲಿ ಹೊಸಮುಖಕ್ಕೆ ಅವಕಾಶ ನೀಡಲು ಬಿಜೆಪಿ ಮಾಸ್ಟರ್ ಪ್ಲಾನ್ ; ವಿಭಾಗ, ಪ್ರಾಂತದ ಆರ್.ಎಸ್.ಎಸ್. ಪ್ರಮುಖರ ಹೈ ವೋಲ್ಟೇಜ್ ಬೈಠಕ್ – ಕಹಳೆ ನ್ಯೂಸ್

ದಕ್ಷಿಣ ಕನ್ನಡ : ರಾಜ್ಯದಲ್ಲಿ ಚುನಾವಣಾ ಕಣ ರಂಗೇರುತ್ತಿದ್ದು, ಗುಜರಾತ್ ಮಾದರಿಯಲ್ಲೇ ಬುಹುತೇಕ ಹಾಲಿ ಶಾಸಕರುಗಳಿಗೆ ಬಿಜೆಪಿ ಟಿಕೆಟ್ ಕೈ ತಪ್ಪಲಿದೆ ಎಂಬ ಮಾಹಿತಿ ಬಿಜೆಪಿ ಆಂತರಿಕ ಮೂಲಗಳಿಂದ ಹೊರಬಿದಿದೆ. ಅದರಲ್ಲೂ ಕೆಸರಿ ಪಡೆಗಳ ಭದ್ರಕೋಟೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಳ್ಯ ಮತ್ತು ಪುತ್ತೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಬದಲಾವಣೆ ಕುರಿತು ವಿಶೇಷ ಸಭೆಯೇ ನಡೆದಿದೆ. ಮಂಗಳೂರು ವಿಭಾಗ ಹಾಗೂ ದಕ್ಷಿಣ ಪ್ರಾಂತದ ಆರ್.ಎಸ್.ಎಸ್. ಪ್ರಮುಖರ ಉಪಸ್ಥಿತಿಯಲ್ಲಿ ಬೈಠಕ್ ನಡೆದಿದ್ದು,...
1 179 180 181 182 183 274
Page 181 of 274