Wednesday, March 18, 2026

ರಾಜ್ಯ

ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿ

ಕಾಂಗ್ರೆಸ್ ಕಾರ್ಯಕರ್ತೆ ನವ್ಯಶ್ರೀ ನಗ್ನ ಅಶ್ಲೀಲ ವಿಡಿಯೋ ಲೀಕ್ ಕೇಸ್ ; ಚಾರ್ಜ್ ಶೀಟ್ ನಲ್ಲಿ ಕುಮಾರಕೃಪಾದ ರಹಸ್ಯ ಬಯಲು – ಕಹಳೆ ನ್ಯೂಸ್

ಬೆಂಗಳೂರು: ಕಾಂಗ್ರೆಸ್ ಕಾರ್ಯಕರ್ತೆ ನವ್ಯಶ್ರೀ ರಾವ್ (Navyashree R Rao) ಖಾಸಗಿ ವೀಡಿಯೋ (Private Video) ಲೀಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಗ್ರೌಂಡ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. ತೋಟಗಾರಿಕೆ ಇಲಾಖೆ (Horticulture Department) ಸಹಾಯಕ ನಿರ್ದೇಶಕ ರಾಜ್‌ಕುಮಾರ್ ಟಾಕಳೆ ಮತ್ತು ಇತರ ಆರೋಪಿಗಳ ವಿರುದ್ಧ ಕೇಸ್ ದಾಖಲಾಗಿದೆ. A.1 ಆರೋಪಿಯಾಗಿ ರಾಜಕುಮಾರ್ ಟಾಕಳೆ, A.2 ಆರೋಪಿಯಾಗಿ ಖಾಸಗಿ ಪತ್ರಿಕೆಯೊಂದರ ಪತ್ರಕರ್ತ ಸೇರಿ 6 ಮಂದಿ ವಿರುದ್ಧ ಚಾರ್ಜ್‌ಶೀಟ್‌...
ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿ

ಎಸ್​ಡಿಪಿಐ ಕರಾಳ ಮುಖ | ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗೆ ಎಸ್​ಡಿಪಿಐನಿಂದ ಟಿಕೆಟ್ ; ಜೈಲಿನಿಂದಲೇ ಶಾಫಿ ಬೆಳ್ಳಾರೆ ಚುನಾವಣೆಯಲ್ಲಿ ಸ್ಪರ್ಧೆ! ಉಗ್ರವಾದಿಗಳು ಕೂಡ ಎಸ್​ಡಿಪಿಐ ನೇತೃತ್ವದಲ್ಲಿ ಸ್ಪರ್ಧೆ – ವ್ಯಾಪಕ ಆಕ್ರೋಶ – ಕಹಳೆ ನ್ಯೂಸ್

ಬೆಂಗಳೂರು: ಹಿಂದು ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿ ಶಾಫಿ ಬೆಳ್ಳಾರೆಗೆ ಈ ಬಾರಿಯ ಚುನಾವಣೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಎಸ್​ಡಿಪಿಐ ಟಿಕೆಟ್ ನೀಡಿದೆ. ಇದೀಗ ಈ ವಿಚಾರ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್​ಐಎ ಇಂದ ಈಗಾಗಲೇ ಬಂಧಿನವಾಗಿರುವ ಶಾಫಿ ಬೆಳ್ಳಾರೆ ಇದೀಗ ಜೈಲಿನಿಂದಲೇ ಚುನಾವಣೆಯನ್ನು ಸ್ಪರ್ಧಿಸಲು ಮುಂದಾಗಿದ್ದಾರೆ. ಕೊಲೆ ಆರೋಪಿಯನ್ನು ಚುನಾವಣಾ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿರುವ ಎಸ್​ಡಿಪಿಐ ತೀವ್ರ ಟೀಕೆಗೆ...
ದಕ್ಷಿಣ ಕನ್ನಡಪುತ್ತೂರುರಾಜಕೀಯರಾಜ್ಯಸುದ್ದಿ

ಕೇಸರಿ ಭದ್ರಕೋಟೆಗೆ ಚಾಣಕ್ಯ ; ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ಮಹೋತ್ಸವದ ಸಂಭ್ರಮದೊಂದಿಗೆ ಬಿಜೆಪಿಯ ರಣ ಕಹಳೆ..!ಪುತ್ತೂರಿನಲ್ಲಿ ಅಮಿತ್ ಶಾ ಚುನಾವಣಾ ರಣತಂತ್ರ –  ಕಹಳೆ ನ್ಯೂಸ್

ಪುತ್ತೂರು: ಚುನಾವಣೆ (Karnataka Election) ಸಮೀಪಿಸುತ್ತಿದ್ದಂತೆ ಕೇಸರಿಯ ಭದ್ರಕೋಟೆಯಾಗಿರುವ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯಲ್ಲಿ ಬಿಜೆಪಿ ಚಾಣಕ್ಯನ ಸಂಚಾರ ಆರಂಭಗೊಂಡಿದೆ. ಪುತ್ತೂರಿನ ಕ್ಯಾಂಪ್ಕೋ (Campco) ಸಂಸ್ಥೆಯ ಸುವರ್ಣ ಮಹೋತ್ಸವದ ಸಂಭ್ರಮದೊಂದಿಗೆ ಬಿಜೆಪಿಯ ರಣ ಕಹಳೆಯನ್ನೂ ಕೇಂದ್ರದ ಗೃಹ, ಸಹಕಾರಿ ಸಚಿವ ಅಮಿತ್ ಶಾ (Amit shah) ಮೊಳಗಿಸಲಿದ್ದಾರೆ. ಪಕ್ಷದ ವರಿಷ್ಠರು ಬರುವ ಹಿನ್ನೆಲೆಯಿಂದ ಬಿಜೆಪಿಯಲ್ಲಿ (BJP) ಚುನಾವಣಾ ಚಟುವಟಿಕೆ ಗರಿಗೆದರಿದೆ. ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ಮಹೋತ್ಸವ ಹಿನ್ನೆಲೆಯಲ್ಲಿ ನಡೆಯಲಿರುವ ಬೃಹತ್...
ಬೆಂಗಳೂರುರಾಜ್ಯಸುದ್ದಿ

ಮೂರು ದಿನಗಳ ಭಾರತ ಇಂಧನ ಸಪ್ತಾಹಕ್ಕೆ ಚಾಲನೆ – ಗ್ರೀನ್ ಮೊಬಿಲಿಟಿ ರ‍್ಯಾಲಿಗೆ ಹಸಿರು ನಿಶಾನೆ ; ವಿಶ್ವದಲ್ಲಿ ಭಾರತ ಮುಂಚೂಣಿಯಲ್ಲಿರುವ ಮತ್ತೊಂದು ಕ್ಷೇತ್ರವೆಂದರೆ ಗ್ರೀನ್​ ಹೈಡ್ರೋಜನ್ : ಪ್ರಧಾನಿ ಮೋದಿ ಭಾಷಣ – ಕಹಳೆ ನ್ಯೂಸ್

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಗ್ರೀನ್ ಮೊಬಿಲಿಟಿ ರ‍್ಯಾಲಿಗೆ ಬೆಂಗಳೂರಿನಲ್ಲಿ ಚಾಲನೆ ನೀಡಿದರು. ಈ ರ‍್ಯಾಲಿಯ ಮೂಲಕ ಹಸಿರು ಇಂಧನಗಳ ಬಗ್ಗೆ ಜನರಿಗೆ ಜಾಗೃತಿ ಮೂಡಿಸಲು ಉದ್ಧೇಶಿಸಲಾಗುತ್ತಿದೆ. ಹೀಗಾಗಿ ಗ್ರೀನ್ ಮೊಬಿಲಿಟಿ ರ‍್ಯಾಲಿಯಲ್ಲಿ ಹಸಿರು ಇಂಧನ ಬಳಸಿಕೊಂಡು ಸಂಚರಿಸುವ ವಾಹನಗಳು ಭಾಗವಹಿಸುತ್ತಿವೆ. ರ‍್ಯಾಲಿಯು 42 ಕಿ.ಮೀ ಸಂಚರಿಸಲಿದ್ದು, ಬೆಂಗಳೂರಿನ ಅಂತಾರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಿಂದ ಆರಂಭವಾಗಿ ಮಾದಾವರ ನೀಲಕಂಠ ಪಾರ್ಕಿಂಗ್ ಮೈದಾನದಲ್ಲಿ ಮುಕ್ತಾಯವಾಗಲಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ ಮೂರು ದಿನಗಳ...
ಕ್ರೈಮ್ರಾಜ್ಯಸುದ್ದಿ

ಧಾರವಾಡ ಕೃಷಿ‌ ವಿವಿ ವಿದ್ಯಾರ್ಥಿ ನಗ್ನವಾಗಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ – ಕಹಳೆ ನ್ಯೂಸ್

ಧಾರವಾಡ: ಧಾರವಾಡ ಕೃಷಿ‌ ವಿವಿ ವಿದ್ಯಾರ್ಥಿಯೋರ್ವ ನಗ್ನವಾಗಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.‌ ಕೃಷಿ ವಿವಿ ಅಂತಿಮ ವರ್ಷದ ವಿದ್ಯಾರ್ಥಿ (Student) ರೋಹಿತ್ ಸಿ.ಪಿ‌ ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ನಿನ್ನೆ (ಭಾನುವಾರ) ಮಧ್ಯಾಹ್ನ ಹಾಸ್ಟೆಲ್ ಮೆಸ್‌ನಲ್ಲಿ ಊಟ‌ ಮಾಡಿದ ಈ‌ತ, ನಂತರ ಹಾಸ್ಟೆಲ್ (Hostel) ರೂಂಗೆ ಹೋಗಿದ್ದಾನೆ.‌ ಅದರ ನಂತರ ಆತನ ಗೆಳೆಯರು ಹಾಗೂ ಕುಟುಂಬದವರಯ ಎಷ್ಟೇ ಮೊಬೈಲ್ ಕರೆ‌ ಮಾಡಿದರೂ ಆತ ಕರೆ ಸ್ವೀಕರಿಸಿರಲಿಲ್ಲ.‌ ಈ...
ದಕ್ಷಿಣ ಕನ್ನಡಬಂಟ್ವಾಳರಾಜ್ಯ

ರುದ್ರಗಿರಿಯ ರಣಕಹಳೆ | ಹಿಂದೂ ಜಾಗರಣ ವೇದಿಕೆ ಹೋರಾಟದ ಫಲಶ್ರುತಿ, ಶ್ರೀ ಕಾರಿಂಜೇಶ್ವರ ದೇವಸ್ಥಾನದ ಸುತ್ತ 2 ಕಿ.ಮೀ. ಗಣಿಗಾರಿಕೆ ನಿಷೇಧ : ಜಿಲ್ಲಾಡಳಿತದಿಂದ ರಾಜ್ಯ ಸರಕಾರಕ್ಕೆ ಪ್ರಸ್ತಾವ – ಕಹಳೆ ನ್ಯೂಸ್

ಬಂಟ್ವಾಳ: ಇಲ್ಲಿನ ಶ್ರೀ ಕಾರಿಂಜೇಶ್ವರ ದೇವಸ್ಥಾನದ ಸುತ್ತಮುತ್ತಲ 2 ಕಿ.ಮೀ. ವ್ಯಾಪ್ತಿಯನ್ನು ಕ್ಷೇತ್ರದ ಪಾವಿತ್ರ್ಯ ಮತ್ತು ಸಂರಕ್ಷಣೆಯ ಜತೆಗೆ ಸ್ಥಳೀಯರ ಧಾರ್ಮಿಕ ಭಾವನೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಗಣಿಗಾರಿಕಾ ಚಟುವಟಿಕೆ ನಿಷೇಧಿತ ಪ್ರದೇಶವೆಂದು ಘೋಷಿಸುವ ಕುರಿತು ದ.ಕ.ಜಿಲ್ಲಾಡಳಿತ ರಾಜ್ಯ ಸರಕಾರಕ್ಕೆ ಪ್ರಸ್ತಾವ ಸಲ್ಲಿಸಿದೆ. ಮುಖ್ಯಮಂತ್ರಿಗಳ ನಿರ್ದೇಶನದಂತೆ ಕ್ಷೇತ್ರದ ಸುತ್ತ ಗಣಿಗಾರಿಕೆ ನಿಷೇಧಿಸುವ ನಿಟ್ಟಿನಲ್ಲಿ ಪ್ರಸ್ತಾವ ಸಲ್ಲಿಸಲು ಮಂಗಳೂರು ಸಹಾಯಕ ಕಮಿಷನರ್‌ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪನಿರ್ದೇಶಕರು ಕಳೆದ...
ಬೆಂಗಳೂರುರಾಜ್ಯಸುದ್ದಿ

ಪತ್ರಕರ್ತರ ರಾಜ್ಯ ಮಟ್ಟದ 37ನೇ ಸಮ್ಮೇಳನ ಉದ್ಘಾಟಿಸಿದ ಸಿಎಂ ಬಸವರಾಜ ಬೊಮ್ಮಾಯಿ ; ಬೇಡಿಕೆಗಳಿಗೆ ಬಜೆಟ್​ನಲ್ಲಿ ಅನುಮೋದನೆ – ಕಹಳೆ ನ್ಯೂಸ್

ವಿಜಯಪುರ: ಪತ್ರಿಕೋದ್ಯಮದ ಹರಿಕಾರ ಖ್ಯಾತಿಯ ಮೊಹರೆ ಹನುಮಂತರಾಯರ ತವರಿನಲ್ಲಿ ಪ್ರಪ್ರಥಮ ಬಾರಿಗೆ ಕಾರ್ಯ ನಿರತ ಪತ್ರಕರ್ತರ ಸಂಘದಿಂದ ಹಮ್ಮಿಕೊಂಡಿರುವ ಎರಡು ದಿನಗಳ ಪತ್ರಕರ್ತರ 37 ನೇ ರಾಜ್ಯಮಟ್ಟದ ಸಮ್ಮೇಳನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ವಿದ್ಯುಕ್ತ ಚಾಲನೆ ನೀಡಿದರು. ಇಲ್ಲಿನ ಕಂದಗಲ್ಲ ಹನುಮಂತರಾಯ ರಂಗಮಂದಿರದ ಮೊಹರೆ ಹನುಮಂತರಾಯ ವೇದಿಕೆಯಲ್ಲಿ ಶನಿವಾರ ಆಯೋಜಿಸಿದ್ದ ಸಮ್ಮೇಳನವನ್ನು ಸಿಎಂ ಬೊಮ್ಮಾಯಿ ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಶತಮಾನದ ಸಂತ ಪರಮ ಪೂಜ್ಯ ಲಿಂ. ಸಿದ್ಧೇಶ್ವರ ಶ್ರೀ ಹಾಗೂ...
ದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಯ ದೇವಸ್ಥಾನಗಳಲ್ಲಿನ ತ್ಯಾಜ್ಯ ನಿರ್ವಹಣೆ ಸಮಸ್ಯೆ ಪರಿಹಾರಕ್ಕೆ ‘ಸ್ವಚ್ಛ ಮಂದಿರ ಅಭಿಯಾನ’ : ಫೆ.10ರಂದು ಉದ್ಘಾಟನೆ – ರೋಹಿಣಿ ಸಿಂಧೂರಿ- ಕಹಳೆ ನ್ಯೂಸ್

ಬೆಂಗಳೂರು: ಭಕ್ತಾದಿಗಳಿಗೆ ದೇವಾಲಯಗಳಲ್ಲಿ ನೈರ್ಮಲ್ಯದ ವಾತಾವರಣ ಮತ್ತು ಸ್ವಚ್ಚ ಪರಿಸರವನ್ನು ನೀಡುವ ಉದ್ದೇಶವನ್ನು ಹೊಂದಿರುವ ರಾಜ್ಯ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆಯಾದ ಸ್ವಚ್ಛ ಮಂದಿರ ಅಭಿಯಾನ ಉದ್ಘಾಟನೆಗೆ ಸಿದ್ದವಾಗಿದೆ. ಫೆ. 10 ರಂದು ನಿಮಿಷಾಂಭ ದೇವಸ್ಥಾನದಿಂದ ಉದ್ಘಾಟನೆ ಮಾಡಲಾಗುವುದು ಎಂದು ರಾಜ್ಯ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಯ ಆಯುಕ್ತರಾದ ರೋಹಿಣಿ ಸಿಂಧೂರಿ ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಪ್ರಕಟಣೆಯನ್ನು ನೀಡಿರುವ...
1 186 187 188 189 190 273
Page 188 of 273