ಬೆಳ್ತಂಗಡಿಯಲ್ಲಿ ಜಿಲ್ಲೆಯಲ್ಲಿಯೇ ಪ್ರಥಮ ಮಲಿನ ನೀರು ಶುದ್ಧೀಕರಣ ಘಟಕ ; ಶೀಘ್ರ ಲೋಕಾರ್ಪಣೆ ಮಾಡಲಾಗುವುದು ಎಂದ ಶಾಸಕ ಹರೀಶ್ ಪೂಂಜ – ಕಹಳೆ ನ್ಯೂಸ್
ಬೆಳ್ತಂಗಡಿ: ಮಾನವನ ನೇರ ನಿರ್ಲಕ್ಷ್ಯ ಹಾಗೂ ದುರಾಸೆಯಿಂದ ಭವಿಷ್ಯದ ಪರಿಸರ ಅಕ್ಷರಶಃ ಮಾಲಿನ್ಯಕರವಾಗಲಿದೆ. ಇದನ್ನು ಇಂದೇ ಸರಿಪಡಿಸಿ ಸುಸ್ಥಿತಿಗೆ ತರುವ ಉದ್ದೇಶದಿಂದ ಬೆಳ್ತಂಗಡಿ ಪ.ಪಂ. ಮುಂದಡಿಯಿಟ್ಟಿದ್ದು, ಪಟ್ಟಣ ವ್ಯಾಪ್ತಿಯ ಶೌಚಾಲಯದ ದ್ರವ ತ್ಯಾಜ್ಯವನ್ನು ಶುದ್ಧೀಕರಿಸಿ ಮರುಬಳಕೆಗೆ ಯೋಗ್ಯವಾಗಿಸುವ ಘಟಕ ಸ್ಥಾಪಿಸಿದೆ. ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಕೆ.ಯು. ಎಸ್. ಮತ್ತು ಡಿ.ಬಿ.)ಯಿಂದ ಯೋಜನೆ ಅನುಷ್ಠಾನಗೊಳಿಸಿದ್ದು 6.7 ಕೋ.ರೂ. ಘಟಕ ವೆಚ್ಚ, 5 ವರ್ಷಗಳ ನಿರ್ವಹಣೆ, ಸಕ್ಕಿಂಗ್ಯಂತ್ರ ಸಹಿತ...







