ಕೆನಡಾದಲ್ಲಿ ಕನ್ನಡಿಗನಿಗೆ ಗುಂಡಿಟ್ಟು ಹತ್ಯೆ : ಸ್ವಗ್ರಾಮದಲ್ಲಿ ಅಂತ್ಯಕ್ರಿಯೆಗೆ ಸಿದ್ಧತೆ – ಕಹಳೆ ನ್ಯೂಸ್
ಬೆಂಗಳೂರು: ಕೆನಡಾದಲ್ಲಿ ಕನ್ನಡಿಗನಿಗೆ ಗುಂಡಿಟ್ಟು ಹತ್ಯೆ ಪ್ರಕರಣ ಸಂಬಂಧ ಕನ್ನಡಿಗ ಚಂದನ್ ಮೃತದೇಹ ಸ್ವಗ್ರಾಮ ನೆಲಮಂಗಲ ತಾಲೂಕಿನ ತ್ಯಾಮಗೊಂಡ್ಲುಗೆ ಆಗಮಿಸಿದ್ದು, ಅಂತ್ಯಕ್ರಿಯೆಗೆ ಸಕಲ ಸಿದ್ಧತೆ ಮಾಡಲಾಗುತ್ತಿದೆ. ಕೊಲೆಯಾಗಿ ಒಂದು ವಾರದ ಬಳಿಕ ಸ್ವಗ್ರಾಮಕ್ಕೆ ಚಂದನ್ ಮೃತದೇಹ ಆಗಮಿಸಿದೆ. ಭಾನುವಾರ ರಾತ್ರಿ 11:49ರ ಸುಮಾರಿಗೆ ಚಂದನ್ ಮೃತದೇಹವನ್ನು ತ್ಯಾಮಗೊಂಡ್ಲುಗೆ ತರಲಾಗಿದ್ದು, ಮನೆ ಮುಂದೆ ಅಂತಿಮ ವಿಧಿವಿಧಾನದ ನಂತರ ದರ್ಶನಕ್ಕೆ ಅನುವು ಮಾಡಿಕೊಡಲಾಗಿದೆ. ತ್ಯಾಮಗೊಂಡ್ಲುವಿನ ಗ್ರಾಮೀಣ ಬ್ಯಾಂಕ್ ಹತ್ತಿರ ಅಂತಿಮ ದರ್ಶನಕ್ಕೆ ಸಿದ್ಧತೆ...






