40 ಸೆಕೆಂಡ್ನಲ್ಲಿ 60 ಬಾರಿ ಚುಚ್ಚಿ ಕೊಲೆ ; ಗುರೂಜಿ ಚಂದ್ರಶೇಖರ್ ಹಂತಕರನ್ನು ಬಂಧಿಸಿದ ಹುಬ್ಬಳ್ಳಿ ಪೊಲೀಸರು – ಕಹಳೆ ನ್ಯೂಸ್
ಹುಬ್ಬಳ್ಳಿ: ಸರಳ ವಾಸ್ತು (Sarala Vastu) ಖ್ಯಾತಿಯ ಗುರೂಜಿ ಚಂದ್ರಶೇಖರ್ (Chandrasekhar Guruji), ಹುಬ್ಬಳ್ಳಿಯ ಉಣಕಲ್ ಕೆರೆ ಬಳಿಯ ಪ್ರೆಸಿಡೆಂಟ್ ಹೋಟೆಲ್ನಲ್ಲಿ ಕೊಲೆಯಾಗಿದ್ದಾರೆ. ಭಕ್ತರ ಸೋಗಿನಲ್ಲಿ ಬಂದು, ಚಾಕು ಇರಿದು ಕೊಲೆ ಮಾಡಿ ಹಂತಕರು ಪರಾರಿಯಾಗಿದ್ದಾರೆ. ಈಗ ಕೃತ್ಯದ ಸಿಸಿಟಿವಿ ದೃಶ್ಯ ಲಭ್ಯವಾಗಿದ್ದು ಕೊಲೆಯ ಘೋರತೆ ಅನಾವರಣಗೊಂಡಿದೆ. ಇಬ್ಬರು ವ್ಯಕ್ತಿಗಳು ಹೋಟೆಲ್ ಲಾಬಿಯಲ್ಲಿ ಕುಳಿತಿದ್ದ ಚಂದ್ರಶೇಖರ್ ಗುರೂಜಿಯ ಆಶಿರ್ವಾದ ಪಡೆಯುವಂತೆ ಬರುತ್ತಾರೆ. ಇದ್ದಕ್ಕಿದ್ದಂತೆ ಇಬ್ಬರೂ ಚಾಕುವಿನಿಂದ ಬರ್ಬರವಾಗಿ ಹಲ್ಲೆ ಮಾಡಿ ಕೊನೆ...







