Recent Posts

Tuesday, September 8, 2026

ರಾಜ್ಯ

ರಾಜ್ಯಸುದ್ದಿ

ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ; 24 ಮೀನುಗಾರರ ರಕ್ಷಣೆ – ಕಹಳೆ ನ್ಯೂಸ್

ಕಾರವಾರ: ಮೀನುಗಾರಿಕಾ ಬೋಟ್ ಮುಳುಗಡೆಯಾಗುತ್ತಿದ್ದ ವೇಳೆ ಅದರಲ್ಲಿದ್ದ 24 ಮಂದಿ ಮೀನುಗಾರರನ್ನು ಸಮೀಪದಲ್ಲಿದ್ದ ಇತರೆ ಬೋಟ್‌ಗಳ ಸಿಬ್ಬಂದಿ ಸಮಯಕ್ಕೆ ಸರಿಯಾಗಿ ರಕ್ಷಿಸಿದ ಘಟನೆ ಕಾರವಾರದ  ಅರಬ್ಬಿ ಸಮುದ್ರ ಭಾಗದ ಅಂಜದೀವ್ ದ್ವೀಪದ ಸಮೀಪ ನಡೆದಿದೆ. ಬೆಳಂಬರ್ ಮೂಲದ ನೀಲಕಂಠ ಖಾರ್ವಿ ಅವರಿಗೆ ಸೇರಿದ ‘ಶ್ರೀ ಮಾತಾ’ ಮೀನುಗಾರಿಕಾ ಬೋಟ್ ಸಮುದ್ರದಲ್ಲಿ ಅವಘಡಕ್ಕೀಡಾಗಿ ಮುಳುಗಡೆಯಾಗಿತ್ತು. ವಿಷಯ ತಿಳಿದ ತಕ್ಷಣ ಸಮೀಪದಲ್ಲಿದ್ದ ಐದಾರು ಮೀನುಗಾರಿಕಾ ಬೋಟ್‌ಗಳು ಸ್ಥಳಕ್ಕೆ ಧಾವಿಸಿ, ಬೋಟ್‌ನಲ್ಲಿದ್ದ ಎಲ್ಲಾ 24...
ಬೆಂಗಳೂರುರಾಜ್ಯಸುದ್ದಿ

ಬೆಂಗಳೂರಲ್ಲಿ 7ನೇ ಮಹಡಿಯಿಂದ ಬಿದ್ದು ಯುವತಿ ಸಾವು, ಯುವಕನ ಸ್ಥಿತಿ ಗಂಭೀರ – ಕಹಳೆ ನ್ಯೂಸ್

ಬೆಂಗಳೂರು: 7ನೇ ಮಹಡಿಯಿಂದ ಬಿದ್ದು ಯುವತಿ ಸಾವನ್ನಪ್ಪಿ, ಯುವಕ ಗಂಭಿರವಾಗಿ ಗಾಯಗೊಂಡ ಘಟನೆ ಬೆಂಗಳೂರಿನ (Bengaluru) ವೈಟ್‌ಫೀಲ್ಡ್‌ನಲ್ಲಿ (Whitefield) ನಡೆದಿದೆ. ಜನನಿ ಮೃತ ಯುವತಿ, ಈಕೆ ಸಾಫ್ಟ್ವೇರ್ ಎಂಜಿನಿಯರ್ ಆಗಿದ್ದಳು ಎಂದು ತಿಳಿದುಬಂದಿದೆ. ಮಾಣಿಕ್ಯ ವೇಲು ಗಂಭೀರವಾಗಿ ಗಾಯಗೊಂಡ ಯುವಕ. ಆತನಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ವೈಟ್‌ಫೀಲ್ಡ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ....
ರಾಜ್ಯಸುದ್ದಿ

ರಾಜಕೀಯವೆಂಬುದು ಸ್ವಾರ್ಥದ ಆಟವಾಗಿದೆ : ಮೋಹನ್ ಭಾಗವತ್ ಬೇಸರ – ಕಹಳೆ ನ್ಯೂಸ್

ನ್ಯೂಯಾರ್ಕ್‌: ರಾಜಕೀಯವು ಸ್ವಾರ್ಥದಿಂದ ಚಾಲಿತವಾಗಿರುವ ಆಟವಾಗಿ ಬದಲಾಗಿದೆ. ನಾನು ಮತ್ತು ನನ್ನದು ಎಂಬ ಮನೋಭಾವ ಮಾತ್ರ ಇದ್ದಾಗ ಯಾವುದೇ ಪರಿಹಾರ ಕಂಡುಕೊಳ್ಳಲು ಸಾಧ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್  ಅಭಿಪ್ರಾಯಪಟ್ಟರು. ನ್ಯೂಯಾರ್ಕ್‌ನಲ್ಲಿ ಶನಿವಾರ (ಆ.29) ನಡೆದ ‘ಒನ್ ವರ್ಲ್ಡ್, ಒನ್ ಹ್ಯೂಮ್ಯಾನಿಟಿ’ (One World, One Humanity) ಕಾರ್ಯಕ್ರಮ ಉದ್ದೇಶಿಸಿ ಅವರು ಮಾತನಾಡಿದರು. ಭಾರತದ ಸಾಂಪ್ರದಾಯಿಕ ತತ್ವ ಮತ್ತು ಸಂವಿಧಾನ ಎರಡೂ ಏಕತೆಯ ಆಶಯ ಹೊಂದಿವೆ....
ಜಿಲ್ಲೆಬೆಂಗಳೂರುರಾಜ್ಯ

ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿದ ಬಸ್‌; ತನಿಖೆಗೆ ತೆರಳಿದ್ದ ಬೆಂಗ್ಳೂರು ಇನ್ಸ್‌ಪೆಕ್ಟರ್‌ ಸಾವು – ಕಹಳೆ ನ್ಯೂಸ್

ಬೆಂಗಳೂರು/ಭೋಪಾಲ್‌: ಸೈಬರ್‌ ಕ್ರೈಂ ಪ್ರಕರಣವೊಂದರ ತನಿಖೆಗಾಗಿ ಮಧ್ಯಪ್ರದೇಶಕ್ಕೆ ತೆರಳಿದ್ದ ಬೆಂಗಳೂರು ಪೊಲೀಸ್‌ ಇನ್ಸ್‌ಪೆಕ್ಟರ್‌ ಒಬ್ಬರು ಭೀಕರ ಅಪಘಾತದಲ್ಲಿ  ಮೃತಪಟ್ಟಿರುವ ಘಟನೆ ನಡೆದಿದೆ. ಭೋಪಾಲ್‌ನಿಂದ ಇಂದೋರ್‌ಗೆ ತೆರಳುತ್ತಿದ್ದ ವೇಳೆ ಬಸ್‌ ಪ್ರಪಾತಕ್ಕೆ ಉರುಳಿದ ಪರಿಣಾಮ ಇನ್ಸ್‌ಪೆಕ್ಟರ್‌ ರವಿ ಕೆ.ಬಿ. (Ravi KB) ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ರವಿ ಸೇರಿದಂತೆ ನಾಲ್ವರು ಗಾಯಗೊಂಡಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ರವಿ ಅವರನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಇಂದು ಬೆಳಗ್ಗೆ ಸುಮಾರು 7.30ರ ವೇಳೆಗೆ ಚಿಕಿತ್ಸೆ ಫಲಕಾರಿಯಾಗದೇ...
ದೆಹಲಿರಾಜ್ಯಸುದ್ದಿ

ನಾಳೆಯಿಂದ 4 ದಿನ ಪ್ರಧಾನಿ ಮೋದಿ ವಿದೇಶ ಪ್ರವಾಸ – ಕಹಳೆ ನ್ಯೂಸ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ನಾಳೆಯಿಂದ (ಆ.29) ನಾಲ್ಕು ದಿನಗಳ ಕಾಲ ಉಜ್ಬೇಕಿಸ್ತಾನ್ ಮತ್ತು ಕಿರ್ಗಿಸ್ತಾನ್ ದೇಶಗಳಿಗೆ ಭೇಟಿ ನೀಡಲಿದ್ದಾರೆ. ಅಲ್ಲಿ ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸುವ ಕುರಿತು ಚರ್ಚೆ ನಡೆಸಲಿದ್ದಾರೆ. ಈ ಕುರಿತು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮಾಹಿತಿ ನೀಡಿದೆ. ಪ್ರಧಾನಿ ಮೋದಿ ಅವರು ಆ.29ರಿಂದ 30ರವರೆಗೆ ಉಜ್ಬೇಕಿಸ್ತಾನ್‌ಗೆ (Uzbekistan) ಭೇಟಿ ನೀಡಲಿದ್ದಾರೆ. ಈ ವೇಳೆ ವಿವಿಧ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ಬಲಪಡಿಸುವ ಮಾರ್ಗಗಳನ್ನು ಅನ್ವೇಷಿಸುವ ಬಗ್ಗೆ ಚರ್ಚೆ ಮಾಡಲಿದ್ದಾರೆ....
ರಾಜ್ಯಸುದ್ದಿ

ರಷ್ಯಾ-ಚೀನಾ ಅನಿಲ ಸಂಕೀರ್ಣದಲ್ಲಿ ಭಾರಿ ಸ್ಫೋಟ; 7 ಮಂದಿ ಸಾವು – ಕಹಳೆ ನ್ಯೂಸ್

ಮಾಸ್ಕೋ: ರಷ್ಯಾದ ದೂರದ ಪೂರ್ವದ ಅಮುರ್ ಪ್ರದೇಶದ ಅಮುರ್ ಗ್ಯಾಸ್ ಕೆಮಿಕಲ್ ಕಾಂಪ್ಲೆಕ್ಸ್ (AGCC) ನಲ್ಲಿ ಮಂಗಳವಾರ ಭಾರಿ ಬೆಂಕಿ ಮತ್ತು ಸ್ಫೋಟ ಸಂಭವಿಸಿದೆ. ಈ ಸ್ಥಾವರವು ಶೀಘ್ರದಲ್ಲೇ ಉದ್ಘಾಟನೆಗೊಳ್ಳಬೇಕಿತ್ತು. ಪೂರ್ವ-ಕಾರ್ಯನಿರ್ವಹಣೆಯ ಕೆಲಸದಲ್ಲಿತ್ತು. ಆರು ಚೀನೀ ಪ್ರಜೆಗಳು ಸೇರಿದಂತೆ ಏಳು ಜನರು ಸಾವನ್ನಪ್ಪಿದ್ದಾರೆ. ಒಂಬತ್ತು ಮಂದಿ ಕಾಣೆಯಾಗಿದ್ದಾರೆ. 36 ಜನರನ್ನು ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. 152 ಜನರಿಗೆ ಗಾಯಗಳಿಗೆ ಚಿಕಿತ್ಸೆ ನೀಡಲಾಗಿದೆ. ಅಮುರ್ ಸಂಕೀರ್ಣವು ರಷ್ಯಾದ ಪೆಟ್ರೋಕೆಮಿಕಲ್ ಕಂಪನಿ ಸಿಬರ್ ಮತ್ತು ಚೀನಾದ...
ದೆಹಲಿರಾಜ್ಯಸುದ್ದಿ

ಸ್ನೇಹ ಬೆಳೆಸಲು ನಿರಾಕರಿಸಿದಕ್ಕೆ ಮಾಡೆಲ್‌ ಕೊಲೆ – ಮನೆಗೆ ನುಗ್ಗಿ ಹತ್ಯೆಗೈದು ಜಿಮ್ ಟ್ರೇನರ್ ಪರಾರಿ – ಕಹಳೆ ನ್ಯೂಸ್

ನವದೆಹಲಿ: ಸ್ನೇಹ ಬೆಳೆಸಲು ನಿರಾಕರಿಸಿದ್ದಕ್ಕೆ ಜಿಮ್ ಟ್ರೇನರ್ ಮನೆಗೆ ನುಗ್ಗಿ ಮಾಡೆಲ್‌ ಅನ್ನು ಕೊಲೆ ಮಾಡಿರುವ ಘಟನೆ ದೆಹಲಿಯ ತಿಲಕ್ ನಗರದಲ್ಲಿ ನಡೆದಿದೆ. ಮಾಡೆಲ್‌ ಆಗಿದ್ದ 21 ವರ್ಷದ ಮುಸ್ಕಾನ್ ಮೃತ ಯುವತಿ. ಆರೋಪಿಯನ್ನು ಇಮ್ರಾನ್ ಎಂದು ಗುರುತಿಸಲಾಗಿದ್ದು, ಜಿಮ್ ಟ್ರೇನರ್ ಆಗಿದ್ದ. ಘನಟೆ ನಡೆದಾಗ ಮನೆಯಲ್ಲಿ ಯುವತಿ ಒಬ್ಬಂಟಿಯಾಗಿದ್ದರು ಎಂದು ತಿಳಿದುಬಂದಿದೆ. ಪೊಲೀಸರ ಮಾಹಿತಿ ಪ್ರಕಾರ, ಯುವತಿಗೆ ಸ್ವಲ್ಪ ಸಮಯದಿಂದ ಆರೋಪಿ ಪರಿಚಿತನಾಗಿದ್ದ. ಜಿಮ್‌ಗೆ ಹೋಗುತ್ತಿದ್ದಾಗ ಮುಸ್ಕಾನ್‌ಗೆ ಇಮ್ರಾನ್ ಪರಿಚಯವಾಗಿದ್ದ,...
ಬೆಂಗಳೂರುರಾಜ್ಯಸುದ್ದಿ

ಬೆಂಗಳೂರಿಗೆ ಬರ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ : ಟಿಶ್ಯೂ ಪೇಪರ್‌ನಲ್ಲಿ ಬೆದರಿಕೆ ಪತ್ರ ಪತ್ತೆ – ಕಹಳೆ ನ್ಯೂಸ್

ಬೆಂಗಳೂರು: ಲಕ್ನೋದಿಂದ ಬೆಂಗಳೂರಿಗೆ ಬರ್ತಿದ್ದ ಇಂಡಿಗೋ ವಿಮಾನದಲ್ಲಿ ಬಾಂಬ್ ಬೆದರಿಕೆ ಪತ್ರವೊಂದು ಪತ್ತೆಯಾಗಿದೆ. ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ಹಾಗೂ ಇತರ ಭದ್ರತಾ ಏಜೆನ್ಸಿಗಳು ತಕ್ಷಣವೇ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿವೆ ಎಂದು ಮೂಲಗಳು ತಿಳಿಸಿವೆ. ಇಂಡಿಗೋ ವಿಮಾನದಲ್ಲಿ (ಸಂಖ್ಯೆ 6E231) ಈ ಘಟನೆ ನಡೆದಿದೆ. ಬುಧವಾರ (ಇಂದು) ಬೆಂಗಳೂರಿಗೆ ಬಂದು ಸುರಕ್ಷಿತವಾಗಿ ಲ್ಯಾಂಡ್ ಆದ ಬಳಿಕ ಬೆದರಿಕೆ ಪತ್ರ ಪತ್ತೆಯಾಗಿದೆ. ಟಿಶ್ಯೂ ಪೇಪರ್‌ನಲ್ಲಿ ಬಾಂಬ್ ಬೆದರಿಕೆ ಬರೆಯಲಾಗಿತ್ತು ಎಂದು ತಿಳಿದುಬಂದಿದೆ....
1 2 3 4 5 319
Page 3 of 319