Friday, March 13, 2026

ರಾಜ್ಯ

ಬೆಂಗಳೂರುರಾಜ್ಯಸುದ್ದಿ

ಬೆಂಗಳೂರಿನ ಕಬ್ಬನ್ ಪಾರ್ಕ್’ನಲ್ಲಿ ನ.27 ರಿಂದ ‘ಫ್ಲವರ್ ಶೋ’ ಆರಂಭ -ಕಹಳೆ ನ್ಯೂಸ್

ಬೆಂಗಳೂರು : ತೋಟಗಾರಿಕೆ ಇಲಾಖೆಯು ಫಲಪುಷ್ಪ ಪ್ರದರ್ಶನವನ್ನು ಕಬ್ಬನ್ ಪಾರ್ಕ್ನಲ್ಲಿ ಆಯೋಜಿಸಲು ಸಜ್ಜಾಗಿದ್ದು, ಇದು ನ.27 ರಂದು ಪ್ರಾರಂಭವಾಗಿ 11 ದಿನಗಳವರೆಗೆ ನಡೆಯಲಿದೆ. ಈ ಉದ್ಯಾನವನದಲ್ಲಿ ಈ ಹಿಂದೆ ಸಣ್ಣ ಪುಟ್ಟ ಕಾರ್ಯಕ್ರಮಗಳು ನಡೆದಿದ್ದರೂ ಇಷ್ಟು ದೊಡ್ಡ ಪ್ರಮಾಣದ ಪ್ರದರ್ಶನವನ್ನು ಆಯೋಜಿಸುತ್ತಿರುವುದು ಇದೇ ಮೊದಲು. ಫಲಪುಷ್ಪ ಪ್ರದರ್ಶನದಲ್ಲಿ 100 ಕ್ಕೂ ಹೆಚ್ಚು ರೀತಿಯ ಹೂವುಗಳು ಮತ್ತು ಸಸ್ಯಗಳನ್ನು ಸಂದರ್ಶಕರು ನಿರೀಕ್ಷಿಸಬಹುದು. ನರ್ಸರಿ ಸಸ್ಯಗಳು, ತೋಟಗಾರಿಕೆ ಉಪಕರಣಗಳು, ಮನೆಯಲ್ಲಿ ತಯಾರಿಸಿದ ಉತ್ಪನ್ನಗಳು...
ಬೆಂಗಳೂರುರಾಜ್ಯಸುದ್ದಿ

ರಾಜ್ಯದ ಎಲ್ಲಾ ಸರ್ಕಾರಿ ಕಚೇರಿ, ಶಾಲಾ-ಕಾಲೇಜುಗಳಲ್ಲಿ ನಾಳೆ ‘ಸಂವಿಧಾನ ದಿನ’ ಆಚರಣೆ ಕಡ್ಡಾಯ : ಸರ್ಕಾರ ಆದೇಶ -ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ ಕಚೇರಿ, ಶಾಲಾ-ಕಾಲೇಜುಗಳಲ್ಲಿ ನಾಳೆ ಸಂವಿಧಾನ ದಿನ ಆಚರಣೆ ಕಡ್ಡಾಯಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಪ್ರತಿ ವರ್ಷದಂತೆ ಪ್ರಸಕ್ತ ವರ್ಷ ನವೆಂಬರ್ 26, ರಂದು 'ಸಂವಿಧಾನ ದಿನ' ವನ್ನು ಆಚರಿಸುವಂತೆ ಹಾಗೂ ಈ ಸಂದರ್ಭದಲ್ಲಿ ಎಲ್ಲರಿಗೂ ನಮ್ಮ ಸಾಂವಿಧಾನಿಕ ಮೌಲ್ಯಗಳನ್ನು ಬಿತ್ತರಿಸುವುದು, ಈ ರಾಷ್ಟ್ರೀಯ ಆಚರಣೆಯಲ್ಲಿ ಹೆಚ್ಚಿನ ಜನರು ಭಾಗವಹಿಸುವುದು, ಹಾಗೂ ಎಲ್ಲಾ ಸರ್ಕಾರಿ ಕಚೇರಿಗಳು, ಶಾಲೆಗಳು/ಕಾಲೇಜುಗಳು/ ಸಂಸ್ಥೆಗಳು/ಸ್ನಾಯತ್ತ ಸಂಸ್ಥೆಗಳು/PSUs...
ಮುಂಬೈರಾಜ್ಯಸುದ್ದಿ

ಬಾಲಿವುಡ್​ನ ಹಿರಿಯ ನಟ ಧರ್ಮೇಂದ್ರ ಇನ್ನಿಲ್ಲ -ಕಹಳೆ ನ್ಯೂಸ್

ಮುಂಬೈ: ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಬಾಲಿವುಡ್‌ನ ಹಿರಿಯ ನಟ ಧರ್ಮೇಂದ್ರ ಇಂದು (ನ.24) ಮುಂಬೈ ನ ನಿವಾಸದಲ್ಲಿ ನಿಧನ ಹೊಂದಿದ್ದಾರೆ, ಅವರಿಗೆ 86 ವರ್ಷ ವಯಸ್ಸಾಗಿತ್ತು. ಅನಾರೋಗ್ಯದಿಂದ ಬಳಲುತ್ತಿದ್ದ ಧರ್ಮೇಂದ್ರ ಅವರನ್ನು ಕೆಲ ದಿನಗಳ ಹಿಂದೆ ಮುಂಬೈ ನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಬಳಿಕ ಮನೆಗೆ ಕರೆತರಲಾಗಿತ್ತು ಆದರೆ ಇಂದು ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ ಭಾರತೀಯ ಚಿತ್ರರಂಗದ ಶ್ರೇಷ್ಠ ನಟರಲ್ಲಿ ಒಬ್ಬರಾಗಿರುವ ಧರ್ಮೇಂದ್ರ 1960 ರ ಚಲನಚಿತ್ರ 'ದಿಲ್...
ಬೆಂಗಳೂರುರಾಜ್ಯಸುದ್ದಿ

ಬೆಂಗಳೂರಲ್ಲಿ ‘ವಂದೇ ಭಾರತ್’ ರೈಲು ಡಿಕ್ಕಿ : ಸ್ಥಳದಲ್ಲೇ ನರ್ಸಿಂಗ್ ವಿದ್ಯಾರ್ಥಿಗಳ ಸಾವು – ಕಹಳೆ ನ್ಯೂಸ್

ಬೆಂಗಳೂರು: ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಡಿಕ್ಕಿಯಾದ ಪರಿಣಾಮ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ದಾರುಣವಾಗಿ ಮೃತಪಟ್ಟ ಘಟನೆ ಭಾನುವಾರ ಸಂಜೆ ಚಿಕ್ಕಬಾಣಾವರ ನಿಲ್ದಾಣದ ಬಳಿ ಸಂಭವಿಸಿದೆ. ಹಳಿ ದಾಟುತ್ತಿದ್ದಾಗ ರೈಲು ಡಿಕ್ಕಿಯಾಗಿ ವಿದ್ಯಾರ್ಥಿ ಜಸ್ಟಿನ್ ಜೋಸೆಫ್ (21) ಹಾಗೂ ವಿದ್ಯಾರ್ಥಿನಿ ಸ್ಟೆರಿನ್ ಎಲ್ಜಾ ಸಜಿ (19) ಎಂಬವರು ಸಾವನ್ನಪ್ಪಿದ್ದಾರೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಚಿಕ್ಕಬಾಣಾವರ ಠಾಣೆ ಪೊಲೀಸರು ಮೃತರ ಪೋಷಕರಿಗೆ ಮಾಹಿತಿ ರವಾನಿಸಿದ್ದಾರೆ.ಘಟನಾ ಸ್ಥಳಕ್ಕೆ ಪೊಲೀಸರು...
ದೆಹಲಿರಾಜ್ಯರಾಷ್ಟ್ರೀಯಸುದ್ದಿ

ಸುಪ್ರೀಂಕೋರ್ಟ್’ನ 53ನೇ ‘CJI’ ಆಗಿ ನ್ಯಾ.ಸೂರ್ಯಕಾಂತ್ ಪ್ರಮಾಣ ವಚನ ಸ್ವೀಕಾರ – ಕಹಳೆ ನ್ಯೂಸ್

ನವದೆಹಲಿ : ನ್ಯಾಯಮೂರ್ತಿ ಸೂರ್ಯಕಾಂತ್ ಸೋಮವಾರ ಸುಪ್ರೀಂಕೋರ್ಟ್ 53 ನೇ ಮುಖ್ಯ ನ್ಯಾಯಮೂರ್ತಿಯಾಗಿ (ಸಿಜೆಐ) ಪ್ರಮಾಣ ವಚನ ಸ್ವೀಕರಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಬೋಧಿಸಿದ್ದು, ಸುಪ್ರೀಂಕೋರ್ಟ್ 53 ನೇ ಮುಖ್ಯ ನ್ಯಾಯಮೂರ್ತಿಯಾಗಿ (ಸಿಜೆಐ) ಪ್ರಮಾಣ ವಚನ ಸ್ವೀಕರಿದ್ದಾರೆ. 65 ವರ್ಷ ತುಂಬಿದ ನಂತರ ಭಾನುವಾರ ಅಧಿಕಾರ ತ್ಯಜಿಸಿದ ಸಿಜೆಐ ಭೂಷಣ್ ಆರ್. ಗವಾಯಿ ಅವರ ಉತ್ತರಾಧಿಕಾರಿಯಾಗಿ ಅವರು ನೇಮಕಗೊಂಡಿದ್ದಾರೆ. ತಮ್ಮ ಉತ್ತರಾಧಿಕಾರಿಯನ್ನು ಹೆಸರಿಸುವಲ್ಲಿ ಹಿರಿತನದ...
ಬೆಂಗಳೂರುರಾಜ್ಯಸುದ್ದಿ

ಬೆಂಗಳೂರಿನ ನಿರ್ಜನ ಪ್ರದೇಶದಲ್ಲಿ ಅರೆಸುಟ್ಟ ಸ್ಥಿತಿಯಲ್ಲಿ ಅಪರಿಚಿತನ ಶವ ಪತ್ತೆ : ಕೊಲೆ ಮಾಡಿರೋ ಶಂಕೆ – ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಿನಲ್ಲಿ ನಿರ್ಜನ ಪ್ರದೇಶದಲ್ಲಿ ಅರೆಸುಟ್ಟ ಸ್ಥಿತಿಯಲ್ಲಿ ಅಪರಿಚಿತನ ಶವ ಪತ್ತೆಯಾಗಿದೆ. ಬೆಂಗಳೂರಿನ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಗಂಗೊಂಡನಹಳ್ಳಿಯಲ್ಲಿ ಅಪರಿಚಿತನ ಶವ ಅರೆಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸುಮಾರು 30 ವರ್ಷದ ವ್ಯಕ್ತಿಯ ಮೃತದೇಹ ಇರಬಹುದು ಎಂದು ಮಾಹಿತಿ ತಿಳಿದು ಬಂದಿದೆ. ಬೇರೆ ಕಡೆ ಕೊಂದು ಇಲ್ಲಿ ತಂದು ಮೃತದೇಹ ಬಿಸಾಡಿರಬಹುದು. ಶವಕ್ಕೆ ಹಗ್ಗದಿಂದ ಕಟ್ಟಿರುವ ಗುರುತು ಪತ್ತೆಯಾಗಿದ್ದು ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್.ಪಿ ಸಿ.ಕೆ ಬಾಬಾ ಭೇಟಿ...
ಬೆಂಗಳೂರುರಾಜ್ಯಸುದ್ದಿ

ಅಪರಾಧ ಚಟುವಟಿಕೆಯಲ್ಲಿ ‘ಪೊಲೀಸ’ರು ಭಾಗಿಯಾದರೆ ‘ಸೇವೆಯಿಂದ ವಜಾ’: ಗೃಹ ಸಚಿವ ಪರಮೇಶ್ವರ್ ಎಚ್ಚರಿಕೆ – ಕಹಳೆ ನ್ಯೂಸ್

ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ಎಚ್ಚರಿಕೆ ವಹಿಸುವಂತೆ ಹಿರಿಯ ಅಧಿಕಾರಿಗಳಿಗೆ ಕೆಲ ಸೂಚನೆಗಳನ್ನು ಕೊಟ್ಟಿದ್ದೇನೆ. ಒಂದು ವೇಳೆ ಅಪರಾಧ ಚಟುವಟಿಕೆಯಲ್ಲಿ ಪೊಲೀಸರು ಭಾಗಿಯಾದರೆ ಮುಲಾಜಿಲ್ಲದೆ ಸೇವೆಯಿಂದ ವಜಾಗೊಳಿಸುವುದಾಗಿ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಎಚ್ಚರಿಕೆ ನೀಡಿದ್ದಾರೆ. ಸದಾಶಿವನಗರದ ನಿವಾಸದಲ್ಲಿ, ನಗರ ಪೊಲೀಸ್ ಆಯುಕ್ತರಾದ ಸೀಮಾಂತ್ ಕುಮಾರ್ ಸಿಂಗ್, ಜಂಟಿ ಪೊಲೀಸ್ ಆಯುಕ್ತರಾದ ಅಜಯ್ ಹಿಲೋರಿ, ವಂಶಿಕೃಷ್ಣ ಅವರೊಂದಿಗೆ ಪ್ರಕರಣದ ತನಿಖೆಯ ಕುರಿತು ಚರ್ಚಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, 7.11 ಕೋಟಿ...
ರಾಜ್ಯರಾಷ್ಟ್ರೀಯಸುದ್ದಿ

 ಕಳೆದ 5 ವರ್ಷದಲ್ಲಿ ತಿರುಪತಿಯಲ್ಲಿ ಭಕ್ತರಿಗೆ 20 ಕೋಟಿ ಕಲಬೆರಕೆ ಲಡ್ಡು ಹಂಚಿಕೆ – ಕಹಳೆ ನ್ಯೂಸ್

ತಿರುಪತಿ : ತಿರುಪತಿ ದೇವಸ್ಥಾನದ ಲಡ್ಡುವಿನಲ್ಲಿ ಕಲಬೆರಕೆ ತುಪ್ಪ ಬಳಸಿದ ಕುರಿತು ವಿಶೇಷ ತನಿಖಾ ತಂಡ ತನಿಖೆ ನಡೆಸುತ್ತಿರುವ ನಡುವೆಯೇ, 2019-2024 ಅವಧಿಯಲ್ಲಿ ದೇವ ಸ್ಥಾನಕ್ಕೆ ಭೇಟಿ ನೀಡಿದ 11 ಕೋಟಿ ಭಕ್ತರಿಗೆ 48.76 ಕೋಟಿ ಲಡ್ಡು ವಿತರಿಸಲಾಗಿದೆ. ಇದರಲ್ಲಿ 20 ಕೋಟಿ ಲಡ್ಡುಗಳಲ್ಲಿ ಕಲಬೆರಕೆ ತುಪ್ಪ ಬಳಕೆಯಾಗಿದೆ ಎಂದು ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಅಧ್ಯಕ್ಷ ಬಿ.ಆರ್. ನಾಯ್ಡು ಮಾಹಿತಿ ನೀಡಿದ್ದಾರೆ. ಈ ಮೊದಲು ಕೂಡ ತಿರುಪತಿಯಲ್ಲಿ ಕಲಬರಿಕೆ...
1 35 36 37 38 39 272
Page 37 of 272