Friday, June 19, 2026

ರಾಜ್ಯ

ದೆಹಲಿಬೆಂಗಳೂರುರಾಜಕೀಯರಾಜ್ಯಸುದ್ದಿ

ಇಂದು 2026-27ನೇ ಸಾಲಿನ ಬಜೆಟ್ ಅಧಿವೇಶನ ಆರಂಭ -ಕಹಳೆ ನ್ಯೂಸ್

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉಭಯ ಸದನಗಳ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡುವುದರೊಂದಿಗೆ ಸಂಸತ್ತಿನ ಬಜೆಟ್ ಅಧಿವೇಶನ ಇಂದು ಪ್ರಾರಂಭವಾಗಲಿದೆ. ಎಕನಾಮಿಕ್ ಸರ್ವೆ ಆಫ್ ಇಂಡಿಯಾ ಜನವರಿ 29 ರಂದು ಮಂಡನೆಯಾಗಲಿದ್ದು, 2026-27ರ ಕೇಂದ್ರ ಬಜೆಟ್ ಅನ್ನು ಫೆಬ್ರವರಿ 1 ರಂದು ಮಂಡಿಸಲಾಗುವುದು. ಹಣಕಾಸು ಸಚಿವಾಲಯದ ಆರ್ಥಿಕ ವ್ಯವಹಾರಗಳ ಇಲಾಖೆಯ ಆರ್ಥಿಕ ವಿಭಾಗವು ಸಿದ್ಧಪಡಿಸಿದ ಮತ್ತು ಮುಖ್ಯ ಆರ್ಥಿಕ ಸಲಹೆಗಾರರ ಮೇಲ್ವಿಚಾರಣೆಯಲ್ಲಿ ರೂಪಿಸಲಾದ ಆರ್ಥಿಕ ಸಮೀಕ್ಷೆಯ ದಾಖಲೆಯು ಆರ್ಥಿಕತೆಯ ಸ್ಥಿತಿ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಜ.29ಕ್ಕೆ ಕೆಎಸ್‌ಆರ್‌ಟಿಸಿ ಮುಷ್ಕರ: ‘ನೋ ವರ್ಕ್ ನೋ ಪೇ’ ಆದೇಶ -ಕಹಳೆ ನ್ಯೂಸ್

ಬೆಂಗಳೂರು: ಹಿಂಬಾಕಿ ಪಾವತಿ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯು ಜ.29ರಂದು 'ಬೆಂಗಳೂರು ಚಲೋ' ಮುಷ್ಕರಕ್ಕೆ ಕರೆ ನೀಡಿದೆ. ಆದರೆ, ಇದಕ್ಕೆ 1 ದಿನ ಮೊದಲೇ (ಮಂಗಳವಾರ) ಕೆಎಸ್​​​ಆರ್​​ಟಿಸಿ ಮಹತ್ವದ ಆದೇಶ ಹೊರಡಿಸಿದ್ದು ಕೆಎಸ್‌ಆರ್‌ಟಿಸಿ ನೌಕರರು ಯಾವುದೇ ಮುಷ್ಕರ ಹೂಡುವಂತಿಲ್ಲ. ಮುಷ್ಕರಕ್ಕೆ ಬೆಂಬಲ ಸೂಚಿಸುವಂತಿಲ್ಲ ಎಂದು ಎಚ್ಚರಿಕೆ ಸಂದೇಶ ರವಾನಿಸಿದೆ. ಒಂದು ವೇಳೆ ಜ.29...
ರಾಜಕೀಯರಾಜ್ಯರಾಷ್ಟ್ರೀಯಸಂತಾಪಸುದ್ದಿ

ಮಹಾರಾಷ್ಟ್ರದಲ್ಲಿ ಖಾಸಗಿ ವಿಮಾನ ಪತನ : DCM ‘ಅಜಿತ್ ಪವಾರ್’ ದುರ್ಮರಣ -ಕಹಳೆ ನ್ಯೂಸ್

ಬಾರಾಮತಿ: ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರು ಪ್ರಯಾಣಿಸುತ್ತಿದ್ದ ವಿಮಾನ (ಹೆಲಿಕಾಪ್ಟರ್) ಅಪಘಾತಕ್ಕೀಡಾಗಿರುವ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಈ ಘಟನೆಯು ಅವರ ಸ್ವಕ್ಷೇತ್ರವಾದ ಬಾರಾಮತಿಯಲ್ಲಿ ನಡೆದಿದೆ. ದುರಂತದಲ್ಲಿ ಡಿಸಿಎಂ ಅಜಿತ್ ಪವಾರ್ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಘಟನೆಯ ವಿವರಗಳು: ಬಾರಾಮತಿ ಕ್ಷೇತ್ರದಲ್ಲಿ ಹೆಲಿಕಾಪ್ಟರ್ ಲ್ಯಾಂಡಿಂಗ್ ಆಗುವ ಸಮಯದಲ್ಲಿ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.ಅಪಘಾತದ ತೀವ್ರತೆಗೆ ಸ್ಥಳದಲ್ಲಿ ಭಾರಿ ಪ್ರಮಾಣದ ಬೆಂಕಿ ಮತ್ತು ದಟ್ಟವಾದ ಹೊಗೆ ಆವರಿಸಿಕೊಂಡಿದೆ...
ಬೆಂಗಳೂರುರಾಜ್ಯಸುದ್ದಿ

ಡಿಕೆಶಿಗೆ ಟವೆಲ್‌ನಲ್ಲಿ ಪೇಟ ಕಟ್ಟಿದ ಸಿಎಂ!-ಕಹಳೆ ನ್ಯೂಸ್

ಬೆಂಗಳೂರು: ಫ್ರೀಡಂ ಪಾರ್ಕ್‌ನಲ್ಲಿ ಜಿ ರಾಮ್ ಜಿ ಯೋಜನೆ ವಿರುದ್ಧ ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನೆ ವೇಳೆ ಡಿಸಿಎಂ ಡಿ.ಕೆ ಶಿವಕುಮಾರ್‌ ಅವರ ತಲೆಗೆ ಸಿಎಂ ಸಿದ್ದರಾಮಯ್ಯ ಅವರು ಟವೆಲ್‌ನಲ್ಲಿ ಪೇಟ ಸುತ್ತಿದ್ದಾರೆ. ಹೆಗಲ ಮೇಲೆ ಇದ್ದ ಟವೆಲ್‌ನ್ನು ಮೊದಲು ಸಿಎಂ ಸಿದ್ದರಾಮಯ್ಯ ಅವರು ತಲೆಗೆ ಕಟ್ಟಿಕೊಂಡರು. ಅದನ್ನು ಸುರ್ಜೇವಾಲ ಅವರು ಸಹ ತಲೆಗೆ ಟವೆಲ್‌ ಸುತ್ತಿಕೊಂಡರು. ಬಳಿಕ ಭಾಷಣ ಮುಗಿಸಿ ಬಂದ ಡಿಕೆಶಿ ಅವರ ತಲೆಗೆ ಸುರ್ಜೇವಾಲ ಅವರು ಟವೆಲ್‌...
ಕ್ರೈಮ್ಬೆಂಗಳೂರುರಾಜ್ಯವಾಣಿಜ್ಯಸುದ್ದಿ

ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ವಾಹನ ದರೋಡೆ : ಏಜೆನ್ಸಿ ಸಿಬ್ಬಂದಿಯಿಂದ 1.40 ಕೋಟಿ ಲೂಟಿ- ಕಹಳೆ ನ್ಯೂಸ್

ಬೆಂಗಳೂರು: ಸಿಎಂಎಸ್ ಕಂಪನಿಯ ಮಾಜಿ ಸಿಬ್ಬಂದಿ ಹಾಗೂ ಇತರರಿಂದ ನಡೆದಿದ್ದ ರಾಬರಿ  ಪ್ರಕರಣ ಮಾಸುವ ಮುನ್ನ ಮತ್ತೊಂದು ಪೇಮೆಂಟ್ ಸರ್ವಿಸ್ ಕಂಪನಿ ಸಿಬ್ಬಂದಿಯಿಂದ ಎಡವಟ್ಟು ನಡೆದಿರುವುದು ಬೆಳಕಿಗೆ ಬಂದಿದೆ. ಹಿಟಾಚಿ ಕಂಪನಿಯ ಸಿಬ್ಬಂದಿಗಳು ಎಟಿಎಂಗೆ (ATM) ತುಂಬಲು ತೆಗೆದುಕೊಂಡಿದ್ದ ಹಣದೊಂದಿಗೆ ಎಸ್ಕೇಪ್ ಆಗಿದ್ದಾರೆ. ನಾಲ್ಕು ಮಂದಿಯ ಒಂದು ಟೀಂ 50 ಲಕ್ಷ ರೂ. ಹಣ ತಗೆದುಕೊಂಡು ಹೋಗಿದ್ದರೆ ಮೂರು ಜನರ ಮತ್ತೊಂದು ತಂಡ 80 ಲಕ್ಷ ರೂ. ಹಣ ತಗೆದುಕೊಂಡು...
ಜಿಲ್ಲೆರಾಜ್ಯಸುದ್ದಿ

ಗೋಕರ್ಣ ಸಮುದ್ರಕ್ಕಿಳಿದು ಅಲೆಗೆ ಸಿಲುಕಿದ ಮೂರು ಜನ ಪ್ರವಾಸಿಗರ ರಕ್ಷಣೆ – ಕಹಳೆ ನ್ಯೂಸ್

ಕಾರವಾರ: ಸಮುದ್ರದಲ್ಲಿ ಮುಳುಗುತಿದ್ದ ಮೂರುಜನ ಪ್ರವಾಸಿಗರನ್ನುಲೈಫ್ ಗಾರ್ಡ್ ಸಿಬ್ಬಂದಿ ರಕ್ಷಣೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದ ಮೇನ್ ಬೀಚ್‌ನಲ್ಲಿ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಮನು (23), ಶಿವು (36), ಕಿರಣ್ (26) ರಕ್ಷಣೆಗೆ ಒಳಗಾದ ಪ್ರವಾಸಿಗರು. ಚಿತ್ರದುರ್ಗದಿಂದ ಗೋಕರ್ಣಕ್ಕೆ 21 ಜನ ಪ್ರವಾಸಕ್ಕೆ ಬಂದಿದ್ದರು. ಲೈಫ್ ಗಾರ್ಡ್ ಎಚ್ಚರಿಕೆ ನಡುವೆಯೇ ಸಮುದ್ರಕ್ಕಿಳಿದಿದ್ದ ಆರು ಜನ ಪ್ರವಾಸಿಗರಲ್ಲಿ ಅಲೆಗಳ ಅಬ್ಬರಕ್ಕೆ ಮೂರು ಜನ ಕೊಚ್ಚಿಹೋಗಿದ್ದರು. ಇದನ್ನು...
ಬೆಂಗಳೂರುರಾಜ್ಯಸಿನಿಮಾಸುದ್ದಿ

ಹೌಸ್​ಫುಲ್ ಪ್ರದರ್ಶನ ಕಂಡ ‘ಕಲ್ಟ್’ ಸಿನಿಮಾ – ಕಹಳೆ ನ್ಯೂಸ್

ಜಮೀರ್ ಅಹ್ಮದ್ ಅವರ ಪುತ್ರ ಝೈದ್ ಖಾನ್ ನಟನೆಯ ‘ಕಲ್ಟ್’ ಸಿನಿಮಾ ಜನವರಿ 23ರಂದು ಬಿಡುಗಡೆ ಆಯಿತು. ಈ ಸಿನಿಮಾಗೆ ಅನಿಲ್ ಕುಮಾರ್ ಅವರು ನಿರ್ದೇಶನ ಮಾಡಿದ್​ದಾರೆ. ಝೈದ್ ಖಾನ್ ಅವರ ಜೊತೆ ರಚಿತಾ ರಾಮ್ , ಮಲೈಕಾ ವಸುಪಾಲ್, ರಂಗಾಯಣ ರಘು, ಅಚ್ಯುತ್ ಕುಮಾರ್, ಕಿಶನ್ ಬಿಳಗಲಿ ಮುಂತಾದವರು ನಟಿಸಿದ್ದಾರೆ. ಜನವರಿ 23ರಂದು ಹಲವು ಕಡೆಗಳಲ್ಲಿ ಈ ಸಿನಿಮಾ ಹೌಸ್​ಫುಲ್ ಆಯಿತು. ಝೈದ್ ಖಾನ್ , ಮಲೈಕಾ ಅವರು...
ಜಿಲ್ಲೆಬೆಳಗಾವಿರಾಜ್ಯರಾಷ್ಟ್ರೀಯವಾಣಿಜ್ಯಸುದ್ದಿ

ದೇಶದ ಅತಿದೊಡ್ಡ ರಾಬರಿ ಪ್ರಕರಣ ಬೆಳಕಿಗೆ : 400 ಕೋಟಿ ದರೋಡೆ : ಮೂರು ರಾಜ್ಯದ ಪೊಲೀಸರಿಂದ ಶೋಧ – ಕಹಳೆ ನ್ಯೂಸ್

ಬೆಳಗಾವಿ: ಗೋವಾದಿಂದ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ 400 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ನಿಷೇಧಿತ 2,000 ರೂ. ಮುಖಬೆಲೆಯ ನೋಟುಗಳಿದ್ದ ಎರಡು ಕಂಟೇನರ್‌ಗಳನ್ನ ಬೆಳಗಾವಿಯ ಚೋರ್ಲಾ ಘಾಟ್‌ನಲ್ಲಿ ಹೈಜಾಕ್ ಮಾಡಲಾಗಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಈ ದರೋಡೆ ಪ್ರಕರಣ ಅಂತಾರಾಜ್ಯ ಮಟ್ಟದ್ದಾಗಿದ್ದು, ಕರ್ನಾಟಕ, ಗೋವಾ ಹಾಗೂ ಮಹಾರಾಷ್ಟ್ರ 3 ರಾಜ್ಯಗಳ ಪೊಲೀಸರು ವಿಶೇಷ ತನಿಖಾ ತಂಡದ ಮೂಲಕ ತನಿಖೆ ನಡೆಸುತ್ತಿದ್ದಾರೆ. ದರೋಡೆ ನಡೆದಿದ್ದು ಯಾವಾಗ? ಗೋವಾದಿಂದ (Goa) ಮಹಾರಾಷ್ಟ್ರಕ್ಕೆ ಸಾಗಿಸಲಾಗುತ್ತಿದ್ದ...
1 36 37 38 39 40 301
Page 38 of 301