ಬಿಹಾರದಲ್ಲಿ ಪ್ರತಿಪಕ್ಷಗಳ ಮಹಾ ಮೈತ್ರಿಕೂಟದ ಗೆಲುವು: ಭವಿಷ್ಯ ನುಡಿದ ಸಿದ್ದರಾಮಯ್ಯ – ಕಹಳೆ ನ್ಯೂಸ್
ಮೈಸೂರು, ನವೆಂ: ಬಿಹಾರದಲ್ಲಿನ ಅಧಿಕಾರವಿರೋಧಿ ಅಲೆ ಹಾಗೂ ಬಿಜೆಪಿಯ ಭ್ರಷ್ಟ ಹಾಗೂ ದುರಾಡಳಿತದ ಅಂಶಗಳು ಪ್ರಮುಖವಾಗಲಿದ್ದು, ಈ ಬಾರಿಯ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಜಯಸಾಧಿಸುವ ಭರವಸೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬಿಹಾರ ಚುನಾವಣೆ ಪ್ರಚಾರದ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ, ಬಿಹಾರ ಚುನಾವಣಾ ಪ್ರಚಾರಕ್ಕೆ ಕರೆ ಬಂದರೆ ಅಗತ್ಯವಾಗಿ ತೆರಳುತ್ತೇನೆ. ಈ ಬಾರಿ ಚುನಾವಣೆಯಲ್ಲಿ ಪ್ರತಿಪಕ್ಷಗಳ ಮೈತ್ರಿಕೂಟ ಜಯ ಸಾಧಿಸುವ ಭರವಸೆಯಿದೆ. ಬಿಹಾರ ಮತದಾರರಿಗೆ...







