Monday, March 16, 2026

ರಾಜ್ಯ

ಕೊಡಗುಜಿಲ್ಲೆದಕ್ಷಿಣ ಕನ್ನಡಬೆಂಗಳೂರುಮಂಗಳೂರುಮಡಿಕೇರಿಮೈಸೂರುರಾಜ್ಯಸುದ್ದಿಹಾಸನ

ಕರ್ನಾಟಕದ 12 ಜಿಲ್ಲೆಗಳಲ್ಲಿ ಧಾರಾಕಾರ ಮಳೆ, ಯೆಲ್ಲೋ ಅಲರ್ಟ್ ಘೋಷಣೆ – ಕಹಳೆ ನ್ಯೂಸ್

ಕರ್ನಾಟಕದಾದ್ಯಂತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಕ್ಟೋಬರ್ 15ರವರೆಗೂ ಮಳೆ ಮುಂದುವರೆಯಲಿದೆ ಎನ್ನಲಾಗಿದೆ. ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮೈಸೂರು, ರಾಮನಗರ, ತುಮಕೂರಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಬುಧವಾರ ಮಳೆಯಾಗಿದೆ. ಕಲಬುರಗಿಯಲ್ಲಿ 32.7 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ಧಾರವಾಡದಲ್ಲಿ 19.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ....
ಬೆಂಗಳೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

ರಾಜ್ಯ ಸರ್ಕಾರ ಎರಡು ಪಟ್ಟು ಬೆಳೆ ಪರಿಹಾರ ನೀಡಬೇಕು: ಸಂಸದ ಬೊಮ್ಮಾಯಿ ಆಗ್ರಹ – ಕಹಳೆ ನ್ಯೂಸ್

ಬೆಂಗಳೂರು: ಉತ್ತರ ಕರ್ನಾಟಕ ಭಾಗದಲ್ಲಿ ಉಂಟಾದ ಪ್ರವಾಹಕ್ಕೆ ರಾಜ್ಯ ಸರ್ಕಾರ ತಕ್ಷಣವೇ ಕೇಂದ್ರ ಸರ್ಕಾರ ನೀಡುವ ಎರಡು ಪಟ್ಟು ಪರಿಹಾರ ನೀಡಲಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಉತ್ತರ ಕರ್ನಾಟಕ ಭಾಗದಲ್ಲಿ ಉಂಟಾದ ಪ್ರವಾಹಕ್ಕೆ ಸರಿಯಾದ ಪರಿಹಾರ ನೀಡದಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಯಡಿಯೂರಪ್ಪ ಅವರ ಕಾಲದಲ್ಲಿ ಪ್ರವಾಹ ಆದಾಗ 63 ಹೊಸ ಗ್ರಾಮಗಳನ್ನೆ ಕಟ್ಟಿಸಿದರು....
ಬೆಂಗಳೂರುರಾಜ್ಯಸಂತಾಪಸುದ್ದಿಹೆಚ್ಚಿನ ಸುದ್ದಿ

ಬೆಂಗಳೂರಲ್ಲಿ ಕೋರ್ಟ್ ಕಟ್ಟಡದಿಂದ ಜಿಗಿದಿದ್ದ ‘ಪೋಕ್ಸೋ’ ಕೇಸ್ ಆರೋಪಿ ಚಿಕಿತ್ಸೆ ಫಲಿಸದೇ ಸಾವು -ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಿನ ಕೋರ್ಟ್ ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದ ಪೋಕ್ಸೋಆರೋಪಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ. ಇದೀಗ ಬಂದ ಮಾಹಿತಿ ಪ್ರಕಾರ ಗಂಭೀವಾಗಿ ಗಾಯಗೊಂಡಿದ್ದ ಆರೋಪಿ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ಆರೋಪಿ ಸಿಟಿ ಸಿವಿಲ್ ಕೋರ್ಟ್ ನ 5 ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ಮಿಸಿದ್ದನು, ಕೂಡಲೇ ಆತನನ್ನು ಪೊಲೀಸರು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ ಎಂದು ತಿಳಿದು...
ದೆಹಲಿರಾಜ್ಯಸುದ್ದಿಹೆಚ್ಚಿನ ಸುದ್ದಿ

ನವಿ ಮುಂಬೈನಲ್ಲಿ ಭಾರತದ ಮೊದಲ ಸಂಪೂರ್ಣ ‘ಡಿಜಿಟಲ್ ವಿಮಾನ ನಿಲ್ದಾಣ’ ಉದ್ಘಾಟಿಸಿದ ಪ್ರಧಾನಿ ಮೋದಿ – ಕಹಳೆ ನ್ಯೂಸ್

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಬುಧವಾರ ನವಿ ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಹಂತ 1 ಅನ್ನು ಉದ್ಘಾಟಿಸಿದರು. ಸುಮಾರು ₹19,650 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಈ ವಿಮಾನ ನಿಲ್ದಾಣವು ಭಾರತದ ಮೊದಲ ಸಂಪೂರ್ಣ ಡಿಜಿಟಲ್ ವಿಮಾನ ನಿಲ್ದಾಣವಾಗಿದೆ. ಇದು ರಿಯಲ್ ಎಸ್ಟೇಟ್ ಬೆಳವಣಿಗೆ, ಪ್ರವಾಸೋದ್ಯಮ, ವ್ಯಾಪಾರ ಮತ್ತು ಹಸಿರು ನಾವೀನ್ಯತೆಯನ್ನು ಉತ್ತೇಜಿಸುವ ನಿರೀಕ್ಷೆಯಿದೆ. ಪ್ರಧಾನಿ ಮೋದಿ ಅವರೊಂದಿಗೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಇದ್ದರು. ಹೊಸದಾಗಿ ಪ್ರಾರಂಭಿಸಲಾದ...
ದೆಹಲಿರಾಜ್ಯಸುದ್ದಿಹೆಚ್ಚಿನ ಸುದ್ದಿ

ಪೈಲಟ್ ಸಿಮ್ಯುಲೇಟರ್ ತರಬೇತಿಯಲ್ಲಿ ಲೋಪ ; ಇಂಡಿಗೋ ವಿಮಾನಯಾನಕ್ಕೆ 20 ಲಕ್ಷ ರೂ. ದಂಡ – ಕಹಳೆ ನ್ಯೂಸ್

ನವದೆಹಲಿ : ಭಾರತದ ಅತಿದೊಡ್ಡ ವಿಮಾನಯಾನ ಸಂಸ್ಥೆ ಇಂಡಿಗೋದ ಮಾತೃ ಕಂಪನಿಯಾದ ಇಂಟರ್‌ಗ್ಲೋಬ್ ಏವಿಯೇಷನ್‌ಗೆ, ಸಿ ವರ್ಗದ ವಿಮಾನ ನಿಲ್ದಾಣಗಳಲ್ಲಿ ಪೈಲಟ್ ತರಬೇತಿ ಕಾರ್ಯವಿಧಾನಗಳಲ್ಲಿ ಲೋಪ ಎಸಗಿದ್ದಕ್ಕಾಗಿ ನಾಗರಿಕ ವಿಮಾನಯಾನ ನಿರ್ದೇಶನಾಲಯ (DGCA) 20 ಲಕ್ಷ ರೂ.(ಸುಮಾರು $22,531) ದಂಡ ವಿಧಿಸಿದೆ. ಸೆಪ್ಟೆಂಬರ್ 26ರಂದು ವಿಧಿಸಲಾದ ದಂಡವು ಕ್ಯಾಲಿಕಟ್, ಲೇಹ್ ಮತ್ತು ಕಠ್ಮಂಡುವಿನಂತಹ ಹೆಚ್ಚಿನ ಅಪಾಯದ ವಿಮಾನ ನಿಲ್ದಾಣಗಳಲ್ಲಿ ಕಾರ್ಯನಿರ್ವಹಿಸುವ ಪೈಲಟ್‌ಗಳಿಗೆ ತರಬೇತಿ ನೀಡಲು ಅರ್ಹತೆ ಪಡೆಯದ ಸಿಮ್ಯುಲೇಟರ್‌ಗಳನ್ನು ಬಳಸುವುದಕ್ಕೆ...
ಬೆಂಗಳೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

ಜಾಲಿವುಡ್ ಸ್ಟುಡಿಯೋಸ್’ಗೆ 10 ದಿನ ಕಾಲಾವಕಾಶ ನೀಡಿದ ಡಿಸಿ : ಮತ್ತೆ ಬಿಗ್ ಬಾಸ್-12 ಆರಂಭ – ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರು ಜಿಲ್ಲಾಧಿಕಾರಿಗಳು ಜಾಲಿವುಡ್ ಸ್ಟುಡಿಯೋಸ್'ಗೆ 10 ದಿನ ಕಾಲಾವಕಾಶ ನೀಡಿದ್ದಾರೆ ಎಂದು ಹೇಳಲಾಗಿದ್ದು, ಮತ್ತೆ ಬಿಗ್ ಬಾಸ್-12 ಶುರುವಾಗಲಿದೆ. ಜಾಲಿವುಡ್ ಸ್ಟುಡಿಯೋ 15 ದಿನ ಅವಕಾಶ ಕೇಳಿದೆ, ಆದರೆ ನಾವು 10 ದಿನ ಕಾಲಾವಕಾಶ ನೀಡಿದ್ದೇವೆ. ತಪ್ಪುಗಳನ್ನ ಸರಿಪಡಿಸಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ. ಆದ್ದರಿಂದ 10 ದಿನ ಕಾಲಾವಕಾಶ ನೀಡಿದ್ದೇವೆ ಎಂದು ಡಿಸಿ ಯಶವಂತ ವಿ ಗುರುಕರ್ ಕೇಳಿದ್ದಾರೆ. 10 ದಿನಗಳ ಕಾಲಾವಕಾಶ ಸಿಕ್ಕಿರುವ ಬೆನ್ನಲ್ಲೇ ಮತ್ತೆ ಬಿಗ್...
ಅಂತಾರಾಷ್ಟ್ರೀಯಕೇರಳರಾಜ್ಯಸುದ್ದಿ

ಅಂತರ್ ರಾಜ್ಯ ಕುಖ್ಯಾತ ವಾಹನ ಚೋರನ ಅರೆಸ್ಟ್ – ಪಿಕಪ್‌ ವಾಹನ ಮತ್ತು ಬೈಕ್‌ ವಶಕ್ಕೆ – ಕಹಳೆ ನ್ಯೂಸ್

ಮಂಗಳೂರು : ಸುರತ್ಕಲ್‌ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪಿಕಪ್‌ ವಾಹನ ಹಾಗೂ ಮಂಗಳೂರು ದಕ್ಷಿಣ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಬೈಕ್‌ ಕಳ್ಳತನ ಮಾಡಿದ ಕೇರಳ ರಾಜ್ಯದ ಕುಖ್ಯಾತ ಅಂತರ್ ರಾಜ್ಯ ವಾಹನ ಕಳವು ಆರೋಪಿಯೋರ್ವನನ್ನು ದಸ್ತಗಿರಿ ಮಾಡಿ ಪಿಕಪ್‌ ವಾಹನ ಹಾಗೂ ಬೈಕ್‌ನ್ನು ವಶಪಡಿಸಿಕೊಳ್ಳುವಲ್ಲಿ ಸುರತ್ಕಲ್‌ ಪೊಲೀಸರು ಯಶಸ್ವಿಯಾಗಿರುತ್ತಾರೆ. ಬಂಧಿತನನ್ನು ಕೇರಳದ ಹಂಝ ಕುಪ್ಪಿಕಂಡ @ ಹಂಸ @ ಹಂಝ ಪೊನ್ನನ್ (29) ಎಂದು ಗುರುತಿಸಲಾಗಿದೆ. 30-09-2025 ರಂದು ರಾತ್ರಿ...
ಮುಂಬೈರಾಜ್ಯಸುದ್ದಿಹೆಚ್ಚಿನ ಸುದ್ದಿ

ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಮುಂಬೈಗೆ ಆಗಮನ – ಕಹಳೆ ನ್ಯೂಸ್

ಮುಂಬೈ: ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಬುಧವಾರ ಮುಂಬೈಗೆ ಆಗಮಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ. ಲಂಡನ್‌ನಿಂದ ವ್ಯಾಪಾರ ನಿಯೋಗದೊಂದಿಗೆ ಆಗಮಿಸಿದ ಸ್ಟಾರ್ಮರ್ ಅವರನ್ನು ಛತ್ರಪತಿ ಶಿವಾಜಿ ಮಹಾರಾಜ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡಣವೀಸ್, ಉಪ ಮುಖ್ಯಮಂತ್ರಿಗಳಾದ ಏಕನಾಥ್ ಶಿಂದೆ ಮತ್ತು ಅಜಿತ್ ಪವಾರ್ ಹಾಗೂ ರಾಜ್ಯಪಾಲ ಆಚಾರ್ಯ ದೇವವ್ರತ್ ಸ್ವಾಗತಿಸಿದರು. ಭಾರತ-ಬ್ರಿಟನ್ ಕಾರ್ಯತಂತ್ರದ ಪಾಲುದಾರಿಕೆಯನ್ನು ಬಲಪಡಿಸುವ ಪ್ರಕ್ರಿಯೆಯ ಭಾಗವಾಗಿ...
1 57 58 59 60 61 273
Page 59 of 273