Saturday, April 25, 2026

ರಾಜ್ಯ

ಜಿಲ್ಲೆದೆಹಲಿರಾಜ್ಯಸುದ್ದಿ

ನೌಕಾಪಡೆಯ ಬೆಂಗಾವಲಿನೊಂದಿಗೆ ಹಾರ್ಮುಜ್ ಜಲಸಂಧಿ ದಾಟಿ ಭಾರತದತ್ತ ಬರುತ್ತಿದೆ ಎಲ್‌ಪಿಜಿ ಟ್ಯಾಂಕರ್‌ – ಕಹಳೆ ನ್ಯೂಸ್

ನವದೆಹಲಿ: ಭಾರತೀಯ ನೌಕಾ ಪಡೆಯ ಬೆಂಗಾವಲಿನೊಂದಿಗೆ 40,000 ಮೆಟ್ರಿಕ್ ಟನ್‌ಗಳಿಗೂ ಹೆಚ್ಚು ದ್ರವೀಕೃತ ಪೆಟ್ರೋಲಿಯಂ ಅನಿಲವನ್ನು (LPG) ಹೊತ್ತ ಭಾರತೀಯ ಶಿವಾಲಿಕ್ ಹಡಗು ಹಾರ್ಮುಜ್ ಜಲಸಂಧಿಯನ್ನು ಯಶಸ್ವಿಯಾಗಿ ದಾಟಿದೆ. ಇರಾನ್‌ ಬಂದ್‌ ಮಾಡಿರುವ ಹಾರ್ಮುಜ್ ಜಲಸಂಧಿಯಲ್ಲಿ ನೌಕಾಪಡೆಯ ಬೆಂಗಾವಲಿನಲ್ಲಿ ಶಿವಾಲಿಕ್‌ ಸಂಚರಿಸಿ ನಂತರ ಮುಕ್ತ ಸಮುದ್ರಕ್ಕೆ ಯಶಸ್ವಿಯಾಗಿ ಸಾಗಿದೆ ಎಂದು ವರದಿಯಾಗಿದೆ. ಈ ಹಡಗು ಎರಡು ದಿನಗಳ ಒಳಗಡೆ ಮುಂಬೈ ಅಥವಾ ಕಾಂಡ್ಲಾ ಬಂದರಿನಲ್ಲಿ ಡಾಕಿಂಗ್ ಆಗುವ ಸಾಧ್ಯತೆಯಿದೆ. ಮತ್ತೊಂದು...
ಜಿಲ್ಲೆದೆಹಲಿರಾಜ್ಯಸುದ್ದಿ

ಪಡಿತರ ಅಂಗಡಿಗಳಲ್ಲಿ ಸಿಗಲಿದೆ ಸೀಮೆಎಣ್ಣೆ : ಗ್ರಾಮೀಣ ಭಾಗದಲ್ಲಿ 45 ದಿನಕ್ಕೆ ಒಂದು ಸಿಲಿಂಡರ್‌ – ಕಹಳೆ ನ್ಯೂಸ್

ನವದೆಹಲಿ: ಭಾರತದಲ್ಲಿ ಮತ್ತೆ ಮನೆಯ ಅಡುಗೆಗೆ ಸೀಮೆಎಣ್ಣೆ(Kerosene) ಬಳಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಗುರುವಾರ ರಾಜ್ಯಗಳಿಗೆ ಕೇಂದ್ರ 1 ಲಕ್ಷ ಕಿಲೋಲೀಟರ್‌ ನಿಯಮಿತ ಕೋಟಾದ ಜೊತೆಗೆ ಹೆಚ್ಚುವರಿಯಾಗಿ 48,000 ಕಿಲೋಲೀಟರ್ ಸೀಮೆಎಣ್ಣೆಯನ್ನು ಹಂಚಿಕೆ ಮಾಡಿದೆ. ಪ್ರಾಥಮಿಕವಾಗಿ ಪಡಿತರ ಅಂಗಡಿಗಳ (PDS) ಮೂಲಕ ಸೀಮೆಎಣ್ಣೆಯನ್ನು ವಿತರಿಸಲಾಗುತ್ತದೆ. ಹೋಟೆಲ್‌, ರೆಸ್ಟೋರೆಂಟ್‌ಗಳು ಪರ್ಯಾಯ ಇಂಧನವಾಗಿ ಬಯೋಮಾಸ್, ಆರ್‌ಡಿಎಫ್ ಪೆಲೆಟ್‌ಗಳು ಮತ್ತು ಕಲ್ಲಿದ್ದಲನ್ನು (Coal) ಒಂದು ತಿಂಗಳ ಕಾಲ ಬಳಸಲು ಅನುಮತಿ ನೀಡುವಂತೆ ಪರಿಸರ...
ಜಿಲ್ಲೆಮೈಸೂರುರಾಜ್ಯಸುದ್ದಿ

ನನ್ನ ಕೊನೆ ಉಸಿರು ಇರೋವರೆಗೂ ರಾಜಕೀಯದಲ್ಲಿ ಇರುತ್ತೇನೆ: ಸಿದ್ದರಾಮಯ್ಯ -ಕಹಳೆ ನ್ಯೂಸ್

ಮೈಸೂರು: ನನ್ನ ಕೊನೆ ಉಸಿರು ಇರುವವರೆಗೂ ರಾಜಕೀಯದಲ್ಲಿ ಇದ್ದು, ಜನರ ಸೇವೆ ಮಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನ ವರಕೂಡು ಗ್ರಾಮದಲ್ಲಿ ಬೀರಶ್ವೇರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ಅವರು ಮಾತನಾಡಿದರು. ಈ ವೇಳೆ, ನಾನು ರಾಜಕೀಯದಲ್ಲಿ ಸೋಲು – ಗೆಲವು ಕಂಡಿದ್ದೇನೆ. ಸೋತಾಗಲೂ ಜನ ಸೇವೆ ಬಿಟ್ಟಿಲ್ಲ. ಈಗೀಗ ಕ್ಷೇತ್ರಕ್ಕೆ ಹೆಚ್ಚು ಬರಲು ಆಗುತ್ತಿಲ್ಲ. ನನ್ನ ಮಗ ಯತೀಂದ್ರ ಬರುತ್ತಾರೆ. ನನ್ನನ್ನು ಬೆಳೆಸಿದಂತೆ ಯತೀಂದ್ರನನ್ನು ರಾಜಕೀಯವಾಗಿ ಬೆಳೆಸಿ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಬರ್ತ್ ಡೇ ಪಾರ್ಟಿಗೆ ಬೀರ್ ಕುಡಿಯಲು ದರೋಡೆ : ಐವರು ಅರೆಸ್ಟ್ – ಕಹಳೆ ನ್ಯೂಸ್

ಬೆಂಗಳೂರಿನ ದೊಡ್ಡಬಳ್ಳಾಪುರದ ಗೀತಂ ಕಾಲೇಜು ಬಳಿ ಹುಟ್ಟು ಹಬ್ಬಕ್ಕೆ ಬಿಯರ್ ಕುಡಿಯಲು ಹಣವಿಲ್ಲ ಎಂದು ಸ್ನೇಹಿತರ ಗುಂಪೊಂದು ದರೋಡೆ ನಡೆಸಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಲ್ಲಿ ಆನಂದ, ಗಗನ್ ಗೌತಮ್, ತಿಲಕ್, ಆಕಾಶ್ ಮತ್ತು ಮುನೇಗೌಡ ಎಂದು ಗುರುತಿಸಲಾಗಿದೆ. ಈ ತಿಂಗಳ 11ರಂದು, ಮಧ್ಯರಾತ್ರಿ 1 ಗಂಟೆಗೆ ಆರೋಪಿಗಳು ತಮ್ಮ ಸ್ನೇಹಿತ ಆನಂದನ ಹುಟ್ಟುಹಬ್ಬದ ಸಂಭ್ರಮಚರಣೆಗೆ ಬಿಯರ್ ಕುಡಿಯಲು ಹಣವಿಲ್ಲದ ಎಂದು ದರೋಡೆ ಮಾಡಲು...
ರಾಜ್ಯರಾಷ್ಟ್ರೀಯಸುದ್ದಿ

ಕತಾರ್‌ನಲ್ಲಿ ಸಿಲುಕಿಕೊಂಡಿದ್ದ 500 ಭಾರತೀಯರು ತಾಯ್ನಾಡಿಗೆ ವಾಪಸ್ – ಕಹಳೆ ನ್ಯೂಸ್

ದೋಹಾ :ಕತಾರ್‌ನಲ್ಲಿ ಸಿಲುಕಿರುವ 500 ಕ್ಕೂ ಹೆಚ್ಚು ಭಾರತೀಯರನ್ನು ನವದೆಹಲಿ ಮತ್ತು ಇತರ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಇಲ್ಲಿನ ಭಾರತೀಯ ರಾಯಭಾರ ಕಚೇರಿ ತಿಳಿಸಿದೆ, ಪಶ್ಚಿಮ ಏಷ್ಯಾದ ದೇಶದಲ್ಲಿ ಇನ್ನೂ ಇರುವವರಿಗೆ ಯಾವುದೇ ಗುರುತಿಸಲಾಗದ ವಸ್ತುಗಳು, ಭಗ್ನಾವಶೇಷಗಳು ಅಥವಾ ತುಣುಕುಗಳನ್ನು ಸಮೀಪಿಸದಂತೆ ಎಚ್ಚರಿಕೆ ನೀಡಲಾಗಿದೆ. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಮಧ್ಯೆ, ಕತಾರ್‌ ಏರ್‌ವೇಸ್‌‍ ಇಂದು ಭಾರತಕ್ಕೆ ಎರಡು ವಿಮಾನಗಳನ್ನು ಹಾರಿಸಲು ನಿರ್ಧರಿಸಲಾಗಿದೆ ಎಂದು ಕತಾರ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ...
ಬೆಂಗಳೂರುರಾಜ್ಯಸುದ್ದಿ

*ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ ಕೇಳಿದ ಪ್ರಶ್ನೆಗೆ ಸಚಿವರ ಉತ್ತರ -ಕಹಳೆ ನ್ಯೂಸ್

 ಬೆಂಗಳೂರು : ಅಂಗನವಾಡಿ ಕೇಂದ್ರಗಳಲ್ಲಿ ಯಾವುದೇ ಹುದ್ದೆ ಖಾಲಿಯಾದ 90 ದಿನಗಳ ಒಳಗಾಗಿ ಭರ್ತಿ ಮಾಡಬೇಕು ಎಂದು ಕಳೆದ ಡಿಸೆಂಬರ್‌ನಲ್ಲೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು. ಬೆಂಗಳೂರಿನಲ್ಲಿ ನಡೆಯುತ್ತಿರುವ ಬಜೆಟ್‌ ಅಧಿವೇಶನದ ವಿಧಾನಸಭೆಯ ಕಲಾಪದಲ್ಲಿ ಬುಧವಾರ ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ ಕೇಳಿದ ಪ್ರಶ್ನೆಗೆ ಉತ್ತರಿಸಿದ...
ರಾಜ್ಯರಾಷ್ಟ್ರೀಯಸುದ್ದಿ

ಅಮೆರಿಕದಲ್ಲಿ ರಿಲಯನ್ಸ್‌ನಿಂದ ಹೊಸ ತೈಲ ಸಂಸ್ಕರಣಾ ಘಟಕ: ಟ್ರಂಪ್‌ ಘೋಷಣೆ – ಕಹಳೆ ನ್ಯೂಸ್

ವಾಷಿಂಗ್ಟನ್‌: ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ ಕಂಪನಿ ಅಮೆರಿಕದ ಟೆಕ್ಸಾಸ್‌ನಲ್ಲಿ ನಿರ್ಮಾಣವಾಗಲಿರುವ ಹೊಸ ತೈಲ ಸಂಸ್ಕರಣಾ ಘಟಕಕ್ಕೆ ಹೂಡಿಕೆ ಮಾಡಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್  ಮಹತ್ವದ ಘೋಷಣೆ ಮಾಡಿದ್ದಾರೆ. 300 ಬಿಲಿಯನ್ ಡಾಲರ್(27.56 ಲಕ್ಷ ಕೋಟಿ ರೂ.) ವೆಚ್ಚದಲ್ಲಿ ಈ ಘಟಕ ನಿರ್ಮಾಣವಾಗಲಿದ್ದು 50 ವರ್ಷಗಳ ಬಳಿಕ ಅಮೆರಿಕದ ತೈಲ ಸಂಸ್ಕರಣಾ ಘಟಕವನ್ನು ತೆರೆಯಲಾಗುತ್ತಿದೆ ಎಂದು ಟ್ರಂಪ್‌ ಹೇಳಿದ್ದಾರೆ. ಸಾಮಾಜಿಕ ಮಾಧ್ಯಮ ಟ್ರೂತ್‌ನಲ್ಲಿ ಪೋಸ್ಟ್‌ ಮಾಡಿದ ಟ್ರಂಪ್‌,...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಎಲ್‌ಪಿಜಿ ಸಮಸ್ಯೆ ಬಗೆಹರಿಯುವ ವಿಶ್ವಾಸ ಇದೆ : ಬೊಮ್ಮಾಯಿ – ಕಹಳೆ ನ್ಯೂಸ್

ಬೆಂಗಳೂರು: ದೇಶದಲ್ಲಿ ಪೆಟ್ರೋಲ್, ಡೀಸೆಲ್ ಸಮಸ್ಯೆ ಇಲ್ಲ. ಎಲ್‌ಪಿಜಿ ಗಲ್ಫ್ ದೇಶಗಳಿಂದ ಬರುವುದು ನಿಂತಿದೆ. ನನ್ನ ಪ್ರಕಾರ ಅದು ಕೂಡ ಆದಷ್ಟು ಬೇಗ ಆರಂಭವಾಗಲಿದೆ. ಮುಂದಿನ ಒಂದು ವಾರದಲ್ಲಿ ಬಹುತೇಕ ಸಮಸ್ಯೆಗಳು ಪರಿಹಾರವಾಗಲಿವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟರು. ದೆಹಲಿಯಲ್ಲಿ ಖಾಸಗಿ ಸುದ್ದಿ ಸಂಸ್ಥೆಗೆ ಮಾತನಾಡಿದ ಅವರು, ದೇಶದಲ್ಲಿ ಆಂತರಿಕ ಉತ್ಪಾದನೆ ಹೆಚ್ಚಳ ಮಾಡಬೇಕಾಗುತ್ತದೆ. ಲಾಜಿಸ್ಟಿಕ್ಸ್ ಹೆಚ್ಚಿಸಬೇಕು. ಈ ನಿಟ್ಟಿನಲ್ಲಿ ಕೇಂದ್ರ ರ‍್ಕಾರ ನಿರಂತರ...
1 6 7 8 9 10 280
Page 8 of 280