ದಕ್ಷಿಣ ಕನ್ನಡದ ಕೃಷಿ ಅಭಿವೃದ್ಧಿಗೆ ಇಸ್ರೇಲ್ ಮಾದರಿ ತಂತ್ರಜ್ಞಾನ ಅಳವಡಿಕೆಗೆ ಪ್ರಸ್ತಾಪ ದೆಹಲಿಯಲ್ಲಿ ಇಸ್ರೇಲ್ ರಾಯಭಾರಿ ಭೇಟಿಯಾದ ಸಂಸದ ಕ್ಯಾ. ಬ್ರಿಜೇಶ್ ಚೌಟ-ಕಹಳೆ ನ್ಯೂಸ್
ನವದೆಹಲಿ: ಇಸ್ರೇಲ್ ಮಾದರಿಯ ಕೃಷಿ ಅಭಿವೃದ್ದಿ, ತಂತ್ರಜ್ಞಾನ ಅಳವಡಿಕೆ, ನೀರಾವರಿ ನಿರ್ವಹಣೆ ಸೇರಿದಂತೆ ಅತ್ಯಾಧುನಿಕ ಸುಸ್ಥಿರ ಕೃಷಿಯನ್ನು ಸ್ಥಳೀಯ ಪರಿಸ್ಥಿತಿಗಳಿಗೆ ಅನುಗುಣವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಳವಡಿಸಲು ಇಸ್ರೇಲ್ ಮಾದರಿಯ ಬೆಂಬಲ ಬಯಸಿ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಸ್ರೇಲ್ನ ರಾಯಭಾರಿ ರಿಯೂವೆನ್ ಅಜಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಕೃಷಿ ಚಿತ್ರಣವನ್ನು ಪರಿವರ್ತಿಸುವ ಮಹತ್ವಕಾಂಕ್ಷೆ ಗುರಿಯನ್ನು ಹೊಂದಿರುವ ಕ್ಯಾ. ಚೌಟ ಅವರು...







