Recent Posts

Sunday, April 26, 2026

ದೆಹಲಿ

ಅಂತಾರಾಷ್ಟ್ರೀಯದೆಹಲಿರಾಷ್ಟ್ರೀಯಸುದ್ದಿ

ಸೌರವ್ಯೂಹದಲ್ಲಿ ಏಲಿಯನ್ಸ್‌ಗಳು ಇರುವ ಬಗ್ಗೆ ಮಾಹಿತಿ ; ಪಾರ್ಕರ್‌ ಟೆಲಿಸ್ಕೋಪ್‌ ತೆಗೆದ ಚಿತ್ರಗಳನ್ನು ಆಧರಿಸಿ ಖಚಿತಪಡಿಸದ ಹಾಲೆಂಡ್‌…!! – ಕಹಳೆ ನ್ಯೂಸ್

ವಾಷಿಂಗ್ಟನ್‌: ಸೌರವ್ಯೂಹದಲ್ಲಿ ಏಲಿಯನ್‌ಗಳು ಇರುವ ಬಗ್ಗೆ ಮುಂದಿನ ತಿಂಗಳು ಮಾಹಿತಿ ಬಿಡುಗಡೆ ಮಾಡಲಾಗುವುದು ಎಂದು ನಾಸಾದ ಚಲನಚಿತ್ರ ನಿರ್ಮಾಪಕ ಸಿಮನ್‌ ಹಾಲೆಂಡ್‌ ಹೇಳಿದ್ದಾರೆ. ಈ ಏಲಿಯನ್‌ಗಳು ಗುರುಗ್ರಹದ ಉಪಗ್ರಹವಾದ ಯುರೋಪಾದಲ್ಲಿ ಇರಬಹುದು ಎಂಬ ಶಂಕೆ ವ್ಯಕ್ತಪಡಿಸಲಾಗಿದೆ. ಮಾನವನನ್ನು ಮೀರಿದ ಇತರ ಶಕ್ತಿಗಳನ್ನು ಪತ್ತೆ ಮಾಡಲು ನಾಸಾ 40 ಸಾವಿರ ಕೋಟಿ ರೂ. ಮೌಲ್ಯದ ಯೋಜನೆಯನ್ನು ಕೈಗೊಂಡಿದ್ದು, ಹಾಲೆಂಡ್‌ ಈ ಯೋಜನೆಯ ಭಾಗವಾಗಿದ್ದಾರೆ. ಅಲ್ಲದೇ ಪಾರ್ಕರ್‌ ಟೆಲಿಸ್ಕೋಪ್‌ ತೆಗೆದ ಚಿತ್ರಗಳನ್ನು ಆಧರಿಸಿ...
ದೆಹಲಿಬೆಂಗಳೂರುರಾಜಕೀಯರಾಷ್ಟ್ರೀಯಸುದ್ದಿ

ʼಹರ್ಯಾಣದಲ್ಲಿ ಕಾಂಗ್ರೆಸ್‌ ತಿರಸ್ಕಾರ; ಮ್ಯಾಜಿಕ್ ನಂಬರ್ ದಾಟಿದ ಬಿಜೆಪಿʼ – ಕಹಳೆ ನ್ಯೂಸ್

ಬೆಂಗಳೂರು, ಅಕ್ಟೋಬರ್‌ 08: ಹರಿಯಾಣದಲ್ಲಿ ಬಿಜೆಪಿ ಸಂಪೂರ್ಣ ಬಹುಮತ ಪಡೆದಿರುವುದು ಇಡಿ ದೇಶದ ರಾಜಕಾರಣ ಯಾವ ದಿಕ್ಕಿನಲ್ಲಿ ಸಾಗುತ್ತಿದೆ ಎನ್ನುವುದಕ್ಕೆ ದಿಕ್ಸೂಚಿ ಯಾಗಿದೆ. ಕಾಂಗ್ರೆಸ್ ನ ಜಾತಿ ರಾಜಕಾರಣವನ್ನು ಹರಿಯಾಣ ಜನರು ತಿರಸ್ಕಾರ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.   ಬೆಂಗಳೂರಿನಲ್ಲಿ ಬಿಜೆಪಿ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹರಿಯಾಣದಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆಯಲು ನಮ್ಮ ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವ...
ಜಮ್ಮು ಮತ್ತು ಕಾಶ್ಮೀರದೆಹಲಿರಾಜಕೀಯಸುದ್ದಿ

ಎಕ್ಸಿಟ್‌ ಪೋಲ್‌ ಉಲ್ಟಾಪಲ್ಟಾ, ಹ್ಯಾಟ್ರಿಕ್‌ ಹಿಟ್‌ ದಡ ಸೇರಿದ ಬಿಜೆಪಿ ; ಹರಿಯಾಣದಲ್ಲಿ ಬಿಜೆಪಿ ಪಕ್ಷ ಮುನ್ನಡೆ – ಕಹಳೆ ನ್ಯೂಸ್

ಹರಿಯಾಣ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಸದ್ಯ ಕೇಂದ್ರದ ಆಡಳಿತಾರೂಢ ಬಿಜೆಪಿ ಪಕ್ಷ ಮುನ್ನಡೆ ಸಾಧಿಸಿದೆ. ಮೊನ್ನೆ ಬಿಡುಗಡೆಯಾದ ಚುನಾವಣೋತ್ತರ ಸಮೀಕ್ಷೆಗಳೆಲ್ಲವೂ ಹರಿಯಾಣದಲ್ಲಿ ಕಾಂಗ್ರೆಸ್‌ ಗದ್ದುಗೆಯೇರುವುದು ನಿಶ್ಚಿತ ಎಂದು ಹೇಳಿದ್ದವು. ಅದರಂತೆ ಇಂದು ಮತ ಎಣಿಕೆ ಆರಂಭದಲ್ಲಿ ಕಾಂಗ್ರೆಸ್‌ ಮುನ್ನಡೆ ಸಾಧಿಸಿದ್ದೂ ಸತ್ಯ. ಇಂದು ಬೆಳಿಗ್ಗೆ ಬರೋಬ್ಬರಿ 90 ಸದಸ್ಯ ಬಲದ ಹರಿಯಾಣ ವಿಧಾನಸಭಾ ಕ್ಷೇತ್ರಗಳ ಪೈಕಿ ಕಾಂಗ್ರೆಸ್‌ ಅರ್ಧಕ್ಕಿಂತಲೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಗೆಲುವಿನ...
ದೆಹಲಿವಾಣಿಜ್ಯಸುದ್ದಿ

ಡೆಲಿವರಿ ಬಾಯ್ ಕೆಲಸದಲ್ಲಿ ಜೊಮಾಟೊ ಸಿಇಒ ; ಲಿಫ್ಟ್ ಬಳಸಲು ಬಿಡದ ಮಾಲ್ ಸೆಕ್ಯೂರಿಟಿ – ಕಹಳೆನ್ಯೂಸ್

Zomato CEO Deepinder Goyal as delivery boy: ಕಂಪನಿಯ ಅತ್ಯಂತ ತಳಮಟ್ಟದಲ್ಲಿ ಕೆಲಸ ಮಾಡುವ ಡೆಲಿವರಿ ಪಾರ್ಟ್ನರ್​ಗಳ ಕಷ್ಟಸುಖಗಳನ್ನು ಖುದ್ದಾಗಿ ಅರಿಯಲು ಜೊಮಾಟೊ ಸಿಇಒ ದೀಪಿಂದರ್ ಗೋಯಲ್ ಯತ್ನಿಸುತ್ತಿದ್ದಾರೆ. ಇದರ ಭಾಗವಾಗಿ ತಮ್ಮ ಪತ್ನಿ ಜೊತೆ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ಧಾರೆ. ಈ ವೇಳೆ ದೆಹಲಿ ಸಮೀಪದ ಗುರುಗ್ರಾಮ್​ನ ಏಂಬಿಯನ್ಸ್ ಮಾಲ್​ನಲ್ಲಿ ಆದ ಅನುಭವವೊಂದನ್ನು ಅವರು ಹಂಚಿಕೊಂಡಿದ್ದಾರೆ.ನವದೆಹಲಿ, ಅಕ್ಟೋಬರ್ 7: ಹಿಂದೆಲ್ಲಾ ರಾಜ ಮಹಾರಾಜರು ಸಾಮಾನ್ಯ ಪ್ರಜೆಯ ಹಾಗೆ...
ದಕ್ಷಿಣ ಕನ್ನಡದೆಹಲಿಸುದ್ದಿ

ಇಂದು ದೆಹಲಿಯ ನೂತನ ಸಿಎಂ ಆಗಿ ಆಮ್ ಆದ್ಮಿ ಪಕ್ಷದ ಆತಿಶಿ ಪ್ರಮಾಣವಚನ ಸ್ವೀಕಾರ – ಕಹಳೆ ನ್ಯೂಸ್

ನವದೆಹಲಿ: ದೆಹಲಿ ನೂತನ ಮುಖ್ಯಮಂತ್ರಿಯಾಗಿ ಆಮ್ ಆದ್ಮಿ ಪಕ್ಷ ದ ಆತಿಶಿ ಇಂದು (ಸೆ.21) ಅಧಿಕಾರ ಸ್ವೀಕರಿಸಲಿದ್ದಾರೆ. ಅವರೊಂದಿಗೆ ಐದು ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ರಾಜಭವನದಲ್ಲಿ ಸಂಜೆ 4.30ಕ್ಕೆ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ. ಅತಿಶಿ ಜೊತೆಗೆ ಆಪ್ ನ ಹಿರಿಯರಾದ ಗೋಪಾಲ್ ರೈ, ಕೈಲಾಶ್ ಗಹ್ಲೋಟ್, ಸೌರಭ್ ಭಾರದ್ವಾಜ್, ಮುಖೇಶ್ ಅಹ್ಲಾವತ್ ಮತ್ತು ಇಮ್ರಾನ್ ಹುಸೇನ್ ಕೂಡ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ದಲಿತ...
ಕ್ರೈಮ್ದೆಹಲಿರಾಜಕೀಯಸುದ್ದಿ

ಸಿಖ್ಖರ ವಿರುದ್ಧ ಹೇಳಿಕೆಗೆ ತೀವ್ರ ಆಕ್ಷೇಪ ; ರಾಹುಲ್‌ ಗಾಂಧಿ ವಿರುದ್ಧ 3 ಎಫ್‌ಐಆರ್‌ – ಕಹಳೆ ನ್ಯೂಸ್

ರಾಯ್ಪುರ: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi) ಇತ್ತೀಚೆಗೆ ಅಮೆರಿಕಕ್ಕೆ ಭೇಟಿ ನೀಡಿದ್ದ ವೇಳೆ ಸಿಖ್ಖರ ಕುರಿತು ನೀಡಿದ ಹೇಳಿಕೆ (Sikh sentiments) ಖಂಡಿಸಿ ಛತ್ತೀಸ್‌ಗಢದ ಬಿಜೆಪಿ ನಾಯಕರು ಮೂರು ಪ್ರತ್ಯೇಕ ಎಫ್‌ಐಆರ್ ದಾಖಲಿಸಿದ್ದಾರೆ. ರಾಯ್ಪುರ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ ಒಂದು, ಬಿಲಾಸ್‌ಪುರ ಜಿಲ್ಲಾ ಸಿವಿಲ್ ಲೈನ್ಸ್ ಠಾಣೆಯಲ್ಲಿ ಹಾಗೂ ದುರ್ಗ್ ಜಿಲ್ಲೆಯ ಕೋಟ್ಬಾಲಿ ಪೊಲೀಸ್ ಠಾಣೆಯಲ್ಲಿ ಒಂದು ಎಫ್‌ಐಆ‌ರ್ ದಾಖಲಿಸಲಾಗಿದೆ. ಬಿಜೆಪಿ ನಾಯಕರು ನೀಡಿದ...
ಉಡುಪಿಉತ್ತರಕನ್ನಡಕೃಷಿದಕ್ಷಿಣ ಕನ್ನಡದೆಹಲಿಬೆಂಗಳೂರುರಾಜ್ಯಸುದ್ದಿ

ಭೂತಾನ್ ನಿಂದ 17000 ಟನ್ ಅಡಿಕೆ ಆಮದು ಮಾಡಿಕೊಳ್ಳಲು ಕೇಂದ್ರ ಅನುಮತಿ: ದರ ಕುಸಿತ ಆತಂಕದಲ್ಲಿ ರೈತರು – ಕಹಳೆ ನ್ಯೂಸ್

ನವದೆಹಲಿ: ಭೂತಾನ್ ನಿಂದ ಕನಿಷ್ಠ ಆಮದು ಬೆಲೆ(MIP) ಷರತ್ತು ಇಲ್ಲದೆ 17000 ಟನ್ ಹಸಿ ಅಡಿಕೆ ಆಮದು ಮಾಡಿಕೊಳ್ಳಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಕೇಂದ್ರ ವಾಣಿಜ್ಯ ಸಚಿವಾಲಯ ವ್ಯಾಪ್ತಿಯ ವಿದೇಶಿ ವ್ಯಾಪಾರ ಮಹಾ ನಿರ್ದೇಶನಾಲಯ ಈ ಬಗ್ಗೆ ಮಾಹಿತಿ ನೀಡಿದ್ದು, ಒಡಿಶಾದ ಹತಿಸರ್ ಮತ್ತು ಅಸ್ಸಾಂನ ದರ್ರಂಗಾದ ಕಸ್ಟಮ್ಸ್ ಕೇಂದ್ರದ ಮೂಲಕ ಈ ಅಡಿಕೆ ಆಮದು ಮಾಡಿಕೊಳ್ಳಲು ಒಪ್ಪಿಗೆ ನೀಡಲಾಗಿದೆ. 2022ರ ಸೆಪ್ಟೆಂಬರ್ ನಲ್ಲಿ ಪ್ರತಿ ವರ್ಷ ಭೂತಾನ್ ನಿಂದ...
ದೆಹಲಿರಾಜಕೀಯರಾಷ್ಟ್ರೀಯಸುದ್ದಿ

ರಾಜಕೀಯ ಲಾಭಕ್ಕಾಗಿ ಸುಳ್ಳು ಹೇಳಿದ್ರಾ ವಿನೇಶ್ ಫೋಗಟ್? ಸಂಚಲನ ಸೃಷ್ಟಿಸಿದ ವಕೀಲ ಹರೀಶ್ ಸಾಳ್ವೆ ಹೇಳಿಕೆ – ಕಹಳೆ ನ್ಯೂಸ್

Vinesh Phogat: ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯ ವಿನೇಶ್ ಅವರ ವಿರುದ್ಧ ತೀರ್ಪು ನೀಡಿದಾಗ ಈ ನಿರ್ಧಾರವನ್ನು ಸ್ವಿಸ್ ನ್ಯಾಯಾಲಯದಲ್ಲಿ ಪ್ರಶ್ನಿಸಲು ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ಮುಂದಾಗಿತ್ತು. ಆದರೆ ಈ ಬಗ್ಗೆ ವಿನೇಶ್ ಯಾವುದೇ ರೀತಿಯಾಗಿ ಆಸಕ್ತಿ ತೋರಲಿಲ್ಲ ಎಂದು ಹರೀಶ್ ಸಾಳ್ವೆ ಹೇಳಿದ್ದಾರೆ. ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಅಧಿಕ ತೂಕ ಹೊಂದಿದ್ದ ಕಾರಣಕ್ಕೆ ಫೈನಲ್ ಪಂದ್ಯದಿಂದ ಅನರ್ಹಗೊಂಡು ಪದಕ ವಂಚಿತರಾಗಿದ್ದ ವಿನೇಶ್ ಫೋಗಟ್, ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯದಲ್ಲಿ ಈ ಬಗ್ಗೆ ಮನವಿ...
1 43 44 45 46 47 52
Page 45 of 52