Tuesday, March 10, 2026

ಬೆಂಗಳೂರು

ಬೆಂಗಳೂರುರಾಜ್ಯಸುದ್ದಿ

ಆಸ್ಪತ್ರೆಯ ಆವರಣದಲ್ಲಿ ಮಾನವನ ತಲೆ ಬುರುಡೆ ಪತ್ತೆ: ಬೆಚ್ಚಿ ಬಿದ್ದ ಸಾರ್ವಜನಿಕರು – ಕಹಳೆ ನ್ಯೂಸ್

ನೆಲಮಂಗಲ: ಆಸ್ಪತ್ರೆಯ ಆವರಣದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಮಾನವನ ತಲೆಬುರುಡೆ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ನಡೆದಿದೆ. ನೆಲಮಂಗಲದ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಕಸದ ರಾಶಿ ಮೇಲೆ ತಲೆಬುರುಡೆ ಪತ್ತೆಯಾಗಿದ್ದು, ಹಲವು ಅನುಮಾನಕ್ಕೆ ಕಾರಣವಾಗಿದೆ. ಆಸ್ಪತ್ರೆ ಆವರಣದಲ್ಲಿ ಇದ್ದಕ್ಕಿದ್ದಂತೆ ತಲೆ ಬುರುಡೆ ಪತ್ತೆಯಾಗಿರುವುದು ವಾಮಾಚಾರದ ಶಂಕೆಯನ್ನು ಕೆಲವರು ವ್ಯಕ್ತಪಡಿಸಿದ್ದಾರೆ. ಸ್ಥಳೀಯರಲ್ಲಿ ಹಾಗೂ ಸಾರ್ವಜನಿಕರಲ್ಲಿ ಆತಂಕ ಹುಟ್ಟಿಸಿದೆ. ಆಸ್ಪತ್ರೆಯ ವೈದ್ಯರು ಪೊಲೀಸರಿಗೆ ದೂರು ನೀಡಿದ್ದು, ಸ್ಥಳಕ್ಕಾಗಮಿಸ್ದ ಪೊಲೀಸರು ಪರಿಶೀಲನೆ ನಡೆಸಿದೆ....
ಬೆಂಗಳೂರುರಾಜ್ಯಸುದ್ದಿ

ಬೆಂಗಳೂರಲ್ಲಿ ಆಘಾತಕಾರಿ ಘಟನೆ : ಸಾಕು ಗಿಳಿ ರಕ್ಷಿಸಲು ಹೋದ ಯುವಕ ‘ವಿದ್ಯುತ್ ಶಾಕ್’ ಗೆ ಬಲಿ.!- ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಿನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, ಸಾಕು ಗಿಳಿ ರಕ್ಷಿಸಲು ಹೋದ ಯುವಕ ವಿದ್ಯುತ್ ಶಾಕ್ ಗೆ ಬಲಿಯಾದ ಘಟನೆ ನಡೆದಿದೆ. ಮೃತ ಯುವಕನನ್ನ 31 ವರ್ಷದ ಅರುಣ್ ಕುಮಾರ್ ಎಂದು ಗುರುತಿಸಲಾಗಿದೆ. ಗಿರಿನಗರದ ಅಪಾರ್ಟ್ ಮೆಂಟ್ ಒಂದರಲ್ಲಿ ಈ ಘಟನೆ ನಡೆದಿದೆ. ವಿದ್ಯುತ್ ಶಾಕ್ ಗೆ ಒಳಗಾದ ಬಾಲಕನನ್ನ ಕೂಡಲೇ ಆಸ್ಪತ್ರೆಗೆ ದಾಖಲಿಸಿದರೂ ಆತ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ಹೈಟೆನ್ಶನ್ ವೈರ್ ಇರುವ...
ಕ್ರೀಡೆಬೆಂಗಳೂರುರಾಜ್ಯಸುದ್ದಿ

‘RCB’ ಅಭಿಮಾನಿಗಳಿಗೆ ಗುಡ್ ನ್ಯೂಸ್ : ಚಿನ್ನಸ್ವಾಮಿ ಕ್ರೀಡಾಂಗಣದಲ್ಲೇ ‘IPL’ ಪಂದ್ಯ ನಡೆಸಲು ಸಂಪುಟ ಗ್ರೀನ್‌ ಸಿಗ್ನಲ್‌- ಕಹಳೆ ನ್ಯೂಸ್

ಬೆಂಗಳೂರು : ಈ ವರ್ಷ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚೋಚ್ಚಲ ಐಪಿಎಲ್ ಟ್ರೋಫಿ ಗೆದ್ದು ಬೀಗಿದೆ. ಈ ಸಂಭ್ರಮಾಚರಣೆ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 11 ಜನ ಅಭಿಮಾನಿಗಳು ಸಾವನ್ನಪ್ಪಿದ್ದರು. ಹಾಗಾಗಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಯಾವುದೇ ಕ್ರಿಕೆಟ್ ಪಂದ್ಯ ನಡೆಸದೇ ಇರಲು ನಿರ್ಧರಿಸಲಾಗಿತ್ತು. ಆದರೆ ಇದೀಗ ನಿನ್ನ ನಡೆದ ಸಚಿವ ಸಂಪುಟ ಸಭೆಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2026ರ ಐಪಿಎಲ್ ಪಂದ್ಯಾರ ನಡೆಸಲು ಗ್ರೀನ್ ಸಿಗ್ನಲ್ ನೀಡಿದೆ ಎಂದು ತಿಳಿದುಬಂದಿದೆ....
ಬೆಂಗಳೂರುರಾಜ್ಯಸುದ್ದಿ

ಬೆಂಗಳೂರಲ್ಲಿ ವೈದ್ಯೆ ಕೃತಿಕಾ ರೆಡ್ಡಿ ಕೊಲೆ ಪ್ರಕರಣ : ಪತಿ ಮಹೇಂದ್ರ ರೆಡ್ಡಿ ಜಾಮೀನು ಅರ್ಜಿ ವಜಾ – ಕಹಳೆ ನ್ಯೂಸ್

ಬೆಂಗಳೂರು : ಕಳೆದ ತಿಂಗಳ ಹಿಂದೆ ಬೆಂಗಳೂರಿನಲ್ಲಿ ವೈದ್ಯೆ ಡಾಕ್ಟರ್ ಕೃತಿಕಾ ರೆಡ್ಡಿಯನ್ನು ಭೀಕರವಾಗಿ ಕೊಲೆ ಮಾಡಲಾಗಿತ್ತು. ಈ ಒಂದು ಪ್ರಕರಣದಲ್ಲಿ ಪತಿ ಡಾ. ಮಹೇಂದ್ರ ರೆಡ್ಡಿಯನ್ನು ಅರೆಸ್ಟ್ ಮಾಡಲಾಗಿತ್ತು. ಇದೀಗ ಪತಿ ಮಹೇಂದ್ರ ರೆಡ್ಡಿ ಜಾಮೀನು ಅರ್ಜಿ ವಜಾಗೋಳಿಸಲಾಗಿದೆ. ಹೌದು ಕೊಲೆ ಪ್ರಕರಣದಲ್ಲಿ ಸದ್ಯ ಡಾಕ್ಟರ್ ಮಹೇಂದ್ರ ರೆಡ್ಡಿ ಜೈಲಲ್ಲಿ ಇದ್ದಾರೆ ಜಾಮೀನು ನೀಡುವಂತೆ ಇತ್ತೀಚಿಗೆ ಅವರು ಅರ್ಜಿ ಸಲ್ಲಿಸಿದರು. ಇಂದು ವಿಚಾರಣೆ ನಡೆಸಿ ಬೆಂಗಳೂರಿನ ಸೇಷನ್ಸ್ ನ್ಯಾಯಾಲಯ...
ಬೆಂಗಳೂರುರಾಜ್ಯಸುದ್ದಿ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೆ ರಾಶಿ ರಾಶಿ ಮೊಬೈಲ್ ಪತ್ತೆ – ಕಹಳೆ ನ್ಯೂಸ್

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗಳು, ಸಜಾ ಬಂದಿಗಳಿರುವ ವಿವಿಧ ಬ್ಯಾರಕ್‌ಗಳಲ್ಲಿ ಜೈಲಿನ ಸಿಬ್ಬಂದಿ ದಿಢೀರ್ ದಾಳಿ ನಡೆಸಿ ಪರಿಶೀಲಿಸಿದಾಗ ಮತ್ತಷ್ಟು ಮೊಬೈಲ್‌ ಹಾಗೂ ಸಿಮ್‌ ಕಾರ್ಡ್‌ಗಳು ಪತ್ತೆಯಾಗಿರುವುದು ಗೊತ್ತಾಗಿದೆ. ಆರು ಬಾರಿ ಪರಿಶೀಲನೆ ನಡೆಸಲಾಗಿದೆ. ಈ ಅವಧಿಯಲ್ಲಿ 67 ಮೊಬೈಲ್‌, 14 ಚಾರ್ಜರ್‌, 48 ಸಿಮ್‌, 10 ಇಯರ್ ಫೋನ್‌, ₹64 ಸಾವಿರ ನಗದು, 13 ಆಯುಧಗಳನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು. ಈ...
ಬೆಂಗಳೂರುರಾಜ್ಯಸುದ್ದಿ

ರಾಜ್ಯಾದ್ಯಂತ ಭಾರೀ ಥಂಡೀ..! 08 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್: ತಾಪಮಾನ 9 ಡಿ.ಸೆ.ಗೆ ಕುಸಿತ- ಕಹಳೆ ನ್ಯೂಸ್

ಕರ್ನಾಟಕದಾದ್ಯಂತ ಚಳಿ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ಕನಿಷ್ಠ ತಾಪಮಾನ ಕುಸಿಯುತ್ತಿದೆ. ಅಲ್ಲದೇ ಬೆಳಗ್ಗೆ ಮತ್ತು ರಾತ್ರಿ ದಟ್ಟ ಮಂಜು ಆವರಿಸುತ್ತಿದೆ. ಈ ವಾತಾವರಣ ಮತ್ತಷ್ಟು ಪರಿಣಾಮಕಾರಿಯಾಗಿ ರಾಜ್ಯದಲ್ಲಿ ಮುಂದುವರಿಯಲಿದೆ ಎಂದು ಮುನ್ಸೂಚನೆ ನೀಡಿರುವ ಭಾರತೀಯ ಹವಾಮಾನ ಇಲಾಖೆಯು (IMD) ಬರೋಬ್ಬರಿ 08 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಿದೆ. ಬೀದರ್‌ನಲ್ಲಿ ರಾಜ್ಯದ ಅತೀ ಕನಿಷ್ಠ ತಾಪಮಾನ ದಾಖಲಾಗಿದೆ. ಮೊದಲು ಬೀದರ್ ಜಿಲ್ಲೆಗೆ ಮಾತ್ರ ನೀಡಿದ್ದ ಶೀತದ ಅಲೆ ಎಚ್ಚರಿಕೆ, ಉತ್ತರ...
ಬೆಂಗಳೂರುರಾಜ್ಯಸುದ್ದಿ

‘ಇಂಡಿಗೋ’ ವಿಮಾನಗಳ ಹಾರಾಟದಲ್ಲಿ ಚೇತರಿಕೆ : ಕೆಂಪೇಗೌಡ ಏರ್ ಪೋರ್ಟ್’ನಲ್ಲಿ ಇಂದು 58 ಫ್ಲೈಟ್ ಮಾತ್ರ ಕ್ಯಾನ್ಸಲ್.!-ಕಹಳೆನ್ಯೂಸ್

ಬೆಂಗಳೂರು : ಇಂಡಿಗೋ ವಿಮಾನಗಳ ಹಾರಾಟದಲ್ಲಿ ಚೇತರಿಕೆ ಕಂಡು ಬಂದಿದ್ದು, ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಇಂದು 58 ಫ್ಲೈಟ್ ಮಾತ್ರ ಕ್ಯಾನ್ಸಲ್ ಆಗಿದೆ. ಹೌದು, ನಿನ್ನೆಗೆ ಹೋಲಿಸಿದರೆ ಇಂದು ರದ್ದಾದ ವಿಮಾನಗಳ ಸಂಖ್ಯೆ ಇಳಿಮುಖವಾಗಿದೆ. ನಿನ್ನೆ 120 ಇಂಡಿಗೋ ವಿಮಾನಗಳ ಹಾರಾಟ ರದ್ದಾಗಿತ್ತು, ಆದರೆ ಇಂದು 58 ವಿಮಾನಗಳ ಹಾರಾಟ ಮಾತ್ರ ಕ್ಯಾನ್ಸಲ್ ಆಗಿದೆ. ಈ ಮೂಲಕ ವಿಮಾನಗಳ ಹಾರಾಟದಲ್ಲಿ ಕೊಂಚ ಚೇತರಿಕೆ ಕಂಡು ಬಂದಿದೆ ಎನ್ನಲಾಗಿದೆ. ಒಂದು...
ಬೆಂಗಳೂರುರಾಜ್ಯಸುದ್ದಿ

ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ : ಕೆಂಪೇಗೌಡ ಏರ್ಪೋರ್ಟ್ ಮುತ್ತಿಗೆ ಹಾಕಲು ಯತ್ನಿಸಿದ ವಾಟಳ್ ನಾಗರಾಜ್ ಖಾಕಿ ವಶಕ್ಕೆ -ಕಹಳೆ ನ್ಯೂಸ್

ಬೆಂಗಳೂರು : ಕಳೆದ ಕೆಲವು ದಿನಗಳಿಂದ ಇಂಡಿಗೋ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಹಿನ್ನೆಲೆಯಲ್ಲಿ ಇಂಡಿಗೋ ವಿರುದ್ಧ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ವಾಟಳ್ ನಾಗರಾಜ್ ಕೆಂಪೇಗೌಡ ಏರ್ಪೋರ್ಟ್ ಮುತ್ತಿಗೆ ಹಾಕಲು ಯತ್ನಿಸಿದಾಗ ಮಾರ್ಗಮಧ್ಯೆ ಪೊಲೀಸರು ವಾಟಳ್ ನಾಗರಾಜ್ ಅವರನ್ನು ವಶಕ್ಕೆ ಪಡೆದರು. ಬಾಗಲೂರು ಸಮೀಪ ಕಾರು ಅಡ್ಡಗಟ್ಟಿ ಪೋಲೀಸರು...
1 12 13 14 15 16 211
Page 14 of 211