ಕ್ಷಮೆ ಕೇಳದಿದ್ದರೆ 1 ಕೋಟಿ ರೂ. ಮಾನನಷ್ಟ ಕೇಸ್ ; ರೂಪಾಗೆ ರೋಹಿಣಿ ಸಿಂಧೂರಿ ಎಚ್ಚರಿಕೆ – ಕಹಳೆ ನ್ಯೂಸ್
ಬೆಂಗಳೂರು: ರೂಪಾ, ರೋಹಿಣಿ ಜಟಾಪಟಿ ನಿಂತು ನಿಲ್ಲದಂತೆ ಮುಂದುವರಿಯುತ್ತಲೇ ಇದೆ. ಅಸ್ತ್ರ – ಪ್ರತ್ಯಾಸ್ತ್ರದ ಯುದ್ಧಕ್ಕೆ ಕಾನೂನಿನ ಕಲೆ ಬಂದಿದೆ. ಕಾನೂನು ಹೋರಾಟ ಮಾಡಲು ಸಿದ್ಧವಾಗಿರುವ ರೋಹಿಣಿ ಮಾನನಷ್ಟ ಮೊಕದ್ದಮೆಯನ್ನು ಹಾಕಿದ್ದಾರೆ. ರೋಹಿಣಿ ಸಿಂಧೂರಿ (Rohini Sindhuri), ರೂಪಾ (D Roopa) ಕಥೆ ಶುರುವಾದಾಗಿನಿಂದ ದಿನಕ್ಕೊಂದು ಸ್ಫೋಟಕ ಟ್ವಿಸ್ಟ್ ಸಿಗುತ್ತಲೆ ಇದೆ. ಒಬ್ಬರ ಮೇಲೋಬ್ಬರು ಯುದ್ಧ ಸಾರುತ್ತಲೇ ಇದ್ದಾರೆ. ಈಗ ಅದಕ್ಕೆ ಕಾನೂನಿನ ಬಣ್ಣ ಬಂದಿದೆ. ರೂಪಾ ಐಪಿಎಸ್ ಅಧಿಕಾರಿ ಆಗಿದ್ರೂ...







