Friday, March 13, 2026

ಬೆಂಗಳೂರು

ಬೆಂಗಳೂರುರಾಜ್ಯಶಿಕ್ಷಣಸುದ್ದಿ

ಆಗಸ್ಟ್‌ 10ಕ್ಕೆ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶ..! ; ಶಿಕ್ಷಣ ಸಚಿವ ಎಸ್‌.ಸುರೇಶ್‌ ಕುಮಾರ್‌ – ಕಹಳೆ ನ್ಯೂಸ್

ಬೆಂಗಳೂರು: ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶ ಆಗಸ್ಟ್‌ 10 ರ ವೇಳೆಗೆ ಪ್ರಕಟವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌.ಸುರೇಶ್‌ ಕುಮಾರ್‌ ತಿಳಿಸಿದ್ದಾರೆ. ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಸೋಮವಾರ ನಡೆದ ಪರೀಕ್ಷೆಗೆ ಶೇ 99.6 ರಷ್ಟು ವಿದ್ಯಾರ್ಥಿಗಳು ಹಾಜರಾಗಿದ್ದರು. ಎಲ್ಲೂ ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ ಎಂದು ಹೇಳಿದರು. ಇದು ಶಿಕ್ಷಣ ಇಲಾಖೆಯ ಪರೀಕ್ಷೆ ಆಗಿರಲಿಲ್ಲ. ಸಾರ್ವಜನಿಕರ ಪರೀಕ್ಷೆ ಆಗಿತ್ತು. ಉತ್ತರ ಕನ್ನಡ ಜಿಲ್ಲೆಯಲ್ಲಿ ವಿದ್ಯಾರ್ಥಿಯೊಬ್ಬರು ಗೊಂದಲಕ್ಕೆ...
ಬೆಂಗಳೂರು

ಇಂದು ದ್ವಿತೀಯ ಪಿಯುಸಿ ಫಲಿತಾಂಶ-ಕಹಳೆ ನ್ಯೂಸ್

ಬೆಂಗಳೂರು: ಇಂದು ಸಂಜೆ 4.30 ಕ್ಕೆ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದ್ದು, ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಫಲಿತಾಂಶವನ್ನು ಪ್ರಕಟಿಸಲಿದೆ. ವಿದ್ಯಾರ್ಥಿಗಳು ಕರ್ನಾಟಕದ karresults.nic.in ವೆಬ್‌ಸೈಟ್‌ನಲ್ಲಿ ಫಲಿತಾಂಶವನ್ನು ತಿಳಿದುಕೊಳ್ಳಬಹುದಾಗಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಸ್ಪಷ್ಟಪಡಿಸಿದೆ....
ದಕ್ಷಿಣ ಕನ್ನಡಬೆಂಗಳೂರುರಾಜಕೀಯರಾಜ್ಯಸುದ್ದಿ

ಬಿಜೆಪಿ ರಾಜ್ಯಾಧ್ಯಕ್ಷರ ಧ್ವನಿಗೆ ಹೋಲುವ ಧ್ವನಿಯಲ್ಲಿ ಫೇಕ್ ಆಡಿಯೋ ವೈರಲ್ | ಆಡಿಯೋಗೂ, ನನಗೂ ಸಂಬಂಧವಿಲ್ಲ ಕಹಳೆ ನ್ಯೂಸ್ ಗೆ ನಳಿನ್ ಕುಮಾರ್ ಕಟೀಲ್ ಸ್ಪಷ್ಟನೆ – ಕಹಳೆ ನ್ಯೂಸ್

ಬೆಂಗಳೂರು: ಸಿಎಂ ಬಿ.ಎಸ್. ಯಡಿಯೂರಪ್ಪ ಬದಲಾವಣೆ ಕುರಿತು ಹೊರಬಿದ್ದಿರುವ ಆಡಿಯೋ ನನ್ನದ್ದಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಈ ಆಡಿಯೋಗೂ ನನಗೂ ಸಂಬಂಧವಿಲ್ಲ ಎಂದು ಕಹಳೆ ನ್ಯೂಸ್ ಕೇಬಲ್ ಟಿವಿಗೆ ಕಟೀಲ್ ಸ್ಪಷ್ಟನೆ ನೀಡಿದ್ದಾರೆ. ಈ ಸಂಬಂಧ ಬಿಜೆಪಿ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದೆ. ಹೇಳಿಕೆಯಲ್ಲಿ ಏನಿದೆ..? :  ನನ್ನ ಧ್ವನಿಯನ್ನು ಅನುಕರಿಸಿ ಪಕ್ಷಕ್ಕೆ ಧಕ್ಕೆ ತರುವ ಮಾದರಿಯಲ್ಲಿ ನಕಲಿ ಆಡಿಯೋ ಒಂದನ್ನು ಯಾರೋ ಕಿಡಿಗೇಡಿಗಳು...
ಕಾಸರಗೋಡುದಕ್ಷಿಣ ಕನ್ನಡಬೆಂಗಳೂರುಮಂಜೇಶ್ವರರಾಜ್ಯಸುದ್ದಿ

ಕರ್ನಾಟಕದ ಗಡಿನಾಡಿನ ಹೋರಾಟಗಾರರಾದ ಕಯ್ಯಾರ ಕಿಞ್ಞಣ್ಣ ರೈ ಹಾಗೂ ಜಯದೇವಿ ತಾಯಿ ಲಿಗಾಡೆರವರ ಹೆಸರಿನಲ್ಲಿ ರಾಜ್ಯ ಪ್ರಶಸ್ತಿ – ಕಹಳೆ ನ್ಯೂಸ್

ಬೆಂಗಳೂರು: ಕರ್ನಾಟಕದ ಗಡಿನಾಡಿನ ಹೋರಾಟಗಾರರಾದ ಕಯ್ಯಾರ ಕಿಞ್ಞಣ್ಣ ರೈ ಹಾಗೂ ಜಯದೇವಿ ತಾಯಿ ಲಿಗಾಡೆರವರ ಹೆಸರಿನಲ್ಲಿ ರಾಜ್ಯ ಪ್ರಶಸ್ತಿ ನೀಡಲು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಘೋಷಿಸಿದೆ. ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಸಿ. ಸೋಮಶೇಖರರವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಪ್ರಸ್ತುತ ಆರ್ಥಿಕ ವರ್ಷದ ಪ್ರಥಮ ಪ್ರಾಧಿಕಾರ ಸಭೆಯಲ್ಲಿ ಹಲವಾರು ಕನ್ನಡಪರ ಕನ್ನಡ ನಾಡು-ನುಡಿ ಸಂಸ್ಕೃತಿ ಪರ ಯೋಜನೆಗಳನ್ನು...
ಬೆಂಗಳೂರುರಾಜ್ಯಶಿಕ್ಷಣಸುದ್ದಿ

ಜು.20ರಂದು ದ್ವಿತೀಯ ಪಿಯುಸಿ ಫಲಿತಾಂಶ ವೆಬ್‌ಸೈಟ್‌ನಲ್ಲಿ ಪ್ರಕಟ ; ಫಲಿತಾಂಶ ನೋಡುವುದು ಹೇಗೆ..? – ಕಹಳೆ ನ್ಯೂಸ್

ಬೆಂಗಳೂರು, ಜು 16 : ಈ ಬಾರಿಯ ದ್ವಿತೀಯ ಪಿಯುಸಿ ಫಲಿತಾಂಶವನ್ನು ಜುಲೈ 20ರಂದು ಪ್ರಕಟಿಸುವುದಾಗಿ ಶಿಕ್ಷಣ ಇಲಾಖೆ ಹೇಳಿದೆ.   ಕೊರೊನಾ ಕಾರಣದ ಹಿನ್ನೆಲೆ ಸ್ಥಗಿತಗೊಂಡಿದ್ದ ದ್ವಿತೀಯ ಪಿಯುಸಿ ಪರೀಕ್ಷೆಗೆ ಸಂಬಂಧಪಟ್ಟಂತೆ ಸಿಬಿಎಸ್‌ಸಿ ಮಾದರಿಯಲ್ಲಿ ಎಸ್ಸೆಸ್ಸೆಲ್ಸಿ, ಪಿಯು ಅಂಕವನ್ನು ಪರಿಗಣಿಸಿ ಫಲಿತಾಂಶ ನೀಡಲು ತಯಾರಿ ಕೈಗೊಂಡಿದ್ದು, ಫಲಿತಾಂಶ ಗ್ರೇಡ್‌‌ ಬದಲು ಅಂಕಗಳ ಆಧಾರದ ಮೇಲೆ ವೆಬ್‌ಸೈಟ್‌ ಮೂಲಕ ಪ್ರಕಟವಾಗಲಿದೆ. ಶಿಕ್ಷಣ ಇಲಾಖೆ ಫಲಿತಾಂಶದ ಬಗ್ಗೆ ಮಾಹಿತಿ ನೀಡಿದ್ದು, "ಈ ಬಾರಿ...
ಕ್ರೈಮ್ದಕ್ಷಿಣ ಕನ್ನಡಬೆಂಗಳೂರುರಾಜಕೀಯರಾಜ್ಯಸುದ್ದಿ

ನಿನ್ನೆತಾನೆ ಮಂಗಳೂರಿಗೆ ಆಗಮಿಸಿದ್ದ ಯೂತ್ ಕಾಂಗ್ರೆಸ್ ಅಧ್ಯಕ್ಷ ರಕ್ಷಾ ರಾಮಯ್ಯ ವಿರುದ್ಧ ಎಫ್‍ಐಆರ್ ದಾಖಲು – ಕಹಳೆ ನ್ಯೂಸ್

ಬೆಂಗಳೂರು: ಸಂಜಯನಗರ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಯೂತ್ ಕಾಂಗ್ರೆಸ್ ಅಧ್ಯಕ್ಷ ರಕ್ಷಾ ರಾಮಯ್ಯ ವಿರುದ್ಧ ಎಫ್.ಐ.ಆರ್ ದಾಖಲಾಗಿದೆ. ರಾಷ್ಟ್ರಿಯ ಯೂತ್ ಕಾಂಗ್ರೆಸ್ ಅಧ್ಯಕ್ಷ ಬಿ.ವಿ ಶ್ರೀನಿವಾಸ್, ಕರ್ನಾಟಕ ಪ್ರದೇಶ ಯೂತ್ ಕಾಂಗ್ರೆಸ್ ಅಧ್ಯಕ್ಷ ರಕ್ಷಾರಾಮಯ್ಯ ಸೇರಿ ಒಟ್ಟು 17 ಮಂದಿ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಎಫ್‍ಐಆರ್ 188 ಹಾಗೂ ಎನ್.ಡಿ.ಎಂ.ಎ ಆಕ್ಟ್ ಅಡಿಯಲ್ಲಿ ಕೇಸ್ ದಾಖಲಾಗಿದೆ. ಜುಲೈ 12 ರಂದು ಬೆಲೆ ಏರಿಕೆ ವಿರುದ್ಧ ಯೂತ್ ಕಾಂಗ್ರೆಸ್ ಪ್ರತಿಭಟನೆ ನಡೆಸಿತ್ತು....
ದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ರಾಜ್ಯದಲ್ಲಿ ಇಂದು 1,913 ಮಂದಿಗೆ ಕೊರೋನಾ ಪಾಸಿಟಿವ್ ; 48 ಮಂದಿ ಸಾವು ; ದಕ್ಷಿಣ ಕನ್ನಡ 222, ಬೆಂಗಳೂರಿನಲ್ಲಿ 401 ಮಂದಿಗೆ ಸೋಂಕು ದೃಢ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಸ್ವಲ್ಪ ಏರಿಕೆಯಾಗಿದ್ದು ಇಂದು 1,913 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 28,74,597ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ ಮಹಾಮಾರಿಗೆ 48 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 35,944ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಿಸಿದೆ. ಬೆಂಗಳೂರಿನಲ್ಲಿ ಇಂದು 401 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,20,098ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 8 ಮಂದಿ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ನಾನು ಅತ್ಯಂತ ಸಂತೋಷದ ರಾಜಕಾರಣಿ, ನನ್ನ ಬಿಜೆಪಿ ಪಕ್ಷ, ಸಂಘ ನನಗೆ ಎಲ್ಲವನ್ನೂ ಕೊಟ್ಟಿದೆ ; ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ ಡಿ ವಿ ಸದಾನಂದ ಗೌಡ – ಕಹಳೆ ನ್ಯೂಸ್

ಬೆಂಗಳೂರು; ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟ ಪುನಾರಚನೆಯಾದ ಹಿನ್ನೆಲೆಯಲ್ಲಿ ವರಿಷ್ಠರ ಸೂಚನೆಯಂತೆ ರಸಗೊಬ್ಬರ ಮತ್ತು ರಾಸಾಯನಿಕ ಕೇಂದ್ರ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಸಂಸದ ಡಿ ವಿ ಸದಾನಂದ ಗೌಡ ನಿನ್ನೆ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದರು. ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಿಜೆಪಿ ಕಾರ್ಯಕರ್ತರು ಅವರನ್ನು ಅದ್ದೂರಿಯಾಗಿಯೇ ಸ್ವಾಗತಿಸಿದರು. ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದರೂ ಕೂಡ ಅವರ ಮಾತಿನ ವರಸೆಯಲ್ಲಿ...
1 178 179 180 181 182 212
Page 180 of 212