Wednesday, March 11, 2026

ಬೆಂಗಳೂರು

ಬೆಂಗಳೂರು

ದಕ್ಷಿಣ ಕನ್ನಡ, ಉಡುಪಿ ಸೇರಿ ರಾಜ್ಯದ ಹಲವೆಡೆ ಇಂದಿನಿಂದ ಏಪ್ರಿಲ್ 10ರವರೆಗೆ ಮಳೆ ನಿರೀಕ್ಷೆ ; ಹವಾಮಾನ ಇಲಾಖೆ ಮುನ್ಸೂಚನೆ-ಕಹಳೆ ನ್ಯೂಸ್

ಬೆಂಗಳೂರು : ಏರುತ್ತಿರುವ ಬಿಸಿಲಿನ ಬೇಗೆಯ ನಡುವೆಯೂ ಇಂದಿನಿಂದ 10ರವರೆಗೆ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯೂ ಮುನ್ಸೂಚನೆ ನೀಡಿದೆ. ಏಪ್ರಿಲ್ 6ರಂದು ಮೈಸೂರು, ಚಾಮರಾಜನಗರ, ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳ ವ್ಯಾಪ್ತಿಯಲ್ಲಿ, ಮತ್ತು ಏಪ್ರಿಲ್ 7ರಂದು ದಕ್ಷಿಣ ಕನ್ನಡ, ಉಡುಪಿ, ಮೈಸೂರು, ಚಾಮರಾಜನಗರ, ಹಾಸನ, ಕೊಡಗು ಭಾಗದಲ್ಲಿ ಮಳೆಯಾಗಲಿದೆ. ಹಾಗೂ ಏಪ್ರಿಲ್ 8ರಂದು ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಕೊಡಗು, ಹಾಸನದಲ್ಲಿ...
ಬೆಂಗಳೂರು

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ಕೊರೋನಾ ಸೋಂಕು ದೃಢ-ಕಹಳೆ ನ್ಯೂಸ್

ಬೆಂಗಳೂರು : ಇಂದು ಎಸ್‍ಐಟಿ ವಿಚಾರಣೆಗೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಹಾಜರಾಗಬೇಕಿದ್ದು, ಆದರೆ ಕೊರೋನಾ ಸೋಂಕು ತಗುಲಿರುವ ಬಗ್ಗೆ ಸಚಿವ ಭೈರತಿ ಬಸವರಾಜ್ ಮಾಹಿತಿ ನೀಡಿದ್ದಾರೆ. ರಮೇಶ್ ಜಾರಕಿಹೊಳಿ ಅವರು ಬೆಂಗಳೂರಿನಲ್ಲಿಯೇ ಇದ್ದಾರೆ. ನಾನು ನಿನ್ನೆಯಷ್ಟೇ ಅವರ ಜೊತೆ ಮಾತನಾಡಿದೆ ಎಂದು ಹೇಳಿದರು. ಹಾಗೂ ಕೊರೋನಾ ನೆಗೆಟಿವ್ ಬಂದ ನಂತರ ಬೆಳಗಾವಿಗೆ ಪ್ರಚಾರಕ್ಕೆ ಬರುತ್ತಾರೆ ಎಂದಿದ್ದಾರೆ. ಏಪ್ರಿಲ್ 1ರಂದು ಆಸ್ಪತ್ರೆಗೆ ಬಂದಿದ್ದ ರಮೇಶ್ ಜಾರಕಿಹೊಳಿಗೆ ಕೊರೋನಾ ಪಾಸಿಟಿವ್...
ಬೆಂಗಳೂರು

ಸೆಕ್ಸ್ ಸಿಡಿ ಹಗರಣ ಸಂಬಂಧ ವಿಚಾರಣೆಗೆ ಗೈರು ಹಾಜರಾದ ರಮೇಶ್ ಜಾರಕಿಹೊಳಿ-ಕಹಳೆ ನ್ಯೂಸ್

ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಸೆಕ್ಸ್ ಸಿಡಿ ಹಗರಣ ಸಂಬಂಧ ವಿಚಾರಣೆಗೆ ಇಂದು ಹಾಜರಾಗುವಂತೆ ಸೂಚಿಸಲಾಗಿದ್ದರೂ, ಹಾಜರಾಗಿಲ್ಲ. ಅವರು ತಮ್ಮ ವಕೀಲರ ಮೂಲಕ ತಾವು ವಿಚಾರಣೆಗೆ ಬರುತ್ತಿಲ್ಲ ಎಂಬ ಮಾಹಿತಿಯನ್ನು ವಿಶೇಷ ತನಿಖಾ ತಂಡಕ್ಕೆ ತಿಳಿಸಿದರು. ಮತ್ತು ಸಂತ್ರಸ್ತೆ ವಿಚಾರಣೆ ವೇಳೆ ಹಲವು ಸ್ಫೋಟಕ ಮಾಹಿತಿ ಬಹಿರಂಗ ಪಡಿಸಿದ್ದಾರೆ ಎಂದು ಹೇಳಲಾಗಿರುವ ಕಾರಣ ರಮೇಶ್ ಜಾರಕಿಹೊಳಿ ಇಂದು ವಿಚಾರಣೆಯಿಂದ ತಪ್ಪಿಸಿಕೊಂಡಿದ್ದಾರೆ ಎಂಬ ಟೀಕೆಗಳು ಕೇಳಿ ಬಂದಿದ್ದು,...
ಬೆಂಗಳೂರು

ಮುಖ್ಯಮಂತ್ರಿ ಚಿನ್ನದ ಪದಕ ಗೌರವಕ್ಕೆ ಪಾತ್ರರಾದ ಲೋಕಾಯುಕ್ತ ಇನ್ಸ್‌ಪೆಕ್ಟರ್ ರಾಘವೇಂದ್ರ ಎಮ್ –ಕಹಳೆ ನ್ಯೂಸ್

ಬೆಂಗಳೂರು : ಕರ್ನಾಟಕ ಲೋಕಾಯುಕ್ತದಲ್ಲಿ ಇನ್ಸ್‌ಪೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿರುವ, ಬೈಂದೂರು ಮೂಲದ ರಾಘವೇಂದ್ರ ಎಮ್. ಅವರು 2020ನೇ ಸಾಲಿನ ಮುಖ್ಯಮಂತ್ರಿ ಚಿನ್ನದ ಪದಕ ಗೌರವಕ್ಕೆ ಪಾತ್ರರಾಗಿದ್ದಾರೆ. 1997ರಲ್ಲಿ ಉಡುಪಿ ಜಿಲ್ಲೆಯಲ್ಲಿ ಪೊಲೀಸ್ ಪೇದೆಯಾಗಿ ವೃತ್ತಿ ಜೀವನ ಆರಂಭಿಸಿದ ರಾಘವೇಂದ್ರ ಅವರು ಜಿಲ್ಲೆಯ ಶಂಕರನಾರಾಯಣ, ಉಡುಪಿ ಟೌನ್ ಹಾಗೂ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸಿ 2007ರಲ್ಲಿ ಪಿಎಸ್ಐ ಆಗಿ ಭಡ್ತಿ ಹೊಂದಿದರು. ಬೆಂಗಳೂರಿನ ಯಶವಂತಪುರ, ಆರ್.ಎನ್.ಎಸ್ ಯಾರ್ಡ್, ಸಿಸಿಬಿ,...
ಬೆಂಗಳೂರು

ರಾಜ್ಯದ 1ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಮೇ ತಿಂಗಳಲ್ಲಿ ಬೇಸಗೆ ರಜೆ ಸಾಧ್ಯತೆ-ಕಹಳೆ ನ್ಯೂಸ್

ಬೆಂಗಳೂರು : ಸಾರ್ವಜನಿಕ ಶಿಕ್ಷಣ ಇಲಾಖೆಯು ಕೊರೋನ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಮತ್ತು ಬೇಸಿಗೆ ತಾಪಮಾನ ಹೆಚ್ಚುತ್ತಿರುವ ಕಾರಣ ರಾಜ್ಯದ 1ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಮೇ ತಿಂಗಳಲ್ಲಿ ಬೇಸಗೆ ರಜೆ ನೀಡಲು ಚಿಂತನೆ ನಡೆಸುತ್ತಿದೆ. ಎಪ್ರಿಲ್ ಅಂತ್ಯದೊಳಗೆ 9ನೇ ಪಠ್ಯಕ್ರಮ ಪೂರ್ಣಗೊಳಿಸಿ ಮೇ ತಿಂಗಳಲ್ಲಿ ರಜೆ ಘೋಷಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ. ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ವಿ.ಅನ್ಬುಕುಮಾರ್ ಅವರು ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಬೇಸಗೆ ರಜೆ ಇರುವುದಿಲ್ಲ. ಬದಲಾಗಿ...
ಬೆಂಗಳೂರು

ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಟಾಕ್ಸಿ ಚಾಲಕ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ-ಕಹಳೆ ನ್ಯೂಸ್

ಬೆಂಗಳೂರು : ಟಾಕ್ಸಿ ಚಾಲಕನೋರ್ವ ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಟಾಕ್ಸಿ ಚಾಲಕ ಮೃತಪಟ್ಟಿದ್ದಾನೆ. ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಚಾಲಕರು ಮತ್ತು ಮಾಲೀಕರ ಕ್ಷೇಮಾಭಿವೃದ್ಧಿ ಸಂಘದ ಸದಸ್ಯ ಹಾಗೂ ಚನ್ನಪಟ್ಟಣ ಮೂಲದ 32 ವರ್ಷದ ಯುವಕ ಪ್ರತಾಪ್ ಕುಮಾರ್ ಎಂದು ತಿಳಿದುಬಂದಿದೆ. ಲಾಕ್ ಡೌನ್ ಬಳಿಕ ಬಾಡಿಗೆ ದರ ಕಡಿಮೆಯಾಗಿದ್ದು, ಬಾಡಿಗೆ ಕೂಡ...
ಬೆಂಗಳೂರು

ರಾಜ್ಯದಲ್ಲಿ ಕೊರೊನಾ 2ನೇ ಅಲೆ; ರಾಜ್ಯದ ಒಂಬತ್ತು ಗಡಿ ಜಿಲ್ಲೆಗಳಲ್ಲಿ ಎಚ್ಚರ ಅವಶ್ಯ-ಕಹಳೆ ನ್ಯೂಸ್

ಬೆಂಗಳೂರು : ಆರೋಗ್ಯ ಇಲಾಖೆ ಅಧಿಕಾರಿಗಳಿಂದ ಒಂಬತ್ತು ಗಡಿ ಜಿಲ್ಲೆಗಳಲ್ಲಿ ಬಿಗಿ ನಿಯಂತ್ರಣ ಕ್ರಮ ಕೈಗೊಂಡರೆ ರಾಜ್ಯದಲ್ಲಿ ಕೊರೊನಾ 2ನೇ ಅಲೆ ಹಬ್ಬುವುದನ್ನು ಯಶಸ್ವಿಯಾಗಿ ನಿಯಂತ್ರಿಸಬಹುದು ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಅವರು, ಸೋಂಕು ಹೆಚ್ಚಿರುವ ಜಿಲ್ಲೆಗಳನ್ನು ಕೊರೊನಾ ಎರಡನೇ ಅಲೆ ಪೀಡಿತ ಜಿಲ್ಲೆಗಳು ಎಂದು ಪರಿಗಣಿಸಿ ಅಲ್ಲಿ ಕಠಿಣ ಕ್ರಮ ಜಾರಿ ಮಾಡಬೇಕು ಎಂದು ಪ್ರತಿಪಾದಿಸಿದ್ದಾರೆ. ಈ ತಿಂಗಳ ಅಂಕಿ ಅಂಶಗಳನ್ನು ನೋಡಿದರೆ 9 ಜಿಲ್ಲೆಗಳಲ್ಲಿ ಸೋಂಕು ಹೆಚ್ಚಿದೆ. 11...
ಬೆಂಗಳೂರು

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ; ಯುವತಿಗೆ ವೈದ್ಯಕೀಯ ಪರೀಕ್ಷೆ –ಕಹಳೆ ನ್ಯೂಸ್

ಬೆಂಗಳೂರು : ಮಾರ್ಚ್ 30ರಂದು ಕಳೆದ 29 ದಿನಗಳಿಂದ ರಾಜ್ಯಾದ್ಯಂತ ಚರ್ಚೆಯಲ್ಲಿದ್ದ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಯುವತಿ ಮ್ಯಾಜಿಸ್ಟ್ರೇಟ್ ಮುಂದೆ ಹಾಜರಾಗಿ ಹೇಳಿಕೆ ದಾಖಲಿಸಿದ್ದಾರೆ. ಬಳಿಕ ಎಸ್ಐಟಿ ಅಧಿಕಾರಿಗಳು ಆಡುಗೋಡಿಯ ಟೆಕ್ನಿಕಲ್ ಸೆಂಟರ್‍ಗೆ ಕರೆತಂದು ಹೇಳಿಕೆ ದಾಖಲಿಸಿದ್ದು, ಇನ್ನು ಇಂದು ಬೆಳಗ್ಗೆ 10 ಗಂಟೆಗೆ ಮತ್ತೊಮ್ಮೆ ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿದೆ. ಇಂದೇ ಎಸ್ಐಟಿ ವಿಚಾರಣೆಗೆ ಹಾಜರಾಗುವ ಯುವತಿಗೆ ಪೊಲೀಸರು ವೈದ್ಯಕೀಯ ಪರೀಕ್ಷೆ ಮಾಡಿಸಲಿದ್ದು, ಈ ಮೂಲಕ ಅತ್ಯಾಚಾರ ಆಗಿರೋ...
1 186 187 188 189 190 212
Page 188 of 212