Sunday, June 14, 2026

ಬೆಂಗಳೂರು

ಬೆಂಗಳೂರು

ರಾಜ್ಯದ ಹಲವು ಜಿಲ್ಲೆಗಳಲ್ಲಿ ಡಿಸೆಂಬರ್ 31 ರಿಂದ ಎರಡು ದಿನ ಮಳೆಯಾಗುವ ಸಾಧ್ಯತೆ;ಹವಾಮಾನ ಇಲಾಖೆ ಮುನ್ಸೂಚನೆ-ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಡಿಸೆಂಬರ್ 31 ರಿಂದ ಎರಡು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಹಾಸನ, ಕೊಡಗು, ಮೈಸೂರು, ಮಂಡ್ಯ, ರಾಮನಗರದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಇನ್ನು ರಾಜ್ಯಾದ್ಯಂತ ಚಳಿಯ ವಾತಾವರಣ ಮುಂದುವರೆದಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ಭಾಗಶಃ ಮೋಡ ಕವಿದ...
ಬೆಂಗಳೂರು

ಜನವರಿ 1 ರಿಂದ ಶಾಲೆ ಆರಂಭ ಖಚಿತ; ಸಿಎಂ ಯಡಿಯೂರಪ್ಪ-ಕಹಳೆ ನ್ಯೂಸ್

ಬೆಂಗಳೂರು: ಸಿಎಂ ಯಡಿಯೂರಪ್ಪ ಅವರು ಜನವರಿ 1 ರಿಂದ ಶಾಲೆ-ಕಾಲೇಜು ಪುನರಾರಂಭಿಸುವ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇಲ್ಲ, ಹಾಗೆಯೇ ಖಚಿತವಾಗಿ ಜನವರಿ 1 ರಿಂದ ಶಾಲೆ ಆರಂಭಗೊಳ್ಳುತ್ತದೆ ಎಂದು ಹೇಳಿದ್ದಾರೆ. ರಾಜ್ಯಾದ್ಯಂತ ಜನವರಿ 1 ರಿಂದ ನಿಗದಿಯಂತೆಯೇ ಎಸ್‍ಎಸ್‍ಎಲ್ಸಿ ಹಾಗೂ ದ್ವಿತೀಯ ಪಿಯುಸಿ ತರಗತಿಗಳು ಆರಂಭವಾಗಲಿವೆ. 6 ರಿಂದ 9ನೇ ತರಗತಿಯವರೆಗೆ ವಿದ್ಯಾಗಮ ಯೋಜನೆಯಡಿ ಶಾಲೆ ಆವರಣದಲ್ಲಿ ತರಗತಿಗಳು ನಡೆಯಲಿದ್ದು, ಮಕ್ಕಳು ಸುರಕ್ಷಿತ ವ್ಯವಸ್ಥೆಗಳೊಂದಿಗೆ ಪಾಠ ಕೇಳಲು ಅವಕಾಶ ಕಲ್ಪಿಸಲಾಗಿದೆ...
ಬೆಂಗಳೂರು

ಬೆಂಗಳೂರಿಗೆ ಎಂಟ್ರಿ ಕೊಟ್ಟ ರೂಪಾಂತರಿ ಕೊರೊನಾ ವೈರಸ್; ಮೂವರಿಗೆ ಈ ಸೋಂಕು ದೃಢ-ಕಹಳೆ ನ್ಯೂಸ್

ಬೆಂಗಳೂರು : ತೀವ್ರ ಆತಂಕಕ್ಕೆ ಕಾರಣವಾಗಿರುವ ರೂಪಾಂತರಿ ಕೊರೊನಾ ವೈರಸ್ ಇದೀಗ ಬೆಂಗಳೂರಿಗೆ ಎಂಟ್ರಿ ಕೊಟ್ಟಿದ್ದು, ಬೆಂಗಳೂರಿನ ಮೂವರಿಗೆ ಈ ಸೋಂಕು ದೃಢಪಟ್ಟಿದೆ ಎನ್ನಲಾಗಿದೆ. ಬ್ರಿಟನ್ ನಿಂದ ಭಾರತಕ್ಕೆ ಬಂದ 6 ಮಂದಿಯಲ್ಲಿ ರೂಪಾಂತರಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದ್ದು, ಈ ಪೈಕಿ ಹೈದರಾಬಾದ್ ನ ಇಬ್ಬರು, ಪುಣೆಯ ಒಬ್ಬರು ಮತ್ತು ಬೆಂಗಳೂರಿನ ಮೂವರಿಗೆ ರೂಪಾಂತರಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದ್ದು, ಇಂದು ಸಂಜೆ ಅಧಿಕೃತವಾಗಿ ಘೋಷಣೆ ಮಾಡುವ ಸಾಧ್ಯತೆ...
ಬೆಂಗಳೂರು

ಬ್ರಿಟನ್‍ನಿಂದ ಬೆಂಗಳೂರಿಗೆ ಕೊರೊನಾ ಸೋಂಕು ಹೊತ್ತು ತಂದ ಪ್ರಯಾಣಿಕರು-ಕಹಳೆ ನ್ಯೂಸ್

ಬೆಂಗಳೂರು: ಬ್ರಿಟನ್ ನಿಂದ ಬೆಂಗಳೂರಿಗೆ ಆಗಮಿಸಿದವರಿಂದ ರೂಪಾಂತರ ಕೊರೊನಾ ಆತಂಕ ಆರಂಭವಾಗಿದ್ದು, ಇದೀಗ 26 ಜನರಲ್ಲಿ ಸೋಂಕು ಪತ್ತೆಯಾಗಿರುವುದು ತಿಳಿದುಬಂದಿದೆ. ಬ್ರಿಟನ್ ನಿಂದ ಬೆಂಗಳೂರಿಗೆ ಆಗಮಿಸಿದ್ದ 14 ಜನರಲ್ಲಿ ರೂಪಾಂತರ ಕೊರೊನಾ ಸೋಂಕು ಪತ್ತೆಯಾಗಿದೆ ಎಂದು ಈ ಹಿಂದೆ ತಿಳಿದುಬಂದಿತ್ತು. ಆದರೆ ಇದೀಗ ಆರೋಗ್ಯ ಸಚಿವ ಡಾ.ಸುಧಾಕರ್ ಹೇಳಿರುವ ಪ್ರಕಾರ 26 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಇದು ರೂಪಾಂತರ ಕೊರೊನಾ ವೈರಸ್ ಇರಬಹುದೇ ಎಂಬುದನ್ನು ಪರೀಕ್ಷಿಸಲು ಸ್ಯಾಂಪಲ್ ನ್ನು...
ಬೆಂಗಳೂರು

ಬೆಂಗಳೂರಿನ ಏರ್​​ಪೋರ್ಟ್​​ ರಸ್ತೆಯಲ್ಲಿ ಸರಣಿ ಅಪಘಾತ; 5 ಕಾರುಗಳಲ್ಲಿದ್ದ 9 ಮಂದಿಗೆ ಗಾಯ – ಕಹಳೆ ನ್ಯೂಸ್

ಬೆಳ್ಳಂಬೆಳಗ್ಗೆ ಬೆಂಗಳೂರಿನ ಏರ್​ಪೋರ್ಟ್​ ರಸ್ತೆಯಲ್ಲಿ ಸರಣಿ ಅಪಘಾತ ಸಂಭವಿಸಿದೆ. ಐದು ಕಾರುಗಳ ನಡುವೆ ಈ ಅಪಘಾತ ಸಂಭವಿಸಿದ್ದು, ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಏರ್​ಪೋರ್ಟ್​ ರಸ್ತೆಯಲ್ಲಿ ಬಂದ ಸ್ವಿಫ್ಟ್​​​ ಕಾರು ಡಿವೈಡರ್​ ಹಾರಿ ಏರ್​​ಪೋರ್ಟ್​​ ಕಡೆ ಹೊರಟಿದ್ದ ನಿಸಾನ್​​​ ಕಾರಿಗೆ ಡಿಕ್ಕಿ ಹೊಡೆದಿದೆ. ಜೊತೆಗೆ ಇಂಡಿಕಾ ಅಲ್ಟೋ ಸೇರಿ ಮೂರು ಕಾರುಗಳಿಗೆ ಸ್ವಿಫ್ಟ್ ಕಾರು ಡಿಕ್ಕಿ ಹೊಡೆದಿದೆ. ಸ್ವಿಫ್ಟ್ ಕಾರಿನಲ್ಲಿದ್ದ ನಾಲ್ವರಿಗೆ ಗಾಯಗಳಾಗಿವೆ. ಜೊತೆಗೆ ಇಂಡಿಕಾ ಕಾರು ಚಾಲಕನೂ ಸಹ...
ಬೆಂಗಳೂರು

ಪೊಲೀಸ್ ಇನ್ಸ್ ಪೆಕ್ಟರ್ ಗೆ ಕಸಗುಡಿಸುವ ಶಿಕ್ಷೆ ವಿಧಿಸಿದ ಹೈಕೋರ್ಟ್- ಕಹಳೆ ನ್ಯೂಸ್

ಬೆಂಗಳೂರು: ಮಿಣಜಗಿ ತಂಡದ ಕೂಲಿ‌‌ ಕಾರ್ಮಿಕ ಮಹಿಳೆ ತಾರಾಬಾಯಿ ತನ್ನ ಮಗ ಸುರೇಶ್ 2020 ಅಕ್ಟೋಬರ್ 20 ರಿಂದ ನಾಪತ್ತೆಯಾಗಿದ್ದಾನೆ ಎಂದು ಸ್ಪೇಷಲ್ ಬಜಾರ್ ಪೊಲೀಸ್ ಠಾಣೆಗೆ ದೂರು ನೀಡಲು ಹೋಗಿದ್ದರು. ಆದರೆ ಪೊಲೀಸರು ದೂರನ್ನು ಸ್ವೀಕರಿಸಲಿಲ್ಲ. ಹಾಗೆಯೇ ನಾಪತ್ತೆಯಾಗಿರುವ ತಾರಾಬಾಯಿಯ ಮಗನನ್ನು ಹುಡುಕು ಪ್ರಯತ್ನ ಮಾಡಿರಲಿಲ್ಲ. ಈ ಕಾರಣದಿಂದಾಗಿ ತಾರಾಬಾಯಿ ತನ್ನ ಮಗನನ್ನು ಹುಡುಕಿಸಿ‌ ಕೊಡುವಂತೆ ಹೈಕೋರ್ಟ್ ಗೆ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ...
ಬೆಂಗಳೂರು

ಜನವರಿಯ ಮಧ್ಯಭಾಗದಲ್ಲಿ ಮತ್ತಷ್ಟು ಹೆಚ್ಚಲಿದೆ ಚಳಿ- ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಚಳಿ ದಿನೇ ದಿನೇ ಜಾಸ್ತಿಯಾಗುತ್ತಿದೆ. ಹಾಗೆ ಮುಂದಿನ ತಿಂಗಳು ಮತ್ತಷ್ಟು ಚಳಿ ಹೆಚ್ಚಾಲಿದ್ದು, ಶೀತ ಗಾಳಿ ಬೀಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಇನ್ನೂ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಕೆಲ ದಿನಗಳಿಂದ ಚಳಿ ವಿಪರೀತವಾಗಿದೆ. ಇನ್ನೆರಡು ದಿನ ಚಳಿ‌ ಕಡಿಮೆ ಇದ್ರೂ ನಂತರದಲ್ಲಿ ಮತ್ತೆ ಜಾಸ್ತಿಯಾಗಲಿದೆ. 2016 ರ ನಂತರ ಡಿಸೆಂಬರ್ 11 ರಂದು ‌ಮೊದಲ ಬಾರಿಗೆ ಕಡಿಮೆ ತಾಪಮಾನ ದಾಖಲಾಗಿದೆ. ಬೆಂಗಳೂರಿನಲ್ಲಿ 1,883ರ ಡಿಸೆಂಬರ್...
ಬೆಂಗಳೂರು

‘ದೇಶದಲ್ಲಿ ನಡೆಯುತ್ತಿರುವುದು ರೈತ ಪರ ಮತ್ತು ವಿರೋಧಿಗಳ ನಡುವಿನ ಹೋರಾಟ’; ಮಾಜಿ ಸಿ.ಎಂ ಸಿದ್ದರಾಮಯ್ಯ-ಕಹಳೆ ನ್ಯೂಸ್

ಬೆಂಗಳೂರು : ಇಂದು ರಾಷ್ಟ್ರೀಯ ರೈತ ದಿನಾಚರಣೆಯಾಗಿದ್ದು ಹಲವು ನಾಯಕರು ರೈತರಿಗೆ ಶುಭಾಶಯ ತಿಳಿಸಿದ್ದಾರೆ. ಈ ನಡುವೆ ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಕಳೆದ 28 ದಿನಗಳಿಂದ ರೈತರು ಪ್ರತಿಭಟನೆ ನಡೆಸುತ್ತಲ್ಲಿದ್ದಾರೆ. ಕೇಂದ್ರ ಮತ್ತು ರೈತ ಮುಖಂಡರುಗಳ ನಡುವೆ ಹಲವು ಸುತ್ತಿನ ಮಾತುಕತೆ ನಡೆದಿದ್ದರೂ ಎಲ್ಲವೂ ವಿಫಲವಾಗಿದೆ. ಇನ್ನು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯನವರು ರೈತರಿಗೆ ರಾಷ್ಟ್ರೀಯ ರೈತ ದಿನಾಚರಣೆಯ ಶುಭಾಶಯ ತಿಳಿಸಿದ್ದು , ಹಾಗೆ ''ದೇಶದಲ್ಲಿ...
1 219 220 221 222 223 229
Page 221 of 229