ಕೇಂದ್ರ ಸಚಿವ ಹೆಚ್ಡಿಕೆ ಭೇಟಿಯಾದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ – ಕಹಳೆ ನ್ಯೂಸ್
ಬೆಂಗಳೂರು: ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಂದು (ಜು.10) ಕೇಂದ್ರ ಸಚಿವ, ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದಾರೆ. ಬೆಂಗಳೂರಿನಲ್ಲಿ ಭೇಟಿಯಾದ ಅವರು ರಾಜ್ಯ ರಾಜಕೀಯದ ಪ್ರಚಲಿತ ವಿದ್ಯಮಾನಗಳ ಕುರಿತು ಸಮಗ್ರವಾಗಿ ಚರ್ಚಿಸಿದ್ದಾರೆ. ಇದೇ ವೇಳೆ ರೈತವಿರೋಧಿ, ಜನವಿರೋಧಿ ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಮುಂದಿನ ಹೋರಾಟದ ರೂಪುರೇಷೆಗಳು, ಮುಂಬರುವ ಚುನಾವಣಾ ಸವಾಲುಗಳನ್ನು ಮತ್ತಷ್ಟು ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ ಎರಡೂ ಪಕ್ಷಗಳ ಮೈತ್ರಿಯನ್ನು ಬಲಪಡಿಸಿ, ಒಂದಾಗಿ...







