Saturday, June 13, 2026

ಬೆಂಗಳೂರು

ಬೆಂಗಳೂರುರಾಜ್ಯಸುದ್ದಿ

ರಾಜ್ಯದಲ್ಲೂ ʻSIR’ ಅಭಿಯಾನಕ್ಕೆ ದಿನಾಂಕ ಫಿಕ್ಸ್‌ : ಜೂ.30 ರಿಂದ ಮನೆ ಮನೆಗೆ ಭೇಟಿ -ಕಹಳೆ ನ್ಯೂಸ್

ಬೆಂಗಳೂರು: ಕರ್ನಾಟಕ   ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಎಸ್‌ಐಆರ್‌ಗೆ (SIR) (ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ) ದಿನಾಂಕ ಘೋಷಣೆ ಆಗಿದೆ. ಜೂನ್ 20ರಿಂದ ತರಬೇತಿ ಮತ್ತು ಮುದ್ರಣ ಕಾರ್ಯ ಶುರುವಾಗುತ್ತದೆ. ಜೂ.30 ರಿಂದ ಜು.29 ರ ವರೆಗೆ ಮನೆ ಮನೆಗೆ ಭೇಟಿ ನೀಡಿ ಪರಿಷ್ಕರಣೆ ನಡೆಸಲಾಗುತ್ತದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತರಾದ ಅನ್ಬುಕುಮಾರ್ ತಿಳಿಸಿದರು. ಎಸ್‌ಐಆರ್ ಘೋಷಣೆ ಹಿನ್ನೆಲೆ ಕೆ.ಆರ್ ಸರ್ಕಲ್ ಬಳಿ ಇರುವ ಕೇಂದ್ರ ಚುನಾವಣಾ ಆಯೋಗದ...
ಬೆಂಗಳೂರುರಾಜ್ಯಸುದ್ದಿ

ಬೆಂಗ್ಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆ ಮುನ್ಸೂಚನೆ :ಯೆಲ್ಲೋ ಅಲರ್ಟ್‌ ಘೋಷಣೆ -ಕಹಳೆ ನ್ಯೂಸ್

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇಂದಿನಿಂದ ಮೂರು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿಗೆ ಮೂರು ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಒಳನಾಡು ಕರಾವಳಿ ಪ್ರದೇಶದ ಬಹುತೇಕ ಕಡೆ ಗುಡುಗು ಮಿಂಚು ಸಹಿತ ಜೋರು ಮಳೆಯಯಾಗಲಿದೆ. ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಎಂದು ಇಲಾಖೆ ವರದಿ ಮಾಡಿದೆ. ಯಾದಗಿರಿ, ರಾಯಚೂರು,...
ಬೆಂಗಳೂರುರಾಜ್ಯಸುದ್ದಿ

ಇಂದು ಮಧ್ಯರಾತ್ರಿಯಿಂದ ಖಾಸಗಿ ಬಸ್ ಟಿಕೆಟ್ ದರ ಏರಿಕೆ – ಕಹಳೆ ನ್ಯೂಸ್

ಬೆಂಗಳೂರು: ಪೆಟ್ರೋಲ್, ಡಿಸೇಲ್ ದರ ಏರಿಕೆ ಬೆನ್ನಲ್ಲೇ ಖಾಸಗಿ ಬಸ್ ಟಿಕೆಟ್ ದರ ಹೆಚ್ಚಳ ಮಾಡಿದ್ದು, ಇಂದು ಮಧ್ಯರಾತ್ರಿಯಿಂದಲೇ ಜಾರಿಯಾಗಲಿದೆ. ಈ ಕುರಿತು ಕರ್ನಾಟಕ ರಾಜ್ಯ ಖಾಸಗಿ ಬಸ್ ಮಾಲೀಕರ ಸಂಘ ಮಾಹಿತಿ ನೀಡಿದೆ. 20ರಿಂದ 30% ದರ ಏರಿಕೆ ಮಾಡಲಾಗಿದ್ದು, ಇಂದು ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿದೆ. ಪ್ರತಿದಿನ ಖಾಸಗಿ ಬಸ್ ಮಾಲೀಕರು ಕನಿಷ್ಠ 150 ಲೀಟರ್ ಆಯಿಲ್ ಹಾಕಿಸಿಕೊಳ್ಳಬೇಕು. ನಮಗೆ ಪ್ರತಿ ಟ್ರಿಪ್‌ಗೆ ಹೆಚ್ಚುವರಿಯಾಗಿ 450 ರೂ. ಅಂದರೆ ಹೊರೆ...
ಬೆಂಗಳೂರುರಾಜ್ಯಸುದ್ದಿ

ಹಾರ್ಟ್ ಅಟ್ಯಾಕ್ ಅಲ್ಲ, ಪತ್ನಿಯಿಂದ ಕೊಲೆ ಎಂದ ಸಹೋದರ: ಹೂತಿಟ್ಟ ಶವ ಹೊರತೆಗೆದು ಮರು ತನಿಖೆ -ಕಹಳೆ ನ್ಯೂಸ್

ಬೆಂಗಳೂರು: ನನ್ನ ಸಹೋದರನ ಸಾವಿಗೆ ಆತನ ಪತ್ನಿಯೇ ಕಾರಣವಾಗಿದ್ದು, ಇದು ಹಾರ್ಡ್ ಅಟ್ಯಾಕ್ ಅಲ್ಲ ಕೊಲೆ ಅಂತಾ ಬಂದ ದೂರು ಆಧರಿಸಿ, ಮರು ತನಿಖೆಗೆ ಇಳಿದ ಪೊಲೀಸರು ಬರೋಬ್ಬರಿ 6 ತಿಂಗಳ ಬಳಿಕ ತಹಶೀಲ್ದಾರ್ ಸಮ್ಮುಖದಲ್ಲಿ ಹೂತಿಟ್ಟ ಶವ ಹೊರತೆಗೆದಿದ್ದಾರೆ. ಬೆಂಗಳೂರು ನಗರದ HAL ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆರು ತಿಂಗಳ ಹಿಂದೆ ಹೃದಯಾಘಾತದಿಂದ ಮೃತಪಟ್ಟಿದ್ದ ಇಂತಿಯಾಜ್ ಪಾಷಾ ಶವವನ್ನು ಇಂದು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದೆ. ಸಾವಿನ ಕುರಿತು ಅನುಮಾನ...
ಬೆಂಗಳೂರುರಾಜ್ಯಸುದ್ದಿ

ಜಿಲೆಟಿನ್ ಪತ್ತೆ ಕೇಸ್‌ : 3 ಗಂಟೆ ಎನ್‌ಐಎ ವಿಚಾರಣೆ, ಅಖಾಡಕ್ಕೆ ಇಳಿದ ಕಮಿಷನರ್ -ಕಹಳೆ ನ್ಯೂಸ್

ಬೆಂಗಳೂರು: ಕನಕಪುರ ರಸ್ತೆಯ ಆರ್ಟ್ ಆಫ್ ಲಿವಿಂಗ್ ಆಶ್ರಮದ ಬಳಿ ಜಿಲೆಟಿನ್ ಕಡ್ಡಿಗಳು ಪತ್ತೆಯಾದ ಪ್ರಕರಣ ರಾಜ್ಯದಲ್ಲಿ ತಲ್ಲಣ ಮೂಡಿಸಿದ್ದು, ತನಿಖಾ ತಂಡಗಳು ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಈ ಸ್ಫೋಟಕ ಪ್ರಕರಣದ ಬೆನ್ನತ್ತಿರುವ ಅಧಿಕಾರಿಗಳು ಯಾವುದೇ ಸಣ್ಣ ಸುಳಿವನ್ನೂ ಬಿಡದೆ ತನಿಖೆ ನಡೆಸುತ್ತಿದ್ದಾರೆ. ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಸ್ವತಃ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್  ಅವರು ತನಿಖೆಯಲ್ಲಿ ಭಾಗಿಯಾಗಿದ್ದಾರೆ. ನಿನ್ನೆ ಸಂಜೆ ಆಡುಗೋಡಿಯ ಟೆಕ್ನಿಕಲ್ ಸೆಲ್‌ನಲ್ಲಿ ಸುಮಾರು 2...
ಬೆಂಗಳೂರುಸುದ್ದಿ

ಲಿಂಗಾಯತ ಸಂಪ್ರದಾಯದಂತೆ ನಟ ದಿಲೀಪ್ ರಾಜ್ ಅಂತ್ಯಕ್ರಿಯೆ -ಕಹಳೆ ನ್ಯೂಸ್

ರಾಮನಗರ: ಹೃದಯಾಘಾತದಿಂದ  ನಿಧನರಾದ ನಟ, ನಿರ್ಮಾಪಕ ದಿಲೀಪ್ ರಾಜ್  ಅವರ ಅಂತ್ಯಕ್ರಿಯೆ ಲಿಂಗಾಯತ ಸಂಪ್ರದಾಯದಂತೆ ರಾಮನಗರ  ತಾಲೂಕಿನ ಗುನ್ನೂರು  ಬಳಿಯ ಫಾರ್ಮ್‌ ಹೌಸ್‌ನಲ್ಲಿ ನೆರವೇರಿತು. ಸಮಯ ಸಿಕ್ಕಾಗಲೆಲ್ಲಾ ಇಲ್ಲಿನ ತೋಟದ ಮನೆಗೆ ದಿಲೀಪ್ ರಾಜ್‍ ಬರುತ್ತಿದ್ದರು. ಹಳೇ ಶೈಲಿಯಲ್ಲಿ ತೊಟ್ಟಿ ಮನೆ ನಿರ್ಮಾಣ ಮಾಡಿಕೊಂಡಿದ್ದರು. ಗ್ರಾಮಸ್ಥರ ಜೊತೆಗೂ ಉತ್ತಮ ಒಡನಾಟ ಹೊಂದಿದ್ದರು. ಹೀಗಾಗಿ ಇಲ್ಲೇ ಅವರ ಅಂತ್ಯಕ್ರಿಯೆ ಮಾಡಲಾಗಿದೆ. ಅಂತ್ಯಕ್ರಿಯೆಗೂ ಮುನ್ನ ರೇವಣಸಿದ್ದೇಶ್ವರ ಮಠದ ರಾಜಶೇಖರ ಸ್ವಾಮೀಜಿ ನೇತೃತ್ವದಲ್ಲಿ, ದಿಲೀಪ್...
ಜಿಲ್ಲೆದಕ್ಷಿಣ ಕನ್ನಡಬೆಂಗಳೂರುಸುದ್ದಿ

‘ಮಿಲನ, ಹಿಟ್ಲರ್ ಕಲ್ಯಾಣ’ ಖ್ಯಾತಿಯ ನಟ ದಿಲೀಪ್ ರಾಜ್ ನಿಧನ, -ಕಹಳೆ ನ್ಯೂಸ್

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಮತ್ತೊಂದು ದೊಡ್ಡ ಆಘಾತ ಉಂಟಾಗಿದೆ. ನಟ, ನಿರ್ಮಾಪಕ ದಿಲೀಪ್ ರಾಜ್  ಅವರು ಹೃದಯಾಘಾತದಿಂದ ಇಂದು ನಿಧನರಾದರು. 47 ವಯಸ್ಸಿನ ದಿಲೀಪ್ ರಾಜ್ ಅವರಿಗೆ ಇಂದು ಬುಧವಾರ (ಮೇ 13) ಬೆಳಗಿನ ಜಾವ ಹೃದಯಾಘಾತ ಸಂಭವಿಸಿತ್ತು. ಆಸ್ಪತ್ರೆಗೆ ಕರೆದೊಯ್ಯಲಾಯಿತು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ. ಹಿಟ್ಲರ್ ಕಲ್ಯಾಣ ಸೀರಿಯಲ್ ಮೂಲಕ ದಿಲೀಪ್ ರಾಜ್ ಕಿರುತೆರೆಗೆ ಕಂಬ್ಯಾಕ್ ಮಾಡಿದ್ದರು. ಆ ಪಾತ್ರಕ್ಕೆ ವೀಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿತ್ತು. ಸಿನಿಮಾ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ವಿದ್ಯಾರ್ಥಿಗಳ ಭವಿಷ್ಯದ ಜೊತೆ ಕೇಂದ್ರ ಚೆಲ್ಲಾಟ ಆಡುತ್ತಿದೆ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಗೆ ಹೆಬ್ಬಾಳಕರ್ ಆಕ್ರೋಶ -ಕಹಳೆ ನ್ಯೂಸ್

ಬೆಂಗಳೂರು: ನೀಟ್‌ (NEET) ಪರೀಕ್ಷೆ ಪ್ರಶ್ನೆ ಪತ್ರಿಕೆಯ ಸೋರಿಕೆಯಾಗಿದ್ದು, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಕೇಂದ್ರ ಸರ್ಕಾರದ ಚೆಲ್ಲಾಟ ಆಡುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಆರೋಪಿಸಿದ್ದಾರೆ. ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿರುವ ಅವರು, ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಅತ್ಯಂತ ದುರದೃಷ್ಟಕರ ಮತ್ತು ಖಂಡನೀಯ. ಹಗಲಿರುಳು ಶ್ರಮಿಸಿ ಪರೀಕ್ಷೆ ಬರೆದಿದ್ದ ಲಕ್ಷಾಂತರ...
1 6 7 8 9 10 229
Page 8 of 229