Friday, March 6, 2026

ರಾಷ್ಟ್ರೀಯ

ಬೆಂಗಳೂರುರಾಜ್ಯಸುದ್ದಿ

ಕೆನಡಾದಲ್ಲಿ ಕನ್ನಡಿಗನಿಗೆ ಗುಂಡಿಟ್ಟು ಹತ್ಯೆ : ಸ್ವಗ್ರಾಮದಲ್ಲಿ ಅಂತ್ಯಕ್ರಿಯೆಗೆ ಸಿದ್ಧತೆ – ಕಹಳೆ ನ್ಯೂಸ್

ಬೆಂಗಳೂರು: ಕೆನಡಾದಲ್ಲಿ ಕನ್ನಡಿಗನಿಗೆ ಗುಂಡಿಟ್ಟು ಹತ್ಯೆ ಪ್ರಕರಣ ಸಂಬಂಧ ಕನ್ನಡಿಗ ಚಂದನ್ ಮೃತದೇಹ ಸ್ವಗ್ರಾಮ ನೆಲಮಂಗಲ ತಾಲೂಕಿನ ತ್ಯಾಮಗೊಂಡ್ಲುಗೆ ಆಗಮಿಸಿದ್ದು, ಅಂತ್ಯಕ್ರಿಯೆಗೆ ಸಕಲ ಸಿದ್ಧತೆ ಮಾಡಲಾಗುತ್ತಿದೆ. ಕೊಲೆಯಾಗಿ ಒಂದು ವಾರದ ಬಳಿಕ ಸ್ವಗ್ರಾಮಕ್ಕೆ ಚಂದನ್ ಮೃತದೇಹ ಆಗಮಿಸಿದೆ. ಭಾನುವಾರ ರಾತ್ರಿ 11:49ರ ಸುಮಾರಿಗೆ ಚಂದನ್ ಮೃತದೇಹವನ್ನು ತ್ಯಾಮಗೊಂಡ್ಲುಗೆ ತರಲಾಗಿದ್ದು, ಮನೆ ಮುಂದೆ ಅಂತಿಮ ವಿಧಿವಿಧಾನದ ನಂತರ ದರ್ಶನಕ್ಕೆ ಅನುವು ಮಾಡಿಕೊಡಲಾಗಿದೆ. ತ್ಯಾಮಗೊಂಡ್ಲುವಿನ ಗ್ರಾಮೀಣ ಬ್ಯಾಂಕ್ ಹತ್ತಿರ ಅಂತಿಮ ದರ್ಶನಕ್ಕೆ ಸಿದ್ಧತೆ...
ದೆಹಲಿರಾಜ್ಯಸುದ್ದಿ

ಇಂದಿನಿಂದ AI ಇಂಪ್ಯಾಕ್ಟ್ ಶೃಂಗಸಭೆ : ಭಾರತದಲ್ಲಿ ರಸ್ತೆ ಸುರಕ್ಷತೆಗೆ ಎಐ ಬಳಕೆ ಕುರಿತು ಚರ್ಚೆ-ಕಹಳೆ ನ್ಯೂಸ್

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಇಂದಿನಿಂದ (ಫೆ.16) 5 ದಿನಗಳ ಕಾಲ ಎಐ ಇಂಪ್ಯಾಕ್ಟ್ ಶೃಂಗಸಭೆ ನಡೆಯಲಿದೆ. ವಿಶ್ವದಲ್ಲಿ ಸಂಚಲನ ಸೃಷ್ಟಿಸುತ್ತಿರುವ ಯುಗದಲ್ಲಿ ಐಐ ಕುರಿತ ಮೊದಲ ಶೃಂಗ ಸಮ್ಮೇಳನ ಇದಾಗಿದೆ. ಎಐ ಕುರಿತು ಅರಿವು ಮೂಡಿಸುವ ಜೊತೆಗೆ ಕೃತಕ ಬುದ್ಧಿಮತ್ತೆ (AI) ಕ್ಷೇತ್ರದಲ್ಲಿ ಭಾರತದ ಯೋಜನೆಗಳನ್ನ ಪ್ರಚುರಪಡಿಸುವ ಕಾರ್ಯ ಈ ಸಮ್ಮೇಳನದಲ್ಲಿ ಆಗಲಿದೆ. ವಿಶ್ವದ ಅನೇಕ ದೇಶಗಳಿಂದ ಟೆಕ್ ಮುಖಂಡರು ಮತ್ತು ಕಂಪನಿಗಳು ಈ ಸಮಿಟ್​ನಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ....
ಜಿಲ್ಲೆಮುಂಬೈರಾಜ್ಯಸುದ್ದಿ

ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಪಿಲ್ಲರ್‌ ಕುಸಿದು ದುರಂತ :ಆಟೋ, ಕಾರು ಅಪ್ಪಚ್ಚಿ -ಕಹಳೆ ನ್ಯೂಸ್

ಮುಂಬೈ: ಮುಲುಂಡ್‌ ಪಶ್ಚಿಮ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಪಿಲ್ಲರ್‌ನ ಒಂದು ಭಾಗ ಕುಸಿದು ಬಿದ್ದ ಘಟನೆ ನಡೆದಿದೆ. ಅದೃಷ್ಟವಶಾತ್‌ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ವರದಿಗಳು ತಿಳಿಸಿವೆ. ಶನಿವಾರ (ಇಂದು) ಮಧ್ಯಾಹ್ನ ಮುಲುಂಡ್‌ ಪ್ರದೇಶದ ಜಾನ್ಸನ್ & ಜಾನ್ಸನ್ ಕಂಪನಿಯ ಬಳಿ ಘಟನೆ ನಡೆದಿದೆ. ಎಲ್‌ಬಿಎಸ್ ರಸ್ತೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಕಂಬದ ಸಿಮೆಂಟ್ ಭಾಗವು ಏಕಾಏಕಿ ಕುಸಿದು ಕೆಳಗೆ ಹಾದುಹೋಗುತ್ತಿದ್ದ ಆಟೋರೀಕ್ಷಾ ಹಾಗೂ ಕಾರಿನ ಮೇಲೆ ಬಿದ್ದಿದೆ....
ಜಿಲ್ಲೆಬೆಂಗಳೂರುಸುದ್ದಿ

ಫೆ.19ಕ್ಕೆ ರಾಜ್ಯ ಬಿಜೆಪಿ ವಿಶೇಷ ಕಾರ್ಯಕಾರಿಣಿ ಸಭೆ : ಚುನಾವಣಾ ತಯಾರಿ, ಸರ್ಕಾರದ ವಿರುದ್ಧ ಹೋರಾಟದ ಬಗ್ಗೆ ಚರ್ಚೆ: ಬಿ.ವೈ.ವಿಜಯೇಂದ್ರ – ಕಹಳೆ ನ್ಯೂಸ್

ಬೆಂಗಳೂರು: ಬಿಜೆಪಿಯ ವಿಶೇಷ ರಾಜ್ಯ ಕಾರ್ಯಕಾರಿಣಿಯನ್ನು ಬೆಂಗಳೂರಿನ ಅರಮನೆ ಮೈದಾನದ `ಗಾಯತ್ರಿ ಗ್ರ‍್ಯಾಂಡ್’ನಲ್ಲಿ ಇದೇ 19ರಂದು ಆಯೋಜಿಸಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮುಂದಿನ ಕೆಲವು ಸಂಘಟನಾತ್ಮಕ ವಿಚಾರಗಳನ್ನು ಚರ್ಚಿಸಲಿದ್ದೇವೆ. ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆಗಳು, ಜಿಬಿಎ ಚುನಾವಣೆ, ಉಪ ಚುನಾವಣೆಗಳು, ಎಂಎಲ್‌ಸಿ ಚುನಾವಣೆಗಳು, ರಾಜ್ಯ ಸರ್ಕಾರದ ವೈಫಲ್ಯಗಳು, ಕೇಂದ್ರ ಸರ್ಕಾರದ ಸಾಧನೆ ಇವೆಲ್ಲವನ್ನೂ ಸಮಗ್ರವಾಗಿ ಚರ್ಚಿಸಲಿದ್ದೇವೆ...
ಧಾರವಾಡಬೆಂಗಳೂರುರಾಜ್ಯಶಿವಮೊಗ್ಗಸುದ್ದಿ

ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ : ಬೆಂಗಳೂರು ಸೇರಿ 4 ಜಿಲ್ಲೆಗಳಲ್ಲಿ ದಾಳಿ -ಕಹಳೆ ನ್ಯೂಸ್

ಬೆಂಗಳೂರು/ಮೈಸೂರು/ದಾವಣಗೆರೆ: ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ  ಬಿಸಿ ಮುಟ್ಟಿಸಿದೆ. ಬೆಂಗಳೂರು, ಮೈಸೂರು , ದಾವಣಗೆರೆ ಜಿಲ್ಲೆಗಳಲ್ಲಿ ಹಲವು ಕಡೆ ಏಕಕಾಲಕ್ಕೆ ದಾಳಿ ನಡೆದಿದೆ. PWD ಚೀಫ್‌ ಇಂಜಿನಿಯರ್‌ ಪುರುಷೋತ್ತಮ ದಾಸ್‌ ಎಂಬುವವರಿಗೆ ಸೇರಿದ 11 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ  ನಡೆಸಿದ್ದಾರೆ. ಮೈಸೂರಿನಲ್ಲಿ 5 ಕಡೆ, ಬೆಂಗಳೂರಿನಲ್ಲಿ 6 ಕಡೆ ದಾಳಿ ನಡೆಸಿದ್ದು, ಮಹತ್ವದ ದಾಖಲೆಗಳ ಹುಡುಕಾಟ ನಡೆಸಿದ್ದಾರೆ. ದಾವಣಗೆರೆ, ಶಿವಮೊಗ್ಗದಲ್ಲೂ ದಾಳಿ ಬೆಸ್ಕಾಂ ಇಂಜಿನಿಯರ್‌ ಆರ್.ಹೆಚ್ ಅರ್ಜುನ್‌ ಅವರ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಬೆಂಗಳೂರು : ಸ್ಕೂಟರ್‌ಗೆ ಶಾಲಾ ಬಸ್ ಡಿಕ್ಕಿಹೊಡೆದು ಇಬ್ಬರು ಮಕ್ಕಳ ದಾರುಣ ಸಾವು – ಕಹಳೆ ನ್ಯೂಸ್

ಬೆಂಗಳೂರು : ಅತಿವೇಗ ಹಾಗೂ ಅಜಾಗರೂಕತೆಯಿಂದ ಮುನ್ನುಗ್ಗಿದ ಶಾಲಾ ಬಸ್ಸೊಂದು ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಎರಡು ಪುಟ್ಟ ಮಕ್ಕಳು ಮೃತಪಟ್ಟಿರುವ ದಾರುಣ ಘಟನೆ ಹೆಣ್ಣೂರು ಸಂಚಾರಿ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿಂದು ಬೆಳಗ್ಗೆ ನಡೆದಿದೆ. ರಾಯಚೂರು ಮೂಲದ ನಾಗನಗೌಡ ಮಾಲಿಪಾಟೀಲ್‌ ಎಂಬುವವರು ಸಿಎಆರ್‌ ಹೆಡ್‌ಕಾನ್‌್ಸಟೆಬಲ್‌ ಆಗಿದ್ದು, ಅವರ ಮಗಳು ವರ್ಷಾ (2) ಹಾಗೂ ಅಣ್ಣನ ಮಗಳು ಭಾನು (4) ಮೃತಪಟ್ಟ ಕಂದಮಗಳು. ಇಂದು ಬೆಳಗ್ಗೆ ಹಾಲು ತರಲು ನಾಗನಗೌಡ ಅವರು...
ಬೆಂಗಳೂರುರಾಜ್ಯಸುದ್ದಿ

ಕಾರಿನ EMI ಕಟ್ಟಲು ದೊಡ್ಡಮ್ಮ ಕೆಲಸ ಮಾಡ್ತಿದ್ದ ಮನೆಯಲ್ಲೇ ಕಳ್ಳತನ : ಆರೋಪಿ ಅರೆಸ್ಟ್- 241 ಗ್ರಾಂ ಚಿನ್ನ, 2.8 ಕೆ.ಜಿ ಬೆಳ್ಳಿ, 1.30 ಲಕ್ಷ ನಗದು ವಶಕ್ಕೆ-ಕಹಳೆ ನ್ಯೂಸ್

ಬೆಂಗಳೂರು: ಕಾರಿನ ಇಎಂಐ ಕಟ್ಟಲು ಹಣವಿಲ್ಲದೇ ದೊಡ್ಡಮ್ಮ ಕೆಲಸ ಮಾಡುತ್ತಿದ್ದ ಮನೆಯಲ್ಲೇ ಯುವಕನೋರ್ವ ಕಳ್ಳತನ ಮಾಡಿ ಪೊಲೀಸರ ಅತಿಥಿಯಾದ ಘಟನೆ ಬಸವನಗುಡಿಯಲ್ಲಿ ನಡೆದಿದೆ. ಉತ್ತರಹಳ್ಳಿ ನಿವಾಸಿ ಶರತ್ ಕುಮಾರ್ (31) ಬಂಧಿತ ಆರೋಪಿ. ಬಸವನಗುಡಿಯ ತ್ಯಾಗರಾಜನಗರದ ಮನೆಯೊಂದರಲ್ಲಿ ಆರೋಪಿ ದೊಡ್ಡಮ್ಮ 25 ವರ್ಷಗಳಿಂದ ಮನೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಆರೋಪಿಯ ದೊಡ್ಡಮ್ಮನಿಗೆ ಮನೆ ಮಾಲೀಕರು ಅದೇ ಮನೆಯಲ್ಲಿ ಉಳಿಯಲು ಅವಕಾಶ ಕೊಟ್ಟಿದ್ದರು. ಮನೆ ಮಾಲೀಕರು ಹೊರಗೆ ತೆರಳಿದ್ದ ವೇಳೆ ದೊಡ್ಡಮ್ಮನ ಗಮನಕ್ಕೆ...
ಬೆಂಗಳೂರುರಾಜ್ಯಸುದ್ದಿ

ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಚಿನ್ನ, ಹಣದ ಬ್ಯಾಗ್‌ ನಾಪತ್ತೆ ಕೇಸ್‌ : ತನಿಖೆಗೆ ಪರಂ ಆದೇಶ -ಕಹಳೆ ನ್ಯೂಸ್

ಬೆಂಗಳೂರು: ವಿಧಾನಸೌಧದಲ್ಲಿ ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಚಿನ್ನ, ಹಣದ ಬ್ಯಾಗ್‌ ನಾಪತ್ತೆ ಆರೋಪ ಪ್ರಕರಣದ ಬಗ್ಗೆ ಖುದ್ದು ಗೃಹ ಸಚಿವ ಪರಮೇಶ್ವರ್ ಆತಂಕ ವ್ಯಕ್ತಪಡಿಸಿದ್ರು.   ಬೆಂಗಳೂರಿನಲ್ಲಿ ಮಾತಾಡಿದ ಅವರು, ಈ ಪ್ರಕರಣದಲ್ಲಿ ಜಂಟಿ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ತನಿಖೆಗೆ ಆದೇಶ ಮಾಡಲಾಗಿದೆ ಎಂದು ತಿಳಿಸಿದರು. ವಿಧಾನಸೌಧದ ಗೇಟ್ ನಿಂದ ಆ ಬ್ಯಾಗ್ ಹೇಗೆ ಒಳಗೆ ಹೋಯ್ತು? ಯಾವ ಗೇಟ್ ನಿಂದ ಒಳಗೆ ಹೋಯ್ತು ಅನ್ನೋದು ಮುಖ್ಯ. ಒಬ್ಬ...
1 2 3 4 317
Page 2 of 317