Monday, September 14, 2026

ರಾಷ್ಟ್ರೀಯ

ಬೆಂಗಳೂರುರಾಜ್ಯಸುದ್ದಿ

ಇಂದು ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್ ಮೀಟಿಂಗ್ : ಆಪ್ತರಿಗೆ ಔತಣಕೂಟದ ಜೊತೆ ವಿದಾಯ – ಕಹಳೆ ನ್ಯೂಸ್

ಬೆಂಗಳೂರು: ಅಹಿಂದ ನಾಯಕ ಸಿದ್ದರಾಮಯ್ಯ ರಾಜಕೀಯ ಬದುಕಿನ ಮಹತ್ವದ ಅಧ್ಯಾಯಕ್ಕೆ ತೆರೆ ಬೀಳುತ್ತಿದೆ. ಕಾಂಗ್ರೆಸ್‌ನಲ್ಲಿ (Congress) ಎರಡನೇ ಅವಧಿಗೆ ಮುಖ್ಯಮಂತ್ರಿ ಆಗಿದ್ದ ಸಿದ್ದರಾಮಯ್ಯ ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡ್ತಿದ್ದಾರೆ. ರಾಜ್ಯದ ಒಬ್ಬ ಟಾಪ್ ಮಾಸ್ ಲೀಡರ್ ಆಗಿದ್ದ ಸಿದ್ದರಾಮಯ್ಯ ಅಧಿಕಾರ ರಾಜಕೀಯ ಈ ನಿರ್ಗಮನದೊಂದಿಗೆ ಕೊನೆಗೊಳ್ತಿದೆ. ಕಳೆದೆರಡು ದಿನಗಳಿಂದ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಬಿರುಸಿನ ವಿದ್ಯಮಾನಗಳು ನಿರ್ಣಾಯಕ ಘಟ್ಟಕ್ಕೆ ಬಂದು ನಿಂತಿವೆ. ಮೊದಲೇ ನಿರ್ಣಯಿಸಿದಂತೆ ಇಂದು ಸಿದ್ದರಾಮಯ್ಯ ತಮ್ಮ ಸಿಎಂ...
ದೆಹಲಿರಾಜ್ಯಸುದ್ದಿ

8 ಗಂಟೆ ಆಗಸದಲ್ಲೇ ಹಾರಾಟ : ಸ್ಯಾನ್ ಫ್ರಾನ್ಸಿಸ್ಕೋಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ದೆಹಲಿಗೆ ವಾಪಸ್ – ಕಹಳೆ ನ್ಯೂಸ್

ನವದೆಹಲಿ: 230 ಪ್ರಯಾಣಿಕರನ್ನು ಹೊತ್ತು ಸ್ಯಾನ್ ಫ್ರಾನ್ಸಿಸ್ಕೋಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ತಾಂತ್ರಿಕ ದೋಷದಿಂದಾಗಿ  8 ಗಂಟೆಗಳ ಕಾಲ ಆಗಸದಲ್ಲೇ ಹಾರಾಟ ನಡೆಸಿ ದೆಹಲಿಗೆ  ವಾಪಸ್ ಆಗಿದೆ. ಮೇ 27ರಂದು ದೆಹಲಿಯಿಂದ ಸ್ಯಾನ್ ಫ್ರಾನ್ಸಿಸ್ಕೋಗೆ  ಹೊರಟಿದ್ದ ಎಐ173 ವಿಮಾನವು ಮೂರು ಗಂಟೆಗಳ ಹಾರಾಟ ನಡೆಸಿ ಬಳಿಕ ತಾಂತ್ರಿಕ ದೋಷ ಹಿನ್ನೆಲೆ ಚೀನಾ ವಾಯುಪ್ರದೇಶದಿಂದ ಯೂಟರ್ನ್ ತೆಗೆದುಕೊಂಡು ದೆಹಲಿಗೆ ಹಿಂತಿರುಗಿದೆ. ಸದ್ಯ ವಿಮಾನ ದೆಹಲಿಯಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಆಗಿದ್ದು, ತಾಂತ್ರಿಕ...
ಬೆಂಗಳೂರುರಾಜ್ಯಸುದ್ದಿ

ಆಪ್ತರ ಜೊತೆ ಇಂದು ಸಿದ್ದರಾಮಯ್ಯ ಸಭೆ! -ಕಹಳೆ ನ್ಯೂಸ್

ಬೆಂಗಳೂರು: ದೆಹಲಿಯಿಂದ ರಾಜಧಾನಿಗೆ ಮರಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಡೆ ಹಾಗೂ ರಾಜ್ಯ ರಾಜಕೀಯ ವಲಯದಲ್ಲಿನ ಬೆಳವಣಿಗೆಗಳು ತೀವ್ರ ಕುತೂಹಲ ಕೆರಳಿಸಿವೆ. ದೆಹಲಿಯಿಂದ ವಿಶೇಷ ವಿಮಾನದಲ್ಲಿ ವಾಪಸ್ ಆದ ಬೆನ್ನಲ್ಲೇ ಮುಖ್ಯಮಂತ್ರಿಗಳ ಸರ್ಕಾರಿ ನಿವಾಸ ‘ಕಾವೇರಿ’ಯಲ್ಲಿ ತಡರಾತ್ರಿ ಸಣ್ಣ ಸಭೆ ನಡೆದಿದೆ. ಮಧ್ಯರಾತ್ರಿ 12 ಗಂಟೆಗೆ ಹೆಚ್‌ಎಎಲ್ ವಿಮಾನ ನಿಲ್ದಾಣಕ್ಕೆ  ಆಗಮಿಸಿದ ಸಿದ್ದರಾಮಯ್ಯನವರನ್ನು ಸಚಿವರಾದ ಕೃಷ್ಣಬೈರೇಗೌಡ ಹಾಗೂ ದಿನೇಶ್ ಗುಂಡೂರಾವ್ ಅವರು ಬರಮಾಡಿಕೊಂಡರು. ನಂತರ ಮುಖ್ಯಮಂತ್ರಿಗಳ ಕಾರಿನಲ್ಲೇ ಸಚಿವ ಜಮೀರ್...
ದೆಹಲಿಸುದ್ದಿ

ಎರಡೇ ವಾರದಲ್ಲಿ 4ನೇ ಬಾರಿಗೆ ತೈಲ ಶಾಕ್‌ : ಮತ್ತೆ ಪೆಟ್ರೋಲ್‌, ಡೀಸೆಲ್‌ ದರ ತಲಾ 2 ರೂ. ಏರಿಕೆ-ಕಹಳೆ ನ್ಯೂಸ್

ನವದೆಹಲಿ: ಕೇಂದ್ರ ಸರ್ಕಾರ ಬೆಳ್ಳಂಬೆಳಗ್ಗೆ ದೇಶದ ಗ್ರಾಹಕರಿಗೆ ʻತೈಲ ಶಾಕ್ʼ‌ ಕೊಟ್ಟಿದೆ.  ಪೆಟ್ರೋಲ್‌  ಮೇಲಿನ ಬೆಲೆ ಪ್ರತಿ ಲೀಟರ್‌ಗೆ 2.61 ರೂ. ಮತ್ತು ಡೀಸೆಲ್‌ ಬೆಲೆ  ಪ್ರತಿ ಲೀಟರ್‌ಗೆ 2.71 ರೂ. ಏರಿಕೆ ಮಾಡಿದೆ. ಇದು ಕಳೆದ 10 ದಿನಗಳಲ್ಲಿ 4ನೇ ಬಾರಿಗೆ ಮಾಡಿದ ದರ ಏರಿಕೆಯಾಗಿದೆ. ಬೆಂಗಳೂರು ನಗರದಲ್ಲಿ  ಪೆಟ್ರೋಲ್ ಬೆಲೆ ಈಗ ಲೀಟರ್‌ಗೆ 110.89 ರೂ. ಹಾಗೂ ಡೀಸೆಲ್ ಬೆಲೆ ಲೀಟರ್‌ಗೆ 98.80 ರೂ.ಗೆ ತಲುಪಿದೆ. ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ...
ಬೆಂಗಳೂರುರಾಜ್ಯಸುದ್ದಿ

ವೃದ್ಧೆಗೆ ಡಿಜಿಟಲ್ ಅರೆಸ್ಟ್ : ಬರೋಬ್ಬರಿ 24 ಕೋಟಿ ರೂ. ದೋಚಿದ ಸೈಬರ್ ವಂಚಕರು -ಕಹಳೆ ನ್ಯೂಸ್

ಬೆಂಗಳೂರು: ಮನಿ ಲಾಂಡರಿಂಗ್  ಹೆಸರಲ್ಲಿ ಡಿಜಿಟಲ್ ಅರೆಸ್ಟ್ ಮಾಡಿ ಸೈಬರ್ ವಂಚಕರು ವೃದ್ಧೆ ಬಳಿ 24 ಕೋಟಿ ರೂ. ದೋಚಿರುವ ಘಟನೆ ಬೆಂಗಳೂರಿನಲ್ಲಿ  ನಡೆದಿದೆ. ಶಿವಾಜಿನಗರ ನಿವಾಸಿಯಾಗಿರುವ ವೃದ್ಧೆ ಲಕ್ಷ್ಮೀ ರಾಮಮೂರ್ತಿಗೆ ಡಿಜಿಟಲ್ ಅರೆಸ್ಟ್ ಮಾಡಲಾಗಿದೆ. ಆಸ್ತಿ ಮಾರಿದ್ದರಿಂದ ವೃದ್ಧೆಗೆ ಕೋಟ್ಯಂತರ ರೂ. ಹಣ ಬಂದಿತ್ತು. ಇವರ ಬ್ಯಾಂಕ್ ಟ್ರಾನ್ಸಾಕ್ಷನ್ ಬಗ್ಗೆ ಮಾಹಿತಿ ತಿಳಿದ ಸೈಬರ್ ವಂಚಕರು ಕಳೆದ ಜನವರಿಯಿಂದ ಮೇವರೆಗೆ ಮನಿ ಲಾಂಡರಿಂಗ್ ಹೆಸರಲ್ಲಿ ಡಿಜಿಟಲ್ ಅರೆಸ್ಟ್ ಮಾಡಿದ್ದಾರೆ....
ಬೆಂಗಳೂರುರಾಜ್ಯಸುದ್ದಿ

ವರದಕ್ಷಿಣೆ ಕಿರುಕುಳ ಆರೋಪ : ನೇಣು ಬಿಗಿದು ಕಾನ್‌ಸ್ಟೇಬಲ್ ಪತ್ನಿ ಆತ್ಮಹತ್ಯೆ – ಕಹಳೆ ನ್ಯೂಸ್

ಬೆಂಗಳೂರು: ಪೊಲೀಸ್ ಕ್ವಾರ್ಟಸ್‌ನಲ್ಲೇ ನೇಣುಬಿಗಿದುಕೊಂಡು ಕಾನ್‌ಸ್ಪೇಬಲ್ ಪತ್ನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೆ.ಆರ್.ಪುರ (KR Pura) ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದ್ದು, ವರದಕ್ಷಿಣೆ ಕಿರುಕುಳ ಆರೋಪ ಕೇಳಿಬಂದಿದೆ. ಲಕ್ಷ್ಮೀ ಪ್ರಿಯಾ (26) ಆತ್ಮಹತ್ಯೆಗೆ ಶರಣಾದ ಮಹಿಳೆ. ಮೃತಳ ತಂದೆ ಕುಮಾರ್ ಆರಾಧ್ಯ ಅವರು ನೀಡಿದ ದೂರಿನ ಮೇರೆಗೆ ಹೆಚ್‌ಎಎಲ್ ಠಾಣೆಯ  ಕಾನ್‌ಸ್ಟೇಬಲ್ ರಾಜೇಶ್ ಹಾಗೂ ತಂದೆ-ತಾಯಿ ಸೇರಿದಂತೆ ನಾಲ್ವರ ವಿರುದ್ಧ ವರದಕ್ಷಿಣೆ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ ಎಂದು ಪೊಲೀಸರು...
ಬೆಂಗಳೂರುರಾಜ್ಯಸುದ್ದಿ

ಇಂದು 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ -ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದ ಅನೇಕ ಕಡೆ ಮುಂಗಾರು ಪೂರ್ವ ಮಳೆಯಾಗುತ್ತಿದ್ದು (Rain), 17 ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಯಾದಗಿರಿ, ರಾಯಚೂರು, ಬಾಗಲಕೋಟೆ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ರಾಮನಗರ, ಚಾಮರಾಜನಗರ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮೇ 24ರಂದು ಗುಡುಗು, ಮಿಂಚು, ಗಾಳಿ ಸಹಿತ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳ...
ಬೆಂಗಳೂರುರಾಜ್ಯಸುದ್ದಿ

ಬೆಂಗಳೂರಿಗೆ ಬಿಜೆಪಿ ಅಧ್ಯಕ್ಷ ನಿತಿನ್ ನಬಿನ್ ಚೊಚ್ಚಲ ಭೇಟಿ :ಇಂದು ನಾಯಕರೊಂದಿಗೆ ಸಭೆ -ಕಹಳೆ ನ್ಯೂಸ್

ಬೆಂಗಳೂರು: ಪಶ್ಚಿಮ ಬಂಗಾಳದಲ್ಲಿ ಜಯಭೇರಿ ಬಾರಿಸಿದ ಬೆನ್ನಲ್ಲೇ, ಭಾರತೀಯ ಜನತಾ ಪಕ್ಷದ ಹೈಕಮಾಂಡ್ ಈಗ ದಕ್ಷಿಣ ಭಾರತದ ಹೆಬ್ಬಾಗಿಲಾದ ಕರ್ನಾಟಕದತ್ತ ತನ್ನ ಸಂಪೂರ್ಣ ಚಿತ್ತ ನೆಟ್ಟಿದೆ. ಮುಂಬರುವ ವಿಧಾನಸಭಾ ಚುನಾವಣೆಗೆ ಪಕ್ಷವನ್ನು ಈಗಿನಿಂದಲೇ ಸನ್ನದ್ಧಗೊಳಿಸಲು ಖುದ್ದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ನಿತಿನ್ ನಬಿನ್ ಅವರು ಶನಿವಾರ ತಡರಾತ್ರಿ ಸಿಲಿಕಾನ್ ಸಿಟಿ ಬೆಂಗಳೂರಿಗೆ ಚೊಚ್ಚಲ ಭೇಟಿ ನೀಡಿದ್ದಾರೆ. ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ನಿತಿನ್ ನಬಿನ್ ಅವರನ್ನು ರಾಜ್ಯ...
1 24 25 26 27 28 364
Page 26 of 364