Saturday, March 14, 2026

ರಾಷ್ಟ್ರೀಯ

ಬೆಂಗಳೂರುರಾಜಕೀಯರಾಜ್ಯಸುದ್ದಿ

ಹರ್ಷ ಹತ್ಯೆ ಕೇಸ್’ನಲ್ಲಿ ಬೆಂಗಳೂರಿನಲ್ಲಿ ಮೂವರು ಜಿಹಾದಿಗಳು ಪೊಲೀಸರ ವಶಕ್ಕೆ – ಕಹಳೆ ನ್ಯೂಸ್

ಬೆಂಗಳೂರು: ಈಗಾಗಲೇ ಶಿವಮೊಗ್ಗದ ಭಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದಲ್ಲಿ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬೀರೂರು ಬಳಿಯ ಬಳ್ಳಾರಿ ಕ್ಯಾಂಪ್ ನಲ್ಲಿ ಓರ್ಪ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿತ್ತು. ಈ ಬಳಿಕ ಬೆಂಗಳೂರಿನಲ್ಲಿ ಇದೇ ಪ್ರಕರಣದಲ್ಲಿ ಪೊಲೀಸರು ಮೂವರನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ. ಚಿಕ್ಕಮಗಳೂರು ಜಿಲ್ಲೆಯ ಬೀರೂರಿನ ಸಮೀಪದಲ್ಲಿ ಬಳ್ಳಾರಿ ಕ್ಯಾಂಪ್ ನಲ್ಲಿ ಓರ್ವ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿರೋದಾಗಿ ತಿಳಿದು ಬಂದಿದೆ. ಅಲ್ಲದೇ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಇಂದಿನಿಂದ ಪಿಯು ಪ್ರಾಯೋಗಿಕ ಪರೀಕ್ಷೆ ಆರಂಭ ; ʻಹಿಜಾಬ್ʼ ವಿವಾದದಿಂದ ಪರೀಕ್ಷೆಗೆ ಗೈರಾದರೆ ಮತ್ತೆ ಚಾನ್ಸ್‌ ಇಲ್ಲ! – ಕಹಳೆ ನ್ಯೂಸ್

ಬೆಂಗಳೂರು: ಹಿಜಾಬ್ ವಿವಾದದ (Hijab Row) ನಡುವೆಯೇ ದ್ವಿತೀಯ ಪಿಯುಸಿ (Second PUC) ಪ್ರಾಯೋಗಿಕ ಪರೀಕ್ಷೆ ಇಂದಿನಿಂದ ನಡೆಯಲಿದೆ.   ಪಿಯು ಬೋರ್ಡ್​ ಈಗಾಗಲೇ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟಿಸಿದ್ದು, ಇಂದಿನಿಂದ ಪಿಯುಸಿ ಪ್ರಾಯೋಗಿಕ ಪರೀಕ್ಷೆ (Preparatory Exams) ಆರಂಭವಾಗಲಿದೆ. ಪದವಿ ಪೂರ್ವ ಶಿಕ್ಷಣ ಇಲಾಖೆ ವೇಳಾಪಟ್ಟಿಯಂತೆಯೇ ಪರೀಕ್ಷೆ ನಡೆಯಲಿದ್ದು, ಹಿಜಾಬ್ ವಿವಾದದಿಂದ ಪರೀಕ್ಷೆಗೆ ಗೈರಾದರೆ ಮತ್ತೆ ಪರೀಕ್ಷೆಗೆ ಅವಕಾಶ ಇಲ್ಲ ಎಂದು ತಿಳಿಸಲಾಗಿದೆ. ಇದರಿಂದಾಗಿ ವಿದ್ಯಾರ್ಥಿನಿಯರಿಗೆ ಸಂಕಷ್ಟ ಎದುರಾಗಲಿದೆ. ಮತ್ತೊಮ್ಮೆ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಬಜರಂಗದ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ ; ‘ಡಿಕೆಶಿ ಪ್ರಚೋದನಕಾರಿ ಹೇಳಿಕೆಯ ಪ್ರೇರಣೆಯಿಂದ ಮುಸ್ಲಿಂ ಗೂಂಡಾಗಳು ಕೊಲೆ ಮಾಡಿದ್ದಾರೆ’ ಸಚಿವ ಕೆ ಎಸ್​ ಈಶ್ವರಪ್ಪ ಗಂಭೀರ ಆರೋಪ – ಕಹಳೆ ನ್ಯೂಸ್

ಬೆಂಗಳೂರು, ಫೆ 21 : ಡಿಕೆಶಿ ಪ್ರಚೋದನಕಾರಿ ಹೇಳಿಕೆಯ ಪ್ರೇರಣೆ ಪಡೇದು ಮುಸ್ಲಿಂ ಗೂಂಡಾಗಳು ಶಿವಮೊಗ್ಗದಲ್ಲಿ ಭಾನುವಾರ ರಾತ್ರಿ ಯುವಕನ ಕೊಲೆ ಮಾಡಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್​ ಈಶ್ವರಪ್ಪ ಬೆಂಗಳೂರಿನಲ್ಲಿ ಗಂಭೀರ ಆರೋಪ ಮಾಡಿದ್ದಾರೆ. ಬಜರಂಗದ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ವಿಚಾರವಾಗಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ನಿನ್ನೆ ಮುಸಲ್ಮಾನ ಗೂಂಡಾಗಳು ನಮ್ಮ ಸಜ್ಜನ ಕಾರ್ಯಕರ್ತನನ್ನು ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಇನ್ನು ಶಿವಮೊಗ್ಗದಲ್ಲಿ ಇದುವರೆಗೂ ಮುಸಲ್ಮಾನ ಗೂಂಡಾಗಳು...
ಬೆಂಗಳೂರುಸಿನಿಮಾಸುದ್ದಿ

ಸೆಲ್ಫಿಗೆ ಬೇಡಿಕೆ ಇಟ್ಟ ಅಭಿಮಾನಿ ಮೇಲೆ ಹಲ್ಲೆ ಆರೋಪ : ನಟ ಧನ್ವೀರ್ ವಿರುದ್ಧ ಎಫ್ ಐ ಆರ್ ದಾಖಲು – ಕಹಳೆ ನ್ಯೂಸ್

ಬೆಂಗಳೂರು: ಸೆಲ್ಫಿಗೆ ಬೇಡಿಕೆ ಇಟ್ಟ ಅಭಿಮಾನಿಗೆ ನಟ ಧನ್ವೀರ್ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಎಸ್. ಸಿ .ರಸ್ತೆಯಲ್ಲಿನ ಅನುಪಮಾ ಥಿಯೇಟರ್ ನಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ನಟನ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಬೈ ಟೂ ಲವ್ ಸಿನಿಮಾ ರಿಲೀಸ್ ಸಂಬಂಧ ಧನ್ವೀರ್ ಅನುಪಮಾ ಥಿಯೇಟರ್‍ಗೆ ತೆರಳಿದ್ದ ವೇಳೆ ಅಭಿಮಾನಿ ಚಂದ್ರಶೇಖರ್ ಎಂಬವರು ಧನ್ವೀರ್ ಜೊತೆಗೆ ಸೆಲ್ಫಿ ತೆಗೆದುಕೊಳ್ಳಲು ಬೇಡಿಕೆ ಇಟ್ಟಿದ್ದಾರೆ. ಆದರೆ ಧನ್ವೀರ್ ಇದನ್ನು ನಿರಾಕರಿಸಿದ್ದಾರೆನ್ನಲಾಗಿದೆ....
ಬೆಂಗಳೂರುಸುದ್ದಿ

ಕನ್ನಡ ಚಿತ್ರರಂಗದ ಹಿರಿಯ ನಟ ರಾಜೇಶ್ ಆರೋಗ್ಯ ಸ್ಥಿತಿ ಗಂಭೀರ – ಖಾಸಗಿ ಆಸ್ಪತ್ರೆಗೆ ದಾಖಲು- ಕಹಳೆ ನ್ಯೂಸ್

ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ ರಾಜೇಶ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ರಾಜೇಶ್ (82) ವೆಂಟಿಲೇಟರ್‍ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಕಿಡ್ನಿ ವೈಫಲ್ಯ ಮತ್ತು ವಯೋಸಹಜ ಕಾಯಿಲೆಗಳಿಂದ ರಾಜೇಶ್ ಅವರು ಬಳಲುತ್ತಿದ್ದಾರೆ....
ರಾಷ್ಟ್ರೀಯಸುದ್ದಿ

ಹಿಜಬ್ ನಿಷೇದಕ್ಕೆ ತಡೆ ಕೋರಿ ಅರ್ಜಿ ವಿಚಾರಣೆ ನಡೆಸಲು ನಿರಾಕರಿಸಿದ ಸುಪ್ರೀಂಕೋರ್ಟ್ – ಕಹಳೆ ನ್ಯೂಸ್

ನವದೆಹಲಿ : ಶಾಲೆ ಕಾಲೇಜು‌ಗಳಲ್ಲಿ ಹಿಜಬ್, ಕೇಸರಿ ಶಾಲ್ ಸಹಿತ ಧಾರ್ಮಿಕ ವಸ್ತ್ರಗಳನ್ನು ನಿಷೇಧಿಸಿ ಹೊರಡಿಸಿದ ಹೈಕೋರ್ಟ್ ಮಧ್ಯಂತರ ಆದೇಶಕ್ಕೆ ತಡೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ನಿರಾಕರಿಸಿದೆ. ಮುಖ್ಯ ನ್ಯಾಯಮೂರ್ತಿ ಎನ್.ವಿ ರಮಣ ನೇತೃತ್ವದ ತ್ರಿ ಸದಸ್ಯ ಪೀಠ ಹೈಕೋರ್ಟ್ ನಲ್ಲಿ ವಿಚಾರಣೆ ಮುಂದುವರಿಯಲಿ ಎಂದು ಅಭಿಪ್ರಾಯಪಟ್ಟಿದೆ. ಗುರುವಾರ ಕರ್ನಾಟಕ ಹೈಕೋರ್ಟ್ ನೀಡಿದ ಆದೇಶವನ್ನು ಪ್ರಶ್ನೆ ಮಾಡಿ ಉಡುಪಿ ಮೂಲದ ಆಯೇಷಾ ಮತ್ತು ಇತರೆ ವಿದ್ಯಾರ್ಥಿನಿಯರು ಸುಪ್ರೀಂಕೋರ್ಟ್...
ರಾಜಕೀಯರಾಷ್ಟ್ರೀಯಸುದ್ದಿ

‘ದಿ ಗ್ರೇಟ್‌ ಖಲಿ’ ಖ್ಯಾತಿಯ ದಲೀಪ್ ಸಿಂಗ್ ರಾಣಾ ಬಿಜೆಪಿ ಸೇರ್ಪಡೆ – ಕಹಳೆ ನ್ಯೂಸ್

ನವದೆಹಲಿ, ಫೆ 10 : 'ದಿ ಗ್ರೇಟ್‌ ಖಲಿ' ಖ್ಯಾತಿಯ ವೃತ್ತಿಪರ 'ಡಬ್ಲ್ಯುಡಬ್ಲ್ಯುಇ' ಕುಸ್ತಿಪಟು ದಲೀಪ್ ಸಿಂಗ್ ರಾಣಾ ಇಂದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಪಂಜಾಬ್‌ನಲ್ಲಿ ಫೆಬ್ರವರಿ 20 ರಂದು ಒಂದೇ ಹಂತದ ಮತದಾನ ನಡೆಯಲಿದ್ದು ಇದೇ ಅವದಿಯಲ್ಲೇ ದಿ ಗ್ರೇಟ್‌ ಖಲಿ ಅವರನ್ನು ಬಿಜೆಪಿಯು ಪಕ್ಷಕ್ಕೆ ಸೇರಿಸಿಕೊಂಡಿದೆ. ಬಿಜೆಪಿಗೆ ಸೇರ್ಪಡೆಗೊಂಡಿದ್ದಕ್ಕೆ ನನಗೆ ಸಂತೋಷವಾಗಿದೆ. ಮೋದಿ ಅವರು ರಾಷ್ಟ್ರಕ್ಕಾಗಿ ಮಾಡಿದ ಕೆಲಸವು ಅವರನ್ನು ಪ್ರಧಾನಿಯನ್ನಾಗಿ ಮಾಡಿದೆ ಎಂದು ನಾನು ಭಾವಿಸಿದ್ದೇನೆ. ಹಾಗಾಗಿ,...
ರಾಷ್ಟ್ರೀಯಸುದ್ದಿ

ಹಿಂದೂ ಸಮಾಜ ಯಾರ ವಿರೋಧಿಯಲ್ಲ,ಯಾರನ್ನೂ ದ್ವೇಷಿಸುವುದಿಲ್ಲ,ಆದರೆ ಹಿಂದೂ ಸಮಾಜದ ವಿರುದ್ದ ನಿಲ್ಲುವ ಶಕ್ತಿ ಯಾರಿಗೂ ಇಲ್ಲ ; ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ – ಕಹಳೆ ನ್ಯೂಸ್

ನವದೆಹಲಿ, ಫೆ 10 : ಹಿಂದೂ ಸಮಾಜ ಯಾರ ವಿರೋಧಿಯೂ ಅಲ್ಲ, ಯಾರನ್ನೂ ದ್ವೇಷಿಸುವುದಿಲ್ಲ ಆದರೆ ಅವರ ವಿರುದ್ದ ನಿಲ್ಲುವ ಶಕ್ತಿ ಯಾರಿಗೂ ಇಲ್ಲ ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ವಿಶ್ವದಾದ್ಯಂತ ಹಿಂದೂಗಳನ್ನು ನಾಶ ಮಾಡಲು ಶತಮಾನದಿಂದ ಪ್ರಯತ್ನಿಸಿದವರು ತಮ್ಮಲ್ಲೇ ಜಗಳವಾಡುತ್ತಿದ್ದಾರೆ. ನಮ್ಮನ್ನು ನಾಶ ಮಾಡುವ ಪ್ರಯತ್ನ ಮಾಡಿದ್ದಾಯಿತು. ಆದರೆ ಅದರಲ್ಲಿ ಗೆಲುವು ಸಿಕ್ಕಿಲ್ಲ. ಇಂದಿಗೂ ಭಾರತದ ಸನಾತನ ಧಾರ್ಮಿಕ ಜೀವನವನ್ನು ಯಥಾಸ್ಥಿತಿಯಲ್ಲಿ...
1 260 261 262 263 264 319
Page 262 of 319