Saturday, March 14, 2026

ರಾಷ್ಟ್ರೀಯ

ರಾಷ್ಟ್ರೀಯಹೆಚ್ಚಿನ ಸುದ್ದಿ

21 ವರ್ಷದ ಬಳಿಕ ಮಿಸ್ ಯೂನಿವರ್ಸ್ ಪಟ್ಟ ಪಡೆದುಕೊಂಡ ಭಾರತದ ಬೆಡಗಿ- ಕಹಳೆ ನ್ಯೂಸ್

ನವದೆಹಲಿ: ಇಸ್ರೇಲ್‍ನ ಐಲಾಟ್‍ನಲ್ಲಿ ನಡೆದ 70 ನೇ ಮಿಸ್ ಯೂನಿವರ್ಸ್ - 2021 ಕಿರೀಟವನ್ನು ಭಾರತದ ಹರ್ನಾಜ್ ಸಂಧು ತಮ್ಮ ಮುಡಿಗೇರಿಸಿಕೊಂಡಿದ್ದಾರೆ. 2000ರಲ್ಲಿ ಲಾರಾ ದತ್ತಾ ವಿಶ್ವ ಸುಂದರಿ ಪ್ರಶಸ್ತಿಯನ್ನು ಗೆದ್ದ ಬಳಿಕ ಸುಮಾರು 21 ವರ್ಷಗಳ ನಂತರ ಹರ್ನಾಜ್ ಸಂಧು ಮತ್ತೊಮ್ಮೆ ಭಾರತಕ್ಕೆ ಕಿರೀಟವನ್ನು ತಂದುಕೊಟ್ಟಿದ್ದಾರೆ . ಚಂಡೀಗಢದ ಹರ್ನಾಜ್ ಸಂಧು 2021 ರ ವಿಶ್ವ ಸುಂದರಿ ಆಗಿ ಹೊರಹೊಮ್ಮಿದ್ದು, ಜಾಗತಿಕವಾಗಿ ಲೈವ್-ಸ್ಟ್ರೀಮ್‍ನಲ್ಲಿ ನಡೆದ ಈವೆಂಟ್‍ನಲ್ಲಿ ಮೆಕ್ಸಿಕೊದ ಮಾಜಿ...
ಬೆಂಗಳೂರುರಾಜ್ಯಸುದ್ದಿ

ಕಟ್ಟಡ ಕಾರ್ಮಿಕರಿಗೆ ಇನ್ನು ಮುಂದೆ ಫ್ರೀ ಬಸ್ ಪಾಸ್: ಶಿವರಾಮ್ ಹೆಬ್ಬಾರ್ ಅಧಿಕೃತ ಘೋಷಣೆ- ಕಹಳೆ ನ್ಯೂಸ್

ಬೆಂಗಳೂರು: ಕಟ್ಟಡ ಕಾರ್ಮಿಕರಿಗೆ ಉಚಿತವಾಗಿ ಬಸ್ ಪಾಸ್ ವಿತರಿಸಲಾಗುತ್ತದೆ. ನೋಂದಾಯಿತ ಕಾರ್ಮಿಕರಿಗೆ ಯೋಜನೆಯ ಲಾಭ ಸಿಗಲಿದೆ. ನೋಂದಾಯಿತ ಕಾರ್ಮಿಕರು ಕೆಲಸದ ಸ್ಥಳಗಳಿಗೆ ತೆರಳಲು ಅನುಕೂಲವಾಗುವಂತೆ ಬಿಎಂಟಿಸಿ ಬಸ್‍ಗಳಲ್ಲಿ ಉಚಿತವಾಗಿ ಸಂಚರಿಸಲು ಬಸ್ ಪಾಸ್ ವಿತರಿಸಲಾಗಿದೆ. Video :ಮಧುಗಿರಿ ತಾಲ್ಲೂಕಿನಲ್ಲಿ ನಕಲಿ ವೈದ್ಯರ ಕ್ಲಿನಿಕ್...! - ದಾಳಿ ನಡೆಸಿದಾಗ ಸಿಕ್ಕಿದ್ದೇ ಭಯಾನಕ ಕಹಾನಿ...?  ಕಾರ್ಮಿಕ ಇಲಾಖೆ ಮತ್ತು ಕೆಎಸ್‍ಆರ್ ಟಿಸಿ ನಡುವೆ ಯೋಜನೆಯ ವ್ಯಾಪ್ತಿ, ಉಚಿತ ಪಾಸ್ ವಿತರಣೆ, ದೂರದ ಮಿತಿ...
ರಾಷ್ಟ್ರೀಯಸಿನಿಮಾಸುದ್ದಿ

‘ಮಹಿಳೆಯರು ತಮಗಿಂತ ಕಿರಿಯ ಪುರುಷರನ್ನು ವಿವಾಹವಾಗುತ್ತಿರುವ ವಿಚಾರ ಸಂತಸ ಇದೆ’ ; ಬಾಲಿವುಡ್‌ ನಟಿ ಕಂಗನಾ ರಣಾವತ್‌ – ಕಹಳೆ ನ್ಯೂಸ್

ಮುಂಬೈ, ಡಿ.09 : "ಯಶಸ್ವಿ ಮಹಿಳೆಯರು ತಮಗಿಂತ ಕಿರಿಯ ವಯಸ್ಸಿನ ಪುರುಷರನ್ನು ವಿವಾಹವಾಗುತ್ತಿರುವ ವಿಚಾರ ನನಗೆ ಸಂತಸ ತಂದಿದೆ" ಎಂದು ಬಾಲಿವುಡ್‌ ನಟಿ ಕಂಗನಾ ರಣಾವತ್‌ ತಿಳಿಸಿದ್ದಾರೆ. ಬಾಲಿವುಡ್‌ ತಾರೆಗಳಾದ ಕತ್ರಿನಾ ಕೈಫ್‌ (38) ಹಾಗೂ ವಿಕ್ಕಿ ಕೌಶಲ್‌ (33) ವಿವಾಹ ಸಮಾರಂಭವು ರಾಜಸ್ಥಾನದಲ್ಲಿ ನಡೆಯುತ್ತಿದೆ. ಈ ಮಧ್ಯೆ ತಮ್ಮ ಇನ್‌ಸ್ಟಾಗ್ರಾಂನಲ್ಲಿ ಬರೆದುಕೊಂಡಿರುವ ಕಂಗನಾ, "ಸಿನಿಮಾ ಉದ್ಯಮದ ಯಶಸ್ವಿ ಮಹಿಳೆಯರು ತಮಗಿಂತ ಚಿಕ್ಕ ವಯಸ್ಸಿನ ಪುರುಷರನ್ನು ವಿವಾಹವಾಗುವ ಮೂಲಕ ತಮ್ಮ ಸಂಪ್ರದಾಯವನ್ನು...
ಮಾರುಕಟ್ಟೆರಾಷ್ಟ್ರೀಯವಾಣಿಜ್ಯಸುದ್ದಿ

ಬ್ಯಾಂಕ್‍ಗಳಿಗೆ 4 ದಿನ ರಜೆ ; ತುರ್ತು ವಹಿವಾಟುಗಳನ್ನು ಇಂದೇ ಮುಗಿಸಿಕೊಳ್ಳಿ – ಕಹಳೆ ನ್ಯೂಸ್

ನವದೆಹಲಿ: ಭಾರತದಲ್ಲಿ ಮುಂದಿನ ವಾರದಲ್ಲಿ ಒಟ್ಟು ನಾಲ್ಕು ದಿನಗಳು ಬ್ಯಾಂಕ್‍ಗೆ ರಜೆ ಇರಲಿದೆ. ಹೀಗಾಗಿ ಜನರು ಅಗತ್ಯವಿರುವ ಬ್ಯಾಂಕ್ ವಹಿವಾಟುಗಳನ್ನು ಆದಷ್ಟು ಬೇಗವೇ ಮುಗಿಸಿದರೆ ಮುಂದೆ ಎದುರಾಗಬಹುದಾದ ಸಮಸ್ಯೆಗಳನ್ನು ತಡೆಯಬಹುದು. ಮುಂದಿನ ವಾರದಲ್ಲಿ ಒಟ್ಟು ನಾಲ್ಕು ದಿನಗಳವರೆಗೆ ಬ್ಯಾಂಕ್‍ಗಳಿಗೆ ರಜೆ ಇರಲಿದ್ದು, ಜನರು ತಮ್ಮ ಬ್ಯಾಂಕ್‍ಗಳಲ್ಲಿ ಅತ್ಯಂತ ಅಗತ್ಯ ಹಾಗೂ ತುರ್ತು ವಹಿವಾಟುಗಳ ಬಾಕಿ ಉಳಿಸಿದ್ದಲ್ಲಿ ಆದಷ್ಟು ಬೇಗ ಅದನ್ನು ಮುಗಿಸಿಕೊಳ್ಳಲು ಸೂಚನೆ ನೀಡಲಾಗುತ್ತಿದೆ. ಬ್ಯಾಂಕ್ ರಜೆಯ ಸಮಯದಲ್ಲಿ ಗ್ರಾಹಕರು ಪ್ರಮುಖ...
ಆರೋಗ್ಯಬೆಂಗಳೂರುರಾಜಕೀಯರಾಜ್ಯಸುದ್ದಿ

ರಾಜ್ಯದ ಹಾಸ್ಟೆಲ್ ಗಳಲ್ಲಿ ಹೊಸ ಮಾರ್ಗಸೂಚಿ ಜಾರಿ : ಸಿಎಂ ಬಸವರಾಜ ಬೊಮ್ಮಾಯಿ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ಒಮಿಕ್ರಾನ್ ಸೋಂಕಿನ (Omicron Variant) ಆತಂಕ ಹಾಗೂ ಕೊರೊನಾ(Corona Virus) ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಹಾಸ್ಟೆಲ್ (Hostel) ಗಳಲ್ಲಿ ಹೊಸ ಮಾರ್ಗಸೂಚಿ (New Guideline)ಜಾರಿ ಮಾಡಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ (CM Basavaraja Bommai) ಹೇಳಿದ್ದಾರೆ.   ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ರಾಜ್ಯದ ಹಾಸ್ಟೆಲ್ ಗಳಲ್ಲಿ ಹೊಸ ಮಾರ್ಗಸೂಚಿ ಜಾರಿ ಮಾಡಲಾಗುವುದು. ವಿದ್ಯಾರ್ಥಿಗಳು ಒಟ್ಟಿಗೆ ಊಟ ಮಾಡುವಂತಿಲ್ಲ ಎಂಬ ನಿಯಮವನ್ನು ಜಾರಿಗೆ ತರಲಾಗಿದ್ದು,...
ರಾಷ್ಟ್ರೀಯಸುದ್ದಿ

ಸೇನಾ ಹೆಲಿಕಾಪ್ಟರ್ Mi-17V5 ಪತನ ; ಗಂಭೀರ ಸ್ಥಿತಿಯಲ್ಲಿದ್ದ ಬಿಪಿನ್ ರಾವತ್ ನಿಧನ – ಕಹಳೆ ನ್ಯೂಸ್

ಚೆನ್ನೈ: ಭಾರತದ ಚೀಫ್ ಆಫ್ ಡಿಫೆನ್ಸ್ ಸ್ಟಾಫ್ (ಸಿಡಿಎಸ್) ಜನರಲ್ ಬಿಪಿನ್ ರಾವತ್ ಪಯಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ಪತನವಾಗಿದ್ದು, ಬಿಪಿನ್ ರಾವತ್ ಅವರು ಚಿಕಿತ್ಸೆ ಫಲಿಸದೆ ಮೃತರಾಗಿದ್ದಾರೆ. ಈ ಸಂಬಂಧ ವಾಯುಸೇನೆ ಅಧಿಕೃತ ಹೇಳಿಕೆಯನ್ನು ಬಿಡುಗಡೆ ಮಾಡಿ ಮೃತಪಟ್ಟ ವಿಚಾರವನ್ನು ತಿಳಿಸಿದೆ. ಬಿಪಿನ್ ರಾವತ್ ಪಯಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ಕೊಯಮತ್ತೂರು, ಕೂನೂರು ನಡುವಿನ ನೀಲಗಿರಿ ಅರಣ್ಯ ವ್ಯಾಪ್ತಿಯಲ್ಲಿ ದೊಡ್ಡ ಸ್ಫೋಟದ ಶಬ್ಧದೊಂದಿಗೆ ಹೆಲಿಕಾಪ್ಟರ್ ಪತನವಾಗಿದೆ. ದುರಂತಕ್ಕೀಡಾದ ಹೆಲಿಕಾಪ್ಟರ್‌ನಲ್ಲಿ ಬಿಪಿನ್ ರಾವತ್ ಸೇರಿ...
ಬೆಂಗಳೂರುರಾಜ್ಯಸುದ್ದಿ

ಮದ್ಯಪ್ರಿಯರಿಗೆ ಶಾಕ್ ; ರಾಜ್ಯಾದ್ಯಂತ 3 ದಿನಗಳ ಕಾಲ ಮದ್ಯ ಮಾರಾಟ ಬಂದ್- ಕಹಳೆ ನ್ಯೂಸ್

ಬೆಂಗಳೂರು: ಡಿಸೆಂಬರ್ 10 ರಂದು ವಿಧಾನ ಪರಿಷತ್ತಿನ 25 ಸ್ಥಾನಗಳಿಗೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಡಿ. 8 ರಿಂದ 3 ದಿನಗಳ ಕಾಲ ವೈನ್ ಸ್ಟೋರ್ ಮತ್ತು ಬಾರ್ ಗಳನ್ನು ಮುಚ್ಚುವಂತೆ ಸೂಚಿಸಲಾಗಿದೆ. ಮುಖ್ಯ ಚುನಾವಣಾಧಿಕಾರಿಗಳ ಈ ಸೂಚನೆಯನ್ನು ವೈನ್ ಶಾಪ್ ಮಾಲೀಕರು ಹಾಗೂ ಮದ್ಯ ಮಾರಾಟಗಾರರು ಖಂಡಿಸಿದ್ದು, 3 ದಿನಗಳ ಕಾಲ ಮದ್ಯ ಮಾರಾಟ ನಿಷೇಧದಿಂದ ಭಾರೀ ನಷ್ಟವಾಗಲಿದೆ ಎಂದು ಅಳಲು ತೋಡಿಕೊಂಡಿದ್ದಾರೆ.  ...
ಬೆಂಗಳೂರು

ಬೆಂಗಳೂರು: ಅಪಾರ್ಟ್‍ಮೆಂಟ್ ನ 12ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿನಿ; ಸಾವು- ಕಹಳೆ ನ್ಯೂಸ್

ಆನೆಕಲ್: ವಿದ್ಯಾರ್ಥಿನಿಯೋರ್ವಳು ಅಪಾರ್ಟ್‍ಮೆಂಟ್‍ನ 12ನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ ಘಟನೆ ಬೆಂಗಳೂರಿನ ವೇಣುಗೋಪಾಲ ನಗರದಲ್ಲಿ ನಡೆದಿದೆ. ಹುಳಿಮಾವು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ವೇಣುಗೋಪಾಲ ನಗರದ ನಿತೀಶ್ ಪಾರ್ಕ್ ಅಪಾರ್ಟ್‍ಮೆಂಟ್‍ನ 12ನೇ ಮಹಡಿಯಿಂದ ಬಿದ್ದು 13 ವರ್ಷದ ವೈಷ್ಣವಿ ಸಾವನ್ನಪ್ಪಿದ್ದು, ಮೃತ ದುರ್ದೈವಿ ಉತ್ತರಪ್ರದೇಶ ಮೂಲದ ವೀರೇಂದ್ರಕುಮಾರ್ ಹಾಗೂ ಸುಮನ್ ದಂಪತಿಯ ಪುತ್ರಿ. ಕಳೆದ 20 ವರ್ಷದಿಂದ ಈ ಕುಟುಂಬ ಬೆಂಗಳೂರಿನಲ್ಲಿ ನೆಲೆಸಿದೆ. ವೈಷ್ಣವಿ ಖಾಸಗಿ ಶಾಲೆಯಲ್ಲಿ 9ನೇ ತರಗತಿ...
1 266 267 268 269 270 319
Page 268 of 319