Friday, March 13, 2026

ರಾಷ್ಟ್ರೀಯ

ಬೆಂಗಳೂರು

KSRTC ನೌಕರರಿಂದ ಮತ್ತೆ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ಚಿಂತನೆ-ಕಹಳೆ ನ್ಯೂಸ್

ಬೆಂಗಳೂರು : ರಾಜ್ಯ ಸರ್ಕಾರಕ್ಕೆ ಮತ್ತೊಂದು ಪ್ರತಿಭಟನೆಯ ಶಾಕ್ ಎದುರಾಗಿದ್ದು, ಬೇಡಿಕೆ ಈಡೇರದ ಹಿನ್ನೆಲೆಯಲ್ಲಿ ಸಾರಿಗೆ ನೌಕರರು ಏಪ್ರಿಲ್ 7 ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುವುದಾಗಿ ಸರ್ಕಾರಕ್ಕೆ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ ನೋಟಿಸ್ ನೀಡಿದೆ. ಸಾರಿಗೆ ನೌಕರರ 9 ಬೇಡಿಕೆ ಈಡೇರಿಸದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ, ಸಾರಿಗೆ ಸಚಿವ, ನಾಲ್ಕು ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಕಾರ್ಮಿಕ ಇಲಾಖೆ ಆಯುಕ್ತರಿಗೆ ಮುಷ್ಕರದ ನೋಟಿಸ್ ನೀಡಲಾಗಿದೆ. ಸಾರಿಗೆ...
ಬೆಂಗಳೂರು

ಮಸೀದಿ, ದರ್ಗಾಗಳಲ್ಲಿ ಧ್ವನಿವರ್ಧಕ ಬಳಕೆಗೆ ನಿಷೇಧ ಹೇರಿಕೆಗೆ ಸಂಬಂಧಿಸಿದಂತೆ ರಾಜ್ಯ ವಕ್ಫ್ ಬೋರ್ಡ್ ಮಹತ್ವದ ಸುತ್ತೋಲೆ..!-ಕಹಳೆ ನ್ಯೂಸ್

ಬೆಂಗಳೂರು : ಮಸೀದಿ, ದರ್ಗಾಗಳಲ್ಲಿ ಧ್ವನಿ ವರ್ಧಕ ಬಳಕೆಗೆ ನಿಷೇಧ ಹೇರಿಕೆಗೆ ಸಂಬಂಧಿಸಿದಂತೆ ರಾಜ್ಯ ವಕ್ಪ್ ಬೋರ್ಡ್ ಮಹತ್ವದ ಆದೇಶವನ್ನು ಹೊರಡಿಸಿದ್ದು, ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6 ಗಂಟೆವರೆಗೆ ಧ್ವನಿ ವರ್ಧಕ ಬಳಕೆಗೆ ನಿಷೇಧ ಹೇರಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ವಕ್ಫ್ ಬೋರ್ಡ್, ಮಸೀದಿ ಮತ್ತು ದರ್ಗಾಗಳಲ್ಲಿ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6 ಗಂಟೆವರೆಗೆ ಧ್ವನಿ ವರ್ಧಕಗಳನ್ನು ಬಳಕೆ ಮಾಡದಂತೆ ಸೂಚಿಸಿದ್ದು, ಆದರೆ, ಅಝಾನ್‍ಗೆ ಯಾವುದೇ ನಿಬರ್ಂಧ...
ಬೆಂಗಳೂರು

ರಾಜ್ಯದಲ್ಲಿ ಕೊರೊನಾ ಅಬ್ಬರ ಹೆಚ್ಚಳ ; ಸಾವಿರದ ಗಡಿದಾಟಿದ ಸೋಂಕಿತರ ಸಂಖ್ಯೆ-ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಅಬ್ಬರ ಜೋರಾಗಿದ್ದು, ಕೊರೊನಾ ಸೋಂಕಿನ ಪ್ರಕರಣಗಳ ಸಂಖ್ಯೆ ಸಾವಿರದ ಗಡಿದಾಟಿದೆ. ಮಂಗಳವಾರ 1,135 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,62,339ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ಆರು ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,403ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ 710 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 4,12,699ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ ಐವರು ಬಲಿಯಾಗಿದ್ದಾರೆ...
ಬೆಂಗಳೂರು

ಸಹಕಾರಿ ರಂಗದಲ್ಲಿ ಕೊಡುಗೆ ಪಿ.ಎಲ್ ವೆಂಕಟರಾಮರೆಡ್ಡಿಗೆ ಗೌರವ ಡಾಕ್ಟರೇಟ್-ಕಹಳೆ ನ್ಯೂಸ್

ಬೆಂಗಳೂರು : ಸಹಕಾರಿ ರಂಗದಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಹಿನ್ನಲೆಯಲ್ಲಿ ಸ್ವರ್ಣಭಾರತಿ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಪಿ.ಎಲ್ ವೆಂಕಟರಾಮರೆಡ್ಡಿ ಅವರಿಗೆ ಅಮೇರಿಕಾದ ಧಾರ್ಮಿಕ ವಿಶ್ವವಿದ್ಯಾಲಯ ಯೋಗ-ಸಂಸ್ಕøತಂ ವಿಶ್ವವಿದ್ಯಾಲಯದ ವತಿಯಿಂದ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಗಿದೆ. ನಗರದ ಜೆಎಸ್‍ಎಸ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಘಟಿಕೋತ್ಸವದಲ್ಲಿ ನಂಜಾವಧೂತ ಮಹಾಸ್ವಾಮೀಜಿಗಳು ವಿ2 ಹೋಲ್ಡಿಂಗ್ಸ್ ನ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಸ್ವರ್ಣಭಾರತಿ ಸಹಕಾರ ಅಧ್ಯಕ್ಷರಾದ ಪಿ ಎಲ್ ವೆಂಕಟರಾಮರೆಡ್ಡಿ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದರು. ಈ...
ಬೆಂಗಳೂರು

SSLC ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ವಿನಾಯತಿ-ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ಎಸ್ಎಎಸ್ ಎಲ್ ಸಿ ಪರೀಕ್ಷೆ ಬರೆಯುವುದಕ್ಕೆ ವಿದ್ಯಾರ್ಥಿಗಳು ಕನಿಷ್ಟ ಶೇ.75ರಷ್ಟು ಹಾಜರಾತಿ ಹೊಂದುವುದು ಕಡ್ಡಾಯ ಎನ್ನುವ ನಿಯಮವಿದೆ. ಈ ವರ್ಷ ಕೊರೋನಾದಿಂದಾಗಿ ಶಾಲೆಗಳೇ ಸರಿಯಾಗಿ ನಡೆದಿಲ್ಲ. ಜನೆವರಿ 1ರಿಂದ ಎಸ್ಎಎಸ್ ಎಲ್ ಸಿ ತರಗತಿಗಳು ಆರಂಭವಾದರೂ ವಿದ್ಯಾರ್ಥಿಗಳು ಶಾಲೆಗೆ ಬರುವುದನ್ನು ಕಡ್ಡಾಯಗೊಳಿಸಿರಲಿಲ್ಲ. ಹಾಗಾಗಿ ಈ ಬಾರಿ ಶೇ. 75ರಷ್ಟು ಹಾಜರಾತಿ ಕಡ್ಡಾಯ ಎನ್ನುವ ನಿಯಮ ಜಾರಿಗೊಳಿಸುವುದು ಸಾಧ್ಯವೇ ಇಲ್ಲ. ಹಾಗಾಗಿ ಪರೀಕ್ಷಾ ಶುಲ್ಕ ಪಾವತಿಸುವ ಎಲ್ಲ...
ಬೆಂಗಳೂರು

ರಾಜ್ಯದಲ್ಲಿ ಮತ್ತೆ ಲಾಕ್‍ಡೌನ್ ಆಗಬಾರದು ಎಂದರೆ ಜನತೆ ಕಟ್ಟುನಿಟ್ಟಾಗಿ ಕೊರೋನಾ ನಿಯಮ ಪಾಲನೆ ಮಾಡಬೇಕು, ಇಲ್ಲದಿದ್ದಲ್ಲಿ ಕಠಿಣ ಕ್ರಮ ಅನಿವಾರ್ಯವೆಂದು ಎಂದ ಸಿಎಂ-ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಕೊರೊನಾ ಸೋಂಕಿನ ಬಗ್ಗೆ ತಜ್ಞರ ಸಮಿತಿ ಇದು ಎರಡನೇ ಅಲೆ ಮುನ್ಸೂಚನೆ ಎಂದು ತಿಳಿಸಿದ್ದು, ಪರಿಸ್ಥಿತಿ ಎದುರಿಸಲು ಕೆಲ ಸಲಹೆ ನೀಡಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮ ಜಾರಿಗೆ ತಂದು ಒಂದು ವಾರ ಕಾದು ನೋಡುವ ತಂತ್ರಕ್ಕೆ ಮೊರೆ ಹೋಗಿದೆ. ಕೊರೋನಾ ಪರಿಸ್ಥಿತಿ ಅವಲೋಕನ ಕುರಿತು ತಜ್ಞರ ಜೊತೆ ಸಮಾಲೋಚನೆ ಮಾಡಲಾಯಿತು. ಎಲ್ಲರ ಅಭಿಪ್ರಾಯದಂತೆ ಕಳೆದ 14 ದಿನಗಳಲ್ಲಿ ಪಾಸಿಟಿವ್ ದರ ಹೆಚ್ಚಾಗಿದ್ದು,...
ಬೆಂಗಳೂರು

ಕೊರೋನಾ ಮಹಾಮಾರಿ ಸ್ಫೋಟಗೊಂಡಿರುವ ಹಿನ್ನಲೆ ಮಹಾರಾಷ್ಟ್ರ ಹಾಗೂ ಕರ್ನಾಟಕ ಬಸ್ ಸಂಚಾರ ಸ್ಥಗಿತ-ಕಹಳೆ ನ್ಯೂಸ್

ಬೆಂಗಳೂರು : ಮಹಾರಾಷ್ಟ್ರ ಹಾಗೂ ಕರ್ನಾಟಕ ಮಧ್ಯೆ ಕೊರೋನಾ ಮಹಾಮಾರಿ ಸ್ಫೋಟಗೊಂಡಿರುವ ಹಿನ್ನಲೆ ನೇರ ಬಸ್ ಸಂಚಾರ ಸ್ಥಗಿತಗೊಂಡಿದೆ. ರಾಜ್ಯದ ಬಸ್ ಗಳು ನಿಪ್ಪಾಣಿ ಗಡಿ ತನಕ ಸಂಚರಿಸಿತ್ತಿದೆ. ಮಹಾರಾಷ್ಟ್ರ ದ ಬಸ್ ಗಳು ಕೂಡ ರಾಜ್ಯಕ್ಕೆ ತಾಗಿಕೊಂಡಿರುವ ಮಹಾರಾಷ್ಟ್ರ ದ ಗಡಿ ತನಕ ಬರುತ್ತಿವೆ. ಉಭಯ ರಾಜ್ಯಗಳ ಮಧ್ಯೆ ನೇರ ಬಸ್ ಸಂಚಾರ ಸ್ಥಗಿತಗೊಂಡಿರುವ ಹಿನ್ನಲೆ ಪ್ರಯಾಣಿಕರು ಪರದಾಡುತ್ತಿದ್ದಾರೆ ಇದೇ ವೇಳೆ ಗಡಿಯಲ್ಲಿ ಕಟ್ಟು ನಿಟ್ಟಿನ ಕೊರೋನಾ ಪರೀಕ್ಷೆಗೆ...
ಬೆಂಗಳೂರು

ಕೊರೋನಾ ಪ್ರಕರಣ ಹೆಚ್ಚಳ; ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಮಹತ್ವದ ಸಭೆ-ಕಹಳೆ ನ್ಯೂಸ್

ಬೆಂಗಳೂರು : ಮುಖ್ಯಮಂತ್ರಿ ಯಡಿಯೂರಪ್ಪ ಅವರು, ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಕೊರೋನಾ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಕಾರಣ ಇಂದು ಮಹತ್ವದ ಸಭೆ ಕರೆದಿದ್ದಾರೆ. ಈ ಸಭೆಯನ್ನು ಸಂಜೆ ಐದು ಗಂಟೆಗೆ ವಿಧಾನಸೌಧದಲ್ಲಿ ಆಯೋಜಿಸಲಾಗಿದ್ದು, ಮುಖ್ಯ ಕಾರ್ಯದರ್ಶಿ ಸೇರಿದಂತೆ ಹಿರಿಯ ಅಧಿಕಾರಿಗಳು ಈ ಸಭೆಯನ್ನು ಭಾಗವಹಿಸಲಿದ್ದಾರೆ. ಸಿಎಂ ಯಡಿಯೂರಪ್ಪ ಆರೋಗ್ಯ ಇಲಾಖೆಯ ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಲಿದ್ದಾರೆ. ಕೊರೋನಾ ಪರೀಕ್ಷೆ ಸಂಖ್ಯೆ ಹೆಚ್ಚಳ, ಗಡಿಯಲ್ಲಿ ಕಣ್ಗಾವಲು, ಬೆಂಗಳೂರಿನಲ್ಲಿ ಇನ್ನಷ್ಟು...
1 287 288 289 290 291 319
Page 289 of 319