Wednesday, March 11, 2026

ರಾಷ್ಟ್ರೀಯ

ಬೆಂಗಳೂರು

ಕೇಂದ್ರದಿಂದ ಮಂಗಳೂರು ಪ್ಲಾಸ್ಟಿಕ್ ಪಾರ್ಕ್‍ಗೆ 40 ಕೋಟಿ ನೀಡಲಾಗುತ್ತದೆ ; ಡಿ.ವಿ. ಸದಾನಂದ ಗೌಡ-ಕಹಳೆ ನ್ಯೂಸ್

ಬೆಂಗಳೂರು : ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ. ಸದಾನಂದ ಗೌಡ ಅವರು, ಸ್ವಾವಲಂಬಿ ಭಾರತ ಯೋಜನೆಯಡಿ ದೇಶದಲ್ಲಿ ಪ್ಲಾಸ್ಟಿಕ್ ಕೈಗಾರಿಕೆಗಳಿಗೆ ಪ್ರೋತ್ಸಾಹ ನೀಡುವ ಸಲುವಾಗಿ ದೇಶದಲ್ಲಿ ಎರಡು ಪ್ಲಾಸ್ಟಿಕ್ ಪಾರ್ಕ್‍ಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಮತ್ತು ಕೇಂದ್ರದಿಂದ ಮಂಗಳೂರು ಪ್ಲಾಸ್ಟಿಕ್ ಪಾರ್ಕ್‍ಗೆ 40 ಕೋಟಿ.ರೂ. ನೀಡಲಾಗುತ್ತದೆ ಎಂದು ಹೇಳಿದರು. ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ಕರ್ನಾಟಕದ ಕರಾವಳಿ ನಗರ ಮಂಗಳೂರು ಮತ್ತು ಉತ್ತರ ಪ್ರದೇಶದ ಗೋರಖ್‍ಪುರದಲ್ಲಿ ಒಂದೊಂದು...
ಬೆಂಗಳೂರು

ಇದೇ ಜನವರಿ 31 ರಂದು ದುಬೈಯಲ್ಲಿರುವ ಬುರ್ಜಿ ಖಲೀಫದಲ್ಲಿ ರಾರಾಜಿಸಲಿದೆ ಕಿಚ್ಚ ಸುದೀಪ್ ನ ಕಟೌಟ್-ಕಹಳೆ ನ್ಯೂಸ್

ಬೆಂಗಳೂರು : ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಬಹು ನಿರೀಕ್ಷಿತ ಸಿನಿಮಾ ಫ್ಯಾಂಟಮ್ ಚಿತ್ರದ ಶೀರ್ಷಿಕೆ ವಿಕ್ರಾಂತ್ ರೋಣ ಎಂದು ಬದಲಾಗಿದ್ದು, ಇದೀಗ ಜನವರಿ 31 ರಂದು ದುಬೈಯಲ್ಲಿರುವ ಬುರ್ಜಿ ಖಲೀಫದಲ್ಲಿ ಕಿಚ್ಚನ ಕಟೌಟ್ ರಾರಾಜಿಸಲಿದೆ. ಸಿನೆಮಾರಂಗದ ಇತಿಹಾಸದಲ್ಲಿ ಇದು ಹೊಸ ಪ್ರಯತ್ನವಾಗಿದ್ದು, ನಟ ಕಿಚ್ಚ ಸುದೀಪ್ ಅವರ 25 ವರ್ಷಗಳ ಸಿನಿಮಾ ಜೀವನಕ್ಕೆ ವಿಶೇಷ ಉಡುಗೊರೆಯಾಗಲಿದೆ. ಎಂದು ಚಿತ್ರದ ನಿರ್ದೇಶಕ ಅನೂಪ್ ಭಂಡಾರಿ ಅವರು ಟ್ವೀಟ್ ಮಾಡಿದ್ದಾರೆ....
ಬೆಂಗಳೂರು

“ಫಸ್ಟ್ ಡೇ ಫಸ್ಟ್ ಶೋ ಯಾವಾಗಲೂ ನಾನು ಅಣ್ಣನ ಜೊತೆಗೆ ನೋಡುತ್ತಿದ್ದೆ ; ಪೊಗರು ಸಿನಿಮಾ ಪತ್ರಿಕಾಗೋಷ್ಠಿಯಲ್ಲಿ ಚಿರಂಜೀವಿ ಸರ್ಜಾರನ್ನು ನೆನೆದು ಕಣ್ಣೀರಿಟ್ಟ ಧ್ರುವ ಸರ್ಜಾ-ಕಹಳೆ ನ್ಯೂಸ್

ಬೆಂಗಳೂರು : ಪೊಗರು ಸಿನಿಮಾ ಪತ್ರಿಕಾಗೋಷ್ಠಿಯಲ್ಲಿ ಸ್ಯಾಂಡಲ್‍ವುಡ್ ನಟ ದಿವಂಗತ ಚಿರಂಜೀವಿ ಸರ್ಜಾರನ್ನು ನೆನೆದು ಕಣ್ಣೀರಿಟ್ಟ ಧ್ರುವ ಸರ್ಜಾ, ಸಿನಿಮಾದ ಎಡಿಟಿಂಗ್ ವೇಳೆ ಅಣ್ಣ ಸಿನಿಮಾ ನೋಡಿದ್ದು, ಯಾವ ರೀತಿಯಾಗಿ ಮಾಡಬೇಕೆಂದು ಸಲಹೆ ನೀಡಿದ್ದ ಎಂದು ಹೇಳಿ ಕಳೆದು ಹೋದ ನೆನಪುಗಳನ್ನು ಮೆಲುಕುಹಾಕುತ್ತ ಧ್ರುವ ಸರ್ಜಾ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಇನ್ನು "ಫಸ್ಟ್ ಡೇ ಫಸ್ಟ್ ಶೋ ಯಾವಾಗಲೂ ನಾನು ಅಣ್ಣನ ಜೊತೆಗೆ ನೋಡುತ್ತಿದ್ದೆ, ಆದರೆ ಈಗ ಅದನ್ನು ಮಿಸ್ ಮಾಡಿಕೊಳ್ಳುತ್ತಿದ್ದೇನೆ"...
ಬೆಂಗಳೂರು

ಯತ್ನಾಳ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್-ಕಹಳೆ ನ್ಯೂಸ್

ಬೆಂಗಳೂರು, : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಯತ್ನಾಳ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಕೇಂದ್ರ ಶಿಸ್ತು ಸಮಿತಿಗೆ ಶಿಫಾರಸ್ಸು ಮಾಡಿದ್ದೇವೆ ಎಂದು ಹೇಳಿದ್ದಾರೆ. ಹಾಗೂ ಕಟೀಲ್, ಕೇಂದ್ರ ನಾಯಕರು ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳಲಿದ್ದಾರೆ. ಎಲ್ಲ ಗೊಂದಲಗಳು ಒಂದೆರಡು ದಿನದಲ್ಲಿ ಸರಿಯಾಗಲಿದೆ ಎಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಇನ್ನು ಈ ವೇಳೆ ಅಸಮಧಾನಿತ ಶಾಸಕರು ದೆಹಲಿಗೆ ತೆರಳಿರುವ ಬಗ್ಗೆ ಮಾತನಾಡಿದ ಅವರು, ಅವರಷ್ಟಕ್ಕೇ ಅವರು ದೆಹಲಿಗೆ ಹೋಗುತ್ತಾರೆ....
ಬೆಂಗಳೂರು

ಗಡಿ ವಿಚಾರದಲ್ಲಿ ಸಿಎಂ ನಿಲುವನ್ನು ಖಂಡಿಸಿದ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ – ಕಹಳೆ ನ್ಯೂಸ್

ಬೆಂಗಳೂರು: ಮಹಾರಾಷ್ಟ್ರ ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಹೇಳಿರುವ ಹೇಳಿಕೆಯನ್ನು ಖಂಡಿಸಿರುವ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್, ಬಿಜೆಪಿರವರಿಂದ ಕರ್ನಾಟಕ ರಾಜ್ಯ ಹಾಳಾಗ್ತಿದೆ ಎಂದು ಕಿಡಿಕಾರಿದರು. ಕರ್ನಾಟಕ ರಾಜ್ಯಕ್ಕೆ ಮುಂಬೈಯ ಅರ್ಧಭಾಗ ಸೇರಬೇಕು ಈ ಬಗ್ಗೆ ಮೊದಲು ತೀರ್ಮಾನ ಮಾಡಲಿ ಅಂತ ಹೇಳಿದರು. ಗಡಿ ವಿಚಾರದಲ್ಲಿ ಸಿಎಂ ಬಿಎಸ್‍ವೈ ನೀಚ ಕೆಲಸ ಮಾಡುತ್ತಿದ್ದರೆ ಎಂದು ಹೇಳಿದ ವಾಟಾಳ್ ನಾವು ಯಾವುದೇ ಕಾರಣಕ್ಕೂ ಬೆಳಗಾವಿ ಬಿಟ್ಟುಕೊಡಲ್ಲ ಎಂದು ಗುಡುಗಿದರು....
ಬೆಂಗಳೂರು

ಮಾದಕ ದ್ರವ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಆದಿತ್ಯ ಆಳ್ವಾ ಸಿಸಿಬಿ ವಶ-ಕಹಳೆ ನ್ಯೂಸ್

ಬೆಂಗಳೂರು: ಮಾದಕ ದ್ರವ್ಯ ಪ್ರಕರಣದ ಆರೋಪಿ ಆದಿತ್ಯ ಆಳ್ವಾನನ್ನು ವಿಚಾರಣೆಗೆ ಗುರಿಪಡಿಸುವ ಸಂಬಂಧ ಜನವರಿ 22ವರೆಗೆ ಸಿಸಿಬಿ ಮತ್ತೆ ತನ್ನ ವಶಕ್ಕೆ ಪಡೆದುಕೊಂಡಿದೆ. ಆದಿತ್ಯ ಆಳ್ವಾ ಮಾದಕ ದ್ರವ್ಯ ಪ್ರಕರಣದ ಆರನೇ ಆರೋಪಿಯಾಗಿದ್ದು ಇತ ಪ್ರಕರಣ ಬೆಳಕಿಗೆ ಬಂದ ಬಳಿಕ 130 ದಿನಗಳ ಕಾಲ ತಲೆಮಾರೆಸಿಕೊಂಡಿದ್ದ. ಚೆನ್ನೈ ಹೊರವಲಯದ ರೆಸಾರ್ಟ್‍ನಲ್ಲಿ ಅಂತಿಮವಾಗಿ ಆರೋಪಿಯನ್ನು ಬಂಧಿಸಲಾಗಿತ್ತು. ಇತ ಜನತಾ ಪರಿವಾರದ ಹಿರಿಯ ನಾಯಕರಾಗಿದ್ದ ಜೀವರಾಜ್ ಆಳ್ವಾ ಅವರ ಮಗನಾಗಿದ್ದಾನೆ....
ಬೆಂಗಳೂರು

ಕೋವಿಡ್ ಲಸಿಕೆ ವಿತರಣೆ ಬಗ್ಗೆ ಸಿದ್ಧರಾಮಯ್ಯ ಪ್ರತಿಕ್ರಿಯೆ — ಕಹಳೆ ನ್ಯೂಸ್

ಬೆಂಗಳೂರು: ಕೊರೋನಾ ಲಸಿಕೆ ವಿತರಣಾ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ದೇಶಾದ್ಯಂತ ಚಾಲನೆ ನೀಡಿದರು. ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಬೆಂಗಳೂರಿನ ವಿಕ್ಟೋರಿಯ ಆಸ್ಪತ್ರೆಯಲ್ಲಿ ಚಾಲನೆ ನೀಡಿದ್ದು. ಕೋವಿಡ್ ಲಸಿಕೆ ವಿತರಣೆ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿˌ ಭರವಸೆಯ ಮಾತುಗಳನ್ನಾಡಿದರು. ಈ ಬಗ್ಗೆ ಮಾಜಿ ಸಿಎಂ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದುˌ ಲಸಿಕಾ ವಿತರಣಾ ಅಭಿಯಾನಕ್ಕೆ ಶುಭಕೋರಿ ಜನರ ಜೀವಗಳನ್ನು ಉಳಿಸಿˌ ಹೊಸ ಬದುಕು ಆರಂಭವಾಗಲಿ ಎಂದು...
ಬೆಂಗಳೂರು

ಯಡಿಯೂರಪ್ಪರವರ ಕುಟುಂಬ ರಾಜಕಾರಣದ ಬಗ್ಗೆ ಬಿಜೆಪಿ ನಾಯಕರಿಗೆ ತಡವಾಗಿ ಜ್ಞಾನೋದಯವಾಗಿದೆ: ಮಾಜಿ ಸಿಎಂ. ಸಿದ್ದರಾಮಯ್ಯ ವಾಗ್ದಾಳಿ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಹೆಸರಿಗಷ್ಟೇ ಮುಖ್ಯಮಂತ್ರಿಯಾಗಿದ್ದು ನಿಜವಾದ ಅಧಿಕಾರ ಚಲಾಯಿಸುತ್ತಿರುವುದು ಅವರ ಮಗ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಸಿಎಂ ಬಿ.ಎಸ್. ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಯಡಿಯೂರಪ್ಪ ಅವರ ಕುರ್ಚಿ ಗಟ್ಟಿಯಾಗಿದ್ದರೆ ಸಂಪುಟ ವಿಸ್ತರಣೆಗಾಗಿ ಹೈಕಮಾಂಡ್ ಬಳಿ ಗೋಗರೆಯುವ, ಕೈಕಾಲು ಹಿಡಿಯುವ ಅಗತ್ಯವಿರುತ್ತಿರಲಿಲ್ಲ. ಕೆಲವರಿಗೆ ಮಂತ್ರಿ ಸ್ಥಾನ ಕೊಡಲು ಕಾನೂನಿನ ತೊಡಕಿದೆ ಅಂತ ಗೊತ್ತಿದ್ರೂ ಸುಳ್ಳು ವಾಗ್ದಾನ ನೀಡಿ ಪಕ್ಷಕ್ಕೆ ಸೇರಿಸಿಕೊಂಡಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪರವರ ಕುಟುಂಬ ರಾಜಕಾರಣದ ಬಗ್ಗೆ...
1 297 298 299 300 301 319
Page 299 of 319