Friday, March 13, 2026

ರಾಷ್ಟ್ರೀಯ

ಕ್ರೈಮ್ಬೆಂಗಳೂರುರಾಜ್ಯ

ಜೈಲಿನಲ್ಲಿ ಕೈದಿಗಳ ರಾಜಾತಿಥ್ಯ ವಿಡಿಯೋ ವೈರಲ್ ಕೇಸ್ : ಹೆಚ್ಚಿನ ವಿಚಾರಣೆಗೆ ದರ್ಶನ್ ಆಪ್ತ ಧನ್ವೀರ್ ‘CCB’ ವಶಕ್ಕೆ – ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಡಿಯೋ ಫೋಟೋಗಳು ವೈರಲ್ ಆಗಿವೆ. ಈ ಒಂದು ವಿಚಾರಕ್ಕೆ ಸಂಬಂಧಪಟ್ಟಂತೆ ಕೊಲೆ ಆರೋಪಿ ನಟ ದರ್ಶನ್ ಆಪ್ತ ನಟ ಧನ್ವೀರನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಜೈಲಿನ ವಿಡಿಯೋ ಹೊರಗಡೆ ಬಂದಿರುವ ಸಂಬಂಧಪಟ್ಟಂತೆ ಸಿಸಿಬಿ ಪೊಲೀಸರು ದರ್ಶನ್ ಆಪ್ತ ಧನ್ವೀರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ತಡರಾತ್ರಿ ಒಂದು ಗಂಟೆಗೆ ಮನೆಯ ಬಳಿ ಧನ್ವೀರನನ್ನು ಸಿಸಿಬಿ ಪೊಲೀಸರು ವಶಕ್ಕೆ...
ಕ್ರೀಡೆಬೆಂಗಳೂರುರಾಜ್ಯಸುದ್ದಿ

ಸತತ ಎರಡನೇ ಬಾರಿಗೆ ತೇಜಸ್ವಿ ಸೂರ್ಯ ಐರನ್‌ಮ್ಯಾನ್​​ ಓಟದಲ್ಲಿ ಸಾಧನೆ : ಅಣ್ಣಾಮಲೈ ಕೂಡ ಭಾಗಿ – ಕಹಳೆ ನ್ಯೂಸ್

ಬೆಂಗಳೂರು  : ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಸತತ ಎರಡನೇ ಬಾರಿಗೆ ಗೋವಾದಲ್ಲಿ ನಡೆದ ಐರನ್‌ಮ್ಯಾನ್ 70.3 ಓಟವನ್ನು ಯಶಸ್ವಿಯಾಗಿ ಪೂರ್ಣಗೊಳಿಸುವ ಮೂಲಕ ತಮ್ಮ ದೈಹಿಕ ಸಾಮರ್ಥ್ಯ ಮತ್ತು ಶಿಸ್ತಿಗೆ ಮಾದರಿಯಾಗಿದ್ದಾರೆ. ಈ ವರ್ಷದ ಐರನ್ ಮ್ಯಾನ್​​ ಓಟದಲ್ಲಿ ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು ಸಹ ಭಾಗವಹಿಸಿದ್ದು ಮತ್ತೊಂದು ವಿಶೇಷ. ಸಂಸದ ತೇಜಸ್ವಿ ಸೂರ್ಯ ಸ್ಪರ್ಧೆಯ ಮೂರು ಕಠಿಣ ಹಂತಗಳಾದ 1.9...
ಬೆಂಗಳೂರುರಾಜ್ಯಸುದ್ದಿ

ಬೆಂಗಳೂರು ಏರ್‌ಪೋರ್ಟ್‌ ನಲ್ಲಿ ಸಾಮೂಹಿಕ ನಮಾಜ್‌ – ಶುರುವಾಯ್ತು ಹೊಸ ವಿವಾದ!- ಕಹಳೆ ನ್ಯೂಸ್

ಬೆಂಗಳೂರು: ಸಾರ್ವಜನಿಕ ಸ್ಥಳದಲ್ಲಿ ನಮಾಜ್ ಮಾಡಲು ಅವಕಾಶವಿಲ್ಲದಿದ್ದರೂ ಅಲ್ಲೊಂದು ಇಲ್ಲೊಂದು ಪ್ರಕರಣಗಳು ನಡೆಯುತ್ತಲೇ ಇದೆ, ಇದರ ನಡುವೆಯೇ ದೇವನಹಳ್ಳಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮುಸ್ಲಿಂ ಸಮುದಾಯದಿಂದ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ದು, ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಕೆಂಪೇಗೌಡ ವಿಮಾನದ ಟರ್ಮಿನಲ್ 2 ರಲ್ಲಿ ಸಾರ್ವಜನಿಕವಾಗಿ ಮುಸ್ಲಿಮರು ನಮಾಜ್ ಮಾಡಿದ್ದು, ಏರ್ಪೋಟ್ ಸಿಬ್ಬಂದಿ ಭದ್ರತಾ ಪಡೆ ಅಧಿಕಾರಿಗಳು ನೋಡಿಯೂ ಸುಮ್ಮನೆ ನಿಂತಿದ್ದಾರೆ ಎಂದು ನೆಟ್ಟಿಗರು ಆಕ್ರೋಶ ಹೊರಹಾಕಿದ್ದಾರೆ. ಏರ್ಪೋರ್ಟ್ ಗೆ...
ಬೆಂಗಳೂರುರಾಜ್ಯಸುದ್ದಿ

ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ಪ್ರಕರಣ: ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೇ ಕ್ರಮ: ಗೃಹ ಸಚಿವ ಪರಮೇಶ್ವರ್ -ಕಹಳೆ ನ್ಯೂಸ್

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪರಮೇಶ್ವರ್ ನೇತೃತ್ವದಲ್ಲಿ ಇಂದು ಪೊಲೀಸ್ ಅಧಿಕಾರಿಗಳ ಹಾಗೂ ಜೈಲಾಧಿಕಾರಿಗಳ ಮಹತ್ವದ ಸಭೆ ನಡೆಯಲಿದೆ. ಇಂದು ನಡೆಯಲಿರುವ ಸಭೆಯಲ್ಲಿ ರಾಜ್ಯದ ಎಲ್ಲಾ ಜೈಲಿನ ಅಧಿಕಾರಿಗಳು ಭಾಗಿಯಾಗಲಿದ್ದಾರೆ. ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಜೈಲಿನಲ್ಲಿ ಕಾನೂನು ಬಾಹಿರಚಟುವಟಿಕೆ ನಡೆಯುತ್ತಿದೆ ಎಂಬ ಬಗ್ಗೆ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ನ.15ಕ್ಕೆ ಸಿಎಂ ಸಿದ್ದರಾಮಯ್ಯ ದೆಹಲಿ ಪ್ರವಾಸ : ರಾಜ್ಯ ನಾಯಕತ್ವ ಬದಲಾವಣೆ ಸಾಧ್ಯತೆ?! – ಕಹಳೆ ನ್ಯೂಸ್

ಬೆಂಗಳೂರು : ಸದ್ಯ ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆ ಕುರಿತಂತೆ ಭಾರಿ ಚರ್ಚೆ ನಡೆಯುತ್ತಿದ್ದು, ಇದರ ಬೆನ್ನಲ್ಲೇ ಸಂಸದ ರಾಜಶೇಖರ ಹಿಟ್ನಾಳ ದೆಹಲಿಯಲ್ಲಿ ಔತಣಕೂಟ ಏರ್ಪಡಿಸಿದ್ದು, ಸಿಎಂ ಸಿದ್ದರಾಮಯ್ಯ ಸೇರಿದಂತೆ ಸಚಿವರು, ಶಾಸಕರುಗಳಿಗೆ ಆಹ್ವಾನ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ನವೆಂಬರ್ 15ಕ್ಕೆ ಸಿಎಂ ಸಿದ್ದರಾಮಯ್ಯ ದೆಹಲಿಗೆ ತೆರಳಿದ್ದಾರೆ. ಹೌದು ನವೆಂಬರ್ ಕ್ರಾಂತಿ ಚರ್ಚೆ ಮಧ್ಯ ಸಿಎಂ ಸಿದ್ದರಾಮಯ್ಯ ದೆಹಲಿ ಪ್ರವಾಸ ಕೈಗೊಳ್ಳಲಿದ್ದು ಕಾಂಗ್ರೆಸ್ ಮನೆಯಲ್ಲಿ ದೆಹಲಿ ದಂಡಯಾತ್ರೆ ಜೋರಾಗಿದೆ. ನವೆಂಬರ್...
ಜಮ್ಮು ಮತ್ತು ಕಾಶ್ಮೀರದೆಹಲಿರಾಜ್ಯರಾಷ್ಟ್ರೀಯಸುದ್ದಿ

ಉಗ್ರರ ಸಿಮ್ ದುರ್ಬಳಕೆ ಬೆನ್ನತ್ತಿದ್ದ ಕಾಶ್ಮೀರ ಪೊಲೀಸರು – ಕಹಳೆ ನ್ಯೂಸ್

ಶ್ರೀನಗರ : (ಪಿಟಿಐ) ಉಗ್ರರು ಬಳಸುವ ಸಿಮ್ ಕಾರ್ಡ್ ದುರ್ಬಳಕೆ ಪ್ರಕರಣದ ಬೆನ್ನತ್ತಿದ್ದಾರೆ ಕಾಶ್ಮೀರ ಪೊಲೀಸರು. ಭಯೋತ್ಪಾದಕರು ಸಿಮ್ ಕಾರ್ಡ್ಗಳನ್ನು ದುರುಪಯೋಗಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಶ್ಮೀರದ ಮೂರು ಜಿಲ್ಲೆಗಳ ವಿವಿಧ ಸ್ಥಳಗಳಲ್ಲಿ ಇಂದು ಗುಪ್ತಚರ ವಿಭಾಗ (ಸಿಐಕೆ) ಶೋಧ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೇಶ ವಿರೋಧಿ ಶಕ್ತಿಗಳು ಸಿಮ್ ಕಾರ್ಡ್ಗಳನ್ನು ದುರುಪಯೋಗಪಡಿಸಿಕೊಂಡ ಪ್ರಕರಣದ ತನಿಖೆಯ ಭಾಗವಾಗಿ ಸಿಐಕೆ ಕುಲ್ಗಾಮ್, ಕುಂಜರ್ (ಬಾರಾಮುಲ್ಲಾ) ಮತ್ತು ಶೋಪಿಯಾನ್ನಲ್ಲಿ ಶೋಧ ನಡೆಸುತ್ತಿದೆ ಎಂದು...
ಬೆಂಗಳೂರುರಾಜ್ಯಸುದ್ದಿ

ಸಮಾಜ ಒಗ್ಗೂಡಿಸುವುದೇ ಸಂಘದ ಗುರಿ, ಆರ್‌ಎಸ್‌ಎಸ್‌ ಯಾರ ವಿರುದ್ಧವೂ ಇಲ್ಲ: ಮೋಹನ್ ಭಾಗವತ್‌ – ಕಹಳೆ ನ್ಯೂಸ್

ಬೆಂಗಳೂರು: ಸಂಘವು ಸಮಾಜದಲ್ಲಿ ಒಗ್ಗೂಡಿಸುವ ಉದ್ದೇಶವನ್ನು ಹೊಂದಿದೆಯೇ ಹೊರತು ನಾಶ ಮಾಡುವ ಅಥವಾ ವಿರೋಧಿಸುವುದಕ್ಕಾಗಿ ರಚನೆಯಾಗಿಲ್ಲ. ನಮ್ಮ ಪೂರ್ವಿಕರು ಸಮಾಜದಲ್ಲಿ ಒಗ್ಗಟ್ಟು ಮೂಡಿಸಲು ಬಳಸಿದ ದಾರಿಗಳನ್ನೇ ಅಳವಡಿಸಿಕೊಂಡು, ಸಮಾಜದಲ್ಲಿನ ನ್ಯೂನತೆಗಳನ್ನು ಹೋಗಲಾಡಿಸುವುದು ಸಂಘದ ಉದ್ದೇಶ. ಉತ್ತಮ ವ್ಯಕ್ತಿಗಳನ್ನು ಸೃಷ್ಟಿಸುವ ಮೂಲಕ ಸಮಾಜ ಕಟ್ಟುವುದು ಸಂಘದ ಸಂಕಲ್ಪ ಎಂದು ಆರ್‌ಎಸ್‌ಎಸ್‌ ಸರ ಸಂಘಚಾಲಕ ಮೋಹನ್ ಭಾಗವತ್‌ ಹೇಳಿದ್ದಾರೆ. ನಗರದ ಪಿಇಎಸ್ ಕಾಲೇಜಿನಲ್ಲಿ ಆರ್‌ಎಸ್‌ಎಸ್‌ಗೆ ನೂರು ವರ್ಷ ತುಂಬಿದ ಹಿನ್ನೆಲೆಯಲ್ಲಿ ಆಯೋಜಿಸಲಾಗಿದ್ದ ಉಪನ್ಯಾಸ 'ನವ...
ಬೆಂಗಳೂರುರಾಜ್ಯಸುದ್ದಿ

ಬೆಂಗಳೂರು-ಎರ್ನಾಕುಲಂ ಸೇರಿ 4 ವಂದೇ ಭಾರತ್‌ ರೈಲುಗಳಿಗೆ ಪಿಎಂ ಮೋದಿ ಚಾಲನೆ – ಕಹಳೆ ನ್ಯೂಸ್

ವಾರಣಾಸಿ: ಪ್ರಧಾನಿ ನರೇಂದ್ರ ಮೋದಿ ತಮ್ಮ ಸಂಸದೀಯ ಕ್ಷೇತ್ರ ವಾರಣಾಸಿಗೆ ಭೇಟಿ ನೀಡಿದ ಸಂದರ್ಭದಲ್ಲಿ ನಾಲ್ಕು ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಚಾಲನೆ ನೀಡಿದ್ದಾರೆ. ಇದು ಭಾರತದ ವಿಸ್ತರಿಸುತ್ತಿರುವ ಅರೆ-ಹೈ-ಸ್ಪೀಡ್ ರೈಲುಗಳ ಜಾಲದಲ್ಲಿ ಮತ್ತೊಂದು ಮೈಲಿಗಲ್ಲಾಗಿದೆ. ಈ ರೈಲುಗಳು ವಾರಣಾಸಿ-ಖಜುರಾಹೊ, ಲಕ್ನೋ-ಸಹಾರನ್‌ಪುರ, ಫಿರೋಜ್‌ಪುರ-ದೆಹಲಿ ಮತ್ತು ಎರ್ನಾಕುಲಂ-ಬೆಂಗಳೂರು ಮಾರ್ಗಗಳಲ್ಲಿ ಕಾರ್ಯನಿರ್ವಹಿಸಲಿದ್ದು, ದೇಶದ ಹಲವಾರು ಪ್ರದೇಶಗಳಲ್ಲಿ ವೇಗದ ಪ್ರಯಾಣ ಮತ್ತು ಸುಧಾರಿತ ಸಂಪರ್ಕವನ್ನು ಭರವಸೆ ನೀಡುತ್ತವೆ. ವಾರಣಾಸಿ-ಖಜುರಾಹೊ ವಂದೇ ಭಾರತ್ ವಾರಣಾಸಿ,...
1 43 44 45 46 47 319
Page 45 of 319