Tuesday, March 17, 2026

ರಾಷ್ಟ್ರೀಯ

ಅಂಕಣಕ್ರೈಮ್ಬೆಂಗಳೂರುಸುದ್ದಿ

ಜೈಲಲ್ಲಿ ; ದರ್ಶನ್‌ ಸ್ಥಿತಿ ಕಂಡು ಪತ್ನಿ ವಿಜಯಲಕ್ಷ್ಮಿ ಕಣ್ಣೀರು- ಕಹಳೆ ನ್ಯೂಸ್

– ಪತ್ನಿ ವಿಜಯಲಕ್ಷ್ಮಿ ಮುಂದೆ ದಾಸನ ಗೋಳಾಟ -ಹಣೆಬರಹದಲ್ಲಿ ಇದ್ದಂಗೆ ಆಗುತ್ತೆ, ಜೈಲಿಗೆ ಬರಬೇಡ ಎಂದು ಪತ್ನಿಗೆ ಹೇಳಿದ ದರ್ಶನ್‌ ಬೆಂಗಳೂರು: ರೇಣುಕಾಸ್ವಾಮಿ ಕೇಸ್‌ಲ್ಲಿ  ಎರಡನೇ ಬಾರೀ ಜೈಲು ಸೇರಿರುವ ನಟ ದರ್ಶನ್‌ಗೆ ಒಂದರ ಮೇಲೊಂದರಂತೆ ಸಂಕಷ್ಟ ಎದುರಾಗುತ್ತಿದೆ. ಸೌಲಭ್ಯದಿಂದ ವಂಚಿತರಾಗಿ ಪರಿತಪಿಸುತ್ತಿರುವ ಪತಿಯ ಕಂಡು ಪತ್ನಿ ವಿಜಯಲಕ್ಷ್ಮಿ ಕಣ್ಣೀರಿಟ್ಟಿದ್ದಾರೆ. ಪರಪ್ಪನ ಅಗ್ರಹಾರ ಜೈಲು ಸೇರಿದಾಗಿನಿಂದಲೂ ನಟ ದರ್ಶನ್‌ಗೆ ಒಂದಿಲ್ಲೊಂದು ಸಮಸ್ಯೆ ಕಾಡುತ್ತಲೇ ಇದೆ. ಹಾಸಿಗೆ, ದಿಂಬು ಇಲ್ಲದೇ ಪರದಾಡುವಂತಾಗಿದ್ದು,...
ಅಂಕಣಮುಂಬೈಸುದ್ದಿ

ಅರಬ್ಬಿ ಸಮುದ್ರದಲ್ಲಿ ‘ಶಕ್ತಿ’ ಅಬ್ಬರ ; ಮಹಾರಾಷ್ಟ್ರದಲ್ಲಿ ಅ.7ರವರೆಗೆ ಭಾರೀ ಮಳೆ ಸಾಧ್ಯತೆ-ಕಹಳೆ ನ್ಯೂಸ್

ಮುಂಬೈ: ಅರಬ್ಬಿ ಸಮುದ್ರದಲ್ಲಿ ಶಕ್ತಿ ಚಂಡಮಾರುತ  ಅಬ್ಬರ ಹಿನ್ನೆಲೆ ಮಹಾರಾಷ್ಟ್ರದಲ್ಲಿ ಭಾರೀ ಮಳೆ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಅಕ್ಟೋಬರ್ 3ರಿಂದ 7ರವರೆಗೆ ಮಹಾರಾಷ್ಟ್ರದಲ್ಲಿ ಭಾರೀ ಮಳೆ ಎಚ್ಚರಿಕೆ ನೀಡಲಾಗಿದೆ. ಬಲವಾದ ಗಾಳಿ, ಚಂಡಮಾರುತದ ಎಚ್ಚರಿಕೆ ನೀಡಿದ್ದು, ಮುಂಬೈ, ಥಾಣೆ, ಪಾಲ್ಘರ್, ರಾಯಗಢ, ರತ್ನಗಿರಿ, ಸಿಂಧುದುರ್ಗ ಸೇರಿದಂತೆ ಹಲವು ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಗುಜರಾತ್‌ನ ದ್ವಾರಕಾದಿಂದ ಸುಮಾರು 250 ಕಿ.ಮೀ ಪಶ್ಚಿಮ-ನೈಋತ್ಯಕ್ಕೆ ಚಂಡಮಾರುತ ಕೇಂದ್ರೀಕೃತವಾಗಿದೆ. ಇಂದು ಈ ಚಂಡಮಾರುತ...
ಅಂಕಣಬೆಂಗಳೂರುಸುದ್ದಿ

ರಾಷ್ಟ್ರೀಯ ಉತ್ತಮ ಶಿಕ್ಷಕ ಪುರಸ್ಕೃತ ; ಪಿಜಿ ದ್ವಾರಕನಾಥ್ ನಿಧನ- ಕಹಳೆ ನ್ಯೂಸ್

ಬೆಂಗಳೂರು: ರಾಷ್ಟ್ರೀಯ ಉತ್ತಮ ಶಿಕ್ಷಕ ಪುರಸ್ಕೃತ ಪಿಜಿ ದ್ವಾರಕನಾಥ್‌ ನಿಧನರಾಗಿದ್ದಾರೆ. ಇಂದು ಸಾಯಂಕಾಲ ಕೆಂಗೇರಿ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ವಿದ್ಯಾವರ್ಧಕ ಸಂಘದ ಕಾರ್ಯದರ್ಶಿಯಾಗಿದ್ದ ದ್ವಾರಕನಾಥ್ ಅವರು ಶುಕ್ರವಾರ ರಾತ್ರಿ 9 ಗಂಟೆಗೆ ಆರ್‌ಆರ್ ನಗರದ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ರಾಷ್ಟ್ರಪತಿಗಳಿಂದ ರಾಷ್ಟ್ರೀಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾಗಿದ್ದರು. ಅವರ ವ್ಯಾಪಕ ಶೈಕ್ಷಣಿಕ ಮತ್ತು ಆಡಳಿತಾತ್ಮಕ ಅನುಭವಕ್ಕಾಗಿ ಸಂಘದ ಕಾರ್ಯದರ್ಶಿಗಳಾಗಿ‌ ನೇಮಕ ಮಾಡಲಾಗಿತ್ತು. ರಾಷ್ಟ್ರೀಯ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದರು. ವಿವಿಎಸ್ ಸಂಸ್ಥೆಗಳಿಗೆ...
ದೆಹಲಿರಾಜ್ಯಸುದ್ದಿಹೆಚ್ಚಿನ ಸುದ್ದಿ

Operation Sindoor: F16, JF 17 ಸೇರಿ ಪಾಕ್‌ ನ 10 ಯುದ್ಧ ವಿಮಾನ ನಾಶ: ಮಾರ್ಷಲ್‌ ಸಿಂಗ್ – ಕಹಳೆ ನ್ಯೂಸ್

ನವದೆಹಲಿ: ಪಹಲ್ಗಾಮ್‌ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಪಾಕ್‌ ಮೇಲೆ ನಡೆಸಿದ ಆಪರೇಶನ್‌ ಸಿಂದೂರ ದಾಳಿಗೆ ಬೆಚ್ಚಿಬಿದ್ದಿದ್ದ ಪಾಕ್‌ ಕದನ ವಿರಾಮ ಘೋಷಿಸುವಂತೆ ಬೇಡಿಕೊಂಡಿತ್ತು. ಅಷ್ಟೇ ಅಲ್ಲ ದಾಳಿ ವೇಳೆ ಪಾಕ್‌ ನ 10 ಯುದ್ಧ ವಿಮಾನಗಳು ಸೇರಿದಂತೆ 12 ವಿಮಾನಗಳನ್ನು ಹೊಡೆದುರುಳಿಸಲಾಗಿತ್ತು ಎಂಬ ಮಾಹಿತಿಯನ್ನು ಭಾರತೀಯ ವಾಯುಪಡೆ ಮುಖ್ಯಸ್ಥ ಮಾರ್ಷಲ್‌ ಅಮರ್‌ ಪ್ರೀತ್‌ ಸಿಂಗ್‌ ಶುಕ್ರವಾರ (ಅ.03) ಬಹಿರಂಗಗೊಳಿಸಿದ್ದಾರೆ. ಆಪರೇಶನ್‌ ಸಿಂದೂರ ವೇಳೆ ಭಾರತದ ವಾಯುಪಡೆ ಪಾಕ್‌...
ಬೆಂಗಳೂರುರಾಜ್ಯಸಿನಿಮಾಸುದ್ದಿಹೆಚ್ಚಿನ ಸುದ್ದಿ

ಮೊದಲ ದಿನವೇ ಗಳಿಕೆಯಲ್ಲಿ ‘ಕಾಂತಾರ 1’ ಹೊಸ ದಾಖಲೆ: 55 ಕೋಟಿ ರೂ. ಕಲೆಕ್ಷನ್ – ಕಹಳೆ ನ್ಯೂಸ್

ಬೆಂಗಳೂರು: ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ 'ಕಾಂತಾರ ಚಾಪ್ಟರ್ 1' ಚಿತ್ರ ವಿಶ್ವದಾದ್ಯಂತ ಭರ್ಜರಿ ಓಪನಿಂಗ್ ಪಡೆದುಕೊಂಡಿದೆ. ಮೊದಲ ದಿನವೇ ಭಾರತದಲ್ಲಿ 45 ಕೋಟಿ ರೂ., ವಿದೇಶಗಳಲ್ಲಿ 10 ಕೋಟಿ ರೂ. ಗಳಿಸಿದ್ದು, ಇಂದು 100 ಕೋಟಿ ಕ್ಲಬ್ ಗೆ ಸೇರುವ ಸಾಧ್ಯತೆ ಇದೆ. ಪ್ರೀಮಿಯರ್ ಶೋಗಳು ಮತ್ತು ಮೊದಲ ದಿನದ ಗಳಿಕೆಯಿಂದ 55 ಕೋಟಿ ರೂ. ಗಳಿಸಿರುವುದು ಹೊಸ ದಾಖಲೆಯಾಗಿದೆ. ಭಾರತದಲ್ಲಿ ಒಟ್ಟು 6500 ಸ್ಕ್ರೀನ್ ಗಳಲ್ಲಿ ಸುಮಾರು...
ಬೆಂಗಳೂರುರಾಜ್ಯ

ಬೆಂಗಳೂರಿನಲ್ಲಿ ಹಿಟ್ & ರನ್ ಗೆ ವಿದ್ಯಾರ್ಥಿನಿ ಬಲಿ : ಟಿಪ್ಪರ್ ಚಾಲಕ ಅರೆಸ್ಟ್ -ಕಹಳೆ ನ್ಯೂಸ್

ಬೆಂಗಳೂರು: ಬೆಂಗಳೂರಿನ ಬೂದಿಗೆರೆ ಕ್ರಾಸ್ ಬಳಿ ಇತ್ತೀಚೆಗೆ ನಡೆದ ಹಿಟ್ & ರನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಟಿಪ್ಪರ್ ಚಾಲಕನನ್ನ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಪಶ್ಚಿಮ ಬಂಗಾಳ ಮೂಲದ ಜೆರಾಲ್ಡ್ ಮಂಡಲ್ ಎಂದು ಗುರುತಿಸಲಾಗಿದೆ. ಸಿಸಿಟಿವಿ ದೃಶ್ಯಾವಳಿ ಆಧರಿಸಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ರಸ್ತೆ ಹಾಳಾಗಿದ್ದರಿಂದ ಬೈಕ್ ಸ್ಕಿಡ್ ಆಗಿ ವಿದ್ಯಾರ್ಥಿನಿ ಕೆಳಗೆ ಬಿದ್ದಿದ್ದು, ವಿದ್ಯಾರ್ಥಿನಿ ಮೇಲೆಯೇ ಟಿಪ್ಪರ್ ಲಾರಿ ಹರಿದು ಹೋಗಿದೆ. ಪರಿಣಾಮ ಸ್ಥಳದಲ್ಲೇ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾರೆ.ಘಟನೆ ಬಳಿಕ...
ಬೆಂಗಳೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ: ಶೀಘ್ರ ಗುಣಮುಖರಾಗುವಂತೆ ಹಾರೈಕೆ – ಕಹಳೆ ನ್ಯೂಸ್

ಬೆಂಗಳೂರು: ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ಆರೋಗ್ಯ ವಿಚಾರಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮೋದಿಯವರು, ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಮಾತನಾಡಿದೆ. ಅವರ ಆರೋಗ್ಯದ ಬಗ್ಗೆ ವಿಚಾರಿಸಿದೆ ಮತ್ತು ಬೇಗನೆ ಗುಣಮುಖರಾಗುವಂತೆ ಹಾರೈಸಿದೆ ಎಂದು ಹೇಳಿದ್ದಾರೆ. ಇದೇ ವೇಳೆ ಖರ್ಗೆಯವರು ಬೇಗ ಗುಣಮುಖರಾಗಲಿ ಮತ್ತು ದೀರ್ಘಾಯುಷ್ಯ ಅವರದ್ದಾಗಲಿ...
ದೆಹಲಿರಾಜ್ಯರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನದ ಅಂಗವಾಗಿ ರಾಷ್ಟ್ರಪತಿ ದ್ರೌಪತಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಗೌರವ ನಮನ – ಕಹಳೆನ್ಯೂಸ್

ನವದೆಹಲಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನದ ಅಂಗವಾಗಿ ರಾಷ್ಟ್ರಪತಿ ದ್ರೌಪತಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಗೌರವ ನಮನ ಸಲ್ಲಿಸಿದ್ದಾರೆ. ರಾಷ್ಟ್ರಪತಿ ದ್ರೌಪತಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಇಂದು (ಗುರುವಾರ) ಬೆಳಿಗ್ಗೆ ರಾಜ್‌ಘಾಟ್‌ನಲ್ಲಿರುವ ಗಾಂಧಿ ಮತ್ತು ವಿಜಯ್ ಘಾಟ್‌ನಲ್ಲಿರುವ ಬಹದ್ದೂರ್ ಸ್ಮಾರಕಕ್ಕೆ ಭೇಟಿ ನೀಡಿ ಅಗಲಿದ ಚೇತನಗಳಿಗೆ ಪುಷ್ಪ ನಮನ ಸಲ್ಲಿಸಿದ್ದಾರೆ. ಗಾಂಧಿ ಅವರ ಸತ್ಯ,...
1 66 67 68 69 70 320
Page 68 of 320