Friday, April 24, 2026

ರಾಷ್ಟ್ರೀಯ

ಜಿಲ್ಲೆದೆಹಲಿರಾಜ್ಯಸುದ್ದಿ

ನವೀಕರಿಸಬಹುದಾದ ಇಂಧನದಲ್ಲಿ ಭಾರತ 3ನೇ ಅತಿದೊಡ್ಡ ರಾಷ್ಟ್ರ: ಪ್ರಹ್ಲಾದ್ ಜೋಶಿ -ಕಹಳೆ ನ್ಯೂಸ್

ನವದೆಹಲಿ: ಸೌರಶಕ್ತಿ ನವೀಕರಿಸಬಹುದಾದ ಇಂಧನ ಉತ್ಪಾದನೆಯಲ್ಲಿ ಭಾರತ ಮೂರನೇ ಅತಿದೊಡ್ಡ ರಾಷ್ಟ್ರವಾಗಿ ನಿಂತಿದ್ದು, ಊಹಿಸಲು ಅಸಾಧ್ಯ ಎನ್ನುವಂತೆ ಅಗಾಧ ಸಾಧನೆಗೈದಿದೆ ಎಂದು ಕೇಂದ್ರ ನವೀಕರಿಸಬಹುದಾದ ಇಂಧನ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. WION ವರ್ಲ್ಡ್ ಪಲ್ಸ್ ಕಾರ್ಯಕ್ರಮದಲ್ಲಿ ಏರ್ಪಡಿಸಿದ್ದ ಸಂವಾದದಲ್ಲಿ ಮಾತನಾಡಿ, 2030ರ ವೇಳೆಗೆ 500 GW ನವೀಕರಿಸಬಹುದಾದ ಇಂಧನ ಗುರಿಯತ್ತ ಸಾಗಿರುವ ಭಾರತದ ಶುದ್ಧ ಇಂಧನ ಪ್ರಯಾಣ ಅಭೂತಪೂರ್ವ ವೇಗ ಪಡೆಯುತ್ತಿದೆ ಎಂದರು. ಭಾರತದ ಮಾಡ್ಯೂಲ್ ಮತ್ತು ಉತ್ಪಾದನಾ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ರಾಜ್ಯದಲ್ಲಿ ಮತ್ತೆರೆಡು ದಿನ ಭಾರೀ ಮಳೆ : 20 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ -ಕಹಳೆ ನ್ಯೂಸ್

ಬೆಂಗಳೂರು: ಕರ್ನಾಟಕದ ಹಲವೆಡೆ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬೆಳಗಾವಿ, ಧಾರವಾಡ, ದಾವಣಗೆರೆ, ಶಿವಮೊಗ್ಗ ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಕೊಡಗು ಮೈಸೂರು, ಬೆಂಗಳೂರು ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ತುಮಕೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ ಹಲವಾರು ಭಾಗಗಳಲ್ಲಿ ಬುಧವಾರ (ಮಾ.18) ಭಾರೀ ಮಳೆಯಾಗಿದೆ. ಬೆಂಗಳೂರಿನ ಎಂಜಿ ರಸ್ತೆ,...
ರಾಜ್ಯರಾಷ್ಟ್ರೀಯಸುದ್ದಿ

ಕತಾರ್‌ನ ವಿಶ್ವದ ಅತಿದೊಡ್ಡ ಎಲ್‌ಎನ್‌ಜಿ ಸ್ಥಾವರದ ಮೇಲೆ ಇರಾನ್‌ ಕ್ಷಿಪಣಿ ದಾಳಿ -ಕಹಳೆ ನ್ಯೂಸ್

ಟೆಹ್ರಾನ್: ಕತಾರ್‌ನಲ್ಲಿರುವ ವಿಶ್ವದ ಅತಿದೊಡ್ಡ ಎಲ್‌ಎನ್‌ಜಿ ಸ್ಥಾವರದ ಮೇಲೆ ಇರಾನಿನ ಕ್ಷಿಪಣಿ ದಾಳಿ ನಡೆಸಿದೆ. ಪರ್ಷಿಯನ್ ಕೊಲ್ಲಿಯಾದ್ಯಂತ ಇಂಧನ ಸೌಲಭ್ಯಗಳ ಮೇಲಿನ ದಾಳಿಗಳು ತೀವ್ರವಾಗಿ ಹೆಚ್ಚುತ್ತಿರುವ ನಡುವೆ, ವಿಶ್ವದ ಅತಿದೊಡ್ಡ ದ್ರವೀಕೃತ ನೈಸರ್ಗಿಕ ಅನಿಲ ರಫ್ತು ಸ್ಥಾವರವನ್ನು ಹೊಂದಿರುವ ಕತಾರಿ ಸಂಕೀರ್ಣವು ವ್ಯಾಪಕ ಹಾನಿಗೊಳಗಾಗಿದೆ. ಈ ತಿಂಗಳ ಆರಂಭದಲ್ಲಿ ಉತ್ಪಾದನೆಯನ್ನು ಸ್ಥಗಿತಗೊಳಿಸುವ ಮೊದಲು ಜಾಗತಿಕ ಪೂರೈಕೆಯ ಐದನೇ ಒಂದು ಭಾಗದಷ್ಟು ಪಾಲನ್ನು ಹೊಂದಿದ್ದ ಎಲ್‌ಎನ್‌ಜಿ ಸ್ಥಾವರವು ರಾಸ್ ಲಫಾನ್ ಕೈಗಾರಿಕಾ...
ರಾಜ್ಯರಾಷ್ಟ್ರೀಯಸುದ್ದಿ

ಇರಾನ್‌ನ ಸೌತ್‌ ಪಾರ್ಸ್‌ ಮೇಲೆ ಇನ್ಮುಂದೆ ದಾಳಿ ನಡೆಯಲ್ಲ, ಇಸ್ರೇಲ್‌ ದಾಳಿ ಬಗ್ಗೆ ಗೊತ್ತಿಲ್ಲ: ಟ್ರಂಪ್‌ -ಕಹಳೆ ನ್ಯೂಸ್

ವಾಷಿಂಗ್ಟನ್: ಇರಾನ್‌ನ ಸೌತ್ ಪಾರ್ಸ್ ಅನಿಲ ಕ್ಷೇತ್ರದ ಮೇಲೆ ಇಸ್ರೇಲ್ ದಾಳಿ ನಡೆಸುತ್ತಿರುವ ಬಗ್ಗೆ ಅಮೆರಿಕಕ್ಕೆ ಯಾವುದೇ ಸುಳಿವು ಇರಲಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ಎರಡೂ ರಾಷ್ಟ್ರಗಳನ್ನು ಒಳಗೊಂಡ ಇರಾನ್ ವಿರುದ್ಧದ ಜಂಟಿ ಕಾರ್ಯಾಚರಣೆಯಲ್ಲಿ ಇಸ್ರೇಲ್ ತನ್ನನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ವರ್ತಿಸಿದೆ ಎಂದು ಅಮೆರಿಕ ಹೇಳಿರುವುದು ಇದೇ ಮೊದಲು. ಕತಾರ್‌ನ ಎಲ್‌ಎನ್‌ಜಿ ಸೌಲಭ್ಯದ ಮೇಲೆ ಇರಾನ್ ಅನ್ಯಾಯವಾಗಿ ದಾಳಿ ಮಾಡಿದೆ‌ ಎಂದು ಟ್ರಂಪ್‌ ಇದೇ ವೇಳೆ...
ಬೆಂಗಳೂರುಸುದ್ದಿ

ಒಂದು ವಾರ ಸಹಕಾರ ಕೊಟ್ಟರೆ ಹೋಟೆಲ್‌ಗಳಿಗೆ ಸಿಲಿಂಡರ್ ಕೊಡ್ತೀವಿ: ಕೆ.ಹೆಚ್. ಮುನಿಯಪ್ಪ – ಕಹಳೆ ನ್ಯೂಸ್

ಬೆಂಗಳೂರು: ಒಂದು ವಾರ ಹೋಟೆಲ್‌ಗಳು ಗ್ಯಾಸ್ ಸಿಲಿಂಡರ್‌ಗಾಗಿ ಸಹಕಾರ ಕೊಡಬೇಕು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಮುನಿಯಪ್ಪ ಹೋಟೆಲ್ ಅಸೋಸಿಯೇಷನ್‌ಗೆ ಮನವಿ ಮಾಡಿದ್ದಾರೆ. ವಿಧಾನ ಪರಿಷತ್‌ನಲ್ಲಿ ಗ್ಯಾಸ್ ಸಮಸ್ಯೆ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ನಮಗೆ ಡೊಮೆಸ್ಟಿಕ್ ಸಿಲಿಂಡರ್ ಸಮಸ್ಯೆ ಇಲ್ಲ. ಎಷ್ಟು ಸಪ್ಲೈ ಆಗಬೇಕೋ ಅಷ್ಟು ಆಗಿದೆ. ಗೃಹ ಬಳಕೆ ನಿಲ್ಲಿಸೋದಿಲ್ಲ. 3 ಲಕ್ಷಕ್ಕೂ ಹೆಚ್ಚು ಸಿಲಿಂಡರ್ ಬಳಕೆ ಆಗುತ್ತಿದೆ. ಅದನ್ನ ಕೊಡುತ್ತಿದ್ದೇವೆ. ಕಮರ್ಷಿಯಲ್ ಗ್ಯಾಸ್...
ದೆಹಲಿರಾಜ್ಯಸುದ್ದಿ

ದೆಹಲಿಯ ಪಾಲಂನ ವಸತಿ ಕಟ್ಟಡದಲ್ಲಿ ಅಗ್ನಿ ಅವಘಡ : 8 ಮಂದಿ ಸಾವು-ಸ್ಥಳದಲ್ಲಿ 30 ಅಗ್ನಿಶಾಮಕದಿಂದ ರಕ್ಷಣಾ ಕಾರ್ಯಾಚರಣೆ – ಕಹಳೆ ನ್ಯೂಸ್

ನವದೆಹಲಿ: ವಸತಿ ಕಟ್ಟಡವೊಂದರಲ್ಲಿ ಬುಧವಾರ ಬೆಳಗ್ಗೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, 8 ಮಂದಿ ಸಾವನ್ನಪ್ಪಿರುವ ಘಟನೆ ನೈಋತ್ಯ ದೆಹಲಿಯ ಪಾಲಂ ಪ್ರದೇಶದಲ್ಲಿ ನಡೆದಿದೆ. ಬುಧವಾರ ಮುಂಜಾನೆ 7 ಗಂಟೆಯ ಸುಮಾರಿಗೆ ಅಗ್ನಿ ಅವಘಡದ ಬಗ್ಗೆ ಕರೆ ಬಂದಿದೆ. ಘಟನಾ ಸ್ಥಳಕ್ಕೆ 30 ಅಗ್ನಿಶಾಮಕ ವಾಹನಗಳು ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದೆ. ಕಟ್ಟಡದ ಒಳಗೆ ಇನ್ನೂ ಹಲವರು ಸಿಲುಕಿರುವ ಶಂಕೆಯಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ಸಿಬ್ಬಂದಿಗೆ ಸಹಾಯ...
ಬೆಂಗಳೂರುರಾಜ್ಯಸುದ್ದಿ

ಬೈಕ್‌ ಅಡ್ಡಗಟ್ಟಿ ದರೋಡೆ ಮಾಡಿದ್ದ ಗ್ಯಾಂಗ್‌ ಬಂಧನ -ಕಹಳೆ ನ್ಯೂಸ್

ಬೆಂಗಳೂರು: ಬೈಕ್‌ ಅಡ್ಡಗಟ್ಟಿ ದರೋಡೆ ಮಾಡಿದ್ದ ಗ್ಯಾಂಗ್‌ನ ಆರೋಪಿಗಳನ್ನು ಬನ್ನೇರುಘಟ್ಟ ಪೊಲೀಸರು ಬಂಧಿಸಿದ್ದಾರೆ. ನಿಖಿಲ್, ಪ್ರಶಾಂತ್ ಅಲಿಯಾಸ್‌ ಪಿಂಕಿ, ಅರುಣ್ ಕುಮಾರ್, ಹರೀಶ್, ರಕ್ಷಿತ್ ಬಂಧಿತ ಆರೋಪಿಗಳು. ಬಂಧಿತರಿಂದ 10 ಲಕ್ಷ ಹಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶ್ರೀ ಕೈಲಾಸ್ ಎಂಬಾತನನ್ನ ಅಡ್ಡಗಟ್ಟಿ ಸಿನಿಮೀಯ ರೀತಿಯಲ್ಲಿ ಗ್ಯಾಂಗ್‌ ದರೋಡೆ ಮಾಡಿ ಎಸ್ಕೇಪ್‌ ಆಗಿತ್ತು. ಘಟನೆ ಸಂಬಂಧ ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ತಲೆಮರೆಸಿಕೊಂಡಿದ್ದ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೈಲಾಸ್‌...
ಬೆಂಗಳೂರುರಾಜ್ಯಸುದ್ದಿ

ಇಂದಿನಿಂದ SSLC ಪರೀಕ್ಷೆ 1 ಪ್ರಾರಂಭ : ವಿದ್ಯಾರ್ಥಿಗಳಿಗೆ ಶುಭಕೋರಿದ ಸಚಿವ ಮಧುಬಂಗಾರಪ್ಪ -ಕಹಳೆ ನ್ಯೂಸ್

ಬೆಂಗಳೂರು: ವಿದ್ಯಾರ್ಥಿ ಜೀವನದ ಪ್ರಮುಖ ಪರೀಕ್ಷೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ -1 ಇಂದಿನಿಂದ ಪ್ರಾರಂಭ ಆಗಲಿದೆ. ಪರೀಕ್ಷೆಗೆ ಎಕ್ಸಾಂ ಬೋರ್ಡ್ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಅಕ್ರಮಗಳು ನಡೆಯದಂತೆ ಹದ್ದಿನ ಕಣ್ಣಿಟ್ಟಿದೆ. ಇಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 1:15 ರ ವರೆಗೆ ಪರೀಕ್ಷೆ ನಡೆಯಲಿದೆ. 8,65,988 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. 7,75,979 ವಿದ್ಯಾರ್ಥಿಗಳು ಹೊಸದಾಗಿ ಪರೀಕ್ಷೆ ಬರೆಯಲಿದ್ದಾರೆ. 62,938 ಪುನರಾವರ್ತಿತ ವಿದ್ಯಾರ್ಥಿಗಳು ನೋಂದಾಯಿಸಿದ್ದಾರೆ. 2,870 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಪರೀಕ್ಷೆ ಬರೆಯುವ...
1 7 8 9 10 11 329
Page 9 of 329