Wednesday, March 18, 2026

ರಾಷ್ಟ್ರೀಯ

ದೆಹಲಿಸುದ್ದಿ

ಧನ್ಕರ್‌ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು- ಕಹಳೆ ನ್ಯೂಸ್

ನವದೆಹಲಿ :ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉಪರಾಷ್ಟ್ರಪತಿ ಜಗದೀಪ್‌ ಧನ್ಕರ್‌ ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ಸೋಮವಾರ ನಡೆದ ದಿಢೀರ್‌ ಬೆಳವಣಿಗೆಯಲ್ಲಿ ಜಗದೀಪ್‌ ಧನ್ಕರ್‌ ಅವರು ದೇಶದ ಪ್ರಥಮ ಪ್ರಜೆಯಾಗಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದು ತಮ ರಾಜೀನಾಮೆ ಪತ್ರವನ್ನು ಅಂಗೀಕರಿಸಬೇಕೆಂದು ಮನವಿ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ದ್ರೌಪದಿ ಮುರ್ಮು ಅವರು ರಾಜೀನಾಮೆಯನ್ನು ಅಂಗೀಕರಿಸಿದ್ದು, ಮುಂದಿನ ಪ್ರಕ್ರಿಯೆಗಳಿಗೆ ಗೃಹ ಇಲಾಖೆಗೆ ಕಳುಹಿಸಿಕೊಟಿದ್ದಾರೆ.ರಾಷ್ಟ್ರಪತಿಗೆ ಬರೆದಿದ್ದ ಪತ್ರದಲ್ಲಿ ಸಂವಿಧಾನದ 67(ಎ) ವಿಧಿಯ...
ಬೆಂಗಳೂರುಸುದ್ದಿ

ಜುಲೈ 22ರಂದು ಚಿನ್ನದ ಬೆಲೆ ಹಾರಾಟ..24K ಚಿನ್ನದಲ್ಲಿ ಒಂದೇ ದಿನ 11,400 ರೂ. ಏರಿಕೆ!

ಚಿನ್ನದ ಬೆಲೆ ಹಾವಳಿ ಜೋರಾಗಿದೆ. ಬಿರುಗಾಳಿಯಂತೆ ಏರುತ್ತಿದೆ ಬಂಗಾರದ ಬೆಲೆ. ಜುಲೈ ತಿಂಗಳಿನಲ್ಲಿ ಚಿನ್ನದ ಬೆಲೆ ಇಳಿಕೆಯಾಗುವ ನಿರೀಕ್ಷೆ ಇತ್ತು. ಆದರೆ ಏರಿಕೆಯ ಹಾದಿಯಲ್ಲೇ ಸಾಗಿದ ಬಂಗಾರ ಇಂದು ಕೈ ಸುಡುತ್ತಿದೆ. 24 ಕ್ಯಾರೆಟ್‌ನ 100 ಗ್ರಾಂ ಚಿನ್ನದ ಬೆಲೆ ಇಂದು 10,12,900 ರೂ. ಗೆ ಬಂದು ನಿಂತಿದೆ. ಅಂದರೆ ಇಂದು ಒಂದೇ ದಿನದಲ್ಲಿ 11,400 ರೂ. ಏರಿಕೆಯಾಗಿದೆ. ಈ ಪರಿಯ ಬೆಲೆ ಏರಿಕೆಯು ಜನರ ನೆತ್ತಿ ಸುಡುತ್ತದೆ. ಹಬ್ಬ,...
ಕ್ರೈಮ್ಬೆಂಗಳೂರುಸುದ್ದಿ

ದರ್ಶನ್ & ಗ್ಯಾಂಗ್ ನಿಂದ ರೇಣುಕಾಸ್ವಾಮಿ ಕೊಲೆ ಕೇಸ್ : ಜು.24ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್ -ಕಹಳೆ ನ್ಯೂಸ್

ನವದೆಹಲಿ : ನಟ ದರ್ಶನ್ ಮತ್ತು ಗ್ಯಾಂಗ್ ನಿಂದ ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ, ನಟ ದರ್ಶನ್ ಸೇರಿದಂತೆ ಜಾಮೀನು ಕೋರಿ ಎಲ್ಲಾ ಆರೋಪಿಗಳು ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದವು. ಇಂದು ಸುಪ್ರೀಂ ಕೋರ್ಟಲ್ಲಿ ವಿಚಾರಣೆ ನಡೆಸಿದ ನ್ಯಾಯಾಧೀಶರು ಜುಲೈ 24ಕ್ಕೆ ವಿಚಾರಣೆ ಮುಂದೂಡಿದರು. ಇಂದು ಸುಪ್ರೀಂ ಕೋರ್ಟಲ್ಲಿ ವಿಚಾರಣೆ ನಡೆಸಿದ ನ್ಯಾಯಾಧೀಶರು ಜುಲೈ 24ಕ್ಕೆ ವಿಚಾರಣೆ ಮುಂದೂಡಿದರು. ದರ್ಶನ್ ಮತ್ತು ಗ್ಯಾಂಗ್ನಿಂದ...
ದೆಹಲಿಸುದ್ದಿ

ಉಪರಾಷ್ಟ್ರಪತಿ ಹುದ್ದೆಗೆ ಜಗದೀಪ್‌ ಧನಕರ್‌ ರಾಜೀನಾಮೆ – ಕಹಳೆ ನ್ಯೂಸ್

ನವದೆಹಲಿ: ಅನಾರೋಗ್ಯ ಕಾರಣ ನೀಡಿ ಜಗದೀಪ್‌ ಧನಕರ್‌ ಅವರು ಉಪರಾಷ್ಟ್ರಪತಿ ಹುದ್ದೆಗೆ ದಿಢೀರ್‌ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿಗಳಿಗೆ ರಾಜೀನಾಮೆ ಪತ್ರವನ್ನ ರವಾನಿಸಿದ್ದಾರೆ. ಈ ಪತ್ರವನ್ನ ಉಪರಾಷ್ಟ್ರಪತಿ ಎಕ್ಸ್‌ ಖಾತೆಯಲ್ಲೂ ಹಂಚಿಕೊಳ್ಳಲಾಗಿದೆ. ಸಂವಿಧಾನದ 67(a) ವಿಧಿಯ ಪ್ರಕಾರ ರಾಜೀನಾಮೆ ನೀಡುತ್ತಿರುವುದಾಗಿ ರಾಜೀನಾಮೆ ಸಲ್ಲಿಸಿದ್ದಾರೆ. ʻಆರೋಗ್ಯ ಮತ್ತು ವೈದ್ಯಕೀಯ ಸಲಹೆಯನ್ನು ಪಾಲಿಸಲು, ನಾನು ಭಾರತದ ಉಪಾಧ್ಯಕ್ಷ ಸ್ಥಾನಕ್ಕೆ ತಕ್ಷಣದಿಂದ ಜಾರಿಗೆ ಬರುವಂತೆ ರಾಜೀನಾಮೆ ನೀಡುತ್ತಿದ್ದೇನೆʼ ಎಂದು ಅವರು ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ. ಮುಂದುವರಿದು…...
ಬೆಂಗಳೂರುಮೈಸೂರುಸುದ್ದಿ

ಮುಡಾ ಹಗರಣದಲ್ಲಿ ಸಿಎಂ ಪತ್ನಿಗೆ ರಿಲೀಫ್‌ – ಇ.ಡಿ ಗೆ ಚಾಟಿ ಬೀಸಿದ ಸುಪ್ರೀಂ!

ನವದೆಹಲಿ : ಮುಡಾ ನಿವೇಶನ ಹಂಚಿಕೆ ಹಗರಣದಲ್ಲಿ ಸಿಎಂ ಪತ್ನಿ ಪಾರ್ವತಿ ವಿರುದ್ದ ಪ್ರಕರಣದ ದಾಖಲಿಸಿದ್ದ ಜಾರಿ ನಿರ್ದೇಶನಾಲಯಕ್ಕೆ ಸುಪ್ರೀಂ ಕೋರ್ಟ್‌ ಚಾಟಿ ಬೀಸಿದೆ. ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಇ.ಡಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಜಾಗೊಳಿಸಿದೆ.   ಇದರಿಂದ ಸಿಎಂ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಮಹತ್ವದ ಗೆಲುವು ದೊರತಂತಾಗಿದೆ. ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ದೂರನ್ನಾಧರಿಸಿ ಜಾರಿ ನಿರ್ದೇಶನಾಲಯದ ತನಿಖೆ ಕೈಗೊಂಡಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದ ಜಾರಿ...
ಬೆಂಗಳೂರುಸುದ್ದಿ

ಬೆಂಗಳೂರಲ್ಲಿ ಟ್ಯಾಕ್ಸ್ ವಿರುದ್ಧ ವರ್ತಕರ ಸಮರ : ಜು.25ಕ್ಕೆ ಫ್ರೀಡಂ ಪಾರ್ಕ್ ನಲ್ಲಿ ವ್ಯಾಪಾರಿಗಳಿಂದ ಬೃಹತ್ ಪ್ರತಿಭಟನೆ – ಕಹಳೆ ನ್ಯೂಸ್

ಬೆಂಗಳೂರು : ಬೀದಿಬದಿಯ ವ್ಯಾಪಾರಿಗಳು ಸೇರಿದಂತೆ ಅಂಗಡಿ ಮುಗ್ಗಟ್ಟುಗಳ ಮಾಲೀಕರಿಗೆ ಕಮರ್ಷಿಯಲ್ ಡಿಪಾರ್ಟ್ಮೆಂಟ್ ಇತ್ತೀಚಿಗೆ ಲಕ್ಷಗಟ್ಟಲೆ, ಕೋಟಿಗಟ್ಟಲೆ ಟ್ಯಾಕ್ಸ್ ಕಟ್ಟುವಂತೆ ನೋಟಿಸ್ ನೀಡಿತ್ತು. ಇದರ ವಿರುದ್ಧವಾಗಿ ಇದೀಗ ವ್ಯಾಪಾರಿಗಳು ಕೇರಳಿದ್ದು, ಬೆಂಗಳೂರಿನಲ್ಲಿ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಸಿದ್ಧತೆ ಮಾಡಿಕೊಂಡಿದ್ದಾರೆ. ಅಲ್ಲದೆ ಜುಲೈ 23 ಮತ್ತು 24ರಂದು ಹಾಲು ಮಾರಾಟ ಸಂಪೂರ್ಣ ಬಂದ್ ಆಗಲಿದ್ದು, 25ರಂದು ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆಗೆ ಸಿದ್ಧತೆ ಮಾಡಿಕೊಂಡಿದ್ದಾರೆ ಹೌದು ವಾಣಿಜ್ಯ ತೆರಿಗೆ ನೋಟಿಸ್...
ಜಮ್ಮು ಮತ್ತು ಕಾಶ್ಮೀರಸುದ್ದಿ

ಕತ್ರಾದಲ್ಲಿ ಮಾತಾ ವೈಷ್ಣೋ ದೇವಿ ಯಾತ್ರಾ ಮಾರ್ಗದಲ್ಲಿ ಭೂಕುಸಿತ, ಹಲವರ ರಕ್ಷಣೆ

ಜಮ್ಮು ಮತ್ತು ಕಾಶ್ಮೀರದ ಕೆಲವು ಭಾಗಗಳಲ್ಲಿ ಭಾರಿ ಮಳೆಯಿಂದಾಗಿ ಸೋಮವಾರ ಬೆಳಿಗ್ಗೆ ಕತ್ರಾದ ಮಾತಾ ವೈಷ್ಣೋ ದೇವಿ ದೇವಾಲಯ ಮಾರ್ಗದಲ್ಲಿ ಭೂಕುಸಿತ ಸಂಭವಿಸಿದೆ. ವಿವರಗಳ ಪ್ರಕಾರ, ಭೂಕುಸಿತವು ಮಾರ್ಗದಲ್ಲಿನ ಶೆಡ್ ಗೆ ಅಪ್ಪಳಿಸಿದ ಕಾರಣ ಅನೇಕ ಜನರು ಸಿಕ್ಕಿಬಿದ್ದಿದ್ದಾರೆ.ನಾಲ್ವರನ್ನು ರಕ್ಷಿಸಿ ಚಿಕಿತ್ಸೆಗಾಗಿ ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದೆ.ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಏತನ್ಮಧ್ಯೆ, ಭೂಕುಸಿತದಿಂದ ಹಾನಿಗೊಳಗಾದ ಮಾರ್ಗವನ್ನು ಯಾತ್ರೆಗಾಗಿ ನಿರ್ಬಂಧಿಸಲಾಯಿತು...
ದೆಹಲಿಸುದ್ದಿ

ವಾಹನ ಸವಾರರೇ ಗಮನಿಸಿ: ಮಕ್ಕಳಿದ್ದಾಗ ಸಂಚಾರ ನಿಯಮ ಉಲ್ಲಂಘಿಸಿದರೆ ದುಪ್ಪಟ್ಟು ದಂಡ, ಡಿಎಲ್ ಕ್ಯಾನ್ಸಲ್- ಕಹಳೆ ನ್ಯೂಸ್

ನವದೆಹಲಿ: ಸಣ್ಣ ಮಕ್ಕಳನ್ನು ವಾಹನದಲ್ಲಿ ಕರೆದುಕೊಂಡು ಹೋಗುವಾಗ ಸಂಚಾರ ನಿಯಮ ಉಲ್ಲಂಘಿಸಿದರೆ ದುಪ್ಪಟ್ಟು ದಂಡ ವಿಧಿಸಲು ಸಾರಿಗೆ ಸಚಿವಾಲಯ ಚಿಂತನೆ ನಡೆಸಿದೆ. ಮಕ್ಕಳನ್ನು ವಾಹನದಲ್ಲಿ ಕರೆದೊಯ್ಯುವವರು ಸಂಚಾರ ನಿಯಮ ಉಲ್ಲಂಘಿಸಿ ಅಪಘಾತಕ್ಕೆ ಒಳಗಾಗುವುದನ್ನು ತಪ್ಪಿಸುವ ಉದ್ದೇಶದಿಂದ ಸಂಚಾರ ನಿಯಮ ಉಲ್ಲಂಘಿಸುವಂತಹ ವಾಹನಗಳ ಚಾಲಕರಿಗೆ ದುಪ್ಪಟ್ಟು ದಂಡ ವಿಧಿಸುವ ಬಗ್ಗೆ ರಸ್ತೆ ಸಾರಿಗೆ ಸಚಿವಾಲಯ ಚಿಂತನೆ ನಡೆಸಿದೆ. ಇದರೊಂದಿಗೆ ಎಲ್ಲಾ ಚಾಲಕರಿಗೆ ಸಂಚಾರ ನಿಯಮಗಳ ಅನುಸರಣೆ ಅಥವಾ ಉಲ್ಲಂಘನೆ ಆದರೆ ಧನಾತ್ಮಕ ಅಥವಾ...
1 91 92 93 94 95 320
Page 93 of 320