Friday, March 20, 2026

ರಾಷ್ಟ್ರೀಯ

ಜಿಲ್ಲೆದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ಅಶ್ಲೀ*ಲ ಮೆಸೇಜ್‌ ಮಾಡಿದ್ದಕ್ಕೆ ಯುವಕನ ಕಿಡ್ನಾಪ್:‌ ರೇಣುಕಾಸ್ವಾಮಿ ಹೆಸರು ಹೇಳಿ ಹಲ್ಲೆ – ಕಹಳೆ ನ್ಯೂಸ್

ನೆಲಮಂಗಲ (ಬೆಂಗಳೂರು ಗ್ರಾಮಾಂತರ): ಅಶ್ಲೀ*ಲ ಮೆಸೇಜ್‌ ಮಾಡಿದ್ದಕ್ಕಾಗಿ ಬೆಂಗಳೂರಿನ ಪಟ್ಟಣಗೆರೆ ಶೆಡ್​ನಲ್ಲಿ ಚಿತ್ರದುರ್ಗದ ರೇಣುಕಾಸ್ವಾಮಿ ಮಾರಣಾಂತಿಕವಾಗಿ ಹಲ್ಲೆ ಮಾಡಿ, ಕೊ*ಲೆ ಮಾಡಲಾಗಿತ್ತು. ಈ ಘಟನೆ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಇದೀಗ ಅದೇ ಮಾದರಿಯಲ್ಲಿ ಮತ್ತೊಂದು ಘಟನೆ ನಡೆದಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್‌ ಆಗಿದ್ದು, ಈ ಸಂಬಂಧ ನಾಲ್ವರನ್ನು ಬಂಧಿಸಲಾಗಿದೆ. ಯುವತಿಯ ವಿಚಾರಕ್ಕೆ ಗುಂಪೊಂದು ಕುಶಾಲ್‌ ಎನ್ನುವ ಯುವಕನನ್ನು ಕಿಡ್ನಾಪ್‌ ಮಾಡಿ ಹಿಗ್ಗಾಮುಗ್ಗಾವಾಗಿ ಥಳಿಸಿರುವ ಘಟನೆ ಬೆಂಗಳೂರು ಗ್ರಾಮಾಂತರ...
ಗೋವಾಜಿಲ್ಲೆರಾಷ್ಟ್ರೀಯಸುದ್ದಿ

ವರುಣಾರ್ಭಟಕ್ಕೆ ಮತ್ತೊಂದು ಅವಾಂತರ: ಕರ್ನಾಟಕ-ಗೋವಾ ರಾಷ್ಟ್ರೀಯ ಹೆದ್ದಾರಿ ಕುಸಿತ -ಕಹಳೆ ನ್ಯೂಸ್

ಕಾರವಾರ: ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ವರುಣಾರ್ಭಟಕ್ಕೆ ಜನಜೀವನ ಅಸ್ತವ್ಯಸ್ಥಗೊಂಡಿದೆ. ಹಲವೆಡೆ ಭೂಕುಸಿತ, ಗುಡ್ದ ಕುಸಿತ ಸಂಭವಿಸಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಯ ಅಬ್ಬರಕ್ಕೆ ಕರ್ನಾಟಕ-ಗೋವಾ ರಾಷ್ಟ್ರೀಯ ಹೆದ್ದಾರಿ ಕುಸಿತಗೊಂಡಿದೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಅನಮೋಡ ಬಳಿ ಈ ಘಟನೆ ನಡೆದಿದೆ. ಕರ್ನಾಟಕದಿಂದ ಗೋವಾ ರಾಜ್ಯಕ್ಕೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿದಿದೆ. ರಸ್ತೆ ಮಾರ್ಗದಲ್ಲಿಯೂ ಬಿರುಕುವುಂಟಾಗಿದೆ. ನಿಧಾನಗತಿಯಲ್ಲಿ ವಾಹನಗಳು ತೆರಳಲು ಅನುವು ಮಾಡಿಕೊಡಲಾಗಿದೆ. ವಾಹನ ಸವಾರರು ಈ...
ಜಮ್ಮು ಮತ್ತು ಕಾಶ್ಮೀರಸುದ್ದಿ

ಜಮ್ಮು-ಕಾಶ್ಮೀರದಲ್ಲಿ ಅಮರನಾಥ ಯಾತ್ರಾರ್ಥಿಗಳಿದ್ದ ಬಸ್ ಅಪಘಾತ : 36 ಜನರಿಗೆ ಗಾಯ.-ಕಹಳೆ ನ್ಯೂಸ್

ಜಮ್ಮು ಮತ್ತು ಕಾಶ್ಮೀರದ ರಾಂಬನ್ ಜಿಲ್ಲೆಯ ಚಂದರ್ಕೋಟ್ ಲ್ಯಾಂಗರ್ ಸ್ಥಳದಲ್ಲಿ ಅಮರನಾಥ ಯಾತ್ರೆಯ ಪಹಲ್ಗಾಮ್ ಬೆಂಗಾವಲಿನ ಕೊನೆಯ ವಾಹನವು ನಿಯಂತ್ರಣ ತಪ್ಪಿ ಸಿಲುಕಿಕೊಂಡಿದ್ದ ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ 36 ಯಾತ್ರಿಕರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಅಪಘಾತದಲ್ಲಿ ಯಾತ್ರಾ ಬೆಂಗಾವಲಿನ ಭಾಗವಾಗಿರುವ ನಾಲ್ಕು ಬಸ್ಗಳು ಹಾನಿಗೊಳಗಾಗಿವೆ. "ಪಹಲ್ಗಾಮ್ ಬೆಂಗಾವಲಿನ ಕೊನೆಯ ವಾಹನವು ನಿಯಂತ್ರಣ ತಪ್ಪಿ ಚಂದರ್ಕೋಟ್ ಲ್ಯಾಂಗರ್ ಸ್ಥಳದಲ್ಲಿ ಸಿಕ್ಕಿಬಿದ್ದ ವಾಹನಗಳಿಗೆ ಡಿಕ್ಕಿ ಹೊಡೆದು 4 ವಾಹನಗಳಿಗೆ...
ದೆಹಲಿಸುದ್ದಿ

‘RBI’ ಕಾರ್ಯನಿರ್ವಾಹಕ ನಿರ್ದೇಶಕರಾಗಿ ‘ಕೇಶವನ್ ರಾಮಚಂದ್ರನ್’ ನೇಮಕ – ಕಹಳೆ ನ್ಯೂಸ್

ನವದೆಹಲಿ : ಭಾರತೀಯ ರಿಸರ್ವ್ ಬ್ಯಾಂಕ್ (RBI) ಕೇಶವನ್ ರಾಮಚಂದ್ರನ್ ಅವರನ್ನು ಜುಲೈ 01, 2025 ರಿಂದ ಜಾರಿಗೆ ಬರುವಂತೆ ಕಾರ್ಯನಿರ್ವಾಹಕ ನಿರ್ದೇಶಕರಾಗಿ (ED) ನೇಮಿಸಿದೆ. ED ಆಗಿ, ಅವರು ನಿಯಂತ್ರಣ ಇಲಾಖೆಯನ್ನು (ಪ್ರುಡೆನ್ಶಿಯಲ್ ನಿಯಂತ್ರಣ ವಿಭಾಗ) ನೋಡಿಕೊಳ್ಳುತ್ತಾರೆ. RBI ಹೇಳಿಕೆಯ ಪ್ರಕಾರ ED ಆಗಿ ಬಡ್ತಿ ಪಡೆಯುವ ಮೊದಲು ಕೇಶವನ್ ಅಪಾಯ ಮೇಲ್ವಿಚಾರಣಾ ವಿಭಾಗದಲ್ಲಿ ಪ್ರಧಾನ ಮುಖ್ಯ ಜನರಲ್ ಮ್ಯಾನೇಜರ್ ಆಗಿದ್ದರು. ಕರೆನ್ಸಿ ನಿರ್ವಹಣೆ, ಬ್ಯಾಂಕಿಂಗ್ ಮತ್ತು ಬ್ಯಾಂಕೇತರ...
ದೆಹಲಿಸುದ್ದಿ

ಮೋಸ್ಟ್ ವಾಂಟೆಡ್ ಕ್ರಿಮಿನಲ್ `ಅನುಭವ್ ಶುಕ್ಲಾ’ ಕಾಲಿಗೆ ಗುಂಡೇಟು

ಲಕ್ನೋ : ಲಖಿಂಪುರ ಖೇರಿ ಪೊಲೀಸರೊಂದಿಗೆ ಜಂಟಿ ಕಾರ್ಯಾಚರಣೆ ನಡೆಸಿದ ಲಖಿಂಪುರ ಪೊಲೀಸರು, ತಲೆಗೆ 1 ಲಕ್ಷ ರೂ. ಬಹುಮಾನ ಘೋಷಿಸಲಾಗಿದ್ದ ಕುಖ್ಯಾತ ಅಪರಾಧಿಯನ್ನು ಎನ್ಕೌಂಟರ್ನಲ್ಲಿ ಯಶಸ್ವಿಯಾಗಿ ಬಂಧಿಸಿದ್ದಾರೆ. ಅನುಭವ್ ಶುಕ್ಲಾ ಅಲಿಯಾಸ್ ರಾಜಾ ಎಂದು ಗುರುತಿಸಲಾದ ಆರೋಪಿಯ ಕಾಲಿಗೆ ಗುಂಡು ತಗುಲಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಯಿತು. ಗೋಮತಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಎನ್ಕೌಂಟರ್ ನಡೆದಿದ್ದು, ಆರೋಪಿ ಗಾಯಗೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಲಖಿಂಪುರ ಖೇರಿ ಜಿಲ್ಲೆಯ...
ದೆಹಲಿಸುದ್ದಿ

ಬೆಳ್ಳಂಬೆಳಗ್ಗೆ ಗುಡ್​​ನ್ಯೂಸ್​: LPG ವಾಣಿಜ್ಯ ಸಿಲಿಂಡರ್‌ ಬೆಲೆಯಲ್ಲಿ ಭಾರೀ ಇಳಿಕೆ!- ಕಹಳೆ ನ್ಯೂಸ್

ನವದೆಹಲಿ: ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ಎಲ್​ಪಿಜಿ ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ 60 ರೂ.ನಷ್ಟು ಕಡಿತ ಮಾಡಿವೆ. ಪರಿಷ್ಕೃತ ದರ ಇಂದಿನಿಂದಲೇ ಜಾರಿಗೆ ಬಂದಿದೆ.14 ಕೆಜಿ LPG ಸಿಲಿಂಡರ್‌ನ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಪ್ರತಿ ತಿಂಗಳ ಮೊದಲ ದಿನದಂದು ತೈಲ ಮಾರುಕಟ್ಟೆ ಕಂಪನಿಗಳು ಗ್ಯಾಸ್ ಸಿಲಿಂಡರ್‌ಗಳ ಬೆಲೆಗಳನ್ನು ಪರಿಷ್ಕರಿಸುತ್ತವೆ. ಈ ತಿಂಗಳು ಸಿಲಿಂಡರ್ ದರವನ್ನು ಕಡಿಮೆ ಮಾಡಲು ನಿರ್ಧರಿಸಲಾಗಿದೆ. ದೇಶಾದ್ಯಂತ ವಾಣಿಜ್ಯ ಅನಿಲ ಸಿಲಿಂಡರ್‌ಗಳ ಬೆಲೆ ಕಡಿಮೆ ಮಾಡಿರುವುದಾಗಿ ತೈಲ...
ಬೆಂಗಳೂರುಸುದ್ದಿ

ಆರ್‌ಸಿಬಿ ಕಾಲ್ತುಳಿತ ಪ್ರಕರಣ : 3 ಐಪಿಎಸ್‌‍ ಅಧಿಕಾರಿಗಳ ಅಮಾನತನ್ನು ಅಂಗೀಕರಿಸಿದ ಕೇಂದ್ರ –ಕಹಳೆ ನ್ಯೂಸ್

ಬೆಂಗಳೂರು,ಜೂ.28- ರಾಜ್ಯ ಸರ್ಕಾರಕ್ಕೆ ಭಾರೀ ಮುಜುಗರ ಸೃಷ್ಟಿಸಿದ್ದ ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ಉಂಟಾದ ಕಾಲ್ತುಳಿತ ಪ್ರಕರಣ ಸಂಬಂಧ ಕರ್ತವ್ಯ ನಿರ್ಲಕ್ಷ್ಯ ಆರೋಪದಡಿ ಸೇವೆಯಿಂದ ಅಮಾನತುಗೊಂಡಿರುವ ಬೆಂಗಳೂರು ನಗರ ಪೊಲೀಸ್‌‍ ಆಯುಕ್ತ ಬಿ ದಯಾನಂದ್‌ ಸೇರಿದಂತೆ ಮೂವರು ಐಪಿಎಸ್‌‍ ಅಧಿಕಾರಿಗಳ ಮೇಲೆ ಕರ್ನಾಟಕ ಸರ್ಕಾರ ತೆಗೆದುಕೊಂಡ ಕ್ರಮವನ್ನು ಕೇಂದ್ರ ಗೃಹ ಇಲಾಖೆ ಅಂಗೀಕರಿಸಿದೆ. ಇದು ಆಡಳಿತಾತಕ ಕ್ರಮಗಳಲ್ಲಿ ಒಂದು ಪ್ರಮುಖ ಹೆಜ್ಜೆಯಾಗಿದೆ. ಈ ಘಟನೆಯಿಂದ ಕೇಂದ್ರ-ರಾಜ್ಯ ಸರ್ಕಾರಗಳ ನಡುವಿನ ಸಂಬಂಧದ ಮೇಲೆಯೂ ಗಮನ...
ಬೆಂಗಳೂರುಸುದ್ದಿ

ತಡರಾತ್ರಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ಬ್ರ್ಯಾಂಡೆಡ್ ಕಂಪನಿಗಳ ನಕಲಿ ಬಟ್ಟೆ ತಯಾರಿಕೆ ಅಡ್ಡೆ ಮೇಲೆ ದಾಳಿ –ಕಹಳೆ ನ್ಯೂಸ್

ಬೆಂಗಳೂರು: ನಕಲಿ ಉತ್ಪನ್ನ ತಯಾರಿಕಾ ಅಡ್ಡೆಯ ಮೇಲೆ ತಡರಾತ್ರಿ ಪೊಲೀಸರು ದಾಳಿ ನಡೆಸಿದ್ದಾರೆ. 30 ಲಕ್ಷ ರೂಪಾಯಿಗೂ ಹೆಚ್ಚು ಮೌಲ್ಯದ ನಕಲಿ ಬ್ರ್ಯಾಂಡೆಡ್ ಬಟ್ಟೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಬೈಲಕೋನೇನಹಳ್ಳಿ ದಾಳಿ ನಡೆಸಲಾಗಿದೆ. ಪೂಮಾ, ನೈಕಿ, ರಾಲ್ಪ್ ಲಾರೆನ್ಸ್, ಲೆವಿಸ್, ಪೋಲೋ ಮೊದಲಾದ ಪ್ರತಿಷ್ಠಿತ ಬ್ರ್ಯಾಂಡ್ ಗಳ ನಕಲಿ ಉತ್ಪನ್ನಗಳನ್ನು ಪೊಲೀಸರು ಸೀಜ್ ಮಾಡಿದ್ದಾರೆ. ಬ್ರ್ಯಾಂಡೆಡ್ ಕಂಪನಿಗಳ ಹೆಸರಿನಲ್ಲಿ ನಕಲಿ ಜೀನ್ಸ್ ಗಳನ್ನು ತಯಾರಿಸಲಾಗುತ್ತಿತ್ತು. ಅಕ್ರಮವಾಗಿ...
1 96 97 98 99 100 321
Page 98 of 321