ಕಾಶ್ಮೀರ ಹತ್ಯಾಕಾಂಡ ; 31 ವರ್ಷದ ಬಳಿಕ ಪಾತಕಿ ಬಿಟ್ಟಾ ಕರಾಟೆ ವಿರುದ್ಧ ಅರ್ಜಿ ಸಲ್ಲಿಕೆ – ಕಹಳೆ ನ್ಯೂಸ್
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಪಂಡಿತರ ಹತ್ಯೆ ಘಟನೆಗೆ ಸಂಬಂಧಿಸಿದಂತೆ ಬಿಟ್ಟಾ ಕರಾಟೆಯ ವಿರುದ್ಧ 31 ವರ್ಷದ ಹಿಂದೆ ನಡೆದ ಪ್ರಕರಣದ ವಿಚಾರಣೆ ನಡೆಸುವಂತೆ ಕೋರ್ಟ್ನಲ್ಲಿ ಅರ್ಜಿ ಸಲ್ಲಿಕೆಯಾಗಿದೆ. ಫಾರೂಕ್ ಅಹ್ಮದ್ ದಾರ್ ಅಲಿಯಾಸ್ ಬಿಟ್ಟಾ ಕರಾಟೆ ವಿರುದ್ಧ ಮೃತ ಕಾಶ್ಮೀರಿ ಪಂಡಿತ ಸತೀಶ್ ಟಿಕ್ಕೂ ಅವರ ಕುಟುಂಬವು 31 ವರ್ಷಗಳ ಬಳಿಕ ಮರು ವಿಚಾರಣೆ ನಡೆಸಲು ನ್ಯಾಯಾಲಯಕ್ಕೆ ಇಂದು ಮನವಿ ಮಾಡಿದೆ. ಬಿಟ್ಟಾ ಕರಾಟೆ ಆಜಾದಿ ಹೆಸರಲ್ಲಿ ಪ್ರಾರಂಭಿಸಿದ್ದ...







