Sunday, March 8, 2026

ಸುದ್ದಿ

ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು: ಆರು ಮಂದಿ ಅಂತರ್‌ರಾಜ್ಯ ಸೈಬರ್ ವಂಚಕರು ಅರೆಸ್ಟ್‌ – ಕಹಳೆ ನ್ಯೂಸ್

ಮಂಗಳೂರು: ಸ್ನೇಹಿತನ ಬ್ಯಾಂಕ್ ಖಾತೆಯನ್ನು ಪಡೆದು ಸೈಬರ್ ವಂಚನೆ ಪ್ರಕರಣಕ್ಕೆ ಬಳಸಿ ಬಳಿಕ ಮೋಸ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಸೈಬರ್‌ ಅಪರಾಧ ಠಾಣೆಯ ಪೊಲೀಸರು ಆರು ಮಂದಿಯನ್ನು ಬಂಧಿಸಿದ್ದಾರೆ. ಬಂಧಿತರನ್ನು ಆಂಧ್ರಪ್ರದೇಶದ ನೆಲ್ಲೂರಿನ ಶೇಖ್ ಕರೀಮುಲ್ಲಾ ಯಾನೆ ರಸೂಲ್ (27) ಮತ್ತು ಉತ್ಪಲ ಸಂತೋಷ್ ಕೃಷ್ಣ (35), ಕರ್ನೂಲಿನ ಬುಡಿದಿನ್ನೆ ವಂಶಿ ಯಾನೆ ಗುರು (21), ತೆಲಂಗಾಣದ ಪಂಡಿತಿ ಕ್ರಾಂತಿ ಕುಮಾರ್ (36), ಬುಡೆ ಶ್ರೀನಿವಾಸ (38) ಮತ್ತು...
ಸುದ್ದಿ

ಇಂದಿನಿಂದ ದ್ವಿತೀಯ PUC ಪರೀಕ್ಷೆ ; ಅಕ್ರಮ ತಡೆಗೆ ಕಟ್ಟೆಚ್ಚರ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯ ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸುವ ದ್ವಿತೀಯ ಪಿಯುಸಿ ಪರೀಕ್ಷೆ-1  ಇಂದಿನಿಂದ ಶುರುವಾಗುತ್ತಿದ್ದು, ಈ ಬಾರಿ 7,10,363 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಮಾ.17 ರ ವರೆಗೆ ನಡೆಯುವ ಪರೀಕ್ಷೆಗೆ ರಾಜ್ಯಾದ್ಯಂತ 1,217 ಕೇಂದ್ರಗಳನ್ನು ಗುರುತಿಸಲಾಗಿದೆ. ಅಕ್ರಮ, ಗೊಂದಲಗಳಿಗೆ ಅವಕಾಶವಾಗದೇ ಸುಸೂತ್ರವಾಗಿ ಪರೀಕ್ಷೆ ನಡೆಸಲು ಇಲಾಖೆ ಪೂರ್ವ ಸಿದ್ಧತೆ ಹಾಗೂ ಭದ್ರತಾ ವ್ಯವಸ್ಥೆ ಮಾಡಿಕೊಂಡಿದೆ. ಮೊದಲ ದಿನವಾದ ಇಂದು ಕನ್ನಡ ಮತ್ತು ಅರೇಬಿಕ್ ವಿಷಯಗಳ ಪರೀಕ್ಷೆಗಳು ನಡೆಯಲಿದ್ದು, ಬೆಳಗ್ಗೆ...
ಬೆಂಗಳೂರುರಾಜ್ಯಸುದ್ದಿ

ಮಾ.3ಕ್ಕೆ ರಕ್ತಚಂದ್ರಗ್ರಹಣ : ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ – ಕಹಳೆ ನ್ಯೂಸ್

ಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ ಮಾಸದ ಹುಣ್ಣಿಮೆಯ ದಿನವೇ ಗ್ರಹಣ ಸಂಭವಿಸಲಿದ್ದು, ಭಾರತದಲ್ಲಿಯೂ ಗೋಚರವಾಗಲಿದೆ. ಜೊತೆಗೆ 25 ನಿಮಿಷದವರೆಗೆ ಕರ್ನಾಟಕದಲ್ಲಿಯೂ ಗ್ರಹಣ ಗೋಚರವಾಗಲಿದೆ. ಭಾರತದಲ್ಲಿ ಮಾ.3ರಂದು ಮಧ್ಯಾಹ್ನ 3:20ಕ್ಕೆ ಗ್ರಹಣ ಆರಂಭವಾಗಿ ಸಂಜೆ 6:47ಕ್ಕೆ ಮುಕ್ತಾಯವಾಗಲಿದ್ದು, ಒಟ್ಟು 25 ನಿಮಿಷಗಳ ಕಾಲ ಗ್ರಹಣ ಇರಲಿದೆ. ರಕ್ತಚಂದ್ರಗ್ರಹಣ ಸಮಯದಲ್ಲಿ ಏನು ಮಾಡಬೇಕು? – ಗ್ರಹಣದ ಮುನ್ನ ಮತ್ತು ಗ್ರಹಣ...
ಸುದ್ದಿ

ಪುತ್ತೂರು ಮಹಿಳಾ ಕಾಲೇಜು: ಮೂಲಭೂತ ಸಮಸ್ಯೆ ಬಗೆಹರಿಸಲಾಗದ ಶಾಸಕ ಅಶೋಕ್ ರೈ ಅವರಿಂದ ಪ್ರಾಂಶುಪಾಲರ ಅಮಾನತಿನ ‘ಒಣ ಪ್ರತಿಷ್ಠೆ’ : ಶಾಸಕ ಕಿಶೋರ್ ಕುಮಾರ್ ಆಕ್ರೋಶ – ಕಹಳೆ ನ್ಯೂಸ್

ಪುತ್ತೂರಿನ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರು ಮೂಲಭೂತ ಸೌಕರ್ಯಗಳ ಕೊರತೆ ಮತ್ತು ವಿಪರೀತ ಧೂಳಿನ ಸಮಸ್ಯೆಯಿಂದ ಬೇಸತ್ತು ನ್ಯಾಯಯುತವಾಗಿ ಪ್ರತಿಭಟನೆ ನಡೆಸಿದ್ದಕ್ಕೆ, ಕಾಲೇಜಿನ ಪ್ರಭಾರ ಪ್ರಾಂಶುಪಾಲರಾದ ವೇದಶ್ರೀ ನಿಡ್ಯಾ ಅವರನ್ನು ಅಮಾನತು ಮಾಡಿಸಿರುವ ಪುತ್ತೂರು ಶಾಸಕ ಅಶೋಕ್ ರೈ ಅವರ ದ್ವೇಷದ ರಾಜಕಾರಣವನ್ನು ಉಡುಪಿ-ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಶಾಸಕರಾದ ಶ್ರೀ ಕಿಶೋರ್ ಕುಮಾರ್ ಪುತ್ತೂರು ಅವರು ಉಗ್ರವಾಗಿ ಖಂಡಿಸಿದ್ದಾರೆ. ವಿದ್ಯಾರ್ಥಿನಿಯರ ಹಿತಾಸಕ್ತಿಗೆ ಸ್ಪಂದಿಸಿದ ಪ್ರಾಮಾಣಿಕ...
ಸುದ್ದಿ

ಹಿಂದೂ ಯುವಕರ ಮೇಲೆ ಅನ್ಯಕೋಮಿನವರಿಂದ ಹಲ್ಲೆ ಪ್ರಕರಣ : ಎಲ್ಲಾ ಆರೋಪಿಗಳ ಬಂಧನ – ಕಹಳೆ ನ್ಯೂಸ್

ಮಡಿಕೇರಿ: ಕೊಡಗು  ಜಿಲ್ಲೆಯ ನಾಪೋಕ್ಲುವಿನಲ್ಲಿ ಇಂದು ನಡೆಯಲಿರುವ ಹಿಂದೂ ಸಂಗಮ ಕಾರ್ಯಕ್ರಮದ ಕುರಿತು ನಿನ್ನೆ ವಾಹನದಲ್ಲಿ ಪ್ರಚಾರ ಮಾಡುತ್ತಿದ್ದ ಗೌತಮ್ ಎಂಬಾತನ ಮೇಲೆ ಅನ್ಯಕೋಮಿನ ಯುವಕರು  ಮಾರಣಾಂತಿಕ ಹಲ್ಲೆ ನಡೆಸಿದ ಆಘಾತಕಾರಿ ಘಟನೆ ನಡೆದಿದೆ. ಘಟನೆ ಸಂಬಂಧ ಹಲ್ಲೆ ನಡೆಸಿದ ಎಲ್ಲಾ ನಾಲ್ವರು ಆರೋಪಿಗಳನ್ನ  ಬಂಧಿಸಿರುವುದಾಗಿ ಕೊಡಗು ಎಸ್ಪಿ ಬಿಂದು ಮಣಿ ಮಾಹಿತಿ ನೀಡಿದ್ದಾರೆ. ಸಿದ್ದಿಕ್, ಸುಹೆಲ್, ನಾಭಿ, ರಶೀದ್ ಬಂಧಿತರು. ಏನಾಗಿತ್ತು? ಕೊಡಗು ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಿನಿಂದ...
ಸುದ್ದಿ

ರಾಮಚಂದ್ರಾಪುರ ಮಠಕ್ಕೆ ಶಿಷ್ಯರೇ ಸಂಪತ್ತು : ಪ್ರಧಾನ ಮಠದ ಪುನರ್ನಿರ್ಮಾಣ ಸಹಸ್ರಮಾನದ ಕಾರ್ಯ : ರಾಘವೇಶ್ವರ ಶ್ರೀ- ಕಹಳೆ ನ್ಯೂಸ್ 

ಶ್ರೀ ರಾಮಚಂದ್ರಾಪುರ ಮಠಕ್ಕೆ ಶಿಷ್ಯರೇ ಸಂಪತ್ತಾಗಿದ್ದು, ಪ್ರಧಾನ ಮಠದ ಶಿಲಾನ್ಯಾಸದ ಮೂಲಕ ಶರಾವತಿ ನದಿ ತೀರದಲ್ಲಿ ಸಹಸ್ರಮಾನದ ಕಾರ್ಯಕ್ಕೆ ಚಾಲನೆ ನೀಡಲಾಗಿದೆ ಎಂದು ಶ್ರೀ ರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಹೊಸನಗರದ ಶ್ರಿರಾಮಚಂದ್ರಾಪುರ ಮಠದ ಶರಾವತಿ ತೀರದಲ್ಲಿ ಪ್ರಧಾನಮಠ ಪುನ ನಿರ್ಮಾಣ ಸಮಿತಿಯವರು ಏರ್ಪಡಿಸಿದ್ದ ನವ ನಿರ್ಮಾಣದ ರಾಮಸಾನ್ನಿಧ್ಯದ ಶಿಲಾನ್ಯಾಸ ಕಾರ್ಯಕ್ರದಲ್ಲಿ ಶಿಲಾನ್ಯಾಸ ನೆರವೇರಿಸಿ ನಂತರದ ಧರ್ಮಸಭೆಯ ದಿವ್ಯಸಾನ್ನಿಧ್ಯವಹಿಸಿ ಆಶೀರ್ವಚನ ನೀಡಿದರು. ರಾಮಚಂದ್ರಾಪುರಮಠದ...
ಸುದ್ದಿ

ಉಡುಪಿಯ ಹಲವೆಡೆ ಉಪಲೋಕಾಯುಕ್ತ ದಿಢೀರ್ ದಾಳಿ : ಜೀನ್ಸ್ ಪ್ಯಾಂಟ್ ಧರಿಸಿ ಬಂದ ಸರ್ಕಾರಿ ನೌಕರರಿಗೆ ತರಾಟೆ- ಕಹಳೆ ನ್ಯೂಸ್

ಉಡುಪಿ: ಇಲ್ಲಿನ ಹಲವೆಡೆ ಉಪಲೋಕಾಯುಕ್ತ  ದಿಢೀರ್ ದಾಳಿ ನಡೆಸಿ, ಸರ್ಕಾರಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ನೇತೃತ್ವದಲ್ಲಿ ದಾಳಿ ಮಾಡಲಾಗಿತ್ತು. ಜೀನ್ಸ್ ಪ್ಯಾಂಟ್ ಧರಿಸಿ ಬಂದ ಸರ್ಕಾರಿ ನೌಕರರ ಬೆವರಿಳಿಸಿದರು. ಚಿಟ್ ಫಂಡ್ ದಾಖಲೆ ಹಿಡಿದುಕೊಂಡು ಬಂದಿದ್ದ ಸರ್ಕಾರಿ ನೌಕರರ ವಿರುದ್ಧ ಗರಂ ಆದರು. ಮಂಜುರಾದ ಸರ್ಕಾರಿ ಭೂಮಿಗಾಗಿ ಮಾಜಿ ಸೈನಿಕನು ಅಲೆದಾಡುತ್ತಿರುವ ಮಾಜಿ ಸೈನಿಕರ ಸಂಕಷ್ಟವನ್ನು ಲೋಕಾಯುಕ್ತ ಕೇಳಿತು. ತಾಂತ್ರಿಕ ದೋಷ ಸರಿಪಡಿಸಿ ತಕ್ಷಣವೇ ಭೂಮಿ...
ಸುದ್ದಿ

ಬೇರೆ ಹುಡ್ಗಿ ಜೊತೆ ಸಂಪರ್ಕದಲ್ಲಿದ್ದಾನೆ ಅಂತ ಜಿಮ್‌ ಟ್ರೈನರ್‌ಗೆ ಚಾಕು ಇರಿದ ಪ್ರೇಯಸಿ- ಕಹಳೆ ನ್ಯೂಸ್

ರಾಮನಗರ: ಪ್ರಿಯಕರ  ಬೇರೆ ಹುಡುಗಿ ಜೊತೆ ಸಂಪರ್ಕದಲ್ಲಿದ್ದಾನೆ ಎಂದು ಜಿಮ್ ಟ್ರೈನರ್‌ ಪ್ರಿಯಕರನಿಗೆ ಪ್ರೇಯಸಿಯೇ ಚಾಕು ಇರಿದಿರೋ ಘಟನೆ ಬಿಡದಿಯ  ಸಿಲ್ಕ್ ಫಾರ್ಮ್ ಕ್ವಾಟ್ರಸ್ ಬಳಿ ಗುರುವಾರ ರಾತ್ರಿ ನಡೆದಿದೆ. ವೇಣುಗೋಪಾಲ್ (27) ಚಾಕು ಇರಿತಕ್ಕೊಳಗಾದ ಯುವಕ. ಸುಧಾ (30) ಚಾಕು ಇರಿದಿರೋ ಪ್ರೇಯಸಿ. ಕಳೆದ 5-6 ವರ್ಷಗಳಿಂದ ವೇಣುಗೋಪಾಲ್ ಹಾಗೂ ಸುಧಾ ಪ್ರೀತಿ ಮಾಡ್ತಿದ್ದು, ಕಳೆದ ಕೆಲ ದಿನಗಳಿಂದ ವೇಣುಗೋಪಾಲ್ ಸುಧಾಳಿಂದ ಅಂತರ ಕಾಯ್ದುಕೊಂಡಿದ್ದ ಎನ್ನಲಾಗಿದೆ.   ಅಲ್ಲದೇ...
1 8 9 10 11 12 3,283
Page 10 of 3283