ರಾಮಚಂದ್ರಾಪುರ ಮಠಕ್ಕೆ ಶಿಷ್ಯರೇ ಸಂಪತ್ತು : ಪ್ರಧಾನ ಮಠದ ಪುನರ್ನಿರ್ಮಾಣ ಸಹಸ್ರಮಾನದ ಕಾರ್ಯ : ರಾಘವೇಶ್ವರ ಶ್ರೀ- ಕಹಳೆ ನ್ಯೂಸ್
ಶ್ರೀ ರಾಮಚಂದ್ರಾಪುರ ಮಠಕ್ಕೆ ಶಿಷ್ಯರೇ ಸಂಪತ್ತಾಗಿದ್ದು, ಪ್ರಧಾನ ಮಠದ ಶಿಲಾನ್ಯಾಸದ ಮೂಲಕ ಶರಾವತಿ ನದಿ ತೀರದಲ್ಲಿ ಸಹಸ್ರಮಾನದ ಕಾರ್ಯಕ್ಕೆ ಚಾಲನೆ ನೀಡಲಾಗಿದೆ ಎಂದು ಶ್ರೀ ರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಹೊಸನಗರದ ಶ್ರಿರಾಮಚಂದ್ರಾಪುರ ಮಠದ ಶರಾವತಿ ತೀರದಲ್ಲಿ ಪ್ರಧಾನಮಠ ಪುನ ನಿರ್ಮಾಣ ಸಮಿತಿಯವರು ಏರ್ಪಡಿಸಿದ್ದ ನವ ನಿರ್ಮಾಣದ ರಾಮಸಾನ್ನಿಧ್ಯದ ಶಿಲಾನ್ಯಾಸ ಕಾರ್ಯಕ್ರದಲ್ಲಿ ಶಿಲಾನ್ಯಾಸ ನೆರವೇರಿಸಿ ನಂತರದ ಧರ್ಮಸಭೆಯ ದಿವ್ಯಸಾನ್ನಿಧ್ಯವಹಿಸಿ ಆಶೀರ್ವಚನ ನೀಡಿದರು. ರಾಮಚಂದ್ರಾಪುರಮಠದ...







