Friday, March 6, 2026

ಸುದ್ದಿ

ಸುದ್ದಿ

ಕಡಿಮೆ ಬೆಲೆಗೆ ಚಿನ್ನದ ಆಸೆ ತೋರಿಸಿ ಉದ್ಯಮಿಯಿಂದ 20 ಲಕ್ಷ ದರೋಡೆ -ಕಹಳೆ ನ್ಯೂಸ್

ಚಿಕ್ಕಬಳ್ಳಾಪುರ/ದೇವನಹಳ್ಳಿ: ಕಡಿಮೆ ಬೆಲೆಗೆ ಚಿನ್ನ ಕೊಡುತ್ತೇನೆ ಅಂತ ಆಸೆ ತೋರಿಸಿ ಹೈದರಾಬಾದ್ ಮೂಲದ ಉದ್ಯಮಿಯನ್ನ ಕರೆಸಿಕೊಂಡ ಖತರ್ನಾಕ್ ಗ್ಯಾಂಗ್ ಆತನ ಬಳಿ 20 ಲಕ್ಷ ರೂ. ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವೆಂಕಟಗಿರಿ ಕೋಟೆ ಗ್ರಾಮದ ಬಳಿ ನಡೆದಿದೆ. ಹೈದರಾಬಾದ್ ಮೂಲದ ವಿಶ್ವಪ್ರಸಾದ್ ರೆಡ್ಡಿ, ಕುಮಾರ್ ಎಂಬಾತನೊಂದಿಗೆ ವ್ಯವಹಾರ ಮಾಡಿದ್ದರು. ಕುಮಾರ್ ತನ್ನ ಬಳಿ ನಾಲ್ಕು ಕೆಜಿ ಚಿನ್ನದ ನಾಣ್ಯಗಳಿದ್ದು, ಕೇವಲ 20 ಲಕ್ಷಕ್ಕೆ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ನರಿಕೊಂಬು ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮ – ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನರಿಕೊಂಬು ಇಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮ ಮಾರ್ಚ್ 4 ಬುಧವಾರ ಜರಗಿತು. ಬಂಟ್ವಾಳ ಸಮೂಹ ಸಂಪನ್ಮೂಲ ಕೇಂದ್ರದ ಐ ಆರ್‌ ಟಿ ಸುರೇಖಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಕ್ಕಳಿಗೆ ಪ್ರಾಥಮಿಕ ಹಂತದಲ್ಲಿ ವಿಜ್ಞಾನದ ಕುರಿತು ಆಸಕ್ತಿಯನ್ನು ಅಭಿವೃದ್ಧಿಪಡಿಸಲು, ಪ್ರಾಯೋಗಿಕತ್ಮಕ ಚಿಂತನೆಯನ್ನು ಬೆಳೆಸುವುದು, ಮೂಡನಂಬಿಕೆಗಳನ್ನು ಹೋಗಲಾಡಿಸಿ ವೈಜ್ಞಾನಿಕ ಚಿಂತನೆ ಮತ್ತು ಸಮಸ್ಯೆಗಳನ್ನು ಬಗೆಹರಿಸುವ ಸಾಮರ್ಥ್ಯವನ್ನು ಬೆಳೆಸುವ ಸಲುವಾಗಿ ವಿಜ್ಞಾನದ ದಿನಾಚರಣೆ...
ಸುದ್ದಿ

ಶ್ರೀಲಂಕಾ ಬಳಿ ಅಮೆರಿಕದ ಸಬ್‌ಮೆರಿನ್ ಡಿಕ್ಕಿ; ಇರಾನ್‌ ನೌಕೆ ಮುಳುಗಡೆ : 148 ಮಂದಿ ನಾಪತ್ತೆ – ಕಹಳೆ ನ್ಯೂಸ್

ಕೊಲಂಬೊ: ಶ್ರೀಲಂಕಾದ ಬಳಿ ಅಮೆರಿಕದ ಜಲಾಂತರ್ಗಾಮಿ ದಾಳಿಯಿಂದ ಇರಾನ್‌ನ ಯುದ್ಧನೌಕೆ ಐರಿಸ್‌ ದೇನಾ ಮುಳುಗಡೆಯಾಗಿದೆ. ನೌಕೆ ಮುಳುಗಿದ ಪರಿಣಾಮ ಕನಿಷ್ಠ 148 ನಾವಿಕರು ನಾಪತ್ತೆಯಾಗಿದ್ದಾರೆ. 78 ಮಂದಿ ಗಾಯಗೊಂಡಿದ್ದಾರೆ. ತೀವ್ರವಾಗಿ ಗಾಯಗೊಂಡ 32 ಸಿಬ್ಬಂದಿಯನ್ನು ಶ್ರೀಲಂಕಾದ ಅಧಿಕಾರಿಗಳು ರಕ್ಷಿಸಿದ್ದಾರೆ. ಶೋಧ ಕಾರ್ಯಾಚರಣೆಯನ್ನು ಮುಂದುವರೆಸಿದ್ದಾರೆ. ಕೊಲಂಬೊ: ಶ್ರೀಲಂಕಾದ ಬಳಿ ಅಮೆರಿಕದ ಜಲಾಂತರ್ಗಾಮಿ ದಾಳಿಯಿಂದ ಇರಾನ್‌ನ ಯುದ್ಧನೌಕೆ ಐರಿಸ್‌ ದೇನಾ ಮುಳುಗಡೆಯಾಗಿದೆ. ಭಾರತದ ವಿಶಾಖಪಟ್ಟಣದಲ್ಲಿ ಆಯೋಜಿಸಿದ್ದ ‘ಅಂತರರಾಷ್ಟ್ರೀಯ ಫ್ಲೀಟ್ ರಿವ್ಯೂ / ಮಿಲನ್...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದೆ ಟಿಪ್ಪರ್ ಲಾರಿಯಲ್ಲಿ ಮಣ್ಣು ಸಾಗಾಟ – ಸಾರ್ವಜನಿಕರ ಆಕ್ರೋಶ – ಕಹಳೆ ನ್ಯೂಸ್

ದಕ್ಷಿಣ ಕನ್ನಡ ಜಿಲ್ಲೆ ಮಾಣಿ ಹಾಗೂ ಬಿ.ಸಿ ರೋಡು ಮಧ್ಯೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಟಿಪ್ಪರ್ ಲಾರಿ ಮೂಲಕ ಮಣ್ಣು ಸಾಗಿಸುತ್ತಿದ್ದ ಬಗ್ಗೆ ವರದಿಯಾಗಿದೆ. ಟಿಪ್ಪರ್ ಲಾರಿಯಲ್ಲಿ ಮಣ್ಣು ಸಾಗಿಸುವ ಸಂದರ್ಭ ಯಾವುದೇ ಸುರಕ್ಷತಾ ಕ್ರಮಗಳನ್ನು ಕೈಗೊಂಡಿಲ್ಲ. ಮಣ್ಣಿನ ಮೇಲೆ ಯಾವುದೇ ಟರ್ಪಲ್ ಹೊದಿಕೆ ಹಾಕಲಿಲ್ಲ.. ಟಿಪ್ಪರಿನ ಹಿಂಬದಿಯಿಂದ ಗಾಳಿಯ ಒತ್ತಡಕ್ಕೆ ಮಣ್ಣು ಮತ್ತು ಸಣ್ಣ ರೀತಿಯ ಮರಳು ಬೀಳುತ್ತಿದ್ದು ವಾಹನ ಸವಾರರಿಗೆ ತೊಂದರೆ ಆಗುತ್ತಿದೆ. ಅಂತೆಯೇ ಟಿಪ್ಪರ್ ಚಾಲಕರು ಅತಿ...
ಜಿಲ್ಲೆಸುದ್ದಿಹಾಸನ

ಪಾಠ ಮಾಡುತ್ತಿದ್ದಾಗಲೇ ಶಿಕ್ಷಕನಿಗೆ ಹೃದಯಾಘಾತ ವಿದ್ಯಾರ್ಥಿಗಳ ಎದುರೇ ದುರ್ಮರಣ -ಕಹಳೆ ನ್ಯೂಸ್

ಹಾಸನ: ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತದಿಂದ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕರೊಬ್ಬರು ಮೃತಪಟ್ಟ ದುರ್ಘಟನೆ ಅರಕಲಗೂಡು ತಾಲೂಕಿನ ಕೆಬ್ಬೆಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ಶಿಕ್ಷಕರನ್ನು ಕೇರಳಾಪುರ ಗ್ರಾಮದ ಸತೀಶ್ (53) ಎಂದು ಗುರುತಿಸಲಾಗಿದೆ. ಅವರು ಕೆಬ್ಬೆಕೊಪ್ಪಲು ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದರು. ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿದ್ದ ವೇಳೆ ಸತೀಶ್ ಏಕಾಏಕಿ ಅಸ್ವಸ್ಥಗೊಂಡು ಕೊಠಡಿಯಲ್ಲೇ ಕುಸಿದು ಬಿದ್ದಿದ್ದಾರೆ. ಇದನ್ನು ಗಮನಿಸಿದ ವಿದ್ಯಾರ್ಥಿಗಳು ಹಾಗೂ ಸಹ...
ಸುದ್ದಿ

ಕತಾರ್‌ನಲ್ಲಿ 10 ಶಂಕಿತ ಐಆರ್‌ಜಿಸಿ ಗೂಢಚಾರರ ಬಂಧನ -ಕಹಳೆ ನ್ಯೂಸ್

ಕತಾರ್‌: ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್‌ನ (ಐಆರ್‌ಜಿಸಿ) ಗೂಢಚಾರರು ಎಂಬ ಶಂಕೆ ಮೇಲೆ 10 ಮಂದಿಯನ್ನು ಕತಾರ್‌ನಲ್ಲಿ ಬಂಧಿಸಲಾಗಿದೆ. ದೇಶದ ನಿರ್ಣಾಯಕ ಮತ್ತು ಮಿಲಿಟರಿ ಮೂಲಸೌಕರ್ಯದ ಬಗ್ಗೆ ಗುಪ್ತಚರ ಮಾಹಿತಿ ಸಂಗ್ರಹಿಸಲು ಏಳು ಶಂಕಿತರಿಗೆ ಬೇಹುಗಾರಿಕೆ ಕಾರ್ಯಾಚರಣೆಗಳನ್ನು ವಹಿಸಲಾಗಿತ್ತು. ಬೇಹುಗಾರಿಕೆ ಆರೋಪ ಹೊತ್ತಿರುವ ಇತರ ಮೂವರು ಡ್ರೋನ್‌ಗಳನ್ನು ನಿರ್ವಹಿಸುವಲ್ಲಿ ತರಬೇತಿ ಪಡೆದಿದ್ದರು ಎಂದು ವರದಿಯಾಗಿದೆ. ತನಿಖೆಯ ಸಮಯದಲ್ಲಿ ಶಂಕಿತರು ಇರಾನಿನ ರೆವಲ್ಯೂಷನರಿ ಗಾರ್ಡ್‌ನೊಂದಿಗೆ ಸಂಪರ್ಕದಲ್ಲಿರುವುದನ್ನು ಒಪ್ಪಿಕೊಂಡಿದ್ದಾರೆ. ಅಲ್ಲದೇ ಬೇಹುಗಾರಿಕೆ ಮತ್ತು...
ದೆಹಲಿರಾಜ್ಯಸುದ್ದಿ

8 ದೇಶಗಳ ಮುಖ್ಯಸ್ಥರೊಂದಿಗೆ ಮೋದಿ ಮಾತು : ಭಾರತೀಯರ ಸುರಕ್ಷತೆ ಬಗ್ಗೆ ಚರ್ಚೆ, ಇರಾನ್‌ ದಾಳಿಗೆ ಖಂಡನೆ – ಕಹಳೆ ನ್ಯೂಸ್

ನವದೆಹಲಿ: ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಸಂಘರ್ಷದ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಅವರು ಓಮನ್, ಕತಾರ್, ಕುವೈತ್‌ ಸೇರಿದಂತೆ 8 ದೇಶಗಳ ಮುಖ್ಯಸ್ಥರೊಂದಿಗೆ ಮಾತುಕತೆ ನಡೆಸಿದ್ದಾರೆ. ಇರಾನ್‌ ದಾಲಿಯನ್ನ ತೀವ್ರವಾಗಿ ಖಂಡಿಸಿರುವ ಅವರು, ಭಾರತೀಯ ನಾಗರಿಕರ ಸುರಕ್ಷತೆಯನ್ನೂ ವಿಚಾರಿಸಿದ್ದಾರೆ. ಇರಾನ್‌ನ ಪ್ರತೀಕಾರದ ದಾಳಿಗೆ ತುತ್ತಾಗಿರುವ ಒಮಾನ್‌ನ ಸುಲ್ತಾನ ಹೈತಮ್ ಬಿನ್ ತಾರಿಕ್, ಕುವೈತ್ ರಾಜಕುಮಾರ ಶೇಖ್ ಸಬಾಹ್ ಅಲ್-ಖಾಲಿದ್ ಅಲ್-ಹಮದ್ ಅಲ್-ಮುಬಾರಕ್ ಅಲ್ -ಸಬಾಹ್ ಮತ್ತು ಕತಾರ್‌ನ ಅಮೀರ ಶೇಖ್ ತಮೀಮ್...
ಜಿಲ್ಲೆಶಿವಮೊಗ್ಗಸುದ್ದಿ

ಸಚಿವ ಮಧು ಬಂಗಾರಪ್ಪ ಜನ್ಮದಿನ : ಪೌರಕಾರ್ಮಿಕರು, ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ವಿಮಾನಯಾನ -ಕಹಳೆ ನ್ಯೂಸ್

ಶಿವಮೊಗ್ಗ: ಶಿಕ್ಷಣ ಸಚಿವ ಮಧು ಬಂಗಾರಪ್ಪ ತಮ್ಮ ಜನ್ಮ ದಿನವನ್ನ ಅತ್ಯಂತ ವಿಭಿನ್ನ ಮತ್ತು ಅರ್ಥಪೂರ್ಣವಾಗಿ ಆಚರಿಸಲು ಮುಂದಾಗಿದ್ದಾರೆ. ತಾವು ಪ್ರತಿನಿಧಿಸುವ ಸೊರಬ ಕ್ಷೇತ್ರದ ಸೊರಬ ಪುರಸಭೆ ಹಾಗೂ ಆನವಟ್ಟಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಪೌರಕಾರ್ಮಿಕರಿಗೆ ವಿಮಾನಯಾನ ಮಾಡಿಸುವ ಮೂಲಕ ಅವರ ಮೊಗದಲ್ಲಿ ಮಂದಹಾಸ ಮೂಡಿಸಿದ್ದಾರೆ. ಹೌದು, ಪ್ರತಿನಿತ್ಯ ತಮ್ಮ ಕಾಯಕದ ಮೂಲಕ ನಗರವನ್ನ ಸ್ವಚ್ಛ ಮಾಡಲು ಶ್ರಮಿಸುವ 36 ಜನ ಪೌರಕಾರ್ಮಿಕರನ್ನ ತಮ್ಮ ಹುಟ್ಟುಹಬ್ಬದ ಹಿನ್ನೆಲೆ ಉಚಿತವಾಗಿ ವಿಮಾನಯಾನ...
1 2 3 4 3,281
Page 2 of 3281