ಕನ್ಯಾಡಿ ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಹಾಗೂ ಮೊಗ್ರು ಗ್ರಾಮ ಮುಗೇರಡ್ಕ -ಅಲೆಕ್ಕಿ ಶ್ರೀರಾಮ ಶಿಶುಮಂದಿರ ಮಕ್ಕಳ ಶಿಕ್ಷಣ ಮತ್ತು ಅನ್ನಯಜ್ಞ ಯೋಜನೆಗೆ ನವಜೋಡಿಗಳಿಂದ ದೇಣಿಗೆ ಹಸ್ತಾಂತರ -ಕಹಳೆ ನ್ಯೂಸ್
ಮೊಗ್ರು : ಬೆಳ್ತಂಗಡಿ ತಾಲೂಕು ಮೊಗ್ರು ಗ್ರಾಮ ಹೇರ ನಿವಾಸಿ, ಕನ್ಯಾಡಿ ಸೇವಾಭಾರತಿ ಸಂಸ್ಥೆಯ ಸಿಬ್ಬಂದಿಯಾದ ಶ್ರೀ ಕುಸುಮಾಧರ ಹಾಗೂ ಶ್ರೀಮತಿ ಪೂರ್ಣಿಮಾರವರ ಶುಭವಿವಾಹವು ಕೊರಿಂಜ ಶ್ರೀ ಪಂಚಲಿಂಗೇಶ್ವರ ಸಭಾಭವನದಲ್ಲಿ ಎಪ್ರಿಲ್.20 ರoದು ನೆರವೇರಿತು. ಈ ಸಂದರ್ಭದಲ್ಲಿ ಕನ್ಯಾಡಿಯಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾoಗರಿಗೆ ನಿರ್ಮಾಣವಾಗುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡಕ್ಕೆ ರೂ. 15,000/- ಹಾಗೂ ಮೊಗ್ರು ಗ್ರಾಮ ಮುಗೇರಡ್ಕ ಅಲೆಕ್ಕಿ ಜೈ ಶ್ರೀರಾಮ್ ಸೇವಾ ಟ್ರಸ್ಟ್ (ರಿ.) ಶ್ರೀ ರಾಮ...







