ಬಂಟ್ವಾಳ: ರಿಕ್ಷಾ – ಬೈಕ್ ನಡುವೆ ಅಪಘಾತ : ರಸ್ತೆಗೆ ಎಸೆಯಲ್ಪಟ್ಟು ರಿಕ್ಷಾದಲ್ಲಿದ್ದ ಪ್ರಯಾಣಿಕ ಮೃತ್ಯು – ಕಹಳೆ ನ್ಯೂಸ್
ಬಂಟ್ವಾಳ: ರಿಕ್ಷಾ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕನೋರ್ವ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡಿದ್ದ ಕಾರಣ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಇಂದು ಸಂಜೆ ಪಾಣೆಮಂಗಳೂರು ಎಂಬಲ್ಲಿ ನಡೆದಿದೆ. ಸಜೀಪ ನಿವಾಸಿ ಅಲ್ತಾಫ್ (18) ಮೃತಪಟ್ಟ ಯುವಕ. ಬಿಸಿರೋಡಿನಿಂದ ಬರುತ್ತಿದ್ದ ರಿಕ್ಷಾ ಹಾಗೂ ಪಾಣೆಮಂಗಳೂರು ಪೇಟೆಯಿಂದ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಅಪಘಾತಕ್ಕೆ ರಿಕ್ಷಾ ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿಯಾಗಿದೆ. ಪಲ್ಟಿಯಾಗುವ ಸಂದರ್ಭದಲ್ಲಿ...