ಶ್ರೀಕೃಷ್ಣ ಮಠಕ್ಕೆ ನಾನು ಹೋಗಲ್ಲ, ಯಾರೂ ನನ್ನನ್ನು ಕರೆದೇ ಇಲ್ಲ – ಸಿ.ಎಂ. ಸಿದ್ಧರಾಮಯ್ಯ ಹೇಳಿಕೆ
ಉಡುಪಿ : ಸಿಎಂ ಸಿದ್ದರಾಮಯ್ಯ ತನ್ನ ಅಧಿಕಾರಾವಧಿಯ ರೆಕಾರ್ಡ್ ಅನ್ನು ಹಾಗೇಯೇ ಉಳಿಸಿಕೊಂಡಿದ್ದಾರೆ. ಮುಖ್ಯಮಂತ್ರಿ ಪಟ್ಟ ಅಲಂಕರಿಸಿಕೊಂಡ ನಂತರ ಉಡುಪಿಗೆ ಐದನೇ ಬಾರಿಗೆ ಆಗಮಿಸಿದ ಮುಖ್ಯಮಂತ್ರಿ ಶ್ರೀಕೃಷ್ಣ ಮಠಕ್ಕೆ ತೆರಳದೆ ತನ್ನ ಹಠ ಮುಂದುವರೆಸಿದ್ದಾರೆ. ಮಧ್ಯಾಹ್ನ ಎರಡು ಹದಿನೈದರ ವೇಳೆಗೆ ಉಡುಪಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ನೇರವಾಗಿ ಐಬಿಗೆ ಬಂದು ಮಧ್ಯಾಹ್ನದ ಊಟ ಸ್ವೀಕರಿಸಿದರು. ನಂತರ ಶ್ರೀಕೃಷ್ಣ ಮಠದ ವ್ಯಾಪ್ತಿಯಿಂದ ಇನ್ನೂರು ಮೀಟರ್ ದೂರದಲ್ಲಿರುವ ಕೂಸಮ್ಮ ಶಂಭು ಶೆಟ್ಟಿ ಹಾಜಿ...







