ಉತ್ತರ ಪ್ರದೇಶದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ : 54 ಮಂದಿ ಸಾವು – ಕಹಳೆ ನ್ಯೂಸ್
ಲಕ್ನೋ: ಉತ್ತರ ಪ್ರದೇಶದ ಐದು ಜಿಲ್ಲೆಗಳಲ್ಲಿ ಬುಧವಾರ ಭಾರಿ ಮಳೆಯೊಂದಿಗೆ ಬೀಸಿದ ಪ್ರಬಲ ಚಂಡಮಾರುತ ವ್ಯಾಪಕ ಹಾನಿಯನ್ನುಂಟುಮಾಡಿದ್ದು, ಭದೋಹಿ, ಫತೇಪುರ್ ಮತ್ತು ಬುದೌನ್ ಸೇರಿದಂತೆ ಐದು ಜಿಲ್ಲೆಗಳಲ್ಲಿ 54 ಮಂದಿ ಸಾವನ್ನಪ್ಪಿದ್ದಾರೆ. ಪ್ರಯಾಗ್ರಾಜ್ ಪ್ರದೇಶದಲ್ಲೇ 16 ಮಂದಿ ಮಳೆಸಂಬಂಧಿ ಅನಾಹುತಗಳಿಂದ ಜೀವ ಕಳೆದುಕೊಂಡಿದ್ದಾರೆ. ಭದೋನಿ ಜಿಲ್ಲೆಯಲ್ಲಿ 16 ಮಂದಿ, ಫತೇಪುರ ಜಿಲ್ಲೆಯಲ್ಲಿ ಒಂಬತ್ತು, ಉನ್ನಾವೊದಲ್ಲಿ ನಾಲ್ಕು ಮಂದಿ, ಕಾನ್ಪುರ ದೇಹತ್ನಲ್ಲಿ ಮೂವರು, ಬುದೌನ್ ಜಿಲ್ಲೆಯಲ್ಲಿ ಐದು ಮಂದಿ, ಚಂದೌಲಿಯಲ್ಲಿ ಇಬ್ಬರು,...






