Monday, March 16, 2026

ಸುದ್ದಿ

ಸುದ್ದಿ

ವಿಜಯಪುರದ ಬಬಲೇಶ್ವರ ತಾಲೂಕಿನ ಮಂಗಳೂರು ಗ್ರಾಮದಲ್ಲಿ ಖಾಸಗಿ ಜೆಟ್ ವಿಮಾನ ಪತನ -ಕಹಳೆ ನ್ಯೂಸ್

ವಿಜಯಪುರ: ಬಬಲೇಶ್ವರ ತಾಲೂಕಿನ ಮಂಗಳೂರು  ಗ್ರಾಮದಲ್ಲಿ ಜೆಟ್ ವಿಮಾನವೊಂದು ಇಂದು ಮಧ್ಯಾಹ್ನ 3 ಗಂಟೆಯ ವೇಳೆಗೆ ಪತನವಾಗಿದೆ. ಕಲಬುರಗಿಯಿಂದ ಬೆಳಗಾವಿಗೆ ತೆರಳುತ್ತಿದ್ದ ಇಂಧನ ಖಾಲಿಯಾದ ಕಾರಣ ವಿಮಾನ ಪತನಗೊಂಡಿದೆ ಎಂಬ ಪ್ರಾಥಮಿಕ ಮಾಹಿಲತಿ ಲಭ್ಯವಾಗಿದೆ. ರೆಡ್ ಬರ್ಡ್‌ ಕಂಪನಿಯ ಖಾಸಗಿ ಕಂಪನಿಯ ವಿಮಾನ ಪತನಗೊಂಡು ರೈತರ ಜಮೀನಿನ ಮೇಲೆ ಬಿದ್ದಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ, ಜೆಟ್‌ನಲ್ಲಿದ್ದ ಇಬ್ಬರು ತೀವ್ರ ಗಾಯಗೊಂಡಿದ್ದು ಜಿಲ್ಲಾ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದೆ. ಸ್ಥಳಕ್ಕೆ ದೌಡಾಯಿಸಿರುವ ಬಬಲೇಶ್ವರ...
ಸುದ್ದಿ

ಕೆಂಪೇಗೌಡ ಏರ್ಪೋರ್ಟ್ ನಲ್ಲಿ 2.97 ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶಕ್ಕೆ, ಮೂವರು ಅರೆಸ್ಟ್ -ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ವಿದೇಶದಿಂದ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 2.97 ಕೋಟಿ ರೂಪಾಯಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಮೂವರು ಆರೋಪಿಗಳನ್ನು ಅಧಿಕಾರಿಗಳು ಬಂಧಿಸಿದ್ದಾರೆ. ಥಾಯ್ಲೆಂಡ್​ನ ಪುಕೆಟ್​ ಹಾಗೂ ಮಲೇಶಿಯಾದಿಂದ ಕೆಐಎಬಿಗೆ ಆಗಮಿಸಿದ್ದ ಮೂವರು ಪ್ರಯಾಣಿಕರ ಲಗೇಜ್ ಬ್ಯಾಗ್‌ಗಳನ್ನು ಇಮಿಗ್ರೇಷನ್​ ವಿಭಾಗದಲ್ಲಿ ಪರಿಶೀಲಿಸಿದಾಗ, ಪ್ಯಾಕೆಟ್‌ಗಳಾಗಿ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಫೈಲ್‌ಗಳನ್ನು ಹೊಸ ಅಧಿಕಾರಿಗಳಿಗೆ ಕೊಡ್ಬೇಡಿ :ವರ್ಗಾವಣೆಯಾದ್ರೂ ಅಧಿಕಾರಿಗಳಿಗೆ ವರ್ತಿಕಾ ಕರೆ – ಕಹಳೆ ನ್ಯೂಸ್

ಬಳ್ಳಾರಿ: ಬ್ಯಾನರ್‌ ಗಲಭೆ ಬಳಿಕ ವರ್ಗಾವಣೆ ಆಗಿದ್ದ ಡಿಐಜಿ (DIG) ಆಗಿದ್ದ ಐಪಿಎಸ್ ಅಧಿಕಾರಿ ವರ್ತಿಕಾ ಕಟಿಯಾರ್ ಹಂತದ ಅಧಿಕಾರಿಗಳಿಗೆ ಕರೆ ಮಾಡಿ ಯಾವುದೇ ಫೈಲ್‌ಗಳನ್ನು ಈಗಿನ ಅಧಿಕಾರಿಗಳಿಗೆ ನೀಡದಂತೆ ಬೆದರಿಕೆ ಹಾಕಿದ್ದಾರೆ. ಬಳ್ಳಾರಿ: ಬ್ಯಾನರ್‌ ಗಲಭೆ ಬಳಿಕ ವರ್ಗಾವಣೆ ಆಗಿದ್ದ ಡಿಐಜಿ ಆಗಿದ್ದ ಐಪಿಎಸ್ ಅಧಿಕಾರಿ ವರ್ತಿಕಾ ಕಟಿಯಾರ್ ಹಂತದ ಅಧಿಕಾರಿಗಳಿಗೆ ಕರೆ ಮಾಡಿ ಯಾವುದೇ ಫೈಲ್‌ಗಳನ್ನು ಈಗಿನ ಅಧಿಕಾರಿಗಳಿಗೆ ನೀಡದಂತೆ ಬೆದರಿಕೆ ಹಾಕಿದ್ದಾರೆ.   ವರ್ತಿಕಾ ಅವರನ್ನು...
ಜಿಲ್ಲೆರಾಜ್ಯಸುದ್ದಿ

ವೇಶ್ಯಾವಾಟಿಕೆ ಮಾಡುವಂತೆ ಅತ್ತೆಯಿಂದ ಕಿರುಕುಳ : ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸೊಸೆ -ಕಹಳೆ ನ್ಯೂಸ್

ಬೀದರ್‌: ಗಂಡನ ಮನೆಯವರ ಮಾನಸಿಕ ಕಿರುಕುಳದಿಂದಾಗಿ ಮನೆಯಲ್ಲೇ ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೀದರ್ ಜಿಲ್ಲೆಯ ಬಸವಕವಲ್ಯಾಣ ನಗರದ ಓಂ ನಗರದಲ್ಲಿ ನಡೆದಿದೆ. ಅಂಜನಾಬಾಯಿ ಪಾಟೀಲ್ (22) ಆತ್ಮಹತ್ಯೆ ಮಾಡಿಕೊಂಡ ಗೃಹಿಣಿಯಾಗಿದ್ದು ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದು ಮೃತಪಟ್ಟಿದ್ದಾರೆ. ಮೃತಳ ಗಂಡ ಶೇಖರ್, ಅತ್ತೆ ಅರುಣಾಬಾಯಿ, ಮಾವ ಚಂದ್ರಕಾಂತ ಅವರ ಕಿರುಕುಳದಿಂದ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಂದೆ ವಿಜಯ್‌ ಕುಮಾರ್‌ ಬಸವಕಲ್ಯಾಣ ಠಾಣೆಯಲ್ಲಿ...
ಜಿಲ್ಲೆಶಿವಮೊಗ್ಗಸುದ್ದಿ

ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಮೃಗಾಲಯದ ಚಿರತೆಗೆ ಸ್ಕ್ಯಾನಿಂಗ್ -ಕಹಳೆ ನ್ಯೂಸ್

ಶಿವಮೊಗ್ಗ: ತ್ಯಾವರೆಕೊಪ್ಪ ಮೃಗಾಲಯದಲ್ಲಿ ಅನಾರೋಗ್ಯಕ್ಕೀಡಾದ 15 ವರ್ಷದ ಗಂಡು ಚಿರತೆಗೆ ಕಳೆದ ರಾತ್ರಿ ಶಿವಮೊಗ್ಗದ ನಂಜಪ್ಪ ಆಸ್ಪತ್ರೆಯಲ್ಲಿ ಸ್ಕ್ಯಾನಿಂಗ್‌ ಮಾಡಲಾಗಿದೆ. ತುರ್ತಾಗಿ ಎಂಆರ್‌ಐ ಸ್ಕ್ಯಾನಿಂಗ್‌ನ ಅಗತ್ಯ ಇದ್ದಿದ್ದರಿಂದ ಚಿರತೆಯನ್ನು ಆಸ್ಪತ್ರೆಗೆ ಕರೆತರಲಾಗಿತ್ತು. ಕಳೆದ ಎರಡು ದಿನದಿಂದ ಚಿರತೆ ನಿತ್ರಾಣಗೊಂಡಿತ್ತು. ಚಿಕಿತ್ಸೆ ನಡೆಸುತ್ತಿದ್ದ ಮೃಗಾಲಯದ ವೈದ್ಯರು ತುರ್ತಾಗಿ ಸ್ಕ್ಯಾನಿಂಗ್‌ ಅಗತ್ಯವಿದೆ ಎಂದು ತಿಳಿಸಿದ್ದರು. ಈ ಹಿನ್ನೆಲೆ ಮೃಗಾಲಯದ ಸಿಬ್ಬಂದಿ ಚಿರತೆಯನ್ನು ನಂಜಪ್ಪ ಆಸ್ಪತ್ರೆಗೆ ಕರೆತಂದಿದ್ದರು. ಶಿವಮೊಗ್ಗದ ಮೃಗಾಲಯದಲ್ಲಿ ಎಂಆರ್‌ಐ ಸ್ಕ್ಯಾನಿಂಗ್‌ ವ್ಯವಸ್ಥೆ...
ಜಿಲ್ಲೆಬಳ್ಳಾರಿಬೆಂಗಳೂರುರಾಜ್ಯಸುದ್ದಿ

ಬಳ್ಳಾರಿಯಲ್ಲಿ ಉತ್ಖನನ ವೇಳೆ 3,000 ವರ್ಷಗಳಷ್ಟು ಹಳೆಯ ಮಾನವನ ಪಳೆಯುಳಿಕೆ ಪತ್ತೆ -ಕಹಳೆ ನ್ಯೂಸ್

ಬಳ್ಳಾರಿ: ಜಿಲ್ಲೆಯ ಸಿರಗುಪ್ಪ ತಾಲೂಕಿನ ತೆಕ್ಕಲಕೋಟೆ ಪಟ್ಟಣದ ಗೌಡ್ರ ಮೂಲೆ ಬೆಟ್ಟದಲ್ಲಿ ಉತ್ಖನನ ವೇಳೆ 3,000 ವರ್ಷದಿಂದ 5,000 ವರ್ಷಗಳಷ್ಟು ಹಳೆಯದಾದ ಮಾನವನ ಪಳೆಯುಳಿಕೆ ಪತ್ತೆಯಾಗಿದೆ. ಸುಮಾರು 3,000 ವರ್ಷದಿಂದ 5,000 ವರ್ಷಗಳ ಹಿಂದಿನ ಮಾನವನ ಪಳೆಯುಳಿಕೆ ಇದಾಗಿದೆ ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ. ಅಮೆರಿಕದ ಹಾರ್ಟ್‌ವಿಕ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕಿ ನಮಿತಾ ಎಸ್ ಸುಗಂಧಿ ಅವರಿಂದ ಉತ್ಖನನ ಕಾರ್ಯ ನಡೆಯುತ್ತಿದೆ. ವಾರದ ಹಿಂದೆ ಉತ್ಪನನದ ವೇಳೆ ಮಾನವನ ಮೂಳೆಯೊಂದು ಸಿಕ್ಕಿತ್ತು. ಮಣ್ಣನ್ನು...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಕೈ ಕೊಟ್ಟ ಪ್ರೇಯಸಿ :  ಡೆತ್ ನೋಟ್ ಬರೆದಿಟ್ಟು ಬಾಡಿ ಬಿಲ್ಡರ್ ಆತ್ಮಹತ್ಯೆ ಕಹಳೆ ನ್ಯೂಸ್

ಬೆಂಗಳೂರು: ಪ್ರೀತಿಸಿದ ಯುವತಿ ಕೈ ಕೊಟ್ಟ ಹಿನ್ನೆಲೆ ಮನನೊಂದು ಬಾಡಿ ಬಿಲ್ಡರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾಲಕ್ಷ್ಮಿ ಲೇಔಟ್ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕಿರಣ್ (26) ಮೃತ ಬಾಡಿ ಬಿಲ್ಡರ್. ಕಿರಣ್ ಮೂರು ವರ್ಷಗಳಿಂದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಆದರೆ ಯುವತಿ ಬೇರೆ ಯುವಕನೊಂದಿಗೆ ತನ್ನ ಮದುವೆ ನಿಶ್ಚಯವಾಗಿದೆ ಎಂದು ಮದುವೆಯ ಆಮಂತ್ರಣ ಪತ್ರಿಕೆ ಹಾಗೂ ಹೊಸ ಸೀರೆಯನ್ನು ತೋರಿಸಿದ್ದಳು. ಇದರಿಂದ ಮನನೊಂದ ಕಿರಣ್ ಮನೆಗೆ ಬಂದು ರೂಂನ ಬಾಗಿಲು...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಅರ್ಕುಳದಲ್ಲಿ ನೂತನ ಅಂಗನವಾಡಿ ಕೇಂದ್ರ ಉದ್ಘಾಟನಾ ಸಮಾರಂಭ : ಶಾಸಕ ಡಾ. ವೈ ಭರತ್ ಶೆಟ್ಟಿ ಭಾಗಿ-ಕಹಳೆ ನ್ಯೂಸ್

ಮಂಗಳೂರು  : ಅಡ್ಯಾರ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಅರ್ಕುಳ ತುಪ್ಪೆಕಲ್ಲಿನಲ್ಲಿ ಫೆ.7 ರಂದು ಜ್ಞಾನರತ್ನ ಸಾರ್ವಜನಿಕ ಗೃಂಥಾಲಯ ಮತ್ತು ಜ್ಞಾನರತ್ನ ಅಂಗನವಾಡಿ ಕೇಂದ್ರ ತುಪ್ಪೆಕಲ್ಲು ಇದರ ನೂತನ ಕಟ್ಟಡದ ಉದ್ಘಾಟನಾ ಕರ್ಯಕ್ರಮದಲ್ಲಿ, ಮಾನ್ಯ ಶಾಸಕರಾದ ಡಾ. ವೈ. ಭರತ್ ಶೆಟ್ಟಿಯವರು ಭಾಗವಹಿಸಿ ಶುಭ ಹಾರೈಸಿದರು. ನೂತನ ಸುಸಜ್ಜಿತ ಕಟ್ಟಡವನ್ನು ಧರ್ಮದರ್ಶಿಗಳಾದ ಅರ್ಕುಳಬೀಡು ವಜ್ರನಾಭ ಶೆಟ್ಟಿಯವರು ದೀಪ ಬೆಳಗಿಸುವ ಮೂಲಕ ಉಧ್ಘಾಟಿಸಿದರು. ಕಾರ್ಯಕ್ರಮದಲ್ಲಿ ಪಂಚಾಯತ್‌ ಅಧ್ಯಕ್ಷರು,ಸ್ಥಳೀಯ ಸದಸ್ಯರುಗಳು ಕಾರ್ಯಕರ್ತರು ,ಪ್ರಮುಖರು ಉಪಸ್ಥಿತರಿದ್ದರು....
1 45 46 47 48 49 3,294
Page 47 of 3294