Friday, June 19, 2026

ಸುದ್ದಿ

ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಬೆಂಗಳೂರಿನಲ್ಲಿ ಮತ್ತೆ ಟೋಯಿಂಗ್ ಆರಂಭ : ಒಂದೇ ತಿಂಗಳಲ್ಲಿ ಬರೋಬ್ಬರಿ 600 ವಾಹನಗಳ ಎತ್ತಂಗಡಿ – ಕಹಳೆ ನ್ಯೂಸ್ 

ಬೆಂಗಳೂರು: ನಾಲ್ಕು ವರ್ಷದ ಬಳಿಕ ಬೆಂಗಳೂರಿನಲ್ಲಿ ಮತ್ತೆ ಟೋಯಿಂಗ್‌  ಆರಂಭವಾಗಿದೆ. ಇದೀಗ ಒಂದೇ ತಿಂಗಳಲ್ಲಿ ಬರೋಬ್ಬರಿ 600 ವಾಹನಗಳನ್ನು ಟೋಯಿಂಗ್‌ ಮಾಡಿದ್ದಾರೆ. ತಿಂಗಳ ಹಿಂದೆ ನಗರದ ಮೂರು ನಗರ ಪಾಲಿಕೆ ವ್ಯಾಪ್ತಿಯಲ್ಲಿ ಟೋಯಿಂಗ್ ಆರಂಭ ಮಾಡಲಾಗಿತ್ತು. ನೋ ಪಾರ್ಕಿಂಗ್, ರಸ್ತೆಯಲ್ಲಿ ಅಡ್ಡಾದಿಡ್ಡಿಯಾಗಿ ಪಾರ್ಕ್‌ ಮಾಡಿರುವ ವಾಹನಗಳನ್ನು ಟೋಯಿಂಗ್ ಮಾಡಲಾಗುತ್ತಿದೆ. ಪ್ರತಿದಿನ 60 ರಿಂದ 70 ವಾಹನಗಳ ಟೋಯಿಂಗ್ ಮಾಡುತ್ತಿದ್ದು, ಒಂದೇ ತಿಂಗಳಲ್ಲಿ ಬರೋಬ್ಬರಿ 600 ವಾಹನಗಳನ್ನು ಟೋಯಿಂಗ್ ಮಾಡಿ, ದಂಡ ವಿಧಿಸಲಾಗಿದೆ....
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಂಚಿನಡ್ಕಪದವಿನಲ್ಲಿ ವಿದ್ಯಾರ್ಥಿನಿ ಶಿಕ್ಷಣಕ್ಕೆ ವಿಹಿಂಪ-ಬಜರಂಗದಳದಿಂದ ಸಹಾಯಧನ ಹಸ್ತಾಂತರ-ಕಹಳೆ ನ್ಯೂಸ್

ಇರಾ ಗ್ರಾಮದ ಕಂಚಿನಡ್ಕಪದವು ನಿವಾಸಿಗಳಾದ ಶ್ರೀಮತಿ ಭಾರತಿ ಹಾಗೂ ಶ್ರೀ ರಾಜೇಶ್ ದಂಪತಿಗಳು ಆರ್ಥಿಕ ಸಂಕಷ್ಟದಲ್ಲಿದ್ದು, ಅವರ ಪುತ್ರಿ ಕುಮಾರಿ ಶರಣ್ಯ ಕಲ್ಲಡ್ಕ ಶ್ರೀ ರಾಮ ವಿದ್ಯಾ ಕೇಂದ್ರದಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಾರೆ. ವಿದ್ಯಾರ್ಥಿನಿಯ ಶಿಕ್ಷಣಕ್ಕೆ ನೆರವಾಗುವ ಉದ್ದೇಶದಿಂದ ವಿಶ್ವ ಹಿಂದೂ ಪರಿಷತ್ ಬಜರಂಗದಳ ಮಂಚಿ ಘಟಕದ ವತಿಯಿಂದ ರೂ.15,000 ಸಹಾಯಧನವನ್ನು ಹಸ್ತಾಂತರಿಸಲಾಯಿತು. ಈ ಧನಸಹಾಯಕ್ಕೆ ಸ್ಪಂದಿಸಿದ ಶರ್ಮೋದ್ ಕುಮಾರ್ ಬೆಹರಿನ್ ಅವರಿಗೆ ವಿಶ್ವ ಹಿಂದೂ ಪರಿಷತ್ ಬಜರಂಗದಳ...
ಜಿಲ್ಲೆಬೆಳಗಾವಿಸುದ್ದಿ

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನ : 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ-ಹೆಂಡ್ತಿ, ಪ್ರಿಯಕರ ಅರೆಸ್ಟ್- ಕಹಳೆ ನ್ಯೂಸ್

ಬೆಳಗಾವಿ: ಪ್ರಿಯಕರನ  ಜೊತೆ ಓಡಿಹೋಗಲು ಪತಿ ಮನೆಗೆ ಕನ್ನ ಹಾಕಿದ್ದ ಪತ್ನಿಯನ್ನ ಪೊಲೀಸರು ಬಂಧಿಸಿರುವ ಘಟನೆ ಬೆಳಗಾವಿ  ಜಿಲ್ಲೆಯ ರಾಮದುರ್ಗ ತಾಲೂಕಿನ ಹೊಸಕೋಟಿ ಗ್ರಾಮದಲ್ಲಿ ನಡೆದಿದೆ. ಪ್ರಿಯಕರನ ಜೊತೆ ಸೇರಿದ ಹೈನಾತಿ ಹೆಂಡ್ತಿ ಗಂಡನ ಮನೆಯಲ್ಲಿಯೇ 21 ಲಕ್ಷ ಮೌಲ್ಯದ ‌154.6 ಗ್ರಾಂ ಚಿನ್ನಾಭರಣ ಕಳ್ಳತನ ಮಾಡಿದ್ದಾಳೆ. ಸದ್ಯ ಪೊಲೀಸರ ಅತಿಥಿಯಾಗಿದ್ದಾಳೆ. ಹಣಮಂತ ಮಾರಾಪೂರ, ಹಸೀನಾ ನದಾಫ್ ಬಂಧಿತರು. ಬಂಧಿತರಿಂದ 11 ಸಾವಿರ ಮೌಲ್ಯದ 45 ಗ್ರಾಂ ಬೆಳ್ಳಿಯ ಆಭರಣ...
ರಾಜ್ಯಸುದ್ದಿ

ಸುಲ್ತಾನ್ ಬತ್ತೇರಿ – ತಣ್ಣೀರು ಬಾವಿ ಬೋ ಸ್ಟಿಂಗ್ ಸೇತುವೆ ಕಾಮಗಾರಿ ಸೆಪ್ಟೆಂಬರ್‌ಗೆ ಪೂರ್ಣ: ಸಚಿವ ದಿನೇಶ್ ಗುಂಡೂರಾವ್ – ಕಹಳೆ ನ್ಯೂಸ್

ಸುಲ್ತಾನ್ ಬತ್ತೇರಿ ಬಳಿ ಫಲ್ಗುಣಿ ನದಿಯಿಂದ ತಣ್ಣೀರುಬಾವಿ ಸಂಪರ್ಕಸುವ ಅತ್ಯಾಧುನಿ ತಂತ್ರಜ್ಞಾನದ ಬೋ ಸ್ಟಿಂಗ್ ಸೇತುವೆ ಕಾಮಗಾರಿ ಸೆಪ್ಟೆಂಬರ್‌ಗೆ ಪೂರ್ಣಗೊಳ್ಳಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ಭೇಟಿ ನೀಡಿ ಕಾಮಗಾರಿ ಪರಿಶೀಲನೆ ನಡೆಸಿದ ಬಳಿಕ ಅವರು ಸುದ್ದಿಗಾರರ ಜತೆ ಮಾತನಾಡಿದರು. ಸುಲ್ತಾನ್ ಬತ್ತೇರಿಯಿಂದ ತಣ್ಣೀರುಬಾವಿಗೆ ಸಂಪರ್ಕ ಕಲ್ಪಿಸುವ ಸೇತುವೆಯ ಕಾಮಗಾರಿ ಶೀಘ್ರಗತಿಯಲ್ಲಿ ನಡೆಯು ತ್ತಿದ್ದು ಸ್ಥಳೀಯರು ನಗರ ಪ್ರವೇಶಕ್ಕೆ ಸುಲಭವಾಗಲಿದೆ. ಪ್ರಸ್ತುತ ಇಲ್ಲಿನ ಜನರು ಫೆರ್ರಿ...
ದೆಹಲಿರಾಜ್ಯಸುದ್ದಿ

ಕೊರೋನಾ ಮಾದರಿಯ ಹಂಟು ವೈರಸ್ ಕಾಣಿಸಿಕೊಂಡಿದ್ದ ನೌಕೆಯಲ್ಲಿ ಇಬ್ಬರು ಭಾರತೀಯರು -ಕಹಳೆ ನ್ಯೂಸ್

ನವದೆಹಲಿ: ಕೊರೋನಾ ಮಾದರಿಯ ಹಂಟು ವೈರಸ್ ಕಾಣಿಸಿದ್ದ ಹಡಗಿನಲ್ಲಿ ಇಬ್ಬರು ಭಾರತೀಯರಿದ್ದಾರೆ ಎಂದು ತಿಳಿದುಬಂದಿದ್ದು, ಸದ್ಯ ಅವರ ಆರೋಗ್ಯದ ಬಗ್ಗೆ ಆತಂಕ ಸೃಷ್ಟಿಯಾಗಿದೆ. 150 ಜನರನ್ನು ಹೊತ್ತು ಅರ್ಜೆಂಟೀನಾದಿಂದ ಸ್ಪೇನ್‌ನತ್ತ ಹೊರಟಿದ್ದ ಹಡಗಿನಿಂದ ಮಾರ್ಗಮಧ್ಯದಲ್ಲಿ ಹಲವರು ಇಳಿದಿದ್ದರು. ಬಳಿಕ ಉಳಿದಿದ್ದವರಲ್ಲಿ 8 ಶಂಕಿತರ ಪೈಕಿ ಐವರಲ್ಲಿ ಸೋಂಕು ದೃಢಪಟ್ಟಿತ್ತು. ಇನ್ನೂ ಮೂವರು ಇದೇ ವೈರಸ್‌ನಿಂದಾಗಿ ಪ್ರಾಣವನ್ನೂ ಕಳೆ ದುಕೊಂಡಿದ್ದರು. ಈಗ ಅವರೆಲ್ಲರ ಜೊತೆ ಇದ್ದ ಭಾರತೀಯ ಸಿಬ್ಬಂದಿ ಸುರಕ್ಷಿತರಾಗಿದ್ದಾರೆಯೇ ಎಂಬುದು...
ಕಾಸರಗೋಡುದಕ್ಷಿಣ ಕನ್ನಡಮಂಗಳೂರುಶುಭಾಶಯಸುದ್ದಿ

ಹಿರಿಯ ಪತ್ರಕರ್ತರಾದ ಹರೀಶ್ ಮಾಂಬಾಡಿ, ಸತೀಶ್ ಇರಾ ಸೇರಿದಂತೆ 18 ಮಂದಿಗೆ ಕಾಸರಗೋಡು ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಕೆಯುಡಬ್ಲುಜೆ ದತ್ತಿನಿಧಿ ಪ್ರಶಸ್ತಿ ಘೋಷಣೆ – ಕಹಳೆ ನ್ಯೂಸ್

ಹಿರಿಯ ಪತ್ರಕರ್ತರಾದ ಹರೀಶ್ ಮಾಂಬಾಡಿ, ಸತೀಶ್ ಇರಾ, ಬಿ.ಎಂ.ಹನೀಫ್ ಸೇರಿ 18 ಮಂದಿಗೆ ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ ವತಿಯಿಂದ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು ಸಹಯೋಗದೊಂದಿಗೆ ನೀಡುವ ದತ್ತಿನಿಧಿ ಪ್ರಶಸ್ತಿಯನ್ನು ಕಾಸರಗೋಡು ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರವಿ ನಾಯ್ಕಾಪು ಮತ್ತು ಕೆಯುಡಬ್ಲ್ಯುಜೆ ಕಾಸರಗೋಡು ಅಧ್ಯಕ್ಷ ಎ.ಆರ್. ಸುಬ್ಬಯ್ಯಕಟ್ಟೆ ಘೋಷಿಸಿದ್ದಾರೆ. ಮೇ 16ರಂದು ಕಾಸರಗೋಡು ಜಿಲ್ಲೆಯ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಮಂಗಳೂರುಸುದ್ದಿ

ಯಕ್ಷಗಾನ ಕಲಾವಿದರಿಗೆ ಅವಮಾನ ; ಮಹೇಶ್ ಶೆಟ್ಟಿ ತಿಮರೋಡಿ, ಕುಡ್ಲ ರಾಂಪೇಜ್ ಯೂಟ್ಯೂಬ್, ಪ್ರಸನ್ನ ರವಿ ಸೇರಿದಂತೆ ನಾಲ್ವರ ವಿರುದ್ಧ ಪ್ರಕರಣ ದಾಖಲು – ಕಹಳೆ ನ್ಯೂಸ್

ಪುತ್ತೂರು : ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಕರೆ ಮಾಡಿ ಕಲಾವಿದರಿಗೆ ಅವಹೇಳನಕಾರಿ ಮಾತಾನಾಡಿರುವವರ ವಿರುದ್ಧ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎಪ್ರಿಲ್ 21 ರಂದು ಸತೀಶ್ ಕುಮಾರ್ ರೈ ಪಡುಮಲೆ ಕಲಾವಿದ ಸುಂದರ್ ರೈ ಮಂದರ ಅವರಿಗೆ ಕರೆ ಮಾಡಿ ತಿಮರೋಡಿ ವಿರುದ್ಧ ನೀಡಿದ ಕೇಸ್ ವಿಚಾರದಲ್ಲಿ ಹೆದರಿಸಿ ಬೆದರಿಕೆ ಹಾಕಿ ಮುಂಬಯಿಯಲ್ಲಿ ಕಾರ್ಯಕ್ರಮ ಮಾಡಲು ಬಿಡುವುದಿಲ್ಲ ಎಂದು ಬೆದರಿಕೆ ಹಾಕಲಾಗಿದೆ. ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಕಲಾವಿದರ...
ಉಡುಪಿದಕ್ಷಿಣ ಕನ್ನಡಮಂಗಳೂರುಮುಂಬೈಶುಭಾಶಯಸುದ್ದಿ

ತುಳುನಾಡ ಅಳಿಯ, ಟೀಂ ಇಂಡಿಯಾದ ಟಿ20 ನಾಯಕ ಸೂರ್ಯಕುಮಾರ್ ಯಾದವ್ ದಂಪತಿಗೆ ಹೆಣ್ಣು ಮಗು ಜನನ – ಕಹಳೆ ನ್ಯೂಸ್

ಮುಂಬೈ: ತುಳುನಾಡ ಅಳಿಯ, ಟೀಂ ಇಂಡಿಯಾದ ಟಿ20 ನಾಯಕ ಸೂರ್ಯಕುಮಾರ್ ಯಾದವ್ ಅವರ ಪತ್ನಿ ದೇವಿಶಾ ಶೆಟ್ಟಿ  ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ಕುರಿತು ಸೂರ್ಯಕುಮಾರ್ ಯಾದವ್ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ನಗು, ಕನಸುಗಳೊಂದಿಗೆ ನಾವು ಹೆಣ್ಣು ಮಗುವನ್ನು ಸ್ವಾಗತಿಸಿದ್ದೇವೆ ಎಂದು ಬರೆದುಕೊಂಡಿದ್ದಾರೆ.   ಕಾಲೇಜು ದಿನಗಳಲ್ಲಿ ಪರಿಚಯವಾಗಿ ಪ್ರೀತಿಯಲ್ಲಿ ಬಿದ್ದಿದ್ದ ಈ ಜೋಡಿ 2016ರಲ್ಲಿ ವಿವಾಹವಾಗಿದ್ದರು. ಮದುವೆಯಾಗಿ 10 ವರ್ಷಗಳ ಬಳಿಕ ಈ ದಂಪತಿ ಗುರುವಾರ...
1 51 52 53 54 55 3,398
Page 53 of 3398