Saturday, June 20, 2026

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ಮಳವೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 1 ಕೋಟಿ 45 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣಗೊಂಡ ರಸ್ತೆ ಕಾಮಗಾರಿಯ ಉದ್ಘಾಟನೆ;ಮಾನ್ಯ ಶಾಸಕ ಶ್ರೀ ಉಮನಾಥ್ ಕೋಟ್ಯಾನ್-ಕಹಳೆ ನ್ಯೂಸ್

ಮಾನ್ಯ ಶಾಸಕರಾದ ಶ್ರೀ ಉಮನಾಥ್ ಕೋಟ್ಯಾನ್ ಅವರು ಮಳವೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 1 ಕೋಟಿ 45 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣಗೊಂಡ ರಸ್ತೆ ಕಾಮಗಾರಿಯ ಉದ್ಘಾಟನೆಯನ್ನು ನೆರವೇರಿಸಿದರು. ಹಾಗೆಯೇ 75 ಲಕ್ಷ ರೂ ವೆಚ್ಚದ ಷಿ ಮಳವೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕರಂಬಾರು ಮುಖ್ಯ ರಸ್ತೆಯಿಂದ ಪೆÇರ್ಕೋಡಿ ಸಂಪರ್ಕಿಸುವ ಕೆಂಜಾರು ಸಾರಬಳಿ ಧೂಮಾವತಿ ರಸ್ತೆ, ಮತ್ತು 25 ಲಕ್ಷ ರೂ ವೆಚ್ಚದಷಿ ಕೆಂಜಾರು ಕಾಮಜಾಲು ಸ್ವಾಮಿ ವಿವೇಕಾನಂದ ರಸ್ತೆ...
ಹೆಚ್ಚಿನ ಸುದ್ದಿ

ಸಿರಿ ಕುರಲ್ ರೈತ ಉತ್ಪಾದಕರ ಸಂಸ್ಥೆ ಎಕ್ಕಾರು ಇವರಿಗೆ ನೂತನ ಗದ್ದೆ ಉಳುವ ಟ್ರ್ಯಾಕ್ಟರ್ ಹಸ್ತಾಂತರ ಕಾರ್ಯಕ್ರಮದಲ್ಲಿ ಭಾಗವಹಿಸಿದ ಮಾನ್ಯ ಶಾಸಕ ಶ್ರೀ ಉಮನಾಥ್ ಕೋಟ್ಯಾನ್-ಕಹಳೆ ನ್ಯೂಸ್

ಸಿರಿ ಕುರಲ್ ರೈತ ಉತ್ಪಾದಕರ ಸಂಸ್ಥೆ (ನಿ) ಎಕ್ಕಾರು ಇವರಿಗೆ ನೂತನ ಗದ್ದೆ ಉಳುವ ಟ್ರ್ಯಾಕ್ಟರ್ ಹಸ್ತಾಂತರ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಮಾನ್ಯ ಶಾಸಕರಾದ ಶ್ರೀ ಉಮನಾಥ್ ಕೋಟ್ಯಾನ್ ಅವರು ಭಾಗವಹಿಸಿದರು....
ಹೆಚ್ಚಿನ ಸುದ್ದಿ

ದೇಶದಲ್ಲಿ ಒಂದೇ ದಿನ 19,078 ಕೊರೋನಾ ಪ್ರಕರಣ ಪತ್ತೆ, 224 ಮಂದಿ ಸಾವು-ಕಹಳೆ ನ್ಯೂಸ್

ನವದೆಹಲಿ: ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು  ಭಾರತದಲ್ಲಿ ಕೊರೋನಾ ಸೋಂಕಿತ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿದ್ದು, ದೇಶದಲ್ಲಿ ಶನಿವಾರ 19,078 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿ 224 ಮಂದಿ ಸಾವನ್ನಪ್ಪಿದ್ದಾರೆಂದು ಮಾಹಿತಿ ನೀಡಿದೆ. ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,03,05,788ಕ್ಕೆ ಏರಿಕೆಯಾಗಿದ್ದರೆ, ಸಾವಿನ ಸಂಖ್ಯೆ 1,49,218ಕ್ಕೆ ತಲುಪಿದೆ. ದೇಶದಲ್ಲಿ ಒಟ್ಟಾರೆ 1,03,05,788 ಮಂದಿ ಸೋಂಕಿತರ ಪೈಕಿ ನಿನ್ನೆ ಒಂದೇ ದಿನ 22,926 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಈ...
ಹೆಚ್ಚಿನ ಸುದ್ದಿ

ತಮ್ಮ ಟ್ವಿಟರ್ ಹಾಗೂ ಇನ್ಸ್ಟಾಗ್ರಾಮ್‍ನಲ್ಲಿದ್ದ ವಿಡಿಯೋ ಮತ್ತು ಫೋಟೋಗಳನ್ನು ಡಿಲೀಟ್ ಮಾಡಿ ಅಭಿಮಾನಿಗಳಿಗೆ ಶಾಕ್ ನೀಡಿದ ಬಾಲಿವುಡ್ ನಟಿ ದೀಪಿಕಾ ಪುಡುಕೋಣೆ- ಕಹಳೆ ನ್ಯೂಸ್

ಮುಂಬೈ: ಹೊಸ ವರ್ಷದ ಹಿಂದಿನ ದಿನ ಬಾಲಿವುಡ್ ನಟಿ ದೀಪಿಕಾ ಪುಡುಕೋಣೆಯವರು ತಮ್ಮ ಟ್ವಿಟರ್ ಹಾಗೂ ಇನ್ಸ್ಟಾಗ್ರಾಮ್‍ನಲ್ಲಿದ್ದ ವಿಡಿಯೋ ಮತ್ತು ಫೋಟೋಗಳನ್ನು ಡಿಲೀಟ್ ಮಾಡಿ ಅಭಿಮಾನಿಗಳಿಗೆ ಶಾಕ್ ನೀಡಿದ್ದಾರೆ. ದೀಪಿಕಾ ಪಡುಕೋಣೆ ಅವರ ಇನ್ಸ್ಟಾಗ್ರಾಮ್ನಲ್ಲಿ 52.5 ಮಿಲಿಯನ್ ಮತ್ತು ಟ್ವಿಟ್ಟರ್ನಲ್ಲಿ 27.7 ಮಿಲಿಯನ್ ಫಾಲೋವರ್ಸ್ ಹೊಂದಿದ್ದು, ಅವರಾಗಿಯೇ ಪೋಸ್ಟ್‌ಗಳನ್ನು ಡಿಲೀಟ್ ಮಾಡಿದ್ದಾರೆಯೇ ಅಥವಾ ಯಾರದರೂ ಅವರ ಅಕೌಂಟನ್ನು ಹ್ಯಾಕ್ ಮಾಡಿದ್ದಾರೋ ಎಂಬುದು ತಿಳಿದು ಬಂದಿಲ್ಲ. ಈ ಕುರಿತು ನೆಟ್ಟಿಗರ ಪ್ರಕಾರ...
ಹೆಚ್ಚಿನ ಸುದ್ದಿ

ಶಾಲಾ-ಕಾಲೇಜು ಆರಂಭದ ಮೊದಲ ದಿನವೇ ತಿಪಟೂರಿನ ಸಿದ್ದರಾಮೇಶ್ವರ ಕಾಲೇಜಿನ ಡಿಪ್ಲೊಮಾ ವಿದ್ಯಾರ್ಥಿ ದುರ್ಮರಣ-ಕಹಳೆ ನ್ಯೂಸ್

ತುಮಕೂರು: ಕರೊನಾ ಸೋಂಕಿನ ಭೀತಿ ಕಾರಣದಿಂದ ಕಳೆದ ಮಾರ್ಚ್‍ನಲ್ಲಿ ಮುಚ್ಚಿದ್ದ ಶಾಲಾ-ಕಾಲೇಜುಗಳು ಇಂದಿನಿಂದ ಪುನಾರಂಭಗೊಂಡಿದೆ. ಆರಂಭದ ದಿನವೇ ವಿದ್ಯಾರ್ಥಿಯೊಬ್ಬ ದುರ್ಮರಣಕ್ಕೀಡಾದ ಘಟನೆ ತಿಪಟೂರು ತಾಲೂಕಿನ ಹೆಡಗರಹಳ್ಳಿ ಸಂಭವಿಸಿದೆ. ತಿಪಟೂರಿನ ಸಿದ್ದರಾಮೇಶ್ವರ ಕಾಲೇಜಿನ ಡಿಪ್ಲೊಮಾ  ವಿದ್ಯಾರ್ಥಿ ಶಶಾಂಕ್ (20) ಕಾಲೇಜಿಗೆ ಬರುತ್ತಿದ್ದ ಮಾರ್ಗಮಧ್ಯೆ ಟ್ಯಾಂಕರ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಈ ಘಟನೆಯಲ್ಲಿ ಶಶಾಂಕ್ ಮೃತಪಟ್ಟಿದ್ದಾನೆ. ಮೃತ ವಿದ್ಯಾರ್ಥಿಯು ಚನ್ನರಾಯಪಟ್ಟಣ ತಾಲೂಕಿನ ಚೀಚಗೊಂಡನಹಳ್ಳಿ ಗ್ರಾಮದವ ಎಂದು ತಿಳಿದುಬಂದಿದೆ....
ಹೆಚ್ಚಿನ ಸುದ್ದಿ

ದೇಶದಾದ್ಯಂತ ಇಂದು ಹೊಸ ವರ್ಷದ ಸಂಭ್ರಮ; ನಾಡಿನ ಸಮಸ್ತ ಜನತೆಗೆ ಹೊಸ ವರ್ಷಕ್ಕೆ ಶುಭಾಶಯ ಕೋರಿದ ಪ್ರಧಾನಿ ಮೋದಿ-ಕಹಳೆ ನ್ಯೂಸ್

ನವದೆಹಲಿ: ದೇಶದಾದ್ಯಂತ 2021 ಹೊಸ ವರ್ಷದ ಸಂಭ್ರಮ ಮನೆ ಮಾಡಿದ್ದು, ಈ ಕಾರಣದಿಂದ ದೇಶದ ಜನತೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಭಾಶಯ ಕೋರಿದ್ದಾರೆ. ಹಾಗೆಯೇ ಎಲ್ಲರಿಗೂ 2021 ಹೊಸ ವರ್ಷದ ಶುಭಾಶಯಗಳು. ಈ ವರ್ಷ ಎಲ್ಲರಿಗೂ ಉತ್ತಮ ಆರೋಗ್ಯ, ಸಂತೋಷ ಮತ್ತು ಸಮೃದ್ಧಿ ದೊರೆಯಲಿ. ಭರವಸೆ ಹಾಗೂ ಸ್ವಾಸ್ಥ್ಯದ ಮನೋಭಾವ ಮೇಲುಗೈ ಸಾಧಿಸಲಿ ಎಂದು ಸಾಮಾಜಿಕ ಜಾಲತಾಣ ಟ್ವಿಟರ್‍ನಲ್ಲಿ ಟ್ವೀಟ್ ಮಾಡಿದ್ದಾರೆ. ಇದರಂತೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರೂ ಕೂಡ...
ಹೆಚ್ಚಿನ ಸುದ್ದಿ

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕುಕ್ಕೆ ಸುಬ್ರಹ್ಮಣ್ಯ ಘಟಕದವರಿಂದ ಕಡಬ ತಹಸೀಲ್ದಾರ್ ಮೂಲಕ ಗೃಹಸಚಿವರಿಗೆ ಮನವಿ – ಕಹಳೆ ನ್ಯೂಸ್

ಉಜಿರೆ: ದಿನಾಂಕ 30/12/2020 ರಂದು ಉಜಿರೆಯ ಮತ ಎಣಿಕೆ ಕೇಂದ್ರದಲ್ಲಿ S.D.P.I ಕಾರ್ಯಕರ್ತರು ದೇಶವಿರೋಧಿ ಘೋಷಣೆಯನ್ನು ಕೂಗಿದರು. ಈ ದೇಶವಿರೋಧಿ ಘೋಷಣೆಯನ್ನು ಖಂಡಿಸಿ ಆರೋಪಿಗಳ ಮತ್ತು ಸಂಘಟನೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಕಡಬ ತಹಸೀಲ್ದಾರ್ ಮೂಲಕ ಗೃಹಸಚಿವರಿಗೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕುಕ್ಕೆ ಸುಬ್ರಹ್ಮಣ್ಯ ಘಟಕದಿಂದ ಮನವಿ ಮಾಡಿದರು....
ಹೆಚ್ಚಿನ ಸುದ್ದಿ

ಟಿ.ವಿ ನೇರಪ್ರಸಾರದಲ್ಲಿ ಕೊರೊನಾ ಲಸಿಕೆ ಹಾಕಿಸಿಕೊಂಡ ಅಮೇರಿಕಾದ ಉಪಾಧ್ಯಕ್ಷೆಯಾಗಿ ಆಯ್ಕೆಯಾಗಿರುವ ಕಮಲಾ ಹ್ಯಾರಿಸ್ -ಕಹಳೆ ನ್ಯೂಸ್

ವಾಷಿಂಗ್ಟನ್ : ಟಿವಿ ನೇರಪ್ರಸಾರದಲ್ಲಿ ಕೊರೊನಾ ಲಸಿಕೆ ಹಾಕಿಸಿಕೊಳ್ಳುವ ಮೂಲಕ ಆಫ್ರಿಕನ್-ಅಮೇರಿಕಾನ್ ಜನರಲ್ಲಿ ಲಸಿಕೆ ಅಭಿಯಾನದ ಬಗ್ಗೆ ಅಮೇರಿಕಾದ ಉಪಾಧ್ಯಕ್ಷೆಯಾಗಿ ಆಯ್ಕೆಯಾಗಿರುವ ಕಮಲಾ ಹ್ಯಾರಿಸ್ ಅವರು ನಂಬಿಕೆ ಮೂಡಿಸುವ ಪ್ರಯತ್ನ ನಡೆಸಿದ್ದಾರೆ. ತಮ್ಮ ಮೊದಲ ಎರಡು ಡೋಸ್ ಲಸಿಕೆಯನ್ನು ವಾಂಷಿಗ್ಟಂನ್ ಡಿಸಿಯ ಆರೋಗ್ಯ ಕೇಂದ್ರದಲ್ಲಿ ಕಮಲಾ ಹ್ಯಾರಿಸ್ ಹಾಕಿಸಿಕೊಂಡಿದ್ದಾರೆ. ಅಲ್ಲದೇ ಈ ಕುರಿತು ಮಾತನಾಡಿದ ಅವರು, ಆಫ್ರಿಕನ್-ಅಮೇರಿಕನ್ ಸಮುದಾಯವು ಕೊರೊನಾದಿಂದ ಹೆಚ್ಚಿನ ಪ್ರಮಾಣದಲ್ಲಿ ಸಾವು ಮತ್ತು ಅನಾರೋಗ್ಯವನ್ನು ಕಂಡಿದ್ದು, ನಿಮ್ಮ...
1 120 121 122 123 124 174
Page 122 of 174